AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಸಭೆ ಚುನಾವಣೆ: ಆನ್‌ಲೈನ್ ವಹಿವಾಟಿನ ಮೇಲೆ ಚುನಾವಣಾ ಆಯೋಗ ಹದ್ದಿನ ಕಣ್ಣು, ಅಕ್ರಮ ತಡೆಗಟ್ಟಲು ಕ್ರಮ

ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ ಮೂರ್ಹತ ಫಿಕ್ಸ್ ಆಗಿದೆ. ಲೋಕಸಭಾ ಚುನಾವಣೆಗೆ ಡೇಟ್ ಫಿಕ್ಸ್ ಬೆನ್ನಲೆ ಎಲೆಕ್ಷನ್ ಟೈಮ್ನಲ್ಲಿ ಅಭ್ಯರ್ಥಿಗಳು, ಜನರಿಗೆ ಹಣ ಸೇರಿದಂತೆ ಯಾವುದೇ ರೀತಿಯಲ್ಲಾದರೂ ಲಂಚ ನೀಡಿ ಮತಗಳನ್ನು ಸೆಳೆಯಲು ಯತ್ನಿಸುವುದು ಸಾಮಾನ್ಯ. ಅದರಲ್ಲೂ ಅತ್ಯಾಧುನಿಕ ತಂತ್ರಜ್ಞಾನಗಳಾದ ಫೋನ್ ಪೇ, ಗೂಗಲ್ ಪೇ, ಯುಪಿಐ ಮೂಲಕ ಹಣ ರವಾನೆ ಮಾಡೋದು ಸುಲಭ. ಜೊತೆಗೆ ಇದು ಯಾರ ಗಮನಕ್ಕೂ ಬರೋದಿಲ್ಲ ಅಂತಾ ಅಂದ್ಕೊಂಡಿದ್ರೆ ತಪ್ಪು. ಚುನಾವಣಾ ಆಯೋಗ ಅಲರ್ಟ್ ಅಂತಿದ್ದು ಆಪ್‌ಗಳ ಮೂಲಕ ನಡೆಯುವ ಹಣ ವರ್ಗಾವಣೆ ಮೇಲೆ ಹದ್ದಿನ ಕಣ್ಣಿಟ್ಟಿದೆ.

ಲೋಕಸಭೆ ಚುನಾವಣೆ: ಆನ್‌ಲೈನ್ ವಹಿವಾಟಿನ ಮೇಲೆ ಚುನಾವಣಾ ಆಯೋಗ ಹದ್ದಿನ ಕಣ್ಣು, ಅಕ್ರಮ ತಡೆಗಟ್ಟಲು ಕ್ರಮ
ಕೇಂದ್ರ ಚುನಾವಣಾ ಆಯೋಗ
Vinay Kashappanavar
| Updated By: ಆಯೇಷಾ ಬಾನು|

Updated on: Mar 18, 2024 | 7:33 AM

Share

ಬೆಂಗಳೂರು, ಮಾರ್ಚ್​.18: ರಾಜ್ಯದಲ್ಲಿ ಲೋಕಸಭಾ ಚುನಾವಣೆಗೆ (Lok Sabha Election) ದಿನಾಂಕ ನಿಗದಿ ಆದ ಬೆನ್ನಲೆ ಅಭ್ಯರ್ಥಿಗಳು ಸೈಲೆಂಟ್ ಆಗಿ ಜನರಿಗೆ ಹಣ ಹಂಚಿ ಓಟ್ ಪಕ್ಕಾ ಮಾಡಿಕೊಳ್ಳಲು ಮುಂದಾಗಿರ್ತಾರೆ. ಆದ್ರೆ ಚುನಾವಣೆ ಆಯೋಗ (Election Commission) ಇದರ ಮೇಲೂ ಕಣ್ಣಿಟ್ಟಿದೆ. ಚುನಾವಣೆ ವೇಳೆ ಮತದಾರರಿಗೆ ಆನ್‌ಲೈನ್ ಮೂಲಕ ಹಣ ರವಾನೆ ಮಾಡಿ ಅವರ ಮತಗಳನ್ನು ಸೆಳೆಯುವ ರಾಜಕಾರಣಿಗಳ ಮೇಲೆ ಚುನಾವಣಾ ಆಯೋಗ ಹದ್ದಿನ ಕಣ್ಣಿಟ್ಟಿದೆ. ಫೋನ್ ಪೇ, ಗೂಗಲ್ ಪೇ, ಪೇಟಿಎಂ ಸೇರಿದಂತೆ ಯಾವುದೇ ರೀತಿಯ ಯುಪಿಐ ಆ್ಯಪ್‌ಗಳ ಮೂಲಕ ರವಾನೆಯಾಗುವ ಹಣಕಾಸು ವಹಿವಾಟಿನ ಮೇಲೆ ಚುನಾವಣಾ ಆಯೋಗ ನಿಗಾ ವಹಿಸಿದೆ.

ಮತದಾರರಿಗೆ ಯಾವುದೇ ಸ್ವರೂಪದಲ್ಲಿ ಆಮಿಷ ಒಡ್ಡಿ ಮತಗಳನ್ನು ಸೆಳೆಯಲು ಯತ್ನಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಚುನಾವಣಾ ಆಯೋಗ ಎಚ್ಚರಿಕೆ ನೀಡಿದೆ. ಇಷ್ಟಾದರೂ ಕೂಡಾ ಕೆಲವು ರಾಜಕಾರಣಿಗಳು ತಂತ್ರಜ್ಞಾನಗಳನ್ನು ಬಳಸಿಕೊಂಡು ಜನರಿಗೆ ಹಣ ರವಾನೆ ಮಾಡುತ್ತಿದ್ದಾರೆ. ಅದರಲ್ಲೂ ತಾಂತ್ರಿಕವಾಗಿ ಸಾಕಷ್ಟು ಜ್ಞಾನ ಸಂಪಾದಿಸಿರುವ ಬೆಂಗಳೂರು ಜನತೆಗೆ ವಿನೂತನ ತಂತ್ರಜ್ಞಾನದ ಮೂಲಕ ಹಣ ರವಾನಿಸೋದು ಕಷ್ಟವೇನಲ್ಲ. ಹೀಗಾಗಿ, ಚುನಾವಣಾ ಆಯೋಗ ಇದಕ್ಕಾಗಿ ಪ್ರತ್ಯೇಕ ತಂಡವನ್ನೇ ರಚನೆ ಮಾಡಿ ನಿಗಾ ವಹಿಸಿದೆ. ಫೋನ್ ಪೇನ್ ಪೇ, ಗೂಗಲ್ ಪೇ ಹಾಗೂ ಪೆಟಿಎಂ ಸಂಸ್ಥೆಗಳ ಜೊತೆ ಸಭೆ ಮಾಡಿ ಚರ್ಚಿಸಿ ಪ್ರತಿ ದಿನದ ವಹಿವಾಟು, ಯಾವುದೇ ವ್ಯಕ್ತಿಯಿಂದ ನಿರ್ದಿಷ್ಟ ಮೊತ್ತದ ಹಣ ಹೆಚ್ಚಿನ ಸಂಖ್ಯೆಯ ಜನರಿಗೆ ರವಾನೆ ಮಾಡುತ್ತಿದ್ರೆ ಅಂಥವರನ್ನು ಪತ್ತೆ ಹಚ್ಚಿ ಪ್ರಕರಣ ದಾಖಲಿಸಲು ಮುಂದಾಗಿದ್ದು ಪ್ರತಿದಿನದ ಯುಪಿಐ ಡಿಜಿಟಲ್ ಹಣದ ವಹಿವಾಟಿನ ಮೇಲೆ ನಿಗಾ ಇಡಲು ಮುಂದಾಗಿದ್ದಾರೆ.

ಇದನ್ನೂ ಓದಿ: ಬಿಜೆಪಿ ಸಾಮಾಜಿಕ ಜಾಲತಾಣದ ಮುಖ್ಯಸ್ಥನ ಮನೆಗೆ ನುಗ್ಗಿ ಜೀವ ಬೆದರಿಕೆ ಹಾಕಿದ ಶಾಸಕನ ಬೆಂಬಲಿಗರು, ಪುತ್ತೂರಲ್ಲಿ ಕೇಸ್ ದಾಖಲು

ಒಟ್ನಲ್ಲಿ ಮತದಾರರನ್ನು ಓಲೈಕೆ ಮಾಡಲು ಪೋನ್ ಪೇ, ಗೂಗಲ್ ಪೇ, ಯುಪಿಐ ತಂತ್ರಜ್ಞಾನದ ನೆರವಿನೊಂದಿಗೆ ಆದಷ್ಟು ಬೇಗ ಬಹುತೇಕ ಜನರಿಗೆ ಹಣ ಕಳಿಸಬಹುದು, ಯಾರಿಂದಲೂ ಪತ್ತೆ ಮಾಡಲು ಸಾಧ್ಯವಿಲ್ಲ ಎಂಬ ಭ್ರಮೆ ಇದ್ರೆ ಬಿಟ್ಟು ಬಿಡಿ ಆಯೋಗ ಪ್ರತಿಯೊಂದು ಡಿಜಿಟಲ್ ವಹಿವಾಟಿನ ಮೇಲೂ ಹದ್ದಿನ ಕಣ್ಣಿಟ್ಟಿದ್ದು ಅನುಮಾನ ಬಂದ ಅಕೌಂಟ್ ಗಳ ಮೇಲೆ ತನಿಖೆ ನಡೆಸಲು ಕೂಡಾ ಪ್ಲಾನ್ ಮಾಡಿಕೊಂಡಿದೆ. ಇನ್ನು ಜನರು ಯಾವುದೇ ಅಮೀಷಕ್ಕೆ ಬಲಿಯಾಗದೆ ಮತದಾನ ಮಾಡಿ ಪ್ರಜಾಪ್ರಭುತ್ವದ ಗೆಲುವಿಗೆ ಕಾರಣವಾಗಬೇಕು ಎನ್ನುವುದೇ ನಮ್ಮ ಕಳಕಳಿ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ