
ಬೆಂಗಳೂರು, (ಜೂನ್ 01): ರಾಜ್ಯ ವಿಧಾನಸಭೆಯಿಂದ ವಿಧಾನಪರಿಷತ್ನ (Karnataka Legislative Council biennial polls) 7 ಸದಸ್ಯ ಸ್ಥಾನಕ್ಕೆ ನಡೆಯುವ ದ್ವಿವಾರ್ಷಿಕ ಚುನಾವಣೆಗೆ ಅಧಿಸೂಚನೆ ಹೊರಡಿಸಲಾಗಿದ್ದು, ಇಂದಿನಿಂದ (ಜೂನ್ 01) ಜೂ.8ರವರೆಗೆ ನಾಮಪತ್ರ ಸಲ್ಲಿಸಬಹುದಾಗಿದೆ. ವಿಧಾನಪರಿಷತ್ನ ದ್ವೈವಾರ್ಷಿಕ ಚುನಾವಣೆಯ ಚುನಾವಣಾಧಿಕಾರಿ ಹಾಗೂ ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಕ್ಷಿ ಅವರು ಈ ಸಂಬಂಧ ಪ್ರಕಟಣೆ ಹೊರಡಿಸಿದ್ದಾರೆ. ಚುನಾವಣಾ ಸ್ಪರ್ಧೆಯಲ್ಲಿ 7ಕ್ಕಿಂತ ಹೆಚ್ಚು ಅಭ್ಯರ್ಥಿಗಳಿದ್ದರೆ ಜೂನ್ 18ರಂದು ಬೆಳಿಗ್ಗೆ 9 ರಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದ್ದು, ಅಂದು ಸಂಜೆ 5 ಗಂಟೆಯಿಂದ ಮತ ಎಣಿಕೆ ನಡೆಯಲಿದೆ.
ಜೂ.9 ರಂದು ನಾಮಪತ್ರ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಅಂದು ಸಂಜೆ ವೇಳೆಗೆ ಸಿಂಧುವಾದ ನಾಮಪತ್ರಗಳ ಪ್ರಕಟಣೆ ಹೊರಡಿಸಲಾಗುತ್ತದೆ. ಜೂನ್ 11 ರವರೆಗೆ ಉಮೇದುವಾರಿಕೆಯನ್ನು ಹಿಂತೆಗೆದುಕೊಳ್ಳಲು ಅವಕಾಶ ನೀಡಲಾಗಿದ್ದು, ಚುನಾವಣಾ ಸ್ಪರ್ಧೆಯಲ್ಲಿ 7ಕ್ಕಿಂತ ಹೆಚ್ಚು ಅಭ್ಯರ್ಥಿಗಳಿದ್ದರೆ ಜೂನ್ 18ರಂದು ಬೆಳಿಗ್ಗೆ 9 ರಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದೆ. ಇನ್ನು ಅಂದೆ ಸಂಜೆ 5 ಗಂಟೆಯಿಂದಲೇ ಮತದಾನ ಪ್ರಕ್ರಿಯೆ ನಡೆಯಲಿದೆ.
ವಿಧಾನಪರಿಷತ್ ಸದಸ್ಯರಾದ ಗೋವಿಂದರಾಜು (ಕಾಂಗ್ರೆಸ್), ನಾಸಿರ್ ಅಹಮದ್ (ಕಾಂಗ್ರೆಸ್), ಎಂಟಿಬಿ ನಾಗರಾಜ್ (ಬಿಜೆಪಿ), ಪ್ರತಾಪ್ ಸಿಂಹ ನಾಯಕ್ ಕೆ(ಬಿಜೆಪಿ)., ತಿಪ್ಪಣ್ಣಪ್ಪ (ಕಾಂಗ್ರೆಸ್), ಸುನೀಲ್ ವಲ್ಯಾಪುರೆ (ಬಿಜೆಪಿ), ಬಿ.ಕೆ.ಹರಿಪ್ರಸಾದ್ (ಕಾಂಗ್ರೆಸ್) ಅವರು ಜೂ. 30 ರಂದು ನಿವೃತ್ತಿ ಹೊಂದಲಿದ್ದಾರೆ. ಇವರ ನಿವೃತ್ತಿಯಿಂದ ತೆರವಾಗುವ ಮೇಲನೆ ಸದಸ್ಯ ಸ್ಥಾನಕ್ಕೆ ಭಾರತೀಯ ಚುನಾವಣಾ ಆಯೋಗವು ಪ್ರಕಟಣೆ ಹೊರಡಿಸಿದ್ದು, ಅದರಂತೆ ಚುನಾವಣೆ ಪ್ರಕ್ರಿಯೆ ನಡೆಯಲಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 4:08 pm, Mon, 1 June 26