ಚುನಾವಣಾ ಅಧಿಕಾರಿಗಳ ಹದ್ದಿನ ಕಣ್ಣು: ರಾಜ್ಯದ ವಿವಿಧಡೆ ಅಕ್ರಮವಾಗಿ ಸಾಗಿಸುತ್ತಿದ್ದ ಹಣ, ವಸ್ತುಗಳು ಜಪ್ತಿ

ಬಾಗಲಕೋಟೆ ಜಿಲ್ಲೆಯ ವಿವಿಧೆಡೆ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 3.90 ಲಕ್ಷ ಹಣವನ್ನು ಜಪ್ತಿ ಮಾಡಲಾಗಿದೆ. ಬಾದಾಮಿ ತಾಲೂಕಿನ ಜಾಲಿಹಾಳ ಚೆಕ್​ಪೋಸ್ಟ್​ ಒಂದರಲ್ಲೇ 2.90 ಲಕ್ಷ ರೂ. ಮತ್ತು ಬೂದನಗುಡ್ಡ ರೋಡ್ ಚೆಕ್​ಪೋಸ್ಟ್​ನಲ್ಲಿ 1 ಲಕ್ಚ ರೂ. ಅನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

ಚುನಾವಣಾ ಅಧಿಕಾರಿಗಳ ಹದ್ದಿನ ಕಣ್ಣು: ರಾಜ್ಯದ ವಿವಿಧಡೆ ಅಕ್ರಮವಾಗಿ ಸಾಗಿಸುತ್ತಿದ್ದ ಹಣ, ವಸ್ತುಗಳು ಜಪ್ತಿ
ಜಪ್ತಿ ಮಾಡಲಾದ ಹಣ, ಸೀರೆ
Follow us
| Updated By: ವಿವೇಕ ಬಿರಾದಾರ

Updated on:Mar 27, 2024 | 10:18 AM

ಲೋಕಸಭೆ ಚುನಾವಣೆಗೆ (Lok Sabha Election) ದಿನಾಂಕ ಘೋಷಣೆಯಾಗುತ್ತಿದ್ದಂತೆ ದೇಶದಲ್ಲಿ ನೀತಿ ಸಂಹಿತೆ (Model Code of Conduct) ಜಾರಿಯಾಗಿದೆ. ಮತಕ್ಕಾಗಿ ಜನರಿಗೆ ಆಮಿಷವೊಂಡುವುದನ್ನು ತಡೆಯಲು ಚುನಾವಣಾ ಆಯೋಗ (Election Commission) ಹಲವು ಕ್ರಮಗಳನ್ನು ಕೈಗೊಂಡಿದ್ದು, ಅಕ್ರಮ ಹಣ-ಹೆಂಡ ಹಾಗೂ ವಸ್ತುಗಳನ್ನು ಹಂಚುವುದು ಮತ್ತು ಸಾಗಾಟದ ಮೇಲೆ ಕಣ್ಣಿಟ್ಟಿದೆ. ನಾಕಾ ಬಂದಿಗಳನ್ನು ಹಾಕಿದೆ. ನಾಕಾ ಬಂದಿಗಳಲ್ಲಿ ಚುನಾವಣಾ ಅಧಿಕಾರಿಗಳು ಮತ್ತು ಪೊಲೀಸರು ಹಗಲು-ರಾತ್ರಿ ವಾಹನಗಳ ತಪಾಸಣೆ ನಡೆಸುತ್ತಿದ್ದಾರೆ. ಅದರಂತೆ ಚಿಕ್ಕಬಳ್ಳಾಪುರ ಜಿಲ್ಲೆಯ ಸುಲ್ತಾನ್​ಪೇಟೆ ಚೆಕ್​ ಪೋಸ್ಟ್​​ ಮೂಲಕ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 5 ಲಕ್ಷ ಹಣವನ್ನು ಚುನಾವಣಾ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ನಂದಿಗಿರಿಧಾಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇನ್ನು ಧಾರವಾಡ ಜಿಲ್ಲೆಯ ಅಣ್ಣಿಗೇರಿ ತಾಲೂಕಿನ ಕೊಂಡಿಕೊಪ್ಪ ಚೆಕ್​ಪೋಸ್ಟ್​ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 16 ಲಕ್ಷ ಮೌಲ್ಯದ 1,536 ರೇಷ್ಮೆ ಸೀರೆಗಳು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಹುಬ್ಬಳ್ಳಿ ವಾಣಿಜ್ಯ ತೆರಿಗೆ ಜಾರಿ ವಿಭಾಗದ ಜಂಟಿ ಆಯುಕ್ತ ರವಿಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.

ಬಾಗಲಕೋಟೆ ಜಿಲ್ಲೆಯ ವಿವಿಧೆಡೆ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 3.90 ಲಕ್ಷ ಹಣವನ್ನು ಜಪ್ತಿ ಮಾಡಲಾಗಿದೆ. ಬಾದಾಮಿ ತಾಲೂಕಿನ ಜಾಲಿಹಾಳ ಚೆಕ್​ಪೋಸ್ಟ್​ ಒಂದರಲ್ಲೇ 2.90 ಲಕ್ಷ ರೂ. ಮತ್ತು ಬೂದನಗುಡ್ಡ ರೋಡ್ ಚೆಕ್​ಪೋಸ್ಟ್​ನಲ್ಲಿ 1 ಲಕ್ಚ ರೂ. ಅನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

ಇದನ್ನೂ ಓದಿ: ಚುನಾವಣಾ ಆಯೋಗ ಭರ್ಜರಿ ಬೇಟೆ: ಆರೇ ದಿನಗಳಲ್ಲಿ 9 ಕೋಟಿ ರೂ.ಗೂ ಹೆಚ್ಚು ನಗದು, ಚಿನ್ನಾಭರಣ ವಶ

ಚುನಾವಣಾ ಅಕ್ರಮ: ಸೋಮವಾರ ದಾಖಲಾದ ಪ್ರಕರಣ

ಕ್ಷಿಪಪಡೆಗಳು (FS), ಸ್ಥಿರ ಕಣಾವಲು ತಂಡಗಳು (SST) ಮತ್ತು ಪೊಲೀಸ್ ಅಧಿಕಾರಿಗಳು ನಗದು, ಮದ್ಯ ಡ್ರಗ್ಸ್​​ ಬೆಲೆಬಾಳುವ ಲೋಹ ಮತ್ತು ಉಚಿತ ಉಡುಗೊರೆ ವಶಪಡಿಸಿಕೊಂಡ ಪ್ರಕರಣಗಳಿಗೆ ಸಂಬಂಧಿಸಿದಂತೆ 692 ಎಫ್​ಐಆರ್​​ಗಳನ್ನು ದಾಖಲಿಸಿದ್ದಾರೆ.

83,772 ಶಸ್ತ್ರಾಸ್ತ್ರಗಳನ್ನು ಠೇವಣಿ ಮಾಡಲಾಗಿದೆ, 845 ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. 10 ಶಸ್ತ್ರಾಸ, ಪರವಾನಗಿಯನ್ನು ರದ್ದುಗೊಳಿಸಲಾಗಿದೆ, CRPCಯ ತಡೆಗಟ್ಟುವ ವಿಭಾಗಗಳ ಅಡಿಯಲ್ಲಿ 5,666 ಪ್ರಕರಣಗಳನ್ನು ದಾಖಲಿಸಲಾಗಿದೆ. ಅದರಲ್ಲಿ 5,480 ವ್ಯಕ್ತಿ / ವ್ಯಕ್ತಿಗಳನ್ನು ಒಳಪಟ್ಟ ಪ್ರಕರಣಗಳನ್ನು ದಾಖಲಾಗಿವೆ.

ಅಬಕಾರಿ ಇಲಾಖೆ ಘೋರ ಅಪರಾಧ ಅಡಿಯಲ್ಲಿ 679 ಪ್ರಕರಣಗಳು ದಾಖಲಾಗಿವೆ. ಪರವಾನಗೆ ಉಲ್ಲಂಘನೆ ಅಡಿಯಲ್ಲಿ 493 ಪ್ರಕರಣ ದಾಖಲಾಗಿವೆ. ಎನ್​ಡಿಪಿಎಸ್​ ಅಡಿಯಲ್ಲಿ 38 ಪ್ರಕರಣಗಳನ್ನು ಮತ್ತು ಕರ್ನಾಟಕ ಅಬಕಾರಿ ಕಾಯ್ದೆ 1965 ರ ಸೆಕ್ಷನ್ 15(a) ಅಡಿಯಲ್ಲಿ 2,324 ಪ್ರಕರಣಗಳು ದಾಖಲಾಗಿವೆ. ಮತ್ತು 404 ವಿವಿಧ ರೀತಿಯ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕರ್ನಾಟಕ ಚುನಾವಣಾ ಆಯೋಗ ಮಾಹಿತಿ ನೀಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:53 am, Tue, 26 March 24

ತಾಜಾ ಸುದ್ದಿ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ