AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಸಿದ್ದರಾಮಯ್ಯ ವಿರುದ್ಧದ ಚುನಾವಣಾ ತಕರಾರು ಅರ್ಜಿ: ವಿಚಾರಣೆ ಅ. 6ಕ್ಕೆ ಮುಂದೂಡಿದ ಹೈಕೋರ್ಟ್

ಸಿಎಂ ಸಿದ್ದರಾಮಯ್ಯ ಶಾಸಕರಾಗಿ ಆಯ್ಕೆ ಅಸಿಂಧು ಕೋರಿ ಸಲ್ಲಿಸಿದ್ದ ಅರ್ಜಿಗೆ ಸಿದ್ದರಾಮಯ್ಯ ಪರ ವಕೀಲರಿಂದ ಆಕ್ಷೇಪಣೆ ಸಲ್ಲಿಸಲಾಗಿದ್ದು, ಅರ್ಜಿದಾರರು ಊಹೆಗಳ ಮೇಲೆ ತಕರಾರು ಅರ್ಜಿ ಸಲ್ಲಿಸಿದ್ದಾರೆ. ಹೀಗಾಗಿ ಅರ್ಜಿ ವಜಾಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದು, ಅರ್ಜಿ ವಿಚಾರಣೆಯನ್ನು ಅಕ್ಟೋಬರ್ 6ಕ್ಕೆ ಹೈಕೋರ್ಟ್ ಮುಂದೂಡಿದೆ.

ಸಿಎಂ ಸಿದ್ದರಾಮಯ್ಯ ವಿರುದ್ಧದ ಚುನಾವಣಾ ತಕರಾರು ಅರ್ಜಿ: ವಿಚಾರಣೆ ಅ. 6ಕ್ಕೆ ಮುಂದೂಡಿದ ಹೈಕೋರ್ಟ್
ಹೈಕೋರ್ಟ್, ಸಿಎಂ ಸಿದ್ದರಾಮಯ್ಯ
ರಮೇಶ್​ ಎಮ್​.
| Edited By: |

Updated on: Sep 21, 2023 | 10:40 PM

Share

ಬೆಂಗಳೂರು, ಸೆಪ್ಟೆಂಬರ್​​ 21: ಸಿಎಂ ಸಿದ್ದರಾಮಯ್ಯ (Siddaramaiah) ಶಾಸಕರಾಗಿ ಆಯ್ಕೆ ಅಸಿಂಧು ಕೋರಿ ಸಲ್ಲಿಸಿದ್ದ ಅರ್ಜಿಗೆ ಸಿದ್ದರಾಮಯ್ಯ ಪರ ವಕೀಲರಿಂದ ಆಕ್ಷೇಪಣೆ ಸಲ್ಲಿಸಲಾಗಿದ್ದು, ಇದು ಪ್ರಚಾರಕ್ಕಾಗಿ ಸಲ್ಲಿಸಿರುವ ಚುನಾವಣಾ ತಕರಾರು ಅರ್ಜಿ. ಅರ್ಜಿದಾರರು ಊಹೆಗಳ ಮೇಲೆ ತಕರಾರು ಅರ್ಜಿ ಸಲ್ಲಿಸಿದ್ದಾರೆ. ಹೀಗಾಗಿ ಅರ್ಜಿ ವಜಾಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದು, ಅರ್ಜಿ ವಿಚಾರಣೆಯನ್ನು ಅಕ್ಟೋಬರ್ 6ಕ್ಕೆ ಹೈಕೋರ್ಟ್ ಮುಂದೂಡಿದೆ.

ಕಾಂಗ್ರೆಸ್ ಪಕ್ಷ ಗ್ಯಾರಂಟಿ ಯೋಜನೆಗಳಿಂದ ಮತದಾರರಿಗೆ ಪ್ರಜಾಪ್ರತಿನಿಧಿ ಕಾಯ್ದೆ ಸೆ.123(1) ಪ್ರಕಾರ ಆಮಿಷ ಒಡ್ಡುವಂತಿಲ್ಲ. ಆದರೆ ಮತದಾರರಿಗೆ ಗ್ಯಾರಂಟಿ‌ ಕಾರ್ಡ್ ವಿತರಿಸಿ ಆಮಿಷ ಒಡ್ಡಲಾಗಿದೆ. ಹೀಗಾಗಿ ಸಿದ್ದರಾಮಯ್ಯ ಆಯ್ಕೆ ಅಸಿಂಧುಗೊಳಿಸುವಂತೆ ಕೆ.ಎಂ.ಶಂಕರ ಎಂಬುವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಇದನ್ನೂ ಓದಿ: ಮತದಾರರಿಗೆ ಆಮಿಷ: ಸಿಎಂ ಸಿದ್ದರಾಮಯ್ಯ ಶಾಸಕ ಸ್ಥಾನ ಅಸಿಂಧು ಕೋರಿ ಹೈಕೋರ್ಟ್​​ಗೆ ಅರ್ಜಿ

ಕರ್ನಾಟಕದಲ್ಲಿ ಕಾಂಗ್ರೆಸ್​ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಗುವಲ್ಲಿ ಐದು ಗ್ಯಾರಂಟಿ ಯೋಜನೆಗಳು ನೆರವಾಗಿದ್ದವು. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಈ ಐದು ಯೋಜನೆಗಳು ಜಾರಿ ಮಾಡುತ್ತೇವೆ ಎಂದು ಮತದಾರರನ್ನು ತಮ್ಮತ್ತ ಸೆಳೆಯಲು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರು ಸಹಿ ಹಾಕಿರುವ ಗ್ಯಾರಂಟಿ ಕಾರ್ಡ್​ಗಳನ್ನು​ ಚುನಾವಣಾ ಪೂರ್ವದಲ್ಲಿ ರಾಜ್ಯಾದ್ಯಂತ ಹಂಚಲಾಗಿತ್ತು.

ಇದನ್ನೂ ಓದಿ: Siddaramaiah: ಚುನಾವಣಾ ತಕರಾರು ಅರ್ಜಿ; ಸಿದ್ದರಾಮಯ್ಯಗೆ ಹೈಕೋರ್ಟ್ ನೋಟಿಸ್

ಪ್ರಜಾಪ್ರತಿನಿಧಿ ಕಾಯ್ದೆ ಸೆಕ್ಷನೆ 123 (1) ಪ್ರಕಾರ ಆಮಿಷ ಒಡ್ಡುವಂತಿಲ್ಲ. ಆದರೆ ಕಾಂಗ್ರೆಸ್ ಪಕ್ಷವು ಮತದಾರರಿಗೆ ಗ್ಯಾರಂಟಿ‌ ಕಾರ್ಡ್ ವಿತರಿಸಿ ಆಮಿಷ ಒಡ್ಡಿದೆ. ಹೀಗಾಗಿ ಸಿದ್ದರಾಮಯ್ಯ ಅವರ ಶಾಸಕ ಸ್ಥಾನದ ಆಯ್ಕೆ ಅಸಿಂಧುಗೊಳಿಸುವಂತೆ ಕೋರಿ ಕೆ.ಎಂ.ಶಂಕರ ಎಂಬುವರು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು.

ಅದರಂತೆ ಕಚೇರಿ ಆಕ್ಷೇಪಣೆಗಳನ್ನು ಸರಿಪಡಿಸುವಂತೆ ಹೈಕೋರ್ಟ್ ಸೂಚನೆ ನೀಡಿ ವಿಚಾರಣೆಯನ್ನು ಜುಲೈ 28ಕ್ಕೆ ಮುಂದೂಡಿತ್ತು. ಆದರೆ ಸಿಎಂ ಸಿದ್ದರಾಮಯ್ಯ ಪರ ವಕೀಲರಿಂದ ಇದಕ್ಕೆ ಆಕ್ಷೇಪಣೆ ಸಲ್ಲಿಸಲಾಗಿತ್ತು. ಇದು ಪ್ರಚಾರಕ್ಕಾಗಿ ಮತ್ತು ಅರ್ಜಿದಾರರ ಊಹೆಗಳ ಮೇಲೆ ತಕರಾರು ಅರ್ಜಿ ಸಲ್ಲಿಸಿದ್ದಾರೆ. ಹೀಗಾಗಿ ಅರ್ಜಿ ವಜಾಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದು, ವಿಚಾರಣೆಯನ್ನು ಹೈಕೋರ್ಟ್ ಅಕ್ಟೋಬರ್ 6ಕ್ಕೆ ಮುಂದೂಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ