AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Election News: 4 ಶಾಸಕರಿಗೆ ಟಿಕೆಟ್ ಕೈ ತಪ್ಪುವ ಭೀತಿ; 22 ಹಾಲಿ ಶಾಸಕರಿಗೆ “ಕೈ” ವರಿಷ್ಠರ ಎಚ್ಚರಿಕೆ

ಚುನಾವಣಾ ಹತ್ತಿರ ಬರುತ್ತಿದ್ದಂತೆ ಕಾಂಗ್ರೆಸ್​ ನಾಯಕರು ಟಿಕೆಟ್​ ಹಂಚಿಕೆ ವಿಚಾರದಲ್ಲಿ ತಲೆಕೆಡಿಸಿಕೊಂಡಿದ್ದಾರೆ. ಈಗಾಗಲೇ ತಮ್ಮ ತಮ್ಮ ಕ್ಷೇತ್ರವನ್ನ ಒಂದು ತಿಂಗಳುಗಳೊಳಗಾಗಿ ಗಟ್ಟಿ ಮಾಡಿಕೊಳ್ಳದಿದ್ದರೆ ಟಿಕೆಟ್​ ನೀಡುವುದಿಲ್ಲ ಎಂದು ಖಡಕ್​ ಎಚ್ಚರಿಕೆ ನೀಡಿದೆ.

Election News: 4 ಶಾಸಕರಿಗೆ ಟಿಕೆಟ್ ಕೈ ತಪ್ಪುವ ಭೀತಿ; 22 ಹಾಲಿ ಶಾಸಕರಿಗೆ ಕೈ ವರಿಷ್ಠರ ಎಚ್ಚರಿಕೆ
ಟಿಕೆಟ್​ ಆಕಾಂಕ್ಷಿಗಳಿಗೆ ಖಡಕ್​ ಎಚ್ಚರಿಕೆ ಕೊಟ್ಟ ಕಾಂಗ್ರೆಸ್​ ವರಿಷ್ಟರು
TV9 Web
| Edited By: |

Updated on:Feb 04, 2023 | 8:38 AM

Share

ವಿಧಾನಸಭೆ ಚುನಾವಣೆ ಇನ್ನೆನು ಕೆಲವು ತಿಂಗಳುಗಳು ಬಾಕಿ ಇದ್ದು, ಚುನಾವಣಾ ಕಾವು ಶುರುವಾಗಿದೆ. ಕೆಲವರಿಗೆ ಟಿಕೆಟ್​ ಕೈ ತಪ್ಪುವ ಭೀತಿ ಎದುರಾಗಿದ್ದರೆ, ಇನ್ನೂ ಕೆಲವರು ಈ ಬಾರಿಯಾದರೂ ನಮಗೆ ಟಿಕೆಟ್​ ಸಿಗಬಹುದೆಂಬ ಆಶಾಭಾವನೆಯಿಂದ ಎದುರು ನೋಡುತ್ತಿದ್ದಾರೆ. ಒಟ್ಟಿನಲ್ಲಿ ಚುನಾವಣಾ ಹತ್ತಿರ ಬರುತ್ತಿದ್ದಂತೆ ಟಕೆಟ್​ ಆಕಾಂಕ್ಷಿಗಳಿಗೆ ಭಯ ಶುರುವಾಗಿರುವುದಂತೂ ಸುಳ್ಳಲ್ಲ. ಅದರಂತೆ ವಿವಿಧ ಕಾರಣ ನೀಡಿ ಈ ನಾಲ್ವರು ಶಾಸಕರಿಗೆ ಈ ಬಾರಿ ಟಿಕೆಟ್ ಕೈ ತಪ್ಪುವ ಭೀತಿ ಎದುರಾಗಿದೆ. ವಯಸ್ಸಿನ ಕಾರಣದಿಂದ ಅಫ್ಜಲ್​ಪುರ ಶಾಸಕ ಎಂ.ವೈ.ಪಾಟೀಲ್ ಹಾಗೂ ಪಾವಗಡದಿಂದ ವೆಂಕಟರಮಣಪ್ಪ, ಕ್ಷೇತ್ರದಲ್ಲಿ ಅನುಕಂಪದ ಅಲೆ ಇಲ್ಲದ ಕಾರಣ ಕುಂದಗೋಳದಿಂದ ಕುಸುಮಾ ಶಿವಳ್ಳಿ, ಇನ್ನು ಸರ್ವೆ ವರದಿ ಇರದ ಹಿನ್ನೆಲೆ ಲಿಂಗಸುಗೂರಿನ ಡಿ.ಎಸ್.ಹುಲಗೇರಿ ಅವರಿಗೆ ಟಿಕೆಟ್​ ಕೈ ತಪ್ಪುವ ಭಯ ಶುರುವಾಗಿದೆ.

ಈ ನಾಲ್ವರ ಪೈಕಿ ಇಬ್ಬರು ಶಾಸಕರಿಂದ ಮಕ್ಕಳ ಪರ ಲಾಬಿ ಶುರುವಾಗಿದೆ. ಎಮ್ ವೈ ಪಾಟೀಲ್ ರಾಜಕೀಯ ನಿವೃತ್ತಿ ಹಿನ್ನೆಲೆ ತಮ್ಮ ಪುತ್ರ ಅರುಣ್ ಪಾಟೀಲ್​ಗೆ ಟಿಕೆಟ್ ಕೇಳಿದ್ದಾರೆ. ಇತ್ತ ಸಿದ್ದರಾಮಯ್ಯ ಬೆಂಬಲಿಗ ಜೆ ಎಂ ಕೊರಬು ಕೂಡಾ ಟಿಕೆಟ್​ಗಾಗಿ ಬೇಡಿಕೆ ಇಟ್ಟಿದ್ದಾರೆ. ಇದರ ಜೊತೆ ಪಾವಗಡದ ಶಾಸಕ ವೆಂಕಟರಮಣಪ್ಪ ಕೂಡ ತಮ್ಮ ಮಗನಿಗೆ ಟಿಕೆಟ್​ ನೀಡಿ ಎಂದು ಕೇಳಿದ್ದಾರೆ. ಈ ಎಲ್ಲಾ ಸರ್ವೆ ವರದಿ ಆಧರಿಸಿಯೇ ಹಾಲಿ ಶಾಸಕರ ಟಿಕೇಟ್ ಹಣೆಬರಹವನ್ನೂ ಕೈ ನಾಯಕರು ನಿರ್ಧರಿಸುತ್ತಿದ್ದಾರೆ. ಈ ನಾಲ್ವರನ್ನೂ ಸೇರಿಸಿ 8-10 ಹಾಲಿ ಶಾಸಕರಿಗೆ ಒಂದು ತಿಂಗಳೊಳಗೆ ಕ್ಷೇತ್ರ ಸರಿ ಮಾಡಿಕೊಳ್ಳಿ. ಇಲ್ಲವಾದರೆ ಟಿಕೆಟ್ ಸಿಗುವುದು ಡೌಟ್ ಎಂದು ಈಗಾಗಲೇ ಕಾಂಗ್ರೆಸ್ ವರಿಷ್ಠರು ಎಚ್ಚರಿಕೆ ಕೊಟ್ಟಿದ್ದಾರೆ.

ಇದನ್ನೂ ಓದಿ:ಪಕ್ಷಾಂತರಗಳು ಇರುತ್ತವೆ, ರಾಜಕೀಯ ಪಕ್ಷಗಳು ಒಡೆಯುತ್ತವೆ, ಆದ್ರೂ ಒಂದು ಪಕ್ಷ ಅಧಿಕಾರಕ್ಕೆ ಬರುತ್ತದೆ: ಕೋಡಿಶ್ರೀ ಮತ್ತೊಂದು ಭವಿಷ್ಯ

ಇನ್ನು ಮೂರು ಸರ್ವೆ ವರದಿಯಲ್ಲೂ ಯಾರಿಗೆ ಹಿನ್ನಡೆ ಇದೆಯೋ ಅವರಿಗೆ ಟಿಕೇಟ್ ಸಿಗುವುದು ಡೌಟ್ ಎಂದು 22 ಕ್ಕೂ ಹೆಚ್ಚು ಹಾಲಿ ಶಾಸಕರಿಗೆ ಆಂತರಿಕ ಸಮೀಕ್ಷೆಯ ಮೇರೆಗೆ ಎಚ್ಚರಿಕೆ ಕೊಟ್ಟಿದ್ದ ಎಐಸಿಸಿ, ಇದರ ಬೆನ್ನಲ್ಲೆ ಸುಮಾರು 12 ಕ್ಷೇತ್ರಗಳಲ್ಲಿ ಅಲರ್ಟ್ ಆದ ಹಾಲಿ ಶಾಸಕರು ತಮ್ಮ ತಮ್ಮ ಕ್ಷೇತ್ರವನ್ನು ಹಿಡಿತಕ್ಕೆ ತೆಗೆದುಕೊಂಡಿದ್ದಾರೆ. ಈಗಲೂ ಸೋಲಿನ ಭೀತಿ ಇರುವ ಶಾಸಕರಿಗೆ ಒಂದು ತಿಂಗಳ ಡೆಡ್ ಲೈನ್ ನೀಡಿದ್ದು, ಗೆಲುವಿನ ವಾತಾವರಣ ಸೃಷ್ಟಿ ಆಗಿಲ್ಲ ಎಂದ್ರೆ ಟಿಕೆಟ್ ಇಲ್ಲ ಎಂದು ಪದೇ ಪದೇ ಸುರ್ಜೆವಾಲಾ, ಡಿಕೆಶಿ, ಸಿದ್ದರಾಮಯ್ಯ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ. ಒಟ್ಟಿನಲ್ಲಿ ಯಾರಿಗೆ ಟಿಕೆಟ್​ ಸಿಗಲಿದೆ, ಯಾರಿಗೆ ಕೈ ತಪ್ಪಲಿದೆ ಕಾದು ನೋಡಬೇಕು.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:38 am, Sat, 4 February 23

Follow Us
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!