AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿಗೆ ತೆರಳುತ್ತಿದ್ದ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಕಾರನ್ನು ತಪಾಸಣೆ ಮಾಡಿದ ಚುನಾವಣಾ ಸಿಬ್ಬಂದಿ

ಏಪ್ರಿಲ್ 17ರಂದು ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ನಡೆಯಲಿದ್ದು, ಚುನಾವಣಾ ಪ್ರಚಾರಕ್ಕೆ ಬೆಳಗಾವಿ ಜಿಲ್ಲೆಗೆ ಆಗಮಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಕಾರನ್ನು ಚುನಾವಣಾ ಸಿಬ್ಬಂದಿ ತಪಾಸಣೆ ಮಾಡಿದ ಘಟನೆ ನಿನ್ನೆ ಸಂಜೆ ನಡೆದಿದೆ.

ಬೆಳಗಾವಿಗೆ ತೆರಳುತ್ತಿದ್ದ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಕಾರನ್ನು ತಪಾಸಣೆ ಮಾಡಿದ ಚುನಾವಣಾ ಸಿಬ್ಬಂದಿ
ಬಿ.ಎಸ್​.ಯಡಿಯೂರಪ್ಪ ಅವರ ಕಾರು ತಪಾಸಣೆ
Skanda
| Updated By: ಸಾಧು ಶ್ರೀನಾಥ್​|

Updated on: Apr 07, 2021 | 2:51 PM

Share

ಬೆಳಗಾವಿ: ಕೊರೊನಾ ಎರಡನೇ ಅಲೆ ಆತಂಕದ ನಡುವೆಯೂ ರಾಜ್ಯದಲ್ಲಿ ಉಪಚುನಾವಣೆ ಪ್ರಚಾರ ಕಾರ್ಯ ಬಿರುಸಿನಿಂದ ಸಾಗಿದೆ. ಏಪ್ರಿಲ್ 17ರಂದು ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ನಡೆಯಲಿದ್ದು, ಚುನಾವಣಾ ಪ್ರಚಾರಕ್ಕೆ ಬೆಳಗಾವಿ ಜಿಲ್ಲೆಗೆ ಆಗಮಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಕಾರನ್ನು ಚುನಾವಣಾ ಸಿಬ್ಬಂದಿ ತಪಾಸಣೆ ಮಾಡಿದ ಘಟನೆ ನಿನ್ನೆ ಸಂಜೆ ನಡೆದಿದೆ. ತಪಾಸಣೆಗೆ ಸಂಬಂಧಿಸಿದ ಫೋಟೋ, ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

ಹಿರೇಬಾಗೇವಾಡಿ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಿರ್ಮಿಸಿರುವ ಚೆಕ್‌ಪೋಸ್ಟ್‌ನಲ್ಲಿ ಮುಖ್ಯಮಂತ್ರಿಗಳ ವಾಹನವನ್ನು ತಪಾಸಣೆ ಮಾಡಲಾಗಿದ್ದು, ಕರ್ತವ್ಯ ನಿರತ ಚುನಾವಣಾ ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ. ನಿನ್ನೆ ಚುನಾವಣೆಗೆ ಸಂಬಂಧಿಸಿದಂತೆ ಬೆಳಗಾವಿಯತ್ತ ತೆರಳಿದ್ದ ಮುಖ್ಯಮಂತ್ರಿಗಳು ಮುತ್ನಾಳ ಗ್ರಾಮದ ಮಠಕ್ಕೆ ಭೇಟಿ ನೀಡಿ ನಂತರ ಹಲಗಾ ಗ್ರಾಮಕ್ಕೆ ತೆರಳಿದ್ದರು.

ತಡರಾತ್ರಿ ತನಕವೂ ಪಕ್ಷದ ಮುಖಂಡರೊಟ್ಟಿಗೆ ಸಭೆ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಬೆಳಗಾವಿಯಲ್ಲಿ ಉಪಚುನಾವಣೆ ಹಿನ್ನೆಲೆ ನಿನ್ನೆ ತಡರಾತ್ರಿ ತನಕವೂ ಪಕ್ಷದ ಮುಖಂಡರೊಟ್ಟಿಗೆ ಸಭೆ ನಡೆಸಿದ್ದಾರೆ. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಸಚಿವ ಉಮೇಶ್ ಕತ್ತಿ, ಮಾಜಿ ಸಂಸದ ರಮೇಶ್ ಕತ್ತಿ, ಶಾಸಕರಾದ ಅನಿಲ್.ಬಿ, ಅಭಯ್ ಪಾಟೀಲ್ ಮುಂತಾದವರೊಂದಿಗೆ ಸಭೆ ನಡೆಸಿದ್ದಾರೆ.

Election officers check CM BS Yediyurappa car

ಕಾರಿನಲ್ಲಿ ತೆರಳಿದ ಬಿ.ಎಸ್​.ಯಡಿಯೂರಪ್ಪ

ಉಪಚುನಾವಣೆ ಮೇಲೆ ಮುಷ್ಕರ ಪರಿಣಾಮ ಬೀರಲ್ಲ: ಬಿ.ವೈ.ವಿಜಯೇಂದ್ರ ಸಾರಿಗೆ ನೌಕರರ ಮುಷ್ಕರದ ಬಗ್ಗೆ ಉಪಚುನಾವಣೆ ಉಸ್ತುವಾರಿ ವಹಿಸಿರುವ ಬಿ.ವೈ.ವಿಜಯೇಂದ್ರ ಮಾತನಾಡಿ, ಇದು ಉಪಚುನಾವಣೆಯ ಮೇಲೆ ಪರಿಣಾಮ ಬೀರುವುದಿಲ್ಲ. ಕಾಂಗ್ರೆಸ್‌ನವರು ಇದನ್ನೇ ಮುಂದಿಟ್ಟು ಟೀಕೆ ಮಾಡ್ತಿದ್ದಾರೆ. ಆದರೆ, ಇದರಿಂದ ಬಿಜೆಪಿಗೆ ಏನೂ ಆಗುವುದಿಲ್ಲ. ಬಸ್ ಸಂಚಾರ ಸ್ಥಗಿತದಿಂದ ಪ್ರಯಾಣಿಕರಿಗೆ ಕಷ್ಟವಾಗುತ್ತದೆ. ಆದ್ದರಿಂದ ಸಾರಿಗೆ ನೌಕರರು ಪರಿಸ್ಥಿತಿ ಅರ್ಥ ಮಾಡಿಕೊಂಡು ಮುಷ್ಕರ ಹಿಂಪಡೆಯಬೇಕು ಎಂದು ರಾಯಚೂರಿನಲ್ಲಿ ಮನವಿ ಮಾಡಿದ್ದಾರೆ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ