AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿಗೆ ತೆರಳುತ್ತಿದ್ದ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಕಾರನ್ನು ತಪಾಸಣೆ ಮಾಡಿದ ಚುನಾವಣಾ ಸಿಬ್ಬಂದಿ

ಏಪ್ರಿಲ್ 17ರಂದು ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ನಡೆಯಲಿದ್ದು, ಚುನಾವಣಾ ಪ್ರಚಾರಕ್ಕೆ ಬೆಳಗಾವಿ ಜಿಲ್ಲೆಗೆ ಆಗಮಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಕಾರನ್ನು ಚುನಾವಣಾ ಸಿಬ್ಬಂದಿ ತಪಾಸಣೆ ಮಾಡಿದ ಘಟನೆ ನಿನ್ನೆ ಸಂಜೆ ನಡೆದಿದೆ.

ಬೆಳಗಾವಿಗೆ ತೆರಳುತ್ತಿದ್ದ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಕಾರನ್ನು ತಪಾಸಣೆ ಮಾಡಿದ ಚುನಾವಣಾ ಸಿಬ್ಬಂದಿ
ಬಿ.ಎಸ್​.ಯಡಿಯೂರಪ್ಪ ಅವರ ಕಾರು ತಪಾಸಣೆ
Skanda
| Edited By: |

Updated on: Apr 07, 2021 | 2:51 PM

Share

ಬೆಳಗಾವಿ: ಕೊರೊನಾ ಎರಡನೇ ಅಲೆ ಆತಂಕದ ನಡುವೆಯೂ ರಾಜ್ಯದಲ್ಲಿ ಉಪಚುನಾವಣೆ ಪ್ರಚಾರ ಕಾರ್ಯ ಬಿರುಸಿನಿಂದ ಸಾಗಿದೆ. ಏಪ್ರಿಲ್ 17ರಂದು ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ನಡೆಯಲಿದ್ದು, ಚುನಾವಣಾ ಪ್ರಚಾರಕ್ಕೆ ಬೆಳಗಾವಿ ಜಿಲ್ಲೆಗೆ ಆಗಮಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಕಾರನ್ನು ಚುನಾವಣಾ ಸಿಬ್ಬಂದಿ ತಪಾಸಣೆ ಮಾಡಿದ ಘಟನೆ ನಿನ್ನೆ ಸಂಜೆ ನಡೆದಿದೆ. ತಪಾಸಣೆಗೆ ಸಂಬಂಧಿಸಿದ ಫೋಟೋ, ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

ಹಿರೇಬಾಗೇವಾಡಿ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಿರ್ಮಿಸಿರುವ ಚೆಕ್‌ಪೋಸ್ಟ್‌ನಲ್ಲಿ ಮುಖ್ಯಮಂತ್ರಿಗಳ ವಾಹನವನ್ನು ತಪಾಸಣೆ ಮಾಡಲಾಗಿದ್ದು, ಕರ್ತವ್ಯ ನಿರತ ಚುನಾವಣಾ ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ. ನಿನ್ನೆ ಚುನಾವಣೆಗೆ ಸಂಬಂಧಿಸಿದಂತೆ ಬೆಳಗಾವಿಯತ್ತ ತೆರಳಿದ್ದ ಮುಖ್ಯಮಂತ್ರಿಗಳು ಮುತ್ನಾಳ ಗ್ರಾಮದ ಮಠಕ್ಕೆ ಭೇಟಿ ನೀಡಿ ನಂತರ ಹಲಗಾ ಗ್ರಾಮಕ್ಕೆ ತೆರಳಿದ್ದರು.

ತಡರಾತ್ರಿ ತನಕವೂ ಪಕ್ಷದ ಮುಖಂಡರೊಟ್ಟಿಗೆ ಸಭೆ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಬೆಳಗಾವಿಯಲ್ಲಿ ಉಪಚುನಾವಣೆ ಹಿನ್ನೆಲೆ ನಿನ್ನೆ ತಡರಾತ್ರಿ ತನಕವೂ ಪಕ್ಷದ ಮುಖಂಡರೊಟ್ಟಿಗೆ ಸಭೆ ನಡೆಸಿದ್ದಾರೆ. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಸಚಿವ ಉಮೇಶ್ ಕತ್ತಿ, ಮಾಜಿ ಸಂಸದ ರಮೇಶ್ ಕತ್ತಿ, ಶಾಸಕರಾದ ಅನಿಲ್.ಬಿ, ಅಭಯ್ ಪಾಟೀಲ್ ಮುಂತಾದವರೊಂದಿಗೆ ಸಭೆ ನಡೆಸಿದ್ದಾರೆ.

Election officers check CM BS Yediyurappa car

ಕಾರಿನಲ್ಲಿ ತೆರಳಿದ ಬಿ.ಎಸ್​.ಯಡಿಯೂರಪ್ಪ

ಉಪಚುನಾವಣೆ ಮೇಲೆ ಮುಷ್ಕರ ಪರಿಣಾಮ ಬೀರಲ್ಲ: ಬಿ.ವೈ.ವಿಜಯೇಂದ್ರ ಸಾರಿಗೆ ನೌಕರರ ಮುಷ್ಕರದ ಬಗ್ಗೆ ಉಪಚುನಾವಣೆ ಉಸ್ತುವಾರಿ ವಹಿಸಿರುವ ಬಿ.ವೈ.ವಿಜಯೇಂದ್ರ ಮಾತನಾಡಿ, ಇದು ಉಪಚುನಾವಣೆಯ ಮೇಲೆ ಪರಿಣಾಮ ಬೀರುವುದಿಲ್ಲ. ಕಾಂಗ್ರೆಸ್‌ನವರು ಇದನ್ನೇ ಮುಂದಿಟ್ಟು ಟೀಕೆ ಮಾಡ್ತಿದ್ದಾರೆ. ಆದರೆ, ಇದರಿಂದ ಬಿಜೆಪಿಗೆ ಏನೂ ಆಗುವುದಿಲ್ಲ. ಬಸ್ ಸಂಚಾರ ಸ್ಥಗಿತದಿಂದ ಪ್ರಯಾಣಿಕರಿಗೆ ಕಷ್ಟವಾಗುತ್ತದೆ. ಆದ್ದರಿಂದ ಸಾರಿಗೆ ನೌಕರರು ಪರಿಸ್ಥಿತಿ ಅರ್ಥ ಮಾಡಿಕೊಂಡು ಮುಷ್ಕರ ಹಿಂಪಡೆಯಬೇಕು ಎಂದು ರಾಯಚೂರಿನಲ್ಲಿ ಮನವಿ ಮಾಡಿದ್ದಾರೆ.

Follow Us
Skanda
Skanda
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್