AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಜನತೆಗೆ ಶಾಕ್! ಏಪ್ರಿಲ್​ನಲ್ಲಿ ವಿದ್ಯುತ್ ದರ ಏರಿಕೆ ಸಾಧ್ಯತೆ

ಕಳೆದ ವರ್ಷ 1.39 ಪೈಸೆಗೆ ದರ ಪರಿಷ್ಕರಣೆಗೆ ಪ್ರಸ್ತಾವನೆ ಸಲ್ಲಿಕೆಯಾಗಿತ್ತು. ಆದರೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಪರಿಷ್ಕರಣೆ ಮಾಡಿದ್ದು ಕೇವಲ 30 ಪೈಸೆ. ಈ ವರ್ಷವೂ 1.50 ಪೈಸೆ ದರ ಏರಿಕೆಗೆ ಪ್ರಸ್ತಾವನೆ ನೀಡಲಾಗಿದೆ.

ಕರ್ನಾಟಕ ಜನತೆಗೆ ಶಾಕ್! ಏಪ್ರಿಲ್​ನಲ್ಲಿ ವಿದ್ಯುತ್ ದರ ಏರಿಕೆ ಸಾಧ್ಯತೆ
ಸಾಂದರ್ಭಿ ಚಿತ್ರ
TV9 Web
| Edited By: |

Updated on:Feb 13, 2022 | 9:28 AM

Share

ಬೆಂಗಳೂರು: ರಾಜ್ಯದ ಜನತೆಗೆ ವಿದ್ಯುತ್ ದರ (Electricity Rate) ಏರಿಕೆ ಬಿಸಿ ತಟ್ಟುವ ಸಾಧ್ಯತೆಯಿದೆ. ಬೆಲೆ ಏರಿಕೆ ಮಾಡುವಂತೆ ಎಸ್ಕಾಂಗಳಿಂದ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗಕ್ಕೆ (Karnataka Electricity Regulatory Commission) ಪ್ರಸ್ತಾವನೆ ಸಲ್ಲಿಕೆಯಾಗಿದ್ದು, ಪ್ರತಿ ಯೂನಿಟ್​ಗೆ 1.50 ರೂ. ವಿದ್ಯುತ್ ದರ ಏರಿಕೆ ಮಾಡುವಂತೆ ಪ್ರಸ್ತಾವನೆಯಲ್ಲಿ ತಿಳಿಸಿದ್ದಾರೆ. ಈ ಸಂಬಂಧ ಕೆಇಆರ್​ಸಿ (KERC) ನಾಳೆಯಿಂದ ಗ್ರಾಹಕರ ಅಹವಾಲು ಸ್ವೀಕರಿಸಲಿದೆ. ನಾಳೆಯಿಂದ 3 ದಿನ ದರ ಪರಿಷ್ಕರಣೆ ಪರಿಶೀಲನಾ ಕಾರ್ಯ ನಡೆಯಲಿದ್ದು, ಏಪ್ರಿಲ್ ಅಥವಾ ಮೇ ತಿಂಗಳಿನಲ್ಲಿ ದರ ಏರಿಕೆಯಾಗುವ ಸಾಧ್ಯತೆಯಿದೆ.

ಕಳೆದ ವರ್ಷ 1.39 ಪೈಸೆಗೆ ದರ ಪರಿಷ್ಕರಣೆಗೆ ಪ್ರಸ್ತಾವನೆ ಸಲ್ಲಿಕೆಯಾಗಿತ್ತು. ಆದರೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಪರಿಷ್ಕರಣೆ ಮಾಡಿದ್ದು ಕೇವಲ 30 ಪೈಸೆ. ಈ ವರ್ಷವೂ 1.50 ಪೈಸೆ ದರ ಏರಿಕೆಗೆ ಪ್ರಸ್ತಾವನೆ ನೀಡಲಾಗಿದ್ದು, ಎಷ್ಟು ದರ ಏರಿಕೆಯಾಗುತ್ತದೆ ಎಂದು ಕಾದು ನೋಡಬೇಕು. ಈಗಾಗಲೇ ರಾಜ್ಯದ ಜನ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಕಂಗಾಲಾಗಿದ್ದಾರೆ. ಇದರ ಬೆನ್ನಲ್ಲೇ ವಿದ್ಯುತ್ ದರ ಏರಿಕೆಯಿಂದ ಮತ್ತೊಂದು ಶಾಕ್ ಎದುರಾಗುತ್ತದೆ. ದರ ಹೆಚ್ಚಳಕ್ಕೆ ವಿದ್ಯುತ್ ಕಂಪನಿಗಳು ನಷ್ಟದ ಕಾರಣ ಹೇಳಿವೆ.

ಯಾವ ಯಾವ ವರ್ಷದಲ್ಲಿ ಎಷ್ಟೆಷ್ಟು ದರ ಪರಿಷ್ಕರಣೆಯಾಗಿತ್ತು? * 2009ರಲ್ಲಿ ಪ್ರತಿ ಯೂನಿಟ್​ಗೆ 34 ಪೈಸೆ ಹೆಚ್ಚಳ.

* 2010 ಪ್ರತಿ ಯೂನಿಟ್​ಗೆ 30 ಪೈಸೆ ಹೆಚ್ಚಳ.

* 2011 ಪ್ರತಿ ಯೂನಿಟ್​ಗೆ 28 ಪೈಸೆ ಹೆಚ್ಚಳ.

* 2012 ಪ್ರತಿ ಯೂನಿಟ್​ಗೆ 13 ಪೈಸೆ ಹೆಚ್ಚಳ.

* 2013 ಪ್ರತಿ ಯೂನಿಟ್​ಗೆ 13 ಪೈಸೆ ಹೆಚ್ಚಳ.

* 2017 ಪ್ರತಿ ಯೂನಿಟ್​ಗೆ 48 ಪೈಸೆ ಹೆಚ್ಚಳ.

* 2019 ರಲ್ಲಿ ಪ್ರತಿ ಯೂನಿಟ್​ಗೆ 35 ಪೈಸೆ ಹೆಚ್ಚಳ.

* 2020 ರಲ್ಲಿ ಪ್ರತಿ ಯೂನಿಟ್​ಗೆ 30 ಪೈಸೆ ಹೆಚ್ಚಳ.

ಇದನ್ನೂ ಓದಿ

ಹಲವಾರು ಬ್ರಿಟಿಷ್ ಪ್ರಜೆಗಳನ್ನು ಅಫ್ಘಾನಿಸ್ತಾನದಲ್ಲಿ ಸೆರೆಹಿಡಿದಿಡಲಾಗಿದೆ ಎನ್ನುತ್ತಿದೆ ಯುಕೆ ಸರ್ಕಾರ

Weather Today: ಕರ್ನಾಟಕದಲ್ಲಿ ತಗ್ಗಿದ ಮಳೆ; ತಮಿಳುನಾಡಿನಲ್ಲಿ ಇಂದು ವರುಣನ ಆರ್ಭಟ

Published On - 9:27 am, Sun, 13 February 22

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ