ಚಾಮರಾಜನಗರದಲ್ಲಿ ಕಾಡಾನೆ ದಾಳಿಗೆ ರೈತ ಬಲಿ: ಅರಣ್ಯಾಧಿಕಾರಿಗಳ ವಿರುದ್ಧ ಆಕ್ರೋಶ
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಕೋಟೆಕೆರೆ ಗ್ರಾಮದಲ್ಲಿ ಗಜರಾಜನ ಕಾಲ್ತುಳಿತಕ್ಕೆ ಸಿಕ್ಕಿ 65 ವರ್ಷದ ರೈತ ಜನ್ನೂರ ನಾಯಕ ಮೃತಪಟ್ಟಿದ್ದಾರೆ. ಗೌರಿ ಗಣೇಶ ಹಬ್ಬದ ದಿನದಂದೇ ಈ ದುರ್ಘಟನೆ ಸಂಭವಿಸಿದೆ. ಅರಣ್ಯ ಇಲಾಖೆಯ ನಿರ್ಲಕ್ಷ್ಯವೇ ಮಾನವ-ಕಾಡುಪ್ರಾಣಿ ಸಂಘರ್ಷ ಹೆಚ್ಚಾಗಲು ಕಾರಣ. ಸೋಲಾರ್ ಫೆನ್ಸಿಂಗ್ ಅಳವಡಿಸದಿರುವುದು ಪದೇ ಪದೇ ಕಾಡಾನೆ ದಾಳಿ ನೆಡೆಯುತ್ತಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ
ಚಾಮರಾಜನಗರ, ಸೆಪ್ಟೆಂಬರ್ 14: ಗುಂಡ್ಲುಪೇಟೆ ತಾಲೂಕಿನಲ್ಲಿ ಮಾನವ-ಕಾಡುಪ್ರಾಣಿ ಸಂಘರ್ಷ ಮತ್ತೆ ಮುನ್ನಲೆಗೆ ಬಂದಿದೆ. ಕೋಟೆಕೆರೆ ಗ್ರಾಮದಲ್ಲಿ ರೈತ ಜನ್ನೂರ ನಾಯಕ (65) ಕಾಡಾನೆ ದಾಳಿಗೆ ಬಲಿಯಾಗಿದ್ದು, ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಇವರನ್ನು ಆನೆ ತುಳಿದು ಸಾಯಿಸಿದೆ. ಈ ಘಟನೆಯು ಸ್ಥಳೀಯರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಪದೇ ಪದೇ ಕಾಡಾನೆಗಳ ಉಪಟಳದಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಅರಣ್ಯಾಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ. ಕಾಡಿನಿಂದ ನಾಡಿಗೆ ಕಾಡಾನೆಗಳು ಬರುವುದನ್ನು ತಡೆಯಲು ಸೋಲಾರ್ ಫೆನ್ಸಿಂಗ್ ಮತ್ತು ಬ್ಯಾರಿಕೇಡ್ಗಳನ್ನು ಅಳವಡಿಸುವಂತೆ ಸ್ಥಳೀಯರು ಈ ಹಿಂದೆ ಮನವಿ ಮಾಡಿದ್ದರೂ, ಅರಣ್ಯ ಇಲಾಖೆ ನಿರ್ಲಕ್ಷ್ಯ ವಹಿಸಿದೆ. ಅರಣ್ಯಾಧಿಕಾರಿಗಳು ತಮ್ಮ ಜವಾಬ್ದಾರಿಯನ್ನು ಅರಿತು ಕೂಡಲೇ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸಲಾಗಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
ಬಿಗ್ ಬಾಸ್ ಮನೆಯಲ್ಲಿ ಮಿತಿ ಮೀರಿದ ಜಗಳ: ಸೌಂದರ್ಯಾ-ಮಂಜು ನಡುವೆ ಗಲಾಟೆ
ಹುಬ್ಬಳ್ಳಿಯಲ್ಲಿ ಈದ್ಗಾ ಮೈದಾನದಲ್ಲಿ ಎಲ್ಲರ ಗಮನ ಸೆಳೆದ ಕೇಸರಿ ಗಣೇಶ
ಮೈಸೂರಿನಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶೋತ್ಸವ
ಬಿಜೆಪಿ ಹೇಳಿದಂಗೆ ಇನ್ಸ್ಪೆಕ್ಟರ್ ಧನಂಜಯ್ನ ಸಸ್ಪೆಂಡ್ ಮಾಡೋಕ್ಕಾಗಲ್ಲ
