AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನದಲ್ಲಿ ರೈಲಿಗೆ ಸಿಲುಕಿ ಕಾಡಾನೆ ಸಾವು; ರಾತ್ರೋ ರಾತ್ರಿ ತೆರವು ಕಾರ್ಯಾಚರಣೆ ನಡೆಸಿದ ರೈಲ್ವೆ ಇಲಾಖೆ

ರೈಲಿಗೆ ಸಿಕ್ಕ ಪರಿಣಾಮ ಕಾಡಾನೆ ಸ್ಥಳದಲ್ಲೇ ಕೊನೆಯುಸಿರೆಳೆದಿದೆ. ಈ ಅಪಘಾತದಲ್ಲಿ ರೈಲಿನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ತೊಂದರೆಯಾಗಿಲ್ಲ. ಎಲ್ಲರೂ ಜೀವಾಪಾಯದಿಂದ ಪಾರಾಗಿದ್ದಾರೆ. ರೈಲು ಅಪಘಾತದಲ್ಲಿ ಸಾವನ್ನಪ್ಪಿರುವ ಕಾಡಾನೆ ಮೃತದೇಹವನ್ನು ರೈಲ್ವೆ ಇಲಾಖೆ ರಾತ್ರೋ ರಾತ್ರಿ ತೆರವು ಕಾರ್ಯಾಚರಣೆ ನಡೆಸಿದೆ.

ಹಾಸನದಲ್ಲಿ ರೈಲಿಗೆ ಸಿಲುಕಿ ಕಾಡಾನೆ ಸಾವು; ರಾತ್ರೋ ರಾತ್ರಿ ತೆರವು ಕಾರ್ಯಾಚರಣೆ ನಡೆಸಿದ ರೈಲ್ವೆ ಇಲಾಖೆ
ರೈಲಿಗೆ ಸಿಕ್ಕಿ ಸಾವನ್ನಪ್ಪಿದ ಆನೆ
sandhya thejappa
|

Updated on: May 19, 2021 | 10:51 AM

Share

ಹಾಸನ: ಮಲೆನಾಡು ಭಾಗದಲ್ಲಿ ಕಾಡಾನೆ ಸಂತತಿ ಹೆಚ್ಚುತ್ತಿದೆ. ಗುಂಪಿನಿಂದ ಬೇರ್ಪಟ್ಟಿದ್ದ ಒಂಟಿ ಸಲಗವೊಂದು ಧಾರುಣವಾಗಿ ಮೃತಪಟ್ಟಿದೆ. ರೈಲಿಗೆ ಕಾಡಾನೆ ಸಿಲುಕಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸಕಲೇಶಪುರ ತಾಲೂಕಿನ ಬಾಳ್ಳುಪೇಟೆಯ ಹಸಿಡೆ ಬಳಿ ಸಂಭವಿಸಿದೆ. ಬೆಂಗಳೂರಿನಿಂದ ಕಾರವಾರಕ್ಕೆ ತೆರಳುತ್ತಿದ್ದ ರೈಲಿಗೆ ಸಿಲುಕಿ ಸಾವನ್ನಪ್ಪಿದ್ದ ಒಂಟಿ ಸಲಗ ಕೆಲ ದಿನಗಳಿಂದ ರೈಲ್ವೆ ಹಳಿ ಮೇಲೆ ಹಾಗೂ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾಣಿಸಿಕೊಳ್ಳುತ್ತಿತ್ತು.

ರೈಲಿಗೆ ಸಿಕ್ಕ ಪರಿಣಾಮ ಕಾಡಾನೆ ಸ್ಥಳದಲ್ಲೇ ಕೊನೆಯುಸಿರೆಳೆದಿದೆ. ಈ ಅಪಘಾತದಲ್ಲಿ ರೈಲಿನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ತೊಂದರೆಯಾಗಿಲ್ಲ. ಎಲ್ಲರೂ ಜೀವಾಪಾಯದಿಂದ ಪಾರಾಗಿದ್ದಾರೆ. ರೈಲು ಅಪಘಾತದಲ್ಲಿ ಸಾವನ್ನಪ್ಪಿರುವ ಕಾಡಾನೆ ಮೃತದೇಹವನ್ನು ರೈಲ್ವೆ ಇಲಾಖೆ ರಾತ್ರೋ ರಾತ್ರಿ ತೆರವು ಕಾರ್ಯಾಚರಣೆ ನಡೆಸಿದೆ. ಸದ್ಯ ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಂದಕಕ್ಕೆ ಬಿದ್ದಿದ್ದ ಕಾಡಾನೆಯ ರಕ್ಷಣೆ ಮಡಿಕೇರಿ: ಕರಡಿಗೋಡಿನಲ್ಲಿ ಕಂದಕಕ್ಕೆ ಬಿದ್ದಿದ್ದ ಕಾಡಾನೆಯನ್ನು ರಕ್ಷಣೆ ಮಾಡಲಾಗಿದೆ. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಗ್ರಾಮ ಕರಡಿಗೋಡಿನಲ್ಲಿ ಈ ಘಟನೆ ನಡೆದಿದೆ. ಮಾಲ್ದಾರೆ ಮೀಸಲು ಅರಣ್ಯದಿಂದ ಬಂದಿದ್ದ ಕಾಡಾನೆ ಕಾಫಿ ತೋಟ ಪ್ರವೇಶಿಸುವ ಯತ್ನದಲ್ಲಿ ಕಂದಕಕ್ಕೆ ಜಾರಿ ಬಿದ್ದಿದೆ. ಕಂದದಲ್ಲಿ ಕೆಸರಿದ್ದ ಕಾರಣ ಆನೆಗೆ ಮೇಲೇಳಲಾಗದೆ ಪರದಾಟ ಪಡುತ್ತಿತ್ತು. ಕಂದಕ್ಕೆ ಬಿದ್ದು ಮೇಲಕ್ಕೆ ಬರಲು ಒದ್ದಾಡುತ್ತಿದ್ದ ಆನೆಯನ್ನು ಮೇಲೆತ್ತಲು ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದರು. ಬಳಿಕ ಅರಣ್ಯ ಇಲಾಖೆ ಸಿಬ್ಬಂದಿ ಜೆಸಿಬಿ ತಂದು ಆನೆಯನ್ನು ರಕ್ಷಿಸಿದೆ.

ಕಂದಕ್ಕೆ ಬಿದ್ದ ಆನೆಯನ್ನು ಜೆಸಿಬಿ ಮೂಲಕ ಮೇಲಕ್ಕೆ ಎತ್ತಲಾಗಿದೆ

ಇದನ್ನೂ ಓದಿ

ದಾವಣಗೆರೆ: ಕೆಲ ತಿಂಗಳಿಂದ ಆಸ್ಪತ್ರೆಗೆ ಗೈರಾಗುತ್ತಿರುವ ವೈದ್ಯರು, ಸಿಬ್ಬಂದಿ; ಆಸ್ಪತ್ರೆಯ ಮುಂದೆ ಗ್ರಾಮಸ್ಥರ ಪ್ರತಿಭಟನೆ

ಲಾಕ್ಡೌನ್ನಿಂದ ಸಂಕಷ್ಟಕ್ಕೆ ಸಿಲುಕಿದ ಅರ್ಚಕರ ಸಮುದಾಯ, ಸರ್ಕಾರದಿಂದ ಪರಿಹಾರಕ್ಕಾಗಿ ಮನವಿ

(elephant was killed when a train collided at hassan)

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!