AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಂಗಿನಮರದಿಂದ ಮಗುವಿನ ತಲೆಯ ಮೇಲೆ ಬಿದ್ದ ಕಾಯಿ : ಹಾವೇರಿ ಜಿಲ್ಲೆಯಲ್ಲಿ 11 ತಿಂಗಳ ಮಗು ಸಾವು

ನಿನ್ನೆ ಬೆಳಗ್ಗೆ ಮನೆಯ ಮುಂದೆ ಮಗುವನ್ನು ಎತ್ತಿಕೊಂಡು ಮಗುವಿನ ತಾಯಿ ಊಟ ಮಾಡಿಸುತ್ತಿದ್ದಳು. ಈ ವೇಳೆ ಮನೆಯ ಮುಂದೆ ಇದ್ದ ತೆಂಗಿನಮರದಿಂದ ತೆಂಗಿನಕಾಯಿ ಮಗುವಿನ ತಲೆಯ ಮೇಲೆ ಬಿದ್ದು ಈ ದುರ್ಘಟನೆ ನಡೆದಿದೆ.

ತೆಂಗಿನಮರದಿಂದ ಮಗುವಿನ ತಲೆಯ ಮೇಲೆ ಬಿದ್ದ ಕಾಯಿ : ಹಾವೇರಿ ಜಿಲ್ಲೆಯಲ್ಲಿ 11 ತಿಂಗಳ ಮಗು ಸಾವು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jun 30, 2021 | 10:54 AM

Share

ಹಾವೇರಿ : ಮನೆಯ ಮುಂದೆ ತೆಂಗಿನಕಾಯಿ ಮರ ಇದ್ದರೆ ಒಳ್ಳೆಯದು ಎನ್ನುವ ಮಾತಿದೆ. ಆದರೆ ಹಾವೇರಿಯಲ್ಲಿ ಮನೆ ಮುಂದೆ ಇದ್ದ ಮರವೇ ಮಗುವಿನ ಸಾವಿಗೆ ಕಾರಣವಾಗಿದೆ. ಜಿಲ್ಲೆಯ ಹಿರೇಕೆರೂರು ತಾಲೂಕಿನ ಹಂಸಭಾವಿ ಗ್ರಾಮದಲ್ಲಿ ಮನೆಯ ಮುಂದಿನ ತೆಂಗಿನಮರದಿಂದ ತೆಂಗಿನಕಾಯಿ ಬಿದ್ದು, ಹನ್ನೊಂದು ತಿಂಗಳ‌ ಮಗುವೊಂದು ಮೃತಪಟ್ಟ ಘಟನೆ ನಡೆದಿದೆ. ಮಗುವಿನ ತಲೆಯ ಮೇಲೆ ತೆಂಗಿನಕಾಯಿ ಬೀಳುತ್ತಿದ್ದಂತೆ ಮಗುವನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮಗು ಮೃತಪಟ್ಟಿದೆ.

ಘಟನೆ ನಡೆದಿದ್ದು ಹೇಗೆ? ತಲೆಯ ಮೇಲೆ ತೆಂಗಿನಕಾಯಿ ಬಿದ್ದು ಮೃತಪಟ್ಟ ಹನ್ನೊಂದು ತಿಂಗಳಿನ ಮಗುವಿನ ಹೆಸರು ತನ್ವೀತ್ ವಾಲ್ಮೀಕಿ. ತನ್ವೀತ್ ಮಲ್ಲಿಕಾರ್ಜುನ ಮತ್ತು ಮಾಲಾ ದಂಪತಿಯ ಪುತ್ರ. ನಿನ್ನೆ ಬೆಳಗ್ಗೆ ಮನೆಯ ಮುಂದೆ ಮಗುವನ್ನು ಎತ್ತಿಕೊಂಡು ಮಗುವಿನ ತಾಯಿ ಊಟ ಮಾಡಿಸುತ್ತಿದ್ದಳು. ಈ ವೇಳೆ ಮನೆಯ ಮುಂದೆ ಇದ್ದ ತೆಂಗಿನಮರದಿಂದ ತೆಂಗಿನಕಾಯಿ ಮಗುವಿನ ತಲೆಯ ಮೇಲೆ ಬಿದ್ದು ಈ ದುರ್ಘಟನೆ ನಡೆದಿದೆ. ಮಗುವಿನ ತಲೆಯ ಮೇಲೆ ಭಾರವಾದ ತೆಂಗಿನಕಾಯಿ ಬಿದ್ದಿದೆ ಮಗು ಸಾವಿಗೆ ಕಾರಣವಾಗಿದೆ.

ಚಿಕಿತ್ಸೆ ಫಲಿಸದೆ ಮೃತಪಟ್ಟ ಮಗು ಮನೆಯ ಮುಂದಿನ ತೆಂಗಿನಮರದಿಂದ ಮಗುವಿನ ತಲೆಯ ಮೇಲೆ ತೆಂಗಿನಕಾಯಿ ಬಿದ್ದು ಮಗುವಿನ ತಲೆಗೆ ಗಂಭೀರವಾದ ಗಾಯವಾಗಿದೆ. ತಕ್ಷಣವೆ ಹನ್ನೊಂದು ತಿಂಗಳ ಮಗುವನ್ನು ಮಗುವಿನ ಮನೆಯವರು ದಾವಣಗೆರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಮಗುವಿನ ತಲೆಗೆ ಬಲವಾಗಿ ಏಟು ಬಿದ್ದಿದ್ದರಿಂದ ಮಗು ಚಿಕಿತ್ಸೆ ಫಲಿಸದೆ ಮೃತಪಟ್ಟಿದೆ. ಹನ್ನೊಂದು ತಿಂಗಳ ಮಗುವನ್ನು ಕಳೆದುಕೊಂಡ ಮಗುವಿನ ತಂದೆ, ತಾಯಿ ಹಾಗೂ ಕುಟುಂಬ ಸದಸ್ಯರಲ್ಲಿ ದುಃಖ‌ ಮಡುಗಟ್ಟಿತ್ತು. ಹಂಸಭಾವಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

ಇದನ್ನೂ ಓದಿ:

ಫ್ಲೋರಿಡಾದಲ್ಲಿ ಕಟ್ಟಡ ಕುಸಿತ; ಭಾರತೀಯ ಮೂಲದ ದಂಪತಿ, 1 ವರ್ಷದ ಮಗು ಸಹಿತ 150 ಜನ ಕಣ್ಮರೆ

ಗಾಳಿಗೆ ಮನೆ ಚಾವಣಿ ಹಾರಿ ಜೋಳಿಗೆಯಲ್ಲಿದ್ದ 3 ತಿಂಗಳ ಮಗು ಸಾವು

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್