Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಜೆ ನಗದು ಸೌಲಭ್ಯ ಉದ್ಯೋಗಿಯ ಸಾಂವಿಧಾನಿಕ ಹಕ್ಕು: ಹೈಕೋರ್ಟ್ ಮಹತ್ವದ ತೀರ್ಪು

ಕಾನೂನು ಪ್ರಕಾರ ಹೆರಿಗೆ ರಜೆ, ಮಾತೃತ್ವದ ರಜೆಯ ಹಕ್ಕಿಗೆ ಹೊರಗುತ್ತಿಗೆ ನೌಕರರೂ ಅರ್ಹರಾಗಿದ್ದಾರೆ. ಹೀಗಾಗಿ ಅರ್ಜಿದಾರರು ಹೆರಿಗೆ ರಜೆಗೆ ತೆರಳುವ ಮುನ್ನ ಕಾರ್ಯನಿರ್ವಹಿಸುತ್ತಿದ್ದ ಹುದ್ದೆಗೆ ಕಾನೂನು ಬದ್ಧ ನೇಮಕಾತಿ ಆಗುವವರೆಗೂ ಅರ್ಜಿದಾರರಿಗೆ ಕೆಲಸಕ್ಕೆ ಅನುಮತಿ ನೀಡಬೇಕು ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪುವೊಂದನ್ನು ನೀಡಿತ್ತು. ಇದೀಗ ರಜೆ ನಗದು ಸೌಲಭ್ಯ ಉದ್ಯೋಗಿಯ ಸಾಂವಿಧಾನಿಕ ಹಕ್ಕು ಎಂದಿದೆ.

ರಜೆ ನಗದು ಸೌಲಭ್ಯ ಉದ್ಯೋಗಿಯ ಸಾಂವಿಧಾನಿಕ ಹಕ್ಕು: ಹೈಕೋರ್ಟ್ ಮಹತ್ವದ ತೀರ್ಪು
ಹೈಕೋರ್ಟ್
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Mar 19, 2025 | 10:12 PM

ಬೆಂಗಳೂರು, (ಮಾರ್ಚ್​ 19): ರಜೆ ನಗದು ಸೌಲಭ್ಯ (leave encashment) ಉದ್ಯೋಗಿಯ ಸಾಂವಿಧಾನಿಕ ಹಕ್ಕು. ರಜೆ ನಗದು  ಸೌಲಭ್ಯವನ್ನು ನಿರಾಕರಿಸುವಂತಿಲ್ಲವೆಂದು ಕರ್ನಾಟಕ ಹೈಕೋರ್ಟ್ (Karnataka high Court)  ಮಹತ್ವದ ತೀರ್ಪುವೊಂದನ್ನು ನೀಡಿದೆ. ಗ್ರಾಮೀಣ ಬ್ಯಾಂಕ್​ವೊಂಡು ತನ್ನ ಉದ್ಯೋಗಿಯನ್ನು ವಜಾಗೊಳಿಸಿತ್ತು. ಹೀಗಾಗಿ ರಜೆ ನಗದು ಸೌಲಭ್ಯ ನಿರಾಕರಿಸಿತ್ತು. ಇದನ್ನು ಪ್ರಶ್ನಿಸಿ ಸಂತ್ರಸ್ತ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ,  ಉದ್ಯೋಗಿಗೆ ಆತ ಗಳಿಸಿದ ರಜೆ ನಗದು ಸೌಲಭ್ಯ ನೀಡುವಂತೆ ಮಹತ್ವದ ಆದೇಶ ಹೊರಡಿಸಿದೆ.

ನಿವೃತ್ತಿ ವೇತನ, ರಜೆ‌ ನಗದು ಉದ್ಯೋಗಿ ಗಳಿಸಿದ ಆಸ್ತಿಯಾಗಿವೆ. ಹೀಗಾಗಿ ಸಂವಿಧಾನದ ಆರ್ಟಿಕಲ್ 300A ಅಡಿ ಇದು ಉದ್ಯೋಗಿಯ ಹಕ್ಕು. ಕಾನೂನಿನ ಬೆಂಬಲವಿಲ್ಲದೇ ಇಂತಹ ಲೀವ್ ಎನ್‌ಕ್ಯಾಶ್‌ಮೆಂಟ್ ಸೌಲಭ್ಯ ನಿರಾಕರಿಸಬಾರದು ಎಂದು ಕೋರ್ಟ್​ ಅಭಿಪ್ರಾಯಪಟ್ಟಿದೆ.

ಲಿಂಗನಗೌಡ ಎಂಬ ಉದ್ಯೋಗಿಯನ್ನು ಗ್ರಾಮೀಣ ಬ್ಯಾಂಕ್ ವಜಾಗೊಳಿಸಿತ್ತು. ಈ ಕಾರಣದಿಂದ ಲಿಂಗನಗೌಡ ಅವರ ರಜೆ ನಗದು ಸೌಲಭ್ಯ ನೀಡಲು ಗ್ರಾಮೀಣ ಬ್ಯಾಂಕ್​ ನಿರಾಕರಿಸಿತ್ತು. ಹೀಗಾಗಿ ಲಿಂಗನಗೌಡ ಅವರು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದು, ರಜೆ ನಗದು ಕೊಡಿಸುವಂತೆ ಮನವಿ ಮಾಡಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್​, ಸಂವಿಧಾನದ ಆರ್ಟಿಕಲ್ 300 A ಅಡಿ ಇದು ಉದ್ಯೋಗಿಯ ಹಕ್ಕು. ಕಾನೂನಿನ ಬೆಂಬಲವಿಲ್ಲದೇ ಇಂತಹ ಸೌಲಭ್ಯ ನಿರಾಕರಿಸಬಾರದು ಎಂದು ಹೇಳಿ ಅರ್ಜಿದಾರರಿಗೆ ರಜೆ ನಗದು ಸೌಲಭ್ಯವನ್ನು ನೀಡುವಂತೆ ಆದೇಶಿಸಿದೆ.

ಪ್ರಕರಣದ ಹಿನ್ನೆಲೆ

ದುರ್ನಡತೆ ಆರೋಪದ ಮೇಲೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲ್ಲೂಕು ಕಂಪ್ಲಿಯ ಪ್ರಗತಿ ಕೃಷ್ಣ ಗ್ರಾಮೀಣ ಬ್ಯಾಂಕ್, ಉದ್ಯೋಗಿ ಲಿಂಗನಗೌಡ ಅವರನ್ನು ಕೆಲಸದಿಂದ ವಜಾ ಮಾಡಿತ್ತು. ವಿಚಾರಣೆಯ ನಂತರ 2014ರ ಡಿಸೆಂಬರ್​ 19ರಿಂದ ಜಾರಿಗೆ ಬರುವಂತೆ ಅವರನ್ನು ಸೇವೆಯಿಂದ ವಜಾಗೊಳಿಸಲಾಗಿತ್ತು. ಬಳಿಕ ಲೀಮಗನಗೌಡ ಅವರು ರಜೆ ನಗದು ನೀಡುವಂತೆ ಕೋರಿ ಬ್ಯಾಂಕ್​​ಗೆ ಮನವಿ ಸಲ್ಲಿಸಿದ್ದರು. ಆದ್ರೆ, ಬ್ಯಾಂಕ್​​ ನೀಡಲು ನಿರಾಕರಿಸಿತ್ತು. ಇದರಿಂದ ಲಿಂಗನಗೌಡ ಅವರು ಹೈಕೋರ್ಟ್​ ಮೊರೆ ಹೋಗಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:04 pm, Wed, 19 March 25

ಮಾ 22ರಂದು ಶಾಲಾ-ಕಾಲೇಜು​ ರಜೆ ಬಗ್ಗೆ ಸ್ಪಷ್ಟನೆ ಕೊಟ್ಟ ಶಿಕ್ಷಣ ಸಚಿವ
ಮಾ 22ರಂದು ಶಾಲಾ-ಕಾಲೇಜು​ ರಜೆ ಬಗ್ಗೆ ಸ್ಪಷ್ಟನೆ ಕೊಟ್ಟ ಶಿಕ್ಷಣ ಸಚಿವ
ಲಕ್ನೋ ರಸ್ತೆ ಮಧ್ಯೆ ಕುಳಿತು 20 ನಿಮಿಷ ತಲೆ ಅಲ್ಲಾಡಿಸಿದ ಮಹಿಳೆ!
ಲಕ್ನೋ ರಸ್ತೆ ಮಧ್ಯೆ ಕುಳಿತು 20 ನಿಮಿಷ ತಲೆ ಅಲ್ಲಾಡಿಸಿದ ಮಹಿಳೆ!
ಪತಿಯೊಂದಿಗೆ ಜಗಳವಾಡಿ ಬೆಂಕಿ ಹಚ್ಚಿಕೊಂಡು ಹೆಂಡತಿ ಆತ್ಮಹತ್ಯೆ
ಪತಿಯೊಂದಿಗೆ ಜಗಳವಾಡಿ ಬೆಂಕಿ ಹಚ್ಚಿಕೊಂಡು ಹೆಂಡತಿ ಆತ್ಮಹತ್ಯೆ
ಕರ್ನಾಟಕ ಬಂದ್​: ಫಿಲಂ ಚೇಂಬರ್ ತೆಗೆದುಕೊಂಡ ನಿರ್ಣಯಗಳು ಹೀಗಿವೆ
ಕರ್ನಾಟಕ ಬಂದ್​: ಫಿಲಂ ಚೇಂಬರ್ ತೆಗೆದುಕೊಂಡ ನಿರ್ಣಯಗಳು ಹೀಗಿವೆ
ವಿಧಾನಸಭೆಯಲ್ಲಿ ಮೊಬೈಲ್ ಬಳಸಿದ್ದಕ್ಕೆ ಕೋಪಗೊಂಡ ಬಿಹಾರ ಸಿಎಂ ನಿತೀಶ್ ಕುಮಾರ್
ವಿಧಾನಸಭೆಯಲ್ಲಿ ಮೊಬೈಲ್ ಬಳಸಿದ್ದಕ್ಕೆ ಕೋಪಗೊಂಡ ಬಿಹಾರ ಸಿಎಂ ನಿತೀಶ್ ಕುಮಾರ್
ಗೊತ್ತಿರದ ವಿಷಯದ ಬಗ್ಗೆ ಮಾತಾಡುವ ಜಾಯಮಾನ ನನ್ನದಲ್ಲ: ಪಾಟೀಲ್
ಗೊತ್ತಿರದ ವಿಷಯದ ಬಗ್ಗೆ ಮಾತಾಡುವ ಜಾಯಮಾನ ನನ್ನದಲ್ಲ: ಪಾಟೀಲ್
ಹರಪನಹಳ್ಳಿಯಲ್ಲಿ ಆಲಿಕಲ್ಲು ಸಹಿತ ಮಳೆ: ವರ್ಷದ ಮೊದಲ ಮಳೆಗೆ ಜನರು ಖುಷ್
ಹರಪನಹಳ್ಳಿಯಲ್ಲಿ ಆಲಿಕಲ್ಲು ಸಹಿತ ಮಳೆ: ವರ್ಷದ ಮೊದಲ ಮಳೆಗೆ ಜನರು ಖುಷ್
ಯತ್ನಾಳ್​ರನ್ನು ದೇಶದ್ರೋಹಿ ಎಂದು ಜರಿದ ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್
ಯತ್ನಾಳ್​ರನ್ನು ದೇಶದ್ರೋಹಿ ಎಂದು ಜರಿದ ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್
ಹನಿಟ್ರ್ಯಾಪ್​ ಕೇಸ್: ಡಿಕೆಶಿ ವಿರುದ್ಧ ಹೊಸ ಬಾಂಬ್ ಸಿಡಿಸಿದ ಬಿಜೆಪಿ ಶಾಸಕ
ಹನಿಟ್ರ್ಯಾಪ್​ ಕೇಸ್: ಡಿಕೆಶಿ ವಿರುದ್ಧ ಹೊಸ ಬಾಂಬ್ ಸಿಡಿಸಿದ ಬಿಜೆಪಿ ಶಾಸಕ
ಸದನದಲ್ಲಿ ರೋಷಾವೇಶದಿಂದ ಕೂಗಾಡಿದ ಶಾಸಕ ಮುನಿರತ್ನ ನಾಯ್ಡು
ಸದನದಲ್ಲಿ ರೋಷಾವೇಶದಿಂದ ಕೂಗಾಡಿದ ಶಾಸಕ ಮುನಿರತ್ನ ನಾಯ್ಡು