AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ಭೂಮಿ ಬಗ್ಗೆ ಮಾಹಿತಿ ಪಡೆದು ಒತ್ತುವರಿ ತೆರವಿಗೆ ಕ್ರಮ: ಕೃಷ್ಣ ಬೈರೇಗೌಡ

ಒತ್ತುವರಿ ತೆರವುಗೊಳಿಸಿ ಸರ್ಕಾರಿ ಭೂಮಿ ವಶಕ್ಕೆ ಪಡೆಯುವ ವಿಚಾರವಾಗಿ ಮಾತನಾಡಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ, ಎಲ್ಲಿ, ಎಷ್ಟು ಜಮೀನಿದೆ ಎಂಬ ಮಾಹಿತಿಯಿಲ್ಲ. ಆ್ಯಪ್ ಅಭಿವೃದ್ಧಿ ಮಾಡಿ ಮಾಹಿತಿ ಕಲೆಹಾಕಿದ ನಂತರ ಕ್ರಮ ಕೈಗೊಳ್ಳಬಹುದು ಎಂದು ತಿಳಿಸಿದ್ದಾರೆ. ಅಲ್ಲದೆ, ಬೆಂಗಳೂರು ಸುತ್ತಮುತ್ತ 33 ಸಾವಿರ ಎಕರೆ ಸರ್ಕಾರಿ ಭೂಮಿ ಇದ್ದು, 18 ಸಾವಿರ ಎಕರೆ ಭೂಮಿ ಒತ್ತುವರಿ ತೆರವು ಮಾಡಿದ್ದಾಗಿ ತಿಳಿಸಿದರು.

ಸರ್ಕಾರಿ ಭೂಮಿ ಬಗ್ಗೆ ಮಾಹಿತಿ ಪಡೆದು ಒತ್ತುವರಿ ತೆರವಿಗೆ ಕ್ರಮ: ಕೃಷ್ಣ ಬೈರೇಗೌಡ
ಕಂದಾಯ ಸಚಿವ ಕೃಷ್ಣ ಬೈರೇಗೌಡImage Credit source: EPS
Anil Kalkere
| Edited By: Rakesh Nayak Manchi|

Updated on: Sep 19, 2023 | 4:49 PM

Share

ಬೆಂಗಳೂರು, ಸೆ.19: ಎಲ್ಲೆಲ್ಲಿ ಎಷ್ಟೆಷ್ಟು ಸರ್ಕಾರಿ ಭೂಮಿ ಒತ್ತುವರಿಯಾಗಿದೆ ಎಂಬುದನ್ನು ತಿಳಿದ ನಂತರ ಒತ್ತವರಿ ತೆರವುಗೊಳಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ (Krishna Byre Gowda) ಹೇಳಿದರು. ಒತ್ತುವರಿ ತೆರವುಗೊಳಿಸಿ ಸರ್ಕಾರಿ ಭೂಮಿ ವಶಕ್ಕೆ ಪಡೆಯುವ ವಿಚಾರವಾಗಿ ನಗರದಲ್ಲಿ ಅವರು ಮಾತನಾಡಿರು.

ಸರ್ಕಾರಿ ಆಸ್ತಿಗಳ ಸಮಗ್ರ ಮಾಹಿತಿ ನಮ್ಮ ಬಳಿ ಇರಬೇಕು. ಅದಕ್ಕೆ ಒಂದು ಆ್ಯಪ್ ಅಭಿವೃದ್ಧಿಪಡಿಸಿದ್ದೇವೆ. ಗ್ರಾಮ ಮಟ್ಟದಲ್ಲಿ ಸರ್ಕಾರಿ ಭೂಮಿ ಅಪ್​ಲೋಡ್ ಆಗಲಿದೆ. ಯಾವ ಊರು, ತಾಲೂಕಿನಲ್ಲಿ ಇದೆ ಎಂಬ ಮಾಹಿತಿ ಸಿಗಲಿದೆ. ಅದರ ಮೇಲೆ ನಾವು ಕ್ರಮ ಕೈಗೊಳ್ಳಬಹುದು. ಮೂರು ತಿಂಗಳಿಗೊಮ್ಮೆ ಸರ್ಕಾರಿ ಭೂಮಿ ಪರಿಶೀಲನೆಯಾಗಲಿದೆ. ಭೂಮಿ ಒತ್ತುವರಿಯಾದರೆ ಗೊತ್ತಾಗಲಿದೆ, ಆಗ ತೆರವು ಮಾಡಬಹುದು ಎಂದರು.

18 ಸಾವಿರ ಎಕರೆ ಭೂಮಿ ಒತ್ತುವರಿ ತೆರವು

ಬೆಂಗಳೂರು ಸುತ್ತಮುತ್ತ 33 ಸಾವಿರ ಎಕರೆ ಸರ್ಕಾರಿ ಭೂಮಿ ಇದೆ. 18 ಸಾವಿರ ಎಕರೆ ಭೂಮಿ ಒತ್ತುವರಿ ತೆರವು ಮಾಡಿದ್ದಾಗಿ ಅಧಿಕಾರಿಗಳು ಹೇಳಿದ್ದಾಗಿ ಕೃಷ್ಣ ಬೈರೇಗೌಡ ತಿಳಿಸಿದರು. ನಾವು ಕಾನೂನು ಪ್ರಕ್ರಿಯೆ ಶುರು ಮಾಡಿದ್ದೇವೆ. ಸರ್ಕಾರಿ ಭೂಮಿ ಒತ್ತುವರಿಯಲ್ಲಿ ಕೆಲವೆಡೆ ಎಸಿಗಳು ಶಾಮೀಲಾಗಿದ್ದಾರೆ. ಇಬ್ಬರು ಎಸಿಗಳ ಮೇಲೆ ಕೇಸ್ ದಾಖಲಿಸಿದ್ದೇವೆ ಎಂದರು.

ಇದನ್ನೂ ಓದಿ: ಧಾರವಾಡ: ಒಳ್ಳೆ ಕೆಲಸಕ್ಕೆ ಪ್ರಶಸ್ತಿ, ತಪ್ಪು ಮಾಡಿದ್ರೆ ಅಮಾನತು; ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ಕೊಟ್ಟ ಕಂದಾಯ ಸಚಿವ ಕೃಷ್ಣಬೈರೆಗೌಡ

ಬಾಗಲೂರು ಬಳಿ 6 ಎಕರೆ 7 ಗುಂಟೆ ಭೂಮಿ ಒತ್ತುವರಿ ಮಾಡಿದ್ದರು. 1 ಎಕರೆ ಭೂಮಿಯ ಬೆಲೆ 5 ಕೋಟಿ ರೂ.ಗೆ ಮಾರಾಟ ಆಗಲಿದೆ. ಹೀಗಾಗಿ ಪ್ರಕರಣ ದಾಖಲಿಸಿ ಸರ್ಕಾರಿ ಭೂಮಿ ಒತ್ತುವರಿ ವಾಪಸ್ ಪಡೆದಿದ್ದೇವೆ ಎಂದು ಕೃಷ್ಣ ಬೈರೇಗೌಡ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ