AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ಭೂಮಿ ಬಗ್ಗೆ ಮಾಹಿತಿ ಪಡೆದು ಒತ್ತುವರಿ ತೆರವಿಗೆ ಕ್ರಮ: ಕೃಷ್ಣ ಬೈರೇಗೌಡ

ಒತ್ತುವರಿ ತೆರವುಗೊಳಿಸಿ ಸರ್ಕಾರಿ ಭೂಮಿ ವಶಕ್ಕೆ ಪಡೆಯುವ ವಿಚಾರವಾಗಿ ಮಾತನಾಡಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ, ಎಲ್ಲಿ, ಎಷ್ಟು ಜಮೀನಿದೆ ಎಂಬ ಮಾಹಿತಿಯಿಲ್ಲ. ಆ್ಯಪ್ ಅಭಿವೃದ್ಧಿ ಮಾಡಿ ಮಾಹಿತಿ ಕಲೆಹಾಕಿದ ನಂತರ ಕ್ರಮ ಕೈಗೊಳ್ಳಬಹುದು ಎಂದು ತಿಳಿಸಿದ್ದಾರೆ. ಅಲ್ಲದೆ, ಬೆಂಗಳೂರು ಸುತ್ತಮುತ್ತ 33 ಸಾವಿರ ಎಕರೆ ಸರ್ಕಾರಿ ಭೂಮಿ ಇದ್ದು, 18 ಸಾವಿರ ಎಕರೆ ಭೂಮಿ ಒತ್ತುವರಿ ತೆರವು ಮಾಡಿದ್ದಾಗಿ ತಿಳಿಸಿದರು.

ಸರ್ಕಾರಿ ಭೂಮಿ ಬಗ್ಗೆ ಮಾಹಿತಿ ಪಡೆದು ಒತ್ತುವರಿ ತೆರವಿಗೆ ಕ್ರಮ: ಕೃಷ್ಣ ಬೈರೇಗೌಡ
ಕಂದಾಯ ಸಚಿವ ಕೃಷ್ಣ ಬೈರೇಗೌಡImage Credit source: EPS
Anil Kalkere
| Edited By: Rakesh Nayak Manchi|

Updated on: Sep 19, 2023 | 4:49 PM

Share

ಬೆಂಗಳೂರು, ಸೆ.19: ಎಲ್ಲೆಲ್ಲಿ ಎಷ್ಟೆಷ್ಟು ಸರ್ಕಾರಿ ಭೂಮಿ ಒತ್ತುವರಿಯಾಗಿದೆ ಎಂಬುದನ್ನು ತಿಳಿದ ನಂತರ ಒತ್ತವರಿ ತೆರವುಗೊಳಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ (Krishna Byre Gowda) ಹೇಳಿದರು. ಒತ್ತುವರಿ ತೆರವುಗೊಳಿಸಿ ಸರ್ಕಾರಿ ಭೂಮಿ ವಶಕ್ಕೆ ಪಡೆಯುವ ವಿಚಾರವಾಗಿ ನಗರದಲ್ಲಿ ಅವರು ಮಾತನಾಡಿರು.

ಸರ್ಕಾರಿ ಆಸ್ತಿಗಳ ಸಮಗ್ರ ಮಾಹಿತಿ ನಮ್ಮ ಬಳಿ ಇರಬೇಕು. ಅದಕ್ಕೆ ಒಂದು ಆ್ಯಪ್ ಅಭಿವೃದ್ಧಿಪಡಿಸಿದ್ದೇವೆ. ಗ್ರಾಮ ಮಟ್ಟದಲ್ಲಿ ಸರ್ಕಾರಿ ಭೂಮಿ ಅಪ್​ಲೋಡ್ ಆಗಲಿದೆ. ಯಾವ ಊರು, ತಾಲೂಕಿನಲ್ಲಿ ಇದೆ ಎಂಬ ಮಾಹಿತಿ ಸಿಗಲಿದೆ. ಅದರ ಮೇಲೆ ನಾವು ಕ್ರಮ ಕೈಗೊಳ್ಳಬಹುದು. ಮೂರು ತಿಂಗಳಿಗೊಮ್ಮೆ ಸರ್ಕಾರಿ ಭೂಮಿ ಪರಿಶೀಲನೆಯಾಗಲಿದೆ. ಭೂಮಿ ಒತ್ತುವರಿಯಾದರೆ ಗೊತ್ತಾಗಲಿದೆ, ಆಗ ತೆರವು ಮಾಡಬಹುದು ಎಂದರು.

18 ಸಾವಿರ ಎಕರೆ ಭೂಮಿ ಒತ್ತುವರಿ ತೆರವು

ಬೆಂಗಳೂರು ಸುತ್ತಮುತ್ತ 33 ಸಾವಿರ ಎಕರೆ ಸರ್ಕಾರಿ ಭೂಮಿ ಇದೆ. 18 ಸಾವಿರ ಎಕರೆ ಭೂಮಿ ಒತ್ತುವರಿ ತೆರವು ಮಾಡಿದ್ದಾಗಿ ಅಧಿಕಾರಿಗಳು ಹೇಳಿದ್ದಾಗಿ ಕೃಷ್ಣ ಬೈರೇಗೌಡ ತಿಳಿಸಿದರು. ನಾವು ಕಾನೂನು ಪ್ರಕ್ರಿಯೆ ಶುರು ಮಾಡಿದ್ದೇವೆ. ಸರ್ಕಾರಿ ಭೂಮಿ ಒತ್ತುವರಿಯಲ್ಲಿ ಕೆಲವೆಡೆ ಎಸಿಗಳು ಶಾಮೀಲಾಗಿದ್ದಾರೆ. ಇಬ್ಬರು ಎಸಿಗಳ ಮೇಲೆ ಕೇಸ್ ದಾಖಲಿಸಿದ್ದೇವೆ ಎಂದರು.

ಇದನ್ನೂ ಓದಿ: ಧಾರವಾಡ: ಒಳ್ಳೆ ಕೆಲಸಕ್ಕೆ ಪ್ರಶಸ್ತಿ, ತಪ್ಪು ಮಾಡಿದ್ರೆ ಅಮಾನತು; ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ಕೊಟ್ಟ ಕಂದಾಯ ಸಚಿವ ಕೃಷ್ಣಬೈರೆಗೌಡ

ಬಾಗಲೂರು ಬಳಿ 6 ಎಕರೆ 7 ಗುಂಟೆ ಭೂಮಿ ಒತ್ತುವರಿ ಮಾಡಿದ್ದರು. 1 ಎಕರೆ ಭೂಮಿಯ ಬೆಲೆ 5 ಕೋಟಿ ರೂ.ಗೆ ಮಾರಾಟ ಆಗಲಿದೆ. ಹೀಗಾಗಿ ಪ್ರಕರಣ ದಾಖಲಿಸಿ ಸರ್ಕಾರಿ ಭೂಮಿ ಒತ್ತುವರಿ ವಾಪಸ್ ಪಡೆದಿದ್ದೇವೆ ಎಂದು ಕೃಷ್ಣ ಬೈರೇಗೌಡ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Anil Kalkere
Anil Kalkere
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ