AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ಭೂಮಿ ಬಗ್ಗೆ ಮಾಹಿತಿ ಪಡೆದು ಒತ್ತುವರಿ ತೆರವಿಗೆ ಕ್ರಮ: ಕೃಷ್ಣ ಬೈರೇಗೌಡ

ಒತ್ತುವರಿ ತೆರವುಗೊಳಿಸಿ ಸರ್ಕಾರಿ ಭೂಮಿ ವಶಕ್ಕೆ ಪಡೆಯುವ ವಿಚಾರವಾಗಿ ಮಾತನಾಡಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ, ಎಲ್ಲಿ, ಎಷ್ಟು ಜಮೀನಿದೆ ಎಂಬ ಮಾಹಿತಿಯಿಲ್ಲ. ಆ್ಯಪ್ ಅಭಿವೃದ್ಧಿ ಮಾಡಿ ಮಾಹಿತಿ ಕಲೆಹಾಕಿದ ನಂತರ ಕ್ರಮ ಕೈಗೊಳ್ಳಬಹುದು ಎಂದು ತಿಳಿಸಿದ್ದಾರೆ. ಅಲ್ಲದೆ, ಬೆಂಗಳೂರು ಸುತ್ತಮುತ್ತ 33 ಸಾವಿರ ಎಕರೆ ಸರ್ಕಾರಿ ಭೂಮಿ ಇದ್ದು, 18 ಸಾವಿರ ಎಕರೆ ಭೂಮಿ ಒತ್ತುವರಿ ತೆರವು ಮಾಡಿದ್ದಾಗಿ ತಿಳಿಸಿದರು.

ಸರ್ಕಾರಿ ಭೂಮಿ ಬಗ್ಗೆ ಮಾಹಿತಿ ಪಡೆದು ಒತ್ತುವರಿ ತೆರವಿಗೆ ಕ್ರಮ: ಕೃಷ್ಣ ಬೈರೇಗೌಡ
ಕಂದಾಯ ಸಚಿವ ಕೃಷ್ಣ ಬೈರೇಗೌಡImage Credit source: EPS
Anil Kalkere
| Edited By: |

Updated on: Sep 19, 2023 | 4:49 PM

Share

ಬೆಂಗಳೂರು, ಸೆ.19: ಎಲ್ಲೆಲ್ಲಿ ಎಷ್ಟೆಷ್ಟು ಸರ್ಕಾರಿ ಭೂಮಿ ಒತ್ತುವರಿಯಾಗಿದೆ ಎಂಬುದನ್ನು ತಿಳಿದ ನಂತರ ಒತ್ತವರಿ ತೆರವುಗೊಳಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ (Krishna Byre Gowda) ಹೇಳಿದರು. ಒತ್ತುವರಿ ತೆರವುಗೊಳಿಸಿ ಸರ್ಕಾರಿ ಭೂಮಿ ವಶಕ್ಕೆ ಪಡೆಯುವ ವಿಚಾರವಾಗಿ ನಗರದಲ್ಲಿ ಅವರು ಮಾತನಾಡಿರು.

ಸರ್ಕಾರಿ ಆಸ್ತಿಗಳ ಸಮಗ್ರ ಮಾಹಿತಿ ನಮ್ಮ ಬಳಿ ಇರಬೇಕು. ಅದಕ್ಕೆ ಒಂದು ಆ್ಯಪ್ ಅಭಿವೃದ್ಧಿಪಡಿಸಿದ್ದೇವೆ. ಗ್ರಾಮ ಮಟ್ಟದಲ್ಲಿ ಸರ್ಕಾರಿ ಭೂಮಿ ಅಪ್​ಲೋಡ್ ಆಗಲಿದೆ. ಯಾವ ಊರು, ತಾಲೂಕಿನಲ್ಲಿ ಇದೆ ಎಂಬ ಮಾಹಿತಿ ಸಿಗಲಿದೆ. ಅದರ ಮೇಲೆ ನಾವು ಕ್ರಮ ಕೈಗೊಳ್ಳಬಹುದು. ಮೂರು ತಿಂಗಳಿಗೊಮ್ಮೆ ಸರ್ಕಾರಿ ಭೂಮಿ ಪರಿಶೀಲನೆಯಾಗಲಿದೆ. ಭೂಮಿ ಒತ್ತುವರಿಯಾದರೆ ಗೊತ್ತಾಗಲಿದೆ, ಆಗ ತೆರವು ಮಾಡಬಹುದು ಎಂದರು.

18 ಸಾವಿರ ಎಕರೆ ಭೂಮಿ ಒತ್ತುವರಿ ತೆರವು

ಬೆಂಗಳೂರು ಸುತ್ತಮುತ್ತ 33 ಸಾವಿರ ಎಕರೆ ಸರ್ಕಾರಿ ಭೂಮಿ ಇದೆ. 18 ಸಾವಿರ ಎಕರೆ ಭೂಮಿ ಒತ್ತುವರಿ ತೆರವು ಮಾಡಿದ್ದಾಗಿ ಅಧಿಕಾರಿಗಳು ಹೇಳಿದ್ದಾಗಿ ಕೃಷ್ಣ ಬೈರೇಗೌಡ ತಿಳಿಸಿದರು. ನಾವು ಕಾನೂನು ಪ್ರಕ್ರಿಯೆ ಶುರು ಮಾಡಿದ್ದೇವೆ. ಸರ್ಕಾರಿ ಭೂಮಿ ಒತ್ತುವರಿಯಲ್ಲಿ ಕೆಲವೆಡೆ ಎಸಿಗಳು ಶಾಮೀಲಾಗಿದ್ದಾರೆ. ಇಬ್ಬರು ಎಸಿಗಳ ಮೇಲೆ ಕೇಸ್ ದಾಖಲಿಸಿದ್ದೇವೆ ಎಂದರು.

ಇದನ್ನೂ ಓದಿ: ಧಾರವಾಡ: ಒಳ್ಳೆ ಕೆಲಸಕ್ಕೆ ಪ್ರಶಸ್ತಿ, ತಪ್ಪು ಮಾಡಿದ್ರೆ ಅಮಾನತು; ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ಕೊಟ್ಟ ಕಂದಾಯ ಸಚಿವ ಕೃಷ್ಣಬೈರೆಗೌಡ

ಬಾಗಲೂರು ಬಳಿ 6 ಎಕರೆ 7 ಗುಂಟೆ ಭೂಮಿ ಒತ್ತುವರಿ ಮಾಡಿದ್ದರು. 1 ಎಕರೆ ಭೂಮಿಯ ಬೆಲೆ 5 ಕೋಟಿ ರೂ.ಗೆ ಮಾರಾಟ ಆಗಲಿದೆ. ಹೀಗಾಗಿ ಪ್ರಕರಣ ದಾಖಲಿಸಿ ಸರ್ಕಾರಿ ಭೂಮಿ ಒತ್ತುವರಿ ವಾಪಸ್ ಪಡೆದಿದ್ದೇವೆ ಎಂದು ಕೃಷ್ಣ ಬೈರೇಗೌಡ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​