AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೀಸಲಾತಿ ಸಾಧ್ಯತೆ ಪರಿಶೀಲನೆಗೆ ಉನ್ನತ ಸಮಿತಿ ರಚನೆ: ಕರ್ನಾಟಕ ಸಚಿವ ಸಂಪುಟ ಸಭೆ ನಿರ್ಧಾರ

ಮೀಸಲಾತಿ ಬಗ್ಗೆ ಉನ್ನತ ಸಮಿತಿ ರಚಿಸಲು ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ. ಕೇಂದ್ರ ಸರ್ಕಾರದ ಒಬಿಸಿ ಪಟ್ಟಿಗೆ ವೀರಶೈವ, ಒಕ್ಕಲಿಗೆ ಸೇರಿದಂತೆ ಇತರೆ ಸಮುದಾಯದ ಕೆಲ ಪಂಗಡಗಳನ್ನ ಸೇರಿಸಲಾಗಿದೆ. ಎಸ್‌ಟಿಗೆ ಸೇರಿಸಲು ಕುರುಬ ಸಮುದಾಯ ಒತ್ತಾಯಿಸುತ್ತಿದೆ.

ಮೀಸಲಾತಿ ಸಾಧ್ಯತೆ ಪರಿಶೀಲನೆಗೆ ಉನ್ನತ ಸಮಿತಿ ರಚನೆ: ಕರ್ನಾಟಕ ಸಚಿವ ಸಂಪುಟ ಸಭೆ ನಿರ್ಧಾರ
ಬಸವರಾಜ ಬೊಮ್ಮಾಯಿ (ಸಂಗ್ರಹ ಚಿತ್ರ)
shruti hegde
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Mar 03, 2021 | 4:27 PM

Share

ಬೆಂಗಳೂರು: ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಬಜೆಟ್ ಸಿದ್ಧತಾ ರಾಜ್ಯ ಸಚಿವ ಸಂಪುಟ ಸಭೆ ಮುಕ್ತಾಯಗೊಂಡಿದ್ದು, ಸಭೆ ಬಳಿಕ ಗೃಹ ಸಚಿವ ಬಸವರಾಜ ಬೊಮ್ಮಾಯಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಮೀಸಲಾತಿಯ ಸಾಧ್ಯತೆಗಳನ್ನು ಪರಿಶೀಲಿಸಲು ಉನ್ನತ ಸಮಿತಿ ರಚಿಸಲು ನಿರ್ಧರಿಸಲಾಗಿದೆ. ಕೇಂದ್ರ ಸರ್ಕಾರದ ಒಬಿಸಿ ಲಿಸ್ಟ್​ಗೆ ವೀರಶೈವ ಹಾಗೂ ಒಕ್ಕಲಿಗ ಸಮುದಾಯದ ಕೆಲ ಪಂಗಡಗಳನ್ನ ಸೇರಿಸಲಾಗಿದೆ. ಸುಪ್ರೀಂಕೋರ್ಟ್ ಶೇ 50ಕ್ಕಿಂತ ಹೆಚ್ಚು ಮೀಸಲಾತಿ ಇರಬಾರದು ಎಂದು ಹೇಳಿದೆ. ಇತರ ಕೆಲ ರಾಜ್ಯಗಳಲ್ಲಿ ಇದೇ ರೀತಿ ಬೇಡಿಕೆ ಬಂದಿದೆ ಎಂದು ಹೇಳಿದರು.

ಮೀಸಲಾತಿ ಬಗ್ಗೆ ಉನ್ನತ ಸಮಿತಿ ರಚಿಸಲು ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ. ಕೇಂದ್ರ ಸರ್ಕಾರದ ಒಬಿಸಿ ಪಟ್ಟಿಗೆ ವೀರಶೈವ, ಒಕ್ಕಲಿಗೆ ಸೇರಿದಂತೆ ಇತರೆ ಸಮುದಾಯದ ಕೆಲ ಪಂಗಡಗಳನ್ನ ಸೇರಿಸಲಾಗಿದೆ. ಎಸ್‌ಟಿಗೆ ಸೇರಿಸಲು ಕುರುಬ ಸಮುದಾಯ ಒತ್ತಾಯಿಸುತ್ತಿದೆ. ಶೇ 50ಕ್ಕಿಂತ ಹೆಚ್ಚು ಮೀಸಲಾತಿ ಇರಬಾರದೆಂದು ಸುಪ್ರೀಂಕೋರ್ಟ್‌ ಹೇಳಿದೆ. ಬೇರೆಬೇರೆ ರಾಜ್ಯಗಳಲ್ಲೂ ಇದೇ ರೀತಿ ಬೇಡಿಕೆ ಬಂದಿದೆ ಎಂದು ಹೇಳಿದರು.

ಮೀಸಲಾತಿ ಕುರಿತು ಸಮಗ್ರ ವರದಿ ನೀಡಲು ಉನ್ನತ ಸಮಿತಿ ರಚನೆಗೆ ತೀರ್ಮಾನ ಕೈಗೊಳ್ಳಲಾಗಿದೆ. ವರದಿ ನೀಡಲು ಉನ್ನತ ಸಮಿತಿಗೆ ಯಾವುದೇ ಗಡುವು ನೀಡಿಲ್ಲ. ಸಮಿತಿಗೆ ಸದಸ್ಯರ ನೇಮಕ ಜವಾಬ್ದಾರಿಯನ್ನು ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಅವರಿಗೆ ನೀಡಿದ್ದೇವೆ ಎಂದು ಸಂಪುಟ ಸಭೆ ಬಳಿಕ ಪ್ರತಿಕ್ರಿಯೆ ನೀಡಿದರು. ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಸಿಸಿಟಿವಿ ಕಡ್ಡಾಯ ಮಾಡಲು ₹ 18 ಕೋಟಿ ನೀಡಲು ಸಂಪುಟ ಸಭೆ ಒಪ್ಪಿಗೆ ನೀಡಿದೆ. ಈಗಾಗಲೇ 782 ಠಾಣೆಗಳಲ್ಲಿ ಸಿಸಿಟಿವಿ ಅಳವಡಿಸಲಾಗಿದೆ. ಉಳಿದ ಠಾಣೆಗಳಲ್ಲಿ ಸಿಸಿಟಿವಿ ಅಳವಡಿಸಬೇಕಿದೆ. ಇನ್ನು, ಸಂಪುಟ ಸಭೆಯಲ್ಲಿ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಬಗ್ಗೆ ಚರ್ಚೆಯಾಗಿಲ್ಲ ಎಂದರು.

ಕಲ್ಯಾಣ ಕರ್ನಾಟಕ ಭಾಗದಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಬೆಂಗಳೂರಿಗೆ ಬರುವ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ನಿರ್ಮಾಣದ ಕುರಿತು ಚರ್ಚಿಸಲಾಗಿದೆ. ಕರ್ನಾಟಕ ಸಿವಿಲ್ ಸರ್ವೀಸ್​ನಲ್ಲಿ ಕಾಂಪಿಟೇರ್ ಲಿಟ್ರಸಿ ಇತ್ತು. ಇದೀಗ ಎಲ್ಲರೂ ಕಾಂಪಿಟೇಟರ್ಸ್ ಆಗಿರೋ ಕಾರಣ ಈ ಯೋಜನೆ ಕೈ ಬಿಡಲಾಗಿದೆ. ಇನ್ನು, ಆಯುಷ್ ಕಾಲೇಜು ಉಪನ್ಯಾಸಕರಿಗೂ ಕೂಡ ಅಲೋಪತಿ ರೀತಿಯ ಸ್ಯಾಲರಿ ಸ್ಕೇಲ್ ಫಿಕ್ಸ್ ಮಾಡಲಾಗಿದೆ ಎಂದರು.

ಇದನ್ನೂ ಓದಿ: ಗಣಿಗಳಲ್ಲಿ 15 ದಿನಕ್ಕೊಮ್ಮೆ ಅಧಿಕಾರಿಗಳಿಂದ ಸ್ಫೋಟಕಗಳ ಪರಿಶೀಲನೆ: ಬಸವರಾಜ ಬೊಮ್ಮಾಯಿ

ಇದನ್ನೂ ಓದಿ: ಡಾ. ಬಸವರಾಜ ಗುರೂಜಿಯಿಂದ ರಮೇಶ್ ಜಾರಕಿಹೊಳಿ ಜಾತಕ ವಿಶ್ಲೇಷಣೆ: ಸದ್ಯಕ್ಕೆ ಸಂಕಷ್ಟ, ಏಪ್ರಿಲ್ ನಂತರ ಗುರು ಬಲ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ