AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರರಂಗದ ಬೇಡಿಕೆಗೆ ಸಿಎಂ ಸ್ಪಂದನೆ: ಕುಮಾರ ಬಂಗಾರಪ್ಪ

ಕೇಂದ್ರ ಸರ್ಕಾರವು ಭಾರತದ ಚಿತ್ರಮಂದಿರಗಳು ಸಂಪೂರ್ಣ ತೆರೆಯಲು ಅವಕಾಶ ನೀಡಿದೆ. ರಾಜ್ಯದಲ್ಲಿಯೂ ಚಿತ್ರಮಂದಿರಗಳ ಪ್ರವೇಶಕ್ಕೆ ನಿರ್ಬಂಧ ಬೇಡ ಎಂದು ಮುಖ್ಯಮಂತ್ರಿ ಬಳಿ ಮನವಿ ಮಾಡಿದ್ದೆ.

ಚಿತ್ರರಂಗದ ಬೇಡಿಕೆಗೆ ಸಿಎಂ ಸ್ಪಂದನೆ: ಕುಮಾರ ಬಂಗಾರಪ್ಪ
ಕುಮಾರ ಬಂಗಾರಪ್ಪ
Ghanashyam D M | ಡಿ.ಎಂ.ಘನಶ್ಯಾಮ
|

Updated on:Feb 03, 2021 | 5:37 PM

Share

ಬೆಂಗಳೂರು: ಚಿತ್ರಮಂದಿರಗಳನ್ನು ಹೌಸ್​ಫುಲ್ ಮಾಡಲು ಅವಕಾಶ ಬೇಕು ಎಂಬ ಚಿತ್ರರಂಗದ ಬೇಡಿಕೆ ಬಗ್ಗೆ ಮುಖ್ಯಮಂತ್ರಿ ಜೊತೆಗೆ ಮಾತನಾಡಿದ್ದೇನೆ. ಅವರು ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದಾರೆ ಎಂದು ಶಾಸಕ ಕುಮಾರ ಬಂಗಾರಪ್ಪ ಹೇಳಿದ್ದಾರೆ.

ಕೇಂದ್ರ ಸರ್ಕಾರವು ಭಾರತದ ಚಿತ್ರಮಂದಿರಗಳು ಸಂಪೂರ್ಣ ತೆರೆಯಲು ಅವಕಾಶ ನೀಡಿದೆ. ರಾಜ್ಯದಲ್ಲಿಯೂ ಚಿತ್ರಮಂದಿರಗಳ ಪ್ರವೇಶಕ್ಕೆ ನಿರ್ಬಂಧ ಬೇಡ ಎಂದು ಮುಖ್ಯಮಂತ್ರಿ ಬಳಿ ಮನವಿ ಮಾಡಿದ್ದೆ. ಈ ಬಗ್ಗೆ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಕುಮಾರ ಬಂಗಾರಪ್ಪ ತಿಳಿಸಿದರು.

ವಿಪತ್ತು ನಿರ್ವಹಣೆ ಕಾರಣದಿಂದ ಚಿತ್ರಮಂದಿರಗಳಿಗೆ ಪ್ರೇಕ್ಷಕರ ಪ್ರವೇಶಕ್ಕೆ ಮಿತಿ ಹೇರಲು ಆರೋಗ್ಯ ಸಚಿವರು ನಿರ್ಧರಿಸಿದ್ದಾರೆ. ಈ ಬಗ್ಗೆ ವಾಣಿಜ್ಯ ಮಂಡಳಿ ಜತೆಗೆ ಸಭೆ ನಡೆಸಿ ಚರ್ಚಿಸುತ್ತೇವೆ. ತಮಿಳುನಾಡು ಮತ್ತು ಇತರ ರಾಜ್ಯಗಳಲ್ಲಿ ಚಿತ್ರಮಂದಿಗಳಿಗೆ ಪೂರ್ಣ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ ಎಂದು ಹೇಳಿದರು.

Dhruva Sarja Tweet ರಾಜ್ಯ ಸರ್ಕಾರದ ವಿರುದ್ಧ ಧ್ರುವ ಸರ್ಜಾ ತೀವ್ರ ಅಸಮಾಧಾನ; ಟ್ವಿಟರ್​ನಲ್ಲಿ 3 ಪ್ರಶ್ನೆ ಮುಂದಿಟ್ಟ ನಟ

ಶಿವರಾಜ್​ಕುಮಾರ್ ಟ್ವೀಟ್: ಸಿನಿಮಾ ಹಾಲ್​ ಭರ್ತಿಯಾಗುವಷ್ಟು ಪ್ರೇಕ್ಷಕರು ಬರಲು ಅವಕಾಶ ಬೇಕು

Published On - 5:35 pm, Wed, 3 February 21