
ಬೆಂಗಳೂರು: ಮುರುಡೇಶ್ವರದ ಸಮುದ್ರ ತೀರದಲ್ಲಿ 123 ಅಡಿ ಎತ್ತರದ ಶಿವ ಪ್ರತಿಮೆ ಸ್ಥಾಪನೆಗೆ ಕಾರಣರಾಗಿರುವ ದೇಶ ವಿದೇಶಗಳಲ್ಲಿ ಖ್ಯಾತಿ ಗಳಿಸಿದ್ದ ಹಿರಿಯ ಉದ್ಯಮಿ, ಶಿಕ್ಷಣ ತಜ್ಞ ಆರ್ಎನ್ ಶೆಟ್ಟಿ(92) ಗುರುವಾರ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ R.N.ಶೆಟ್ಟಿ ಇಂದು (ಗುರುವಾರ) ನಸುಕಿನ ಜಾವ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಆರ್ ಎನ್ ಶೆಟ್ಟಿ ಅವರು ಉದ್ಯಮಿಯಾಗಿ ಬಹುದೊಡ್ಡ ಹೆಸರು ಮಾಡಿದ್ದರು. 1967ರಲ್ಲಿ ಪಾಲುದಾರ ಕಂಪೆನಿಯಾದ ಆರ್ ಎನ್ ಶೆಟ್ಟಿ ಆಂಡ್ ಕಂಪನಿ ಆರಂಭಿಸಿ ಆ ಕಂಪನಿ ಮೂಲಕ ಅನೇಕ ಸೇತುವೆ, ಅಣೆಕಟ್ಟುಗಳು, ಕಟ್ಟಡಗಳ ನಿರ್ಮಾಣ ಕಾರ್ಯ ಸೇರಿದಂತೆ ಲೋಕೋಪಕಾರಿ ಕಾರ್ಯಗಳನ್ನು ಮಾಡಿದ್ದರು.
ಮುರುಡೇಶ್ವರದಲ್ಲಿ ಸ್ಕೂಬಾ ಡೈವಿಂಗ್: ಸಮುದ್ರದಾಳದ ಜಲಸಾಹಸಕ್ಕೆ ಪ್ರವಾಸಿಗರು ಫಿದಾ!
Published On - 8:17 am, Thu, 17 December 20