AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿವೃತ್ತಿ ಪಿಂಚಣಿಗೆ EPS ಮತ್ತು NPFನಲ್ಲಿ ಯಾವುದು ಉತ್ತಮ?

ಖಾಸಗಿ ವಲಯದ ಉದ್ಯೋಗಿಗಳು ನಿವೃತ್ತಿಯ ನಂತರದ ಪಿಂಚಣಿಗಾಗಿ, ಸಾರ್ವಜನಿಕ ಭವಿಷ್ಯ ನಿಧಿ (ಪಿಪಿಎಫ್), ನೌಕರರ ಭವಿಷ್ಯ ನಿಧಿ (ಇಪಿಎಫ್), ರಾಷ್ಟ್ರೀಯ ಪಿಂಚಣಿ ಯೋಜನೆ (ಎನ್‌ಪಿಎಸ್) ಫಂಡ್‌ಗಳ ಮೇಲೆ ಅವಲಂಬಿತರಾಗಿರುತ್ತಾರೆ.

ನಿವೃತ್ತಿ ಪಿಂಚಣಿಗೆ EPS ಮತ್ತು NPFನಲ್ಲಿ ಯಾವುದು ಉತ್ತಮ?
ಪ್ರಾತಿನಿಧಿಕ ಚಿತ್ರ
shruti hegde
| Edited By: |

Updated on: Feb 04, 2021 | 12:09 PM

Share

ನವದೆಹಲಿ: ಖಾಸಗಿ ವಲಯದ ಉದ್ಯೋಗಿಗಳು ನಿವೃತ್ತಿಯ ನಂತರದ ಪಿಂಚಣಿಗಾಗಿ ಸಾರ್ವಜನಿಕ ಭವಿಷ್ಯ ನಿಧಿ (ಪಿಪಿಎಫ್), ನೌಕರರ ಭವಿಷ್ಯ ನಿಧಿ (ಇಪಿಎಫ್), ರಾಷ್ಟ್ರೀಯ ಪಿಂಚಣಿ ಯೋಜನೆ (ಎನ್‌ಪಿಎಸ್) ಫಂಡ್‌ಗಳ ಮೇಲೆ ಅವಲಂಬಿತರಾಗಿರುತ್ತಾರೆ. ಪಿಪಿಎಫ್, ಇಪಿಎಫ್ ಮತ್ತು ಎನ್‌ಪಿಎಸ್ ನಿವೃತ್ತಿ ಪಿಂಚಣಿಯ ಸಾಮಾನ್ಯ ಮಾರ್ಗಗಳಾಗಿದ್ದರೆ, ಇವುಗಳಲ್ಲಿ ಪಿಪಿಎಫ್ ಮತ್ತು ಇಪಿಎಫ್ ಮಾತ್ರ ತೆರಿಗೆ ಮುಕ್ತ ಆದಾಯವನ್ನು ನೀಡುತ್ತವೆ. ಆದರೆ ಪಿಪಿಎಫ್​ನಲ್ಲಿ ಒಬ್ಬರು ಒಂದು ವರ್ಷದಲ್ಲಿ 1.5 ಲಕ್ಷ ರೂ. ಗಿಂತ ಹೆಚ್ಚು ಹೂಡಿಕೆ ಮಾಡಲು ಸಾಧ್ಯವಿಲ್ಲ.

ಇಪಿಎಫ್ ಮತ್ತು ಎನ್‌ಪಿಎಸ್ ನಿವೃತ್ತಿ ನಂತರದ ಪಿಂಚಣಿಗೆ ಉತ್ತಮ ಆಯ್ಕೆಗಳಾಗಿವೆ.  ಎನ್‌ಪಿಎಸ್‌ನಲ್ಲಿ ಆದಾಯದ ಶೇ 60ರಷ್ಟು ಮಾತ್ರ ತೆರಿಗೆ ಮುಕ್ತ ಘಟಕವಾಗಿ ಹಿಂಪಡೆಯಬಹುದಾಗಿದೆ.

ಕೇಂದ್ರ ಬಜೆಟ್ 2021-22ರಲ್ಲಿ, ಇಪಿಎಫ್ ಬಡ್ಡಿಯನ್ನು ಒಂದು ವರ್ಷದಲ್ಲಿ 2.5 ಲಕ್ಷ ರೂ.ಗಿಂತ ಹೆಚ್ಚಿನ ತೆರಿಗೆ ವಿಧಿಸಲು ಸರ್ಕಾರ ಆದೇಶ ಹೊರಡಿಸಿದೆ. ಈ ನಿಯಮ ಜಾರಿಗೆ ಬಂದ ನಂತರ, ಹೆಚ್ಚಿನ ಆದಾಯ ಗಳಿಸುವವರು ಇಪಿಎಫ್​ಅನ್ನು ಆಯ್ಕೆ ಮಾಡಿಕೊಳ್ಳುವುದು ಕಡಿಮೆಯಾಗಬಹುದು.

ಎನ್‌ಪಿಎಸ್, ಇಪಿಎಫ್‌ಗಿಂತ ಹೆಚ್ಚಿನ ಲಾಭವನ್ನು ಗಳಿಸುವ ಸಾಮರ್ಥ್ಯವನ್ನು ಹೊಂದಿದೆ. ಎನ್‌ಪಿಎಸ್ ಹೂಡಿಕೆದಾರರು ಇಕ್ವಿಟಿ, ಕಾರ್ಪೊರೇಟ್ ಸಾಲ, ಸರ್ಕಾರಿ ಬಾಂಡ್ ಮತ್ತು ಪರ್ಯಾಯ ಆಸ್ತಿ ನಿಧಿ ಎಂಬುದಾಗಿ ನಾಲ್ಕು ಆಯ್ಕೆಯನ್ನು ಹೊಂದಿರುತ್ತಾರೆ. ಆದರೆ, ಇಪಿಎಫ್ ಹೂಡಿಕೆದಾರರು ಯಾವುದೇ ಆಯ್ಕೆಯನ್ನು ಹೊಂದಿರುವುದಿಲ್ಲ.

ಎನ್​ಪಿಎಸ್​ ಮತ್ತು ಇಪಿಎಫ್​ ಎರಡೂ ಕೂಡಾ ತನ್ನದೇ ಆದ ಅರ್ಹತೆ ಮತ್ತು ಅನರ್ಹತೆಗಳನ್ನು ಹೊಂದಿದೆ. ಪ್ರತಿವರ್ಷ ಎನ್‌ಪಿಎಸ್‌ನಲ್ಲಿ ಹೆಚ್ಚಿನ ಆದಾಯ ಗಳಿಸಬಹುದಾಗಿದೆ.

ಪಿಂಚಣಿ ತಲುಪಿಸಲು ಮಹತ್ವದ ಹೆಜ್ಜೆಯಿಟ್ಟ ರಾಜ್ಯ ಸರ್ಕಾರ

ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್