ಸಿಹಿ ಸುದ್ದಿ ನೀಡಿದ ಎಸ್ಕಾಂ: ಮುಂದಿನ 3 ತಿಂಗಳ ಕಾಲ ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಮಾಡದಿರಲು ನಿರ್ಧಾರ

ವಿದ್ಯಾರ್ಥಿಗಳು, ರೈತರ ಹಿತದೃಷ್ಟಿಯಿಂದ ರಾಜ್ಯದಲ್ಲಿ ಮುಂದಿನ 3 ತಿಂಗಳ ಕಾಲ ಲೋಡ್ ಶೆಡ್ಡಿಂಗ್ ಮಾಡದಿರಲು, ಎಲ್ಲ ಎಸ್ಕಾಂಗಳು ನಿರ್ಧರಿಸಿವೆ.

ಸಿಹಿ ಸುದ್ದಿ ನೀಡಿದ ಎಸ್ಕಾಂ: ಮುಂದಿನ 3 ತಿಂಗಳ ಕಾಲ ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಮಾಡದಿರಲು ನಿರ್ಧಾರ
ಎಸ್ಕಾಂ (ಎಡಚಿತ್ರ) ಸಾಂಧರ್ಬಿಕ ಚಿತ್ರ
Follow us
|

Updated on:Mar 15, 2023 | 12:26 PM

ಬೆಂಗಳೂರು: ಬೇಸಿಗೆ ಆರಂಭವಾಗುತ್ತಿದ್ದಂತೆ ನೀರಿನ ಅಭಾವ ಮತ್ತು ವಿದ್ಯುತ್​​ ವ್ಯತ್ಯಯ ಉಂಟಾಗುತ್ತದೆ. ಇದರಿಂದ ರಾಜ್ಯದ ನಾನಾ ಪ್ರದೇಶದ ಜನರು ಸಾಕಷ್ಟು ತೊಂದರೆ ಅನುಭವಿಸುತ್ತಾರೆ. ಬೇಸಿಗೆ ಮಾರ್ಚ್​​ನಿಂದ ಆರಂಭವಾಗುವುದರಿಂದ ಈ ಸಮಯದಲ್ಲಿ ಪರೀಕ್ಷೆಗಳು ಪ್ರಾರಂಭವಾಗುತ್ತವೆ. ಈ ಕಾಲದಲ್ಲಿ ವಿದ್ಯುತ್​ ಕಡಿತದಿಂದ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಸಾಕಷ್ಟು ತೊಂದರೆಯಾಗುತ್ತದೆ. ಆದರೆ ಈ ಬಾರಿ ಇದು ಸಂಭವಿಸುವುದಿಲ್ಲ. ಬೇಸಿಗೆಯಲ್ಲಿ ಲೋಡ್ ಶೆಡ್ಡಿಂಗ್ (Loadshedding) ಮಾಡದಿರಲು ಎಲ್ಲ ಎಸ್ಕಾಂಗಳು ನಿರ್ಧರಿಸಿವೆ. ವಿದ್ಯಾರ್ಥಿಗಳು, ರೈತರ ಹಿತದೃಷ್ಟಿಯಿಂದ ರಾಜ್ಯದಲ್ಲಿ ಮುಂದಿನ 3 ತಿಂಗಳ ಕಾಲ ಲೋಡ್ ಶೆಡ್ಡಿಂಗ್ ಮಾಡದಿರಲು, ಎಲ್ಲ ಎಸ್ಕಾಂಗಳ (Escom) ವ್ಯವಸ್ಥಾಪಕ ನಿರ್ದೇಶಕರ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

ಬೇಸಿಗೆಯಲ್ಲಿ ಪರೀಕ್ಷೆ ಶುರುವಾಗಿವೆ ಮತ್ತು ರೈತರ ಜಮೀನುಗಳಿಗೆ ಹೆಚ್ಚಿನ ವಿದ್ಯುತ್​ ಅವಶ್ಯವಾದ ಹಿನ್ನೆಲೆ ವಿದ್ಯುತ್ ಬೇಡಿಕೆ ಹೆಚ್ಚಾಗಿದೆ. ಇನ್ನು ಬೆಂಗಳೂರು ವಿದ್ಯುತ್​ ಸರಬರಾಜು ಕಂಪನಿ ನಿಯಮಿತ (ಬೆಸ್ಕಾಂ) 3 ತಿಂಗಳ ವಿದ್ಯುತ್​ ಬಳಕೆಯನ್ನು ಅಂದಾಜಿಸಿದೆ.

ಇದನ್ನೂ ಓದಿ: ವೇತನ ಪರಿಷ್ಕರಣೆಗೆ ಆಗ್ರಹಿಸಿ ಮಾ. 16ರಂದು KPTCL ನೌಕರರ ಸಂಘದಿಂದ ಮುಷ್ಕರಕ್ಕೆ ಕರೆ

ಮಾರ್ಚ್​ನಿಂದ ಮೇ ಅಂತ್ಯದವರೆಗೆ ವಿದ್ಯುತ್ ಬೇಡಿಕೆ ಮತ್ತು ಬಳಕೆ ಅಂದಾಜು

ಈ ತಿಂಗಳು (ಮಾರ್ಚ್​) ನಲ್ಲಿ ದಿನದ ಗರಿಷ್ಠ ಬೇಡಿಕೆ 7600 ಮೆಗಾವ್ಯಾಟ್ ತಲುಪುವ ಸಾಧ್ಯತೆ ಇದ್ದು, ಕಳೆದ 12 ದಿನಗಳಿಂದ ಸರಾಸರಿ ದಿನದ ವಿದ್ಯುತ್ ಬೇಡಿಕೆ 7400 ಮೆಗಾವ್ಯಾಟ್ ಇತ್ತು. ಮಾರ್ಚ್​ನಲ್ಲಿ ದಿನದ ವಿದ್ಯುತ್ ಬೇಡಿಕೆ 132 ಮಿಲಿಯನ್ ಯೂನಿಟ್ ಆಗಿದೆ.

ಎಪ್ರಿಲ್​ನಲ್ಲಿ ವಿದ್ಯುತ್ ಬೇಡಿಕೆ 7650 ಮೆಗಾವ್ಯಾಟ್ ತಲುಪಲಿದ್ದು, ದಿನದ ವಿದ್ಯುತ್ ಬಳಕೆ ಸರಾಸರಿ 135 ಮಿಲಿಯನ್ ಯೂನಿಟ್ ಆಗಲಿದೆ. ಮೇ ತಿಂಗಳಲ್ಲಿ ವಿದ್ಯುತ್ ಬೇಡಿಕೆ 6800 ಮೆಗಾ ವ್ಯಾಟ್​ಗೆ ಇಳಿಯಲಿದ್ದು, ದಿನದ ವಿದ್ಯುತ್ ಬಳಕೆ 124 ಮಿಲಿಯನ್ ಯೂನಿಟ್ ಆಗಲಿದೆ ಎಂದು ಬೆಸ್ಕಾಂ ಮಾಧ್ಯಮ ಪ್ರಕಟಣೆ ಹೊರಡಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:25 pm, Wed, 15 March 23

ಪುನೀತ್ ರಾಜ್​ಕುಮಾರ್​ಗಾಗಿ ದೇವಸ್ಥಾನ ಕಟ್ಟಿದ್ದೇಕೆ? ವಿವರಿಸಿದ ಅಭಿಮಾನಿ
ಪುನೀತ್ ರಾಜ್​ಕುಮಾರ್​ಗಾಗಿ ದೇವಸ್ಥಾನ ಕಟ್ಟಿದ್ದೇಕೆ? ವಿವರಿಸಿದ ಅಭಿಮಾನಿ
ಗರುಡ ಪುರಾಣ ಮನೆಯಲ್ಲಿ ಇಟ್ಟುಕೊಳ್ಳಬಹುದಾ? ಇಲ್ಲಿದೆ ಉತ್ತರ
ಗರುಡ ಪುರಾಣ ಮನೆಯಲ್ಲಿ ಇಟ್ಟುಕೊಳ್ಳಬಹುದಾ? ಇಲ್ಲಿದೆ ಉತ್ತರ
Nithya Bhavishya: ಶುಕ್ರವಾರದ ಗ್ರಹಗಳ ಸಂಚಾರ, ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶುಕ್ರವಾರದ ಗ್ರಹಗಳ ಸಂಚಾರ, ರಾಶಿ ಭವಿಷ್ಯ ತಿಳಿಯಿರಿ
ಅಪ್ಪು ಅಭಿಮಾನಕ್ಕೆ ಫ್ಯಾನ್ಸ್ ಕಟ್ಟಿದ ದೇವಸ್ಥಾನ ಉದ್ಘಾಟಿಸಿದ ಅಶ್ವಿನಿ
ಅಪ್ಪು ಅಭಿಮಾನಕ್ಕೆ ಫ್ಯಾನ್ಸ್ ಕಟ್ಟಿದ ದೇವಸ್ಥಾನ ಉದ್ಘಾಟಿಸಿದ ಅಶ್ವಿನಿ
ಶ್ರೀಗಳ ಉಪಟಳ ಹೆಚ್ಚಳ: ತಿರುಪತಿ ಲಡ್ಡು ಬಗ್ಗೆ ಕೋಡಿಶ್ರೀ ಮಾತು
ಶ್ರೀಗಳ ಉಪಟಳ ಹೆಚ್ಚಳ: ತಿರುಪತಿ ಲಡ್ಡು ಬಗ್ಗೆ ಕೋಡಿಶ್ರೀ ಮಾತು
ಕ್ಲಾಸ್​ರೂಂನಲ್ಲೇ ಶಿಕ್ಷಕಿಗೆ ಬೆದರಿಕೆ ಹಾಕಿ, ಉಗುಳಿದ ಎಂಬಿಎ ವಿದ್ಯಾರ್ಥಿ
ಕ್ಲಾಸ್​ರೂಂನಲ್ಲೇ ಶಿಕ್ಷಕಿಗೆ ಬೆದರಿಕೆ ಹಾಕಿ, ಉಗುಳಿದ ಎಂಬಿಎ ವಿದ್ಯಾರ್ಥಿ
ಸಿದ್ದರಾಮಯ್ಯಗೆ ಮುಡಾ ಸಂಕಷ್ಟ: ಈ ಹಿಂದೆ ಕೋಡಿಶ್ರೀ ನುಡಿದಿದ್ದ ಭವಿಷ್ಯ ನಿಜ
ಸಿದ್ದರಾಮಯ್ಯಗೆ ಮುಡಾ ಸಂಕಷ್ಟ: ಈ ಹಿಂದೆ ಕೋಡಿಶ್ರೀ ನುಡಿದಿದ್ದ ಭವಿಷ್ಯ ನಿಜ
ಕಂಠಪೂರ್ತಿ ಕುಡಿದು ಅಪ್ಪನ ತಲೆಗೆ ಇಟ್ಟಿಗೆಯಿಂದ ಹೊಡೆದು ಕೊಂದ ಮಗ
ಕಂಠಪೂರ್ತಿ ಕುಡಿದು ಅಪ್ಪನ ತಲೆಗೆ ಇಟ್ಟಿಗೆಯಿಂದ ಹೊಡೆದು ಕೊಂದ ಮಗ
ಬೆಂಗಳೂರಿನ ‘ಏರಿಯಾನ್ ಟೆಕ್ನಾಲಜಿ ಕಂಪನಿ’ಯಲ್ಲಿ ಅಗ್ನಿ ಅವಘಡ;ತಪ್ಪಿದ ಅನಾಹುತ
ಬೆಂಗಳೂರಿನ ‘ಏರಿಯಾನ್ ಟೆಕ್ನಾಲಜಿ ಕಂಪನಿ’ಯಲ್ಲಿ ಅಗ್ನಿ ಅವಘಡ;ತಪ್ಪಿದ ಅನಾಹುತ
ಅಮ್ಮ-ಮಗು ಮೇಲೆ ಬೀದಿ ನಾಯಿಗಳ ದಾಳಿ; ಶಾಕಿಂಗ್ ವಿಡಿಯೋ ವೈರಲ್
ಅಮ್ಮ-ಮಗು ಮೇಲೆ ಬೀದಿ ನಾಯಿಗಳ ದಾಳಿ; ಶಾಕಿಂಗ್ ವಿಡಿಯೋ ವೈರಲ್