AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಹಿ ಸುದ್ದಿ ನೀಡಿದ ಎಸ್ಕಾಂ: ಮುಂದಿನ 3 ತಿಂಗಳ ಕಾಲ ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಮಾಡದಿರಲು ನಿರ್ಧಾರ

ವಿದ್ಯಾರ್ಥಿಗಳು, ರೈತರ ಹಿತದೃಷ್ಟಿಯಿಂದ ರಾಜ್ಯದಲ್ಲಿ ಮುಂದಿನ 3 ತಿಂಗಳ ಕಾಲ ಲೋಡ್ ಶೆಡ್ಡಿಂಗ್ ಮಾಡದಿರಲು, ಎಲ್ಲ ಎಸ್ಕಾಂಗಳು ನಿರ್ಧರಿಸಿವೆ.

ಸಿಹಿ ಸುದ್ದಿ ನೀಡಿದ ಎಸ್ಕಾಂ: ಮುಂದಿನ 3 ತಿಂಗಳ ಕಾಲ ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಮಾಡದಿರಲು ನಿರ್ಧಾರ
ಎಸ್ಕಾಂ (ಎಡಚಿತ್ರ) ಸಾಂಧರ್ಬಿಕ ಚಿತ್ರ
ವಿವೇಕ ಬಿರಾದಾರ
|

Updated on:Mar 15, 2023 | 12:26 PM

Share

ಬೆಂಗಳೂರು: ಬೇಸಿಗೆ ಆರಂಭವಾಗುತ್ತಿದ್ದಂತೆ ನೀರಿನ ಅಭಾವ ಮತ್ತು ವಿದ್ಯುತ್​​ ವ್ಯತ್ಯಯ ಉಂಟಾಗುತ್ತದೆ. ಇದರಿಂದ ರಾಜ್ಯದ ನಾನಾ ಪ್ರದೇಶದ ಜನರು ಸಾಕಷ್ಟು ತೊಂದರೆ ಅನುಭವಿಸುತ್ತಾರೆ. ಬೇಸಿಗೆ ಮಾರ್ಚ್​​ನಿಂದ ಆರಂಭವಾಗುವುದರಿಂದ ಈ ಸಮಯದಲ್ಲಿ ಪರೀಕ್ಷೆಗಳು ಪ್ರಾರಂಭವಾಗುತ್ತವೆ. ಈ ಕಾಲದಲ್ಲಿ ವಿದ್ಯುತ್​ ಕಡಿತದಿಂದ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಸಾಕಷ್ಟು ತೊಂದರೆಯಾಗುತ್ತದೆ. ಆದರೆ ಈ ಬಾರಿ ಇದು ಸಂಭವಿಸುವುದಿಲ್ಲ. ಬೇಸಿಗೆಯಲ್ಲಿ ಲೋಡ್ ಶೆಡ್ಡಿಂಗ್ (Loadshedding) ಮಾಡದಿರಲು ಎಲ್ಲ ಎಸ್ಕಾಂಗಳು ನಿರ್ಧರಿಸಿವೆ. ವಿದ್ಯಾರ್ಥಿಗಳು, ರೈತರ ಹಿತದೃಷ್ಟಿಯಿಂದ ರಾಜ್ಯದಲ್ಲಿ ಮುಂದಿನ 3 ತಿಂಗಳ ಕಾಲ ಲೋಡ್ ಶೆಡ್ಡಿಂಗ್ ಮಾಡದಿರಲು, ಎಲ್ಲ ಎಸ್ಕಾಂಗಳ (Escom) ವ್ಯವಸ್ಥಾಪಕ ನಿರ್ದೇಶಕರ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

ಬೇಸಿಗೆಯಲ್ಲಿ ಪರೀಕ್ಷೆ ಶುರುವಾಗಿವೆ ಮತ್ತು ರೈತರ ಜಮೀನುಗಳಿಗೆ ಹೆಚ್ಚಿನ ವಿದ್ಯುತ್​ ಅವಶ್ಯವಾದ ಹಿನ್ನೆಲೆ ವಿದ್ಯುತ್ ಬೇಡಿಕೆ ಹೆಚ್ಚಾಗಿದೆ. ಇನ್ನು ಬೆಂಗಳೂರು ವಿದ್ಯುತ್​ ಸರಬರಾಜು ಕಂಪನಿ ನಿಯಮಿತ (ಬೆಸ್ಕಾಂ) 3 ತಿಂಗಳ ವಿದ್ಯುತ್​ ಬಳಕೆಯನ್ನು ಅಂದಾಜಿಸಿದೆ.

ಇದನ್ನೂ ಓದಿ: ವೇತನ ಪರಿಷ್ಕರಣೆಗೆ ಆಗ್ರಹಿಸಿ ಮಾ. 16ರಂದು KPTCL ನೌಕರರ ಸಂಘದಿಂದ ಮುಷ್ಕರಕ್ಕೆ ಕರೆ

ಮಾರ್ಚ್​ನಿಂದ ಮೇ ಅಂತ್ಯದವರೆಗೆ ವಿದ್ಯುತ್ ಬೇಡಿಕೆ ಮತ್ತು ಬಳಕೆ ಅಂದಾಜು

ಈ ತಿಂಗಳು (ಮಾರ್ಚ್​) ನಲ್ಲಿ ದಿನದ ಗರಿಷ್ಠ ಬೇಡಿಕೆ 7600 ಮೆಗಾವ್ಯಾಟ್ ತಲುಪುವ ಸಾಧ್ಯತೆ ಇದ್ದು, ಕಳೆದ 12 ದಿನಗಳಿಂದ ಸರಾಸರಿ ದಿನದ ವಿದ್ಯುತ್ ಬೇಡಿಕೆ 7400 ಮೆಗಾವ್ಯಾಟ್ ಇತ್ತು. ಮಾರ್ಚ್​ನಲ್ಲಿ ದಿನದ ವಿದ್ಯುತ್ ಬೇಡಿಕೆ 132 ಮಿಲಿಯನ್ ಯೂನಿಟ್ ಆಗಿದೆ.

ಎಪ್ರಿಲ್​ನಲ್ಲಿ ವಿದ್ಯುತ್ ಬೇಡಿಕೆ 7650 ಮೆಗಾವ್ಯಾಟ್ ತಲುಪಲಿದ್ದು, ದಿನದ ವಿದ್ಯುತ್ ಬಳಕೆ ಸರಾಸರಿ 135 ಮಿಲಿಯನ್ ಯೂನಿಟ್ ಆಗಲಿದೆ. ಮೇ ತಿಂಗಳಲ್ಲಿ ವಿದ್ಯುತ್ ಬೇಡಿಕೆ 6800 ಮೆಗಾ ವ್ಯಾಟ್​ಗೆ ಇಳಿಯಲಿದ್ದು, ದಿನದ ವಿದ್ಯುತ್ ಬಳಕೆ 124 ಮಿಲಿಯನ್ ಯೂನಿಟ್ ಆಗಲಿದೆ ಎಂದು ಬೆಸ್ಕಾಂ ಮಾಧ್ಯಮ ಪ್ರಕಟಣೆ ಹೊರಡಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:25 pm, Wed, 15 March 23

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!