AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಹಿ ಸುದ್ದಿ ನೀಡಿದ ಎಸ್ಕಾಂ: ಮುಂದಿನ 3 ತಿಂಗಳ ಕಾಲ ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಮಾಡದಿರಲು ನಿರ್ಧಾರ

ವಿದ್ಯಾರ್ಥಿಗಳು, ರೈತರ ಹಿತದೃಷ್ಟಿಯಿಂದ ರಾಜ್ಯದಲ್ಲಿ ಮುಂದಿನ 3 ತಿಂಗಳ ಕಾಲ ಲೋಡ್ ಶೆಡ್ಡಿಂಗ್ ಮಾಡದಿರಲು, ಎಲ್ಲ ಎಸ್ಕಾಂಗಳು ನಿರ್ಧರಿಸಿವೆ.

ಸಿಹಿ ಸುದ್ದಿ ನೀಡಿದ ಎಸ್ಕಾಂ: ಮುಂದಿನ 3 ತಿಂಗಳ ಕಾಲ ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಮಾಡದಿರಲು ನಿರ್ಧಾರ
ಎಸ್ಕಾಂ (ಎಡಚಿತ್ರ) ಸಾಂಧರ್ಬಿಕ ಚಿತ್ರ
ವಿವೇಕ ಬಿರಾದಾರ
|

Updated on:Mar 15, 2023 | 12:26 PM

Share

ಬೆಂಗಳೂರು: ಬೇಸಿಗೆ ಆರಂಭವಾಗುತ್ತಿದ್ದಂತೆ ನೀರಿನ ಅಭಾವ ಮತ್ತು ವಿದ್ಯುತ್​​ ವ್ಯತ್ಯಯ ಉಂಟಾಗುತ್ತದೆ. ಇದರಿಂದ ರಾಜ್ಯದ ನಾನಾ ಪ್ರದೇಶದ ಜನರು ಸಾಕಷ್ಟು ತೊಂದರೆ ಅನುಭವಿಸುತ್ತಾರೆ. ಬೇಸಿಗೆ ಮಾರ್ಚ್​​ನಿಂದ ಆರಂಭವಾಗುವುದರಿಂದ ಈ ಸಮಯದಲ್ಲಿ ಪರೀಕ್ಷೆಗಳು ಪ್ರಾರಂಭವಾಗುತ್ತವೆ. ಈ ಕಾಲದಲ್ಲಿ ವಿದ್ಯುತ್​ ಕಡಿತದಿಂದ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಸಾಕಷ್ಟು ತೊಂದರೆಯಾಗುತ್ತದೆ. ಆದರೆ ಈ ಬಾರಿ ಇದು ಸಂಭವಿಸುವುದಿಲ್ಲ. ಬೇಸಿಗೆಯಲ್ಲಿ ಲೋಡ್ ಶೆಡ್ಡಿಂಗ್ (Loadshedding) ಮಾಡದಿರಲು ಎಲ್ಲ ಎಸ್ಕಾಂಗಳು ನಿರ್ಧರಿಸಿವೆ. ವಿದ್ಯಾರ್ಥಿಗಳು, ರೈತರ ಹಿತದೃಷ್ಟಿಯಿಂದ ರಾಜ್ಯದಲ್ಲಿ ಮುಂದಿನ 3 ತಿಂಗಳ ಕಾಲ ಲೋಡ್ ಶೆಡ್ಡಿಂಗ್ ಮಾಡದಿರಲು, ಎಲ್ಲ ಎಸ್ಕಾಂಗಳ (Escom) ವ್ಯವಸ್ಥಾಪಕ ನಿರ್ದೇಶಕರ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

ಬೇಸಿಗೆಯಲ್ಲಿ ಪರೀಕ್ಷೆ ಶುರುವಾಗಿವೆ ಮತ್ತು ರೈತರ ಜಮೀನುಗಳಿಗೆ ಹೆಚ್ಚಿನ ವಿದ್ಯುತ್​ ಅವಶ್ಯವಾದ ಹಿನ್ನೆಲೆ ವಿದ್ಯುತ್ ಬೇಡಿಕೆ ಹೆಚ್ಚಾಗಿದೆ. ಇನ್ನು ಬೆಂಗಳೂರು ವಿದ್ಯುತ್​ ಸರಬರಾಜು ಕಂಪನಿ ನಿಯಮಿತ (ಬೆಸ್ಕಾಂ) 3 ತಿಂಗಳ ವಿದ್ಯುತ್​ ಬಳಕೆಯನ್ನು ಅಂದಾಜಿಸಿದೆ.

ಇದನ್ನೂ ಓದಿ: ವೇತನ ಪರಿಷ್ಕರಣೆಗೆ ಆಗ್ರಹಿಸಿ ಮಾ. 16ರಂದು KPTCL ನೌಕರರ ಸಂಘದಿಂದ ಮುಷ್ಕರಕ್ಕೆ ಕರೆ

ಮಾರ್ಚ್​ನಿಂದ ಮೇ ಅಂತ್ಯದವರೆಗೆ ವಿದ್ಯುತ್ ಬೇಡಿಕೆ ಮತ್ತು ಬಳಕೆ ಅಂದಾಜು

ಈ ತಿಂಗಳು (ಮಾರ್ಚ್​) ನಲ್ಲಿ ದಿನದ ಗರಿಷ್ಠ ಬೇಡಿಕೆ 7600 ಮೆಗಾವ್ಯಾಟ್ ತಲುಪುವ ಸಾಧ್ಯತೆ ಇದ್ದು, ಕಳೆದ 12 ದಿನಗಳಿಂದ ಸರಾಸರಿ ದಿನದ ವಿದ್ಯುತ್ ಬೇಡಿಕೆ 7400 ಮೆಗಾವ್ಯಾಟ್ ಇತ್ತು. ಮಾರ್ಚ್​ನಲ್ಲಿ ದಿನದ ವಿದ್ಯುತ್ ಬೇಡಿಕೆ 132 ಮಿಲಿಯನ್ ಯೂನಿಟ್ ಆಗಿದೆ.

ಎಪ್ರಿಲ್​ನಲ್ಲಿ ವಿದ್ಯುತ್ ಬೇಡಿಕೆ 7650 ಮೆಗಾವ್ಯಾಟ್ ತಲುಪಲಿದ್ದು, ದಿನದ ವಿದ್ಯುತ್ ಬಳಕೆ ಸರಾಸರಿ 135 ಮಿಲಿಯನ್ ಯೂನಿಟ್ ಆಗಲಿದೆ. ಮೇ ತಿಂಗಳಲ್ಲಿ ವಿದ್ಯುತ್ ಬೇಡಿಕೆ 6800 ಮೆಗಾ ವ್ಯಾಟ್​ಗೆ ಇಳಿಯಲಿದ್ದು, ದಿನದ ವಿದ್ಯುತ್ ಬಳಕೆ 124 ಮಿಲಿಯನ್ ಯೂನಿಟ್ ಆಗಲಿದೆ ಎಂದು ಬೆಸ್ಕಾಂ ಮಾಧ್ಯಮ ಪ್ರಕಟಣೆ ಹೊರಡಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:25 pm, Wed, 15 March 23

ಮೋದಿ ಸ್ವಾಗತಕ್ಕೆಂದು ಏರ್​​ಪೋರ್ಟ್​ಗೆ ಈ ದೇಶದ ಸಚಿವ ಸಂಪುಟವೇ ಬಂದಿತ್ತು
ಮೋದಿ ಸ್ವಾಗತಕ್ಕೆಂದು ಏರ್​​ಪೋರ್ಟ್​ಗೆ ಈ ದೇಶದ ಸಚಿವ ಸಂಪುಟವೇ ಬಂದಿತ್ತು
ಪೋರ್ಟ್​ ಆಫ್​ ಸ್ಪೇನ್​​ನಲ್ಲಿ ಭೋಜ್ಪುರಿ ಗೀತೆಯೊಂದಿಗೆ ಮೋದಿಗೆ ಸ್ವಾಗತ
ಪೋರ್ಟ್​ ಆಫ್​ ಸ್ಪೇನ್​​ನಲ್ಲಿ ಭೋಜ್ಪುರಿ ಗೀತೆಯೊಂದಿಗೆ ಮೋದಿಗೆ ಸ್ವಾಗತ
ಕನ್ನಡದಲ್ಲೇ ಮಾತು ಆರಂಭಿಸಿದ ನೀರಜ್ ಚೋಪ್ರಾ ಬೆಂಗಳೂರಿನ ಬಗ್ಗೆ ಹೇಳಿದ್ದೇನು?
ಕನ್ನಡದಲ್ಲೇ ಮಾತು ಆರಂಭಿಸಿದ ನೀರಜ್ ಚೋಪ್ರಾ ಬೆಂಗಳೂರಿನ ಬಗ್ಗೆ ಹೇಳಿದ್ದೇನು?
ಪತ್ನಿಯೊಂದಿಗೆ ಚಾಮುಂಡೇಶ್ವರಿ ತಾಯಿ ದರ್ಶನ ಪಡೆದ ನಟ ದರ್ಶನ್
ಪತ್ನಿಯೊಂದಿಗೆ ಚಾಮುಂಡೇಶ್ವರಿ ತಾಯಿ ದರ್ಶನ ಪಡೆದ ನಟ ದರ್ಶನ್
ಟ್ರಿನಿಡಾಡ್ ಮತ್ತು ಟೊಬಾಗೊ ಪ್ರಧಾನಿ ಕಮಲಾರನ್ನು ಬಿಹಾರದ ಮಗಳು
ಟ್ರಿನಿಡಾಡ್ ಮತ್ತು ಟೊಬಾಗೊ ಪ್ರಧಾನಿ ಕಮಲಾರನ್ನು ಬಿಹಾರದ ಮಗಳು
Daily Devotional: ಗುಳಿ ಕೆನ್ನೆಯವರು ನಿಜಕ್ಕೂ ಅದೃಷ್ಟವಂತರಾ ತಿಳಿಯಿರಿ
Daily Devotional: ಗುಳಿ ಕೆನ್ನೆಯವರು ನಿಜಕ್ಕೂ ಅದೃಷ್ಟವಂತರಾ ತಿಳಿಯಿರಿ
Daily Horoscope: ಅನ್ಯರ ಸಮಸ್ಯೆಯನ್ನು ನಿಮ್ಮ ಸಮಸ್ಯೆ ಎಂದುಕೊಳ್ಳುವಿರಿ
Daily Horoscope: ಅನ್ಯರ ಸಮಸ್ಯೆಯನ್ನು ನಿಮ್ಮ ಸಮಸ್ಯೆ ಎಂದುಕೊಳ್ಳುವಿರಿ
2 ದಿನಗಳ ಘಾನಾ ಭೇಟಿ ಮುಗಿಸಿ ಟ್ರಿನಿಡಾಡ್ ಮತ್ತು ಟೊಬೆಗೊಗೆ ತೆರಳಿದ ಮೋದಿ
2 ದಿನಗಳ ಘಾನಾ ಭೇಟಿ ಮುಗಿಸಿ ಟ್ರಿನಿಡಾಡ್ ಮತ್ತು ಟೊಬೆಗೊಗೆ ತೆರಳಿದ ಮೋದಿ
ಹೊಳೆ ನೀರಿನ ಮಧ್ಯದಲ್ಲೇ ಕೆಟ್ಟು ನಿಂತ ಲಾಂಚ್..ಮುಂದೇನಾಯ್ತು..!
ಹೊಳೆ ನೀರಿನ ಮಧ್ಯದಲ್ಲೇ ಕೆಟ್ಟು ನಿಂತ ಲಾಂಚ್..ಮುಂದೇನಾಯ್ತು..!
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ