AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯುತ್ ಬಿಲ್ ಪಾವತಿ ಸೇರಿ 5 ಎಸ್ಕಾಂ ಆನ್‌ಲೈನ್ ಸೇವೆ 2 ದಿನ ಸ್ಥಗಿತ

ಕರ್ನಾಟಕದ ಐದೂ ಎಸ್ಕಾಂಗಳ ವ್ಯಾಪ್ತಿಯಲ್ಲಿ ವೆಬ್ ಪೋಟರ್ ಗೆ ಸಂಬಂಧಿಸಿದಂತೆ ತುರ್ತು ತಾಂತ್ರಿಕ ನಿರ್ವಹಣಾ ಕಾಮಗಾರಿ ಕೈಗೆತ್ತಿಕೊಳ್ಳುತ್ತಿದೆ. ಈ ಹಿನ್ನೆಲೆ ಎರಡು ದಿನಗಳ ಕಾಲ ಎಸ್ಕಾಂಗಳ ವ್ಯಾಪ್ತಿಯಲ್ಲಿ ಆನ್​ ಲೈನ್​ ಸೇವೆ ಇರುವುದಿಲ್ಲ. ಹಾಗಾದ್ರೆ, ಯಾವ ದಿನದಂದು ಯಾವೆಲ್ಲಾ ಸೇವೆ ಇರುವುದಿಲ್ಲ ಎನ್ನುವ ಮಾಹಿತಿ ಈ ಕೆಳಗಿನಂತಿದೆ.

ವಿದ್ಯುತ್ ಬಿಲ್ ಪಾವತಿ ಸೇರಿ 5 ಎಸ್ಕಾಂ ಆನ್‌ಲೈನ್ ಸೇವೆ 2 ದಿನ ಸ್ಥಗಿತ
Escoms
TV9 Web
| Edited By: |

Updated on:Jul 22, 2025 | 9:58 PM

Share

ಬೆಂಗಳೂರು, (ಜುಲೈ.22): ಮಾಹಿತಿ ತಂತ್ರಜ್ಞಾನ ಉನ್ನತೀಕರಣ ಹಿನ್ನೆಲೆಯಲ್ಲಿ ಕರ್ನಾಟಕದ ಐದೂ ಎಸ್ಕಾಂಗಳ (Escom) ವ್ಯಾಪ್ತಿಯಲ್ಲಿನ ಆನ್​ ಲೈನ್​ ಸೇವೆ ಇರುವುದಿಲ್ಲ. ಜುಲೈ 25ರ ರಾತ್ರಿ 8.30 ರಿಂದ ಜುಲೈ 27ರ ರಾತ್ರಿ 10 ರವರೆಗೆ ಬೆಸ್ಕಾಂ (bescom), ಹೆಸ್ಕಾಂ (hescom), ಜೆಸ್ಕಾಂ, ಮೆಸ್ಕಾಂ ಹಾಗೂ ಸೆಸ್ಕ್ ಗಳ ವ್ಯಾಪ್ತಿಗಳ ಆನ್​ ಲೈನ್ ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಇದರಿಂದ ಆನ್​​ ಲೈನ್​​​ ಮೂಲಕ ವಿದ್ಯುತ್ ಬಿಲ್ ಪಾವತಿ, ಹೆಸರು ಬದಲಾವಣೆ, ಜಕಾತಿ ಬದಲಾವಣೆ ಮತ್ತು ಹೊಸ ಸಂಪರ್ಕ ಸೇವೆ ಲಭ್ಯವಿರುವುದಿಲ್ಲ.

ಬೆಂಗಳೂರು ನಗರ ವ್ಯಾಪ್ತಿಯ ಎಲ್ಲಾ ಉಪ ವಿಭಾಗಗಳು, ಶಿಢ್ಲಘಟ್ಟ, ಚಿಕ್ಕಬಳ್ಳಾಪುರ, ಕೋಲಾರ, ಚಿಂತಾಮಣಿ, ಕನಕಪುರ, ರಾಮನಗರ, ದಾವಣಗೆರೆ-1, ದಾವಣಗೆರೆ-2, ಚಿತ್ರದುರ್ಗ, ತುಮಕೂರು-1, ತುಮಕೂರು-2, ಸಿರಾ, ಚೆನ್ನಪಟ್ಟಣ, ಆನೇಕಲ್‌, ಮುಳುಬಾಗಿಲು, ಬಂಗಾರಪೇಟೆ, ಗೌರಿಬಿದನೂರು, ಹೊಸಕೋಟೆ, ದೊಡ್ಡಬಳ್ಳಾಪುರ, ಕೆ.ಜಿ.ಎಫ್‌, ಚಳ್ಳಕೆರೆ, ಕುಣಿಗಲ್‌ , ಹರಪ್ಪನಹಳ್ಳಿ, ಹರಿಹರ, ಹಿರಿಯೂರು ಮತ್ತು ತಿಪಟೂರು ನಗರ ಉಪ ವಿಭಾಗಗಳ ವ್ಯಾಪ್ತಿಗಳಲ್ಲಿ ಆನ್ ಲೈನ್ ಸೇವೆ ಬಂದ್ ಆಗಲಿದೆ.

ಸದ್ಯ ಸಾರ್ವಜನಿಕರು ಬಳಕೆ ಮಾಡುತ್ತಿರುವ ಆನ್‌ಲೈನ್ ಸೇವೆಗಳನ್ನು ಉನ್ನತೀಕರಣ ಮಾಡಲಾಗುತ್ತಿದೆ. ಈ ಮೂಲಕ ಸಾರ್ವಜನಿಕರ ಬಿಲ್ ಪಾವತಿ, ದೂರು ದುಮ್ಮಾನ, ಹೊಸ ಸಂಪರ್ಕ ಸೇರಿದಂತೆ ಎಲ್ಲಾ ಸೇವೆಗಳು ಅತೀ ಸುಲಭವಾಗಿ ಲಭ್ಯವಾಗುವಂತೆ ಹಾಗೂ ಸರಳ ಪ್ರಕ್ರಿಯೆಗಳನ್ನು ಒಳಗೊಂಡಿರುವಂತೆ ಮಾಡಲಾಗುತ್ತಿದೆ. ಬ್ಯಾಕೆಂಡ್ ಟೀಂ ಈ ಕುರಿತು 2 ದಿನ ಕಾರ್ಯನಿರ್ವಹಸಲಿದೆ. ಹೊಸ ಇಂಟರ್‌ಪೇಸ್ ಜುಲೈ 27ರ ರಾತ್ರಿ 10 ಗಂಟೆ ಬಳಿಕ ಲಭ್ಯವಾಗಲಿದೆ.

Published On - 8:28 pm, Tue, 22 July 25

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು