AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯುತ್ ಬಿಲ್ ಪಾವತಿ ಸೇರಿ 5 ಎಸ್ಕಾಂ ಆನ್‌ಲೈನ್ ಸೇವೆ 2 ದಿನ ಸ್ಥಗಿತ

ಕರ್ನಾಟಕದ ಐದೂ ಎಸ್ಕಾಂಗಳ ವ್ಯಾಪ್ತಿಯಲ್ಲಿ ವೆಬ್ ಪೋಟರ್ ಗೆ ಸಂಬಂಧಿಸಿದಂತೆ ತುರ್ತು ತಾಂತ್ರಿಕ ನಿರ್ವಹಣಾ ಕಾಮಗಾರಿ ಕೈಗೆತ್ತಿಕೊಳ್ಳುತ್ತಿದೆ. ಈ ಹಿನ್ನೆಲೆ ಎರಡು ದಿನಗಳ ಕಾಲ ಎಸ್ಕಾಂಗಳ ವ್ಯಾಪ್ತಿಯಲ್ಲಿ ಆನ್​ ಲೈನ್​ ಸೇವೆ ಇರುವುದಿಲ್ಲ. ಹಾಗಾದ್ರೆ, ಯಾವ ದಿನದಂದು ಯಾವೆಲ್ಲಾ ಸೇವೆ ಇರುವುದಿಲ್ಲ ಎನ್ನುವ ಮಾಹಿತಿ ಈ ಕೆಳಗಿನಂತಿದೆ.

ವಿದ್ಯುತ್ ಬಿಲ್ ಪಾವತಿ ಸೇರಿ 5 ಎಸ್ಕಾಂ ಆನ್‌ಲೈನ್ ಸೇವೆ 2 ದಿನ ಸ್ಥಗಿತ
Escoms
TV9 Web
| Edited By: |

Updated on:Jul 22, 2025 | 9:58 PM

Share

ಬೆಂಗಳೂರು, (ಜುಲೈ.22): ಮಾಹಿತಿ ತಂತ್ರಜ್ಞಾನ ಉನ್ನತೀಕರಣ ಹಿನ್ನೆಲೆಯಲ್ಲಿ ಕರ್ನಾಟಕದ ಐದೂ ಎಸ್ಕಾಂಗಳ (Escom) ವ್ಯಾಪ್ತಿಯಲ್ಲಿನ ಆನ್​ ಲೈನ್​ ಸೇವೆ ಇರುವುದಿಲ್ಲ. ಜುಲೈ 25ರ ರಾತ್ರಿ 8.30 ರಿಂದ ಜುಲೈ 27ರ ರಾತ್ರಿ 10 ರವರೆಗೆ ಬೆಸ್ಕಾಂ (bescom), ಹೆಸ್ಕಾಂ (hescom), ಜೆಸ್ಕಾಂ, ಮೆಸ್ಕಾಂ ಹಾಗೂ ಸೆಸ್ಕ್ ಗಳ ವ್ಯಾಪ್ತಿಗಳ ಆನ್​ ಲೈನ್ ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಇದರಿಂದ ಆನ್​​ ಲೈನ್​​​ ಮೂಲಕ ವಿದ್ಯುತ್ ಬಿಲ್ ಪಾವತಿ, ಹೆಸರು ಬದಲಾವಣೆ, ಜಕಾತಿ ಬದಲಾವಣೆ ಮತ್ತು ಹೊಸ ಸಂಪರ್ಕ ಸೇವೆ ಲಭ್ಯವಿರುವುದಿಲ್ಲ.

ಬೆಂಗಳೂರು ನಗರ ವ್ಯಾಪ್ತಿಯ ಎಲ್ಲಾ ಉಪ ವಿಭಾಗಗಳು, ಶಿಢ್ಲಘಟ್ಟ, ಚಿಕ್ಕಬಳ್ಳಾಪುರ, ಕೋಲಾರ, ಚಿಂತಾಮಣಿ, ಕನಕಪುರ, ರಾಮನಗರ, ದಾವಣಗೆರೆ-1, ದಾವಣಗೆರೆ-2, ಚಿತ್ರದುರ್ಗ, ತುಮಕೂರು-1, ತುಮಕೂರು-2, ಸಿರಾ, ಚೆನ್ನಪಟ್ಟಣ, ಆನೇಕಲ್‌, ಮುಳುಬಾಗಿಲು, ಬಂಗಾರಪೇಟೆ, ಗೌರಿಬಿದನೂರು, ಹೊಸಕೋಟೆ, ದೊಡ್ಡಬಳ್ಳಾಪುರ, ಕೆ.ಜಿ.ಎಫ್‌, ಚಳ್ಳಕೆರೆ, ಕುಣಿಗಲ್‌ , ಹರಪ್ಪನಹಳ್ಳಿ, ಹರಿಹರ, ಹಿರಿಯೂರು ಮತ್ತು ತಿಪಟೂರು ನಗರ ಉಪ ವಿಭಾಗಗಳ ವ್ಯಾಪ್ತಿಗಳಲ್ಲಿ ಆನ್ ಲೈನ್ ಸೇವೆ ಬಂದ್ ಆಗಲಿದೆ.

ಸದ್ಯ ಸಾರ್ವಜನಿಕರು ಬಳಕೆ ಮಾಡುತ್ತಿರುವ ಆನ್‌ಲೈನ್ ಸೇವೆಗಳನ್ನು ಉನ್ನತೀಕರಣ ಮಾಡಲಾಗುತ್ತಿದೆ. ಈ ಮೂಲಕ ಸಾರ್ವಜನಿಕರ ಬಿಲ್ ಪಾವತಿ, ದೂರು ದುಮ್ಮಾನ, ಹೊಸ ಸಂಪರ್ಕ ಸೇರಿದಂತೆ ಎಲ್ಲಾ ಸೇವೆಗಳು ಅತೀ ಸುಲಭವಾಗಿ ಲಭ್ಯವಾಗುವಂತೆ ಹಾಗೂ ಸರಳ ಪ್ರಕ್ರಿಯೆಗಳನ್ನು ಒಳಗೊಂಡಿರುವಂತೆ ಮಾಡಲಾಗುತ್ತಿದೆ. ಬ್ಯಾಕೆಂಡ್ ಟೀಂ ಈ ಕುರಿತು 2 ದಿನ ಕಾರ್ಯನಿರ್ವಹಸಲಿದೆ. ಹೊಸ ಇಂಟರ್‌ಪೇಸ್ ಜುಲೈ 27ರ ರಾತ್ರಿ 10 ಗಂಟೆ ಬಳಿಕ ಲಭ್ಯವಾಗಲಿದೆ.

Published On - 8:28 pm, Tue, 22 July 25

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ