AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯುತ್ ಬಿಲ್ ಪಾವತಿ ಸೇರಿ 5 ಎಸ್ಕಾಂ ಆನ್‌ಲೈನ್ ಸೇವೆ 2 ದಿನ ಸ್ಥಗಿತ

ಕರ್ನಾಟಕದ ಐದೂ ಎಸ್ಕಾಂಗಳ ವ್ಯಾಪ್ತಿಯಲ್ಲಿ ವೆಬ್ ಪೋಟರ್ ಗೆ ಸಂಬಂಧಿಸಿದಂತೆ ತುರ್ತು ತಾಂತ್ರಿಕ ನಿರ್ವಹಣಾ ಕಾಮಗಾರಿ ಕೈಗೆತ್ತಿಕೊಳ್ಳುತ್ತಿದೆ. ಈ ಹಿನ್ನೆಲೆ ಎರಡು ದಿನಗಳ ಕಾಲ ಎಸ್ಕಾಂಗಳ ವ್ಯಾಪ್ತಿಯಲ್ಲಿ ಆನ್​ ಲೈನ್​ ಸೇವೆ ಇರುವುದಿಲ್ಲ. ಹಾಗಾದ್ರೆ, ಯಾವ ದಿನದಂದು ಯಾವೆಲ್ಲಾ ಸೇವೆ ಇರುವುದಿಲ್ಲ ಎನ್ನುವ ಮಾಹಿತಿ ಈ ಕೆಳಗಿನಂತಿದೆ.

ವಿದ್ಯುತ್ ಬಿಲ್ ಪಾವತಿ ಸೇರಿ 5 ಎಸ್ಕಾಂ ಆನ್‌ಲೈನ್ ಸೇವೆ 2 ದಿನ ಸ್ಥಗಿತ
Escoms
TV9 Web
| Edited By: |

Updated on:Jul 22, 2025 | 9:58 PM

Share

ಬೆಂಗಳೂರು, (ಜುಲೈ.22): ಮಾಹಿತಿ ತಂತ್ರಜ್ಞಾನ ಉನ್ನತೀಕರಣ ಹಿನ್ನೆಲೆಯಲ್ಲಿ ಕರ್ನಾಟಕದ ಐದೂ ಎಸ್ಕಾಂಗಳ (Escom) ವ್ಯಾಪ್ತಿಯಲ್ಲಿನ ಆನ್​ ಲೈನ್​ ಸೇವೆ ಇರುವುದಿಲ್ಲ. ಜುಲೈ 25ರ ರಾತ್ರಿ 8.30 ರಿಂದ ಜುಲೈ 27ರ ರಾತ್ರಿ 10 ರವರೆಗೆ ಬೆಸ್ಕಾಂ (bescom), ಹೆಸ್ಕಾಂ (hescom), ಜೆಸ್ಕಾಂ, ಮೆಸ್ಕಾಂ ಹಾಗೂ ಸೆಸ್ಕ್ ಗಳ ವ್ಯಾಪ್ತಿಗಳ ಆನ್​ ಲೈನ್ ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಇದರಿಂದ ಆನ್​​ ಲೈನ್​​​ ಮೂಲಕ ವಿದ್ಯುತ್ ಬಿಲ್ ಪಾವತಿ, ಹೆಸರು ಬದಲಾವಣೆ, ಜಕಾತಿ ಬದಲಾವಣೆ ಮತ್ತು ಹೊಸ ಸಂಪರ್ಕ ಸೇವೆ ಲಭ್ಯವಿರುವುದಿಲ್ಲ.

ಬೆಂಗಳೂರು ನಗರ ವ್ಯಾಪ್ತಿಯ ಎಲ್ಲಾ ಉಪ ವಿಭಾಗಗಳು, ಶಿಢ್ಲಘಟ್ಟ, ಚಿಕ್ಕಬಳ್ಳಾಪುರ, ಕೋಲಾರ, ಚಿಂತಾಮಣಿ, ಕನಕಪುರ, ರಾಮನಗರ, ದಾವಣಗೆರೆ-1, ದಾವಣಗೆರೆ-2, ಚಿತ್ರದುರ್ಗ, ತುಮಕೂರು-1, ತುಮಕೂರು-2, ಸಿರಾ, ಚೆನ್ನಪಟ್ಟಣ, ಆನೇಕಲ್‌, ಮುಳುಬಾಗಿಲು, ಬಂಗಾರಪೇಟೆ, ಗೌರಿಬಿದನೂರು, ಹೊಸಕೋಟೆ, ದೊಡ್ಡಬಳ್ಳಾಪುರ, ಕೆ.ಜಿ.ಎಫ್‌, ಚಳ್ಳಕೆರೆ, ಕುಣಿಗಲ್‌ , ಹರಪ್ಪನಹಳ್ಳಿ, ಹರಿಹರ, ಹಿರಿಯೂರು ಮತ್ತು ತಿಪಟೂರು ನಗರ ಉಪ ವಿಭಾಗಗಳ ವ್ಯಾಪ್ತಿಗಳಲ್ಲಿ ಆನ್ ಲೈನ್ ಸೇವೆ ಬಂದ್ ಆಗಲಿದೆ.

ಸದ್ಯ ಸಾರ್ವಜನಿಕರು ಬಳಕೆ ಮಾಡುತ್ತಿರುವ ಆನ್‌ಲೈನ್ ಸೇವೆಗಳನ್ನು ಉನ್ನತೀಕರಣ ಮಾಡಲಾಗುತ್ತಿದೆ. ಈ ಮೂಲಕ ಸಾರ್ವಜನಿಕರ ಬಿಲ್ ಪಾವತಿ, ದೂರು ದುಮ್ಮಾನ, ಹೊಸ ಸಂಪರ್ಕ ಸೇರಿದಂತೆ ಎಲ್ಲಾ ಸೇವೆಗಳು ಅತೀ ಸುಲಭವಾಗಿ ಲಭ್ಯವಾಗುವಂತೆ ಹಾಗೂ ಸರಳ ಪ್ರಕ್ರಿಯೆಗಳನ್ನು ಒಳಗೊಂಡಿರುವಂತೆ ಮಾಡಲಾಗುತ್ತಿದೆ. ಬ್ಯಾಕೆಂಡ್ ಟೀಂ ಈ ಕುರಿತು 2 ದಿನ ಕಾರ್ಯನಿರ್ವಹಸಲಿದೆ. ಹೊಸ ಇಂಟರ್‌ಪೇಸ್ ಜುಲೈ 27ರ ರಾತ್ರಿ 10 ಗಂಟೆ ಬಳಿಕ ಲಭ್ಯವಾಗಲಿದೆ.

Published On - 8:28 pm, Tue, 22 July 25

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ