AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರಗ್ಸ್ ಪ್ರಕರಣದಲ್ಲಿ ಯಾರ ಒತ್ತಡಕ್ಕೂ ಮಣಿಯುವುದಿಲ್ಲ, ಎಲ್ಲರನ್ನೂ ಒದ್ದು ಒಳಗೆ ಹಾಕುತ್ತೇವೆ: ಗೃಹ ಸಚಿವ ಬಸವರಾಜ ಬೊಮ್ಮಾಯಿ

ಖಂಡ್ರೆ ಪ್ರಸ್ತಾಪಕ್ಕೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಉತ್ತರ ನೀಡಿದ್ದು, ನಮ್ಮ ಸರ್ಕಾರದಿಂದ ಮಾದಕ ವಸ್ತು ನಿಯಂತ್ರಣಕ್ಕೆ ಕ್ರಮ ತೆಗೆದುಕೊಳ್ಳಲಾಗುತ್ತಿದೆ. ಈ ಹಿಂದೆ ಎಫ್‌ಎಸ್‌ಎಲ್​ನಿಂದ ಡ್ರಗ್ ಕೇಸ್​ಗಳ ವರದಿ ಬರುವುದು ಸಮಯ ಹಿಡಿಯುತ್ತಿತ್ತು. ಸದ್ಯ ವಿಧಿವಿಜ್ಞಾನ ಪ್ರಯೋಗಾಲಯವನ್ನು ಆಧುನೀಕರಣ ಮಾಡಿದ್ದು, ಎಫ್‌ಎಸ್‌ಎಲ್‌ ವರದಿ ಕಾಲಮಿತಿಯಲ್ಲಿ ಬರುವಂತೆ ಕ್ರಮಕೈಗೊಳ್ಳುತ್ತೇವೆ ಎಂದು ಹೇಳಿದರು.

ಡ್ರಗ್ಸ್ ಪ್ರಕರಣದಲ್ಲಿ ಯಾರ ಒತ್ತಡಕ್ಕೂ ಮಣಿಯುವುದಿಲ್ಲ, ಎಲ್ಲರನ್ನೂ ಒದ್ದು ಒಳಗೆ ಹಾಕುತ್ತೇವೆ: ಗೃಹ ಸಚಿವ ಬಸವರಾಜ ಬೊಮ್ಮಾಯಿ
ಈಶ್ವರ ಖಂಡ್ರೆ ಮತ್ತು ಗೃಹ ಸಚಿವ ಬಸವರಾಜ ಬೊಮ್ಮಾಯಿ.
preethi shettigar
| Edited By: |

Updated on: Dec 08, 2020 | 1:22 PM

Share

ಬೆಂಗಳೂರು: ರಿಕ್ರಿಯೇಷನ್ ಕ್ಲಬ್‌ಗಳ ಹೆಸರಿನಲ್ಲಿ ಕಲಬುರಗಿ ಮತ್ತು ಬೀದರ್‌ನಲ್ಲಿ ಡ್ರಗ್ಸ್‌ ದಂಧೆ ನಡೆಯುತ್ತಿದೆ. ಇದಕ್ಕೆ ಸಂಬಂಧಪಟ್ಟಂತೆ ವಿಧಿವಿಜ್ಞಾನ ಪ್ರಯೋಗಾಲಯ ವಿಭಾಗ (ಎಫ್‌ಎಸ್‌ಎಲ್‌) ವರದಿಗಳು ಕೂಡ ವಿಳಂಬದ ಹಾದಿಯನ್ನು ಹಿಡಿದಿದೆ ಎಂದು ಸದನದಲ್ಲಿ ಕಾಂಗ್ರೆಸ್‌ ಶಾಸಕ ಈಶ್ವರ ಖಂಡ್ರೆ ಆರೋಪ ಮಾಡಿದ್ದಾರೆ.

ಖಂಡ್ರೆ ಆರೋಪಕ್ಕೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಉತ್ತರ ನೀಡಿದ್ದು, ನಮ್ಮ ಸರ್ಕಾರದಿಂದ ಮಾದಕ ವಸ್ತು ನಿಯಂತ್ರಣಕ್ಕೆ ಕ್ರಮ ತೆಗೆದುಕೊಳ್ಳಲಾಗುತ್ತಿದೆ. ಈ ಹಿಂದೆ ಎಫ್‌ಎಸ್‌ಎಲ್​ನಿಂದ ಡ್ರಗ್ ಕೇಸ್​ಗಳ ವರದಿ ಬರಲು ಸಮಯ ಹಿಡಿಯುತ್ತಿತ್ತು. ಸದ್ಯ ವಿಧಿವಿಜ್ಞಾನ ಪ್ರಯೋಗಾಲಯವನ್ನು ಆಧುನೀಕರಣ ಮಾಡಿದ್ದು, ಎಫ್‌ಎಸ್‌ಎಲ್‌ ವರದಿ ಕಾಲಮಿತಿಯಲ್ಲಿ ಬರುವಂತೆ ಕ್ರಮಕೈಗೊಳ್ಳುತ್ತೇವೆ ಎಂದು ಹೇಳಿದರು.

ಆಂಧ್ರಪ್ರದೇಶ, ತೆಲಂಗಾಣ ಗಡಿಯಲ್ಲಿ ರಿಕ್ರಿಯೇಷನ್ ಕ್ಲಬ್ ಇರುವುದು ಸರ್ಕಾರದ ಗಮನಕ್ಕೆ ಬಂದಿದೆ. ಅಂತರಾಷ್ಟ್ರದಿಂದ ಬರುವ ಡ್ರಗ್ಸ್​ಗೆ ನಿರ್ಬಂಧ ಹಾಕಿದ್ದೇವೆ. ಜೊತೆಗೆ ಈಗಾಗಲೇ 20ಕ್ಕೂ ಹೆಚ್ಚು ಡಾರ್ಕ್ ವೆಬ್‌ ಪ್ರಕರಣಗಳನ್ನ ಭೇದಿಸಿದ್ದು, ಡ್ರಗ್ಸ್ ಪ್ರಕರಣಗಳಲ್ಲಿ ಯಾರ ಒತ್ತಡಕ್ಕೂ ನಾವು ಮಣಿಯುವುದಿಲ್ಲ, ಎಲ್ಲರನ್ನೂ ಒದ್ದು ಒಳಗೆ ಹಾಕುತ್ತೇವೆ ಎಂದು ಸಚಿವ ಬೊಮ್ಮಾಯಿ ಹೇಳಿದರು.

ಎನ್‌ಡಿಪಿಎಸ್ ಕಾಯ್ದೆಗೆ ಕೇಂದ್ರ ತಿದ್ದುಪಡಿ ತರಬೇಕಿದೆ. ಸದ್ಯ ಈ ಕಾಯ್ದೆಯಲ್ಲಿ ತನಿಖಾಧಿಕಾರಿಗೆ ಹಲವು ನಿರ್ಬಂಧಗಳಿವೆ. ಆದರೂ ನಮ್ಮ ವ್ಯಾಪ್ತಿಯಲ್ಲಿ ತನಿಖಾಧಿಕಾರಿಗೆ ತನಿಖೆ ಮಾಡಲು ಅನುಕೂಲ‌ ಆಗುವ ನಿಯಮಗಳನ್ನು ಅಳವಡಿಸಿದ್ದೇವೆ ಎಂದು ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.

ಸಿದ್ದರಾಮಯ್ಯ ತನಿಖೆಯ ದಾರಿ ತಪ್ಪಿಸುವ ಪ್ರಯತ್ನ ಮಾಡುತ್ತಿದ್ದಾರೆ: ಬೊಮ್ಮಾಯಿ

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ