Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಈ ಎರಡು ದಿನ ಎಸ್ಕಾಂ ಆನ್​ಲೈನ್ ಸೇವೆ ಸ್ಥಗಿತ, ಕಾರಣ ಇಲ್ಲಿದೆ

ಕಾಂಗ್ರೆಸ್ ಸರ್ಕಾರ ಬಂದ ನಂತರ ಉಚಿತ ವಿದ್ಯುತ್ ಯೋಜನೆ ಜಾರಿಗೊಳಿಸಿದೆ. ಅದರೆ, ಬಿಲ್ ದರ ಹೆಚ್ಚಳವಾಗಿದ್ದಲ್ಲದೆ, ಲೋಡ್ ಶೆಡ್ಡಿಂಗ್ ಸಮಸ್ಯೆ ಉಂಟಾಗಿದೆ. ರಾಜ್ಯದಾದ್ಯಂತ ಪವರ್ ಕಟ್​ನಿಂದ ಜನರು ಆಕ್ರೋಶಗೊಂಡಿದ್ದಾರೆ. ಈ ನಡುವೆ, ರಾಜ್ಯದಲ್ಲಿ ಈ ಎರಡು ದಿನ ಎಸ್ಕಾಂ ಆನ್​ಲೈನ್ ಸೇವೆ ಸಿಗುವುದಿಲ್ಲ. ಕಾರಣ ಇಲ್ಲಿದೆ.

ಕರ್ನಾಟಕದಲ್ಲಿ ಈ ಎರಡು ದಿನ ಎಸ್ಕಾಂ ಆನ್​ಲೈನ್ ಸೇವೆ ಸ್ಥಗಿತ, ಕಾರಣ ಇಲ್ಲಿದೆ
ಐದು ಎಸ್ಕಾಂಗಳ ವ್ಯಾಪ್ತಿಯಲ್ಲಿ ನವೆಂಬರ್ 24 ಮತ್ತು 26 ರಂದು ಎಸ್ಕಾಂ ಆನ್​ಲೈನ್ ಸೇವೆ ಗ್ರಾಹಕರಿಗೆ ಲಭ್ಯವಿರುವುದಿಲ್ಲ (ಸಾಂದರ್ಭಿಕ ಚಿತ್ರ)Image Credit source: Getty Images
Follow us
Poornima Agali Nagaraj
| Updated By: Rakesh Nayak Manchi

Updated on: Nov 18, 2023 | 9:57 AM

ಬೆಂಗಳೂರು, ನ.18: ಕಾಂಗ್ರೆಸ್ ಸರ್ಕಾರ ಬಂದ ನಂತರ ಉಚಿತ ವಿದ್ಯುತ್ ಯೋಜನೆ ಜಾರಿಗೊಳಿಸಿದೆ. ಅದರೆ, ಬಿಲ್ ದರ ಹೆಚ್ಚಳವಾಗಿದ್ದಲ್ಲದೆ, ಲೋಡ್ ಶೆಡ್ಡಿಂಗ್ ಸಮಸ್ಯೆ ಉಂಟಾಗಿದೆ. ರಾಜ್ಯದಾದ್ಯಂತ ಪವರ್ ಕಟ್​ನಿಂದ ಜನರು ಆಕ್ರೋಶಗೊಂಡಿದ್ದಾರೆ. ಈ ನಡುವೆ, ರಾಜ್ಯದ ಐದು ಎಸ್ಕಾಂಗಳ ವ್ಯಾಪ್ತಿಯಲ್ಲಿ ನವೆಂಬರ್ 24 ಮತ್ತು ನವೆಂಬರ್ 26 ರಂದು ಎಸ್ಕಾಂ ಆನ್​ಲೈನ್ ಸೇವೆ (ESKOM online service) ಗ್ರಾಹಕರಿಗೆ ಲಭ್ಯವಿರುವುದಿಲ್ಲ.

ರಾಜ್ಯದ ಐದೂ ಎಸ್ಕಾಂಗಳ ವ್ಯಾಪ್ತಿಯಲ್ಲಿ ವೆಬ್ ಪೋಟರ್ಲ್​​ಗೆ ಸಂಬಂಧಿಸಿದಂತೆ ತುರ್ತು ತಾಂತ್ರಿಕ ನಿರ್ವಹಣಾ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವ ಹಿನ್ನೆಲೆ ಈ ಎರಡು ದಿನದಂದು ಎಸ್ಕಾಂ ಆನ್​ಲೈನ್ ಸೇವೆ ಸ್ಥಗಿತಗೊಳಿಸಲಾಗಿದೆ.

ಇದನ್ನೂ ಓದಿ: ಅಕ್ರಮ ವಿದ್ಯುತ್ ಸಂಪರ್ಕ: ಬೆಸ್ಕಾಂಗೆ ದಂಡ ಪಾವತಿಸಿದ ಹೆಚ್​​ಡಿ ಕುಮಾರಸ್ವಾಮಿ, ಎಷ್ಟು ಗೊತ್ತಾ?

ನ.24 ರಂದು ಮಧ್ಯಾಹ್ನ 12 ಗಂಟೆಯಿಂದ ನ.26 ರಂದು ಬೆಳಗ್ಗೆ 11.59 ಗಂಟೆವರೆಗೆ ಎಲ್ಲಾ ರೀತಿಯ ಆನ್ ಲೈನ್ ಸೇವೆ ಸ್ಥಗಿತಗೊಳ್ಳಲಿದೆ. ಈ ಬಗ್ಗೆ ಬೆಸ್ಕಾಂ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಸಾರ್ವಜನಿಕರು ಸಹಕಾರ ನೀಡುವಂತೆ ಕೋರಿದೆ.

ವಿವಿಧ ಪೋರ್ಟಲ್​ಗಳಲ್ಲಿರುವ ಡೇಟಾಗಳನ್ನು ನೂತನ ಪೋರ್ಟಲ್​ಗೆ ವರ್ಗಾವಣೆ ಮಾಡುವ ಕೆಲಸ ನಡೆಯುವ ಹಿನ್ನೆಲೆ ಆನ್ ಲೈನ್ ಸೇವೆ ಸ್ಥಗಿತಗೊಳಿಸಲಾಗುತ್ತಿದೆ. ಅದರಂತೆ, ಈ ಎರಡು ದಿನ ವಿದ್ಯುತ್ ಬಿಲ್ ಪಾವತಿ, ಹೊಸ ಸಂಪರ್ಕಕ್ಕೆ ಆನ್ ಲೈನ್ ಅರ್ಜಿ ಸಲ್ಲಿಕೆ ಸೇವೆ ಲಭ್ಯವಿರುವುದಿಲ್ಲ. ಇದರಿಂದಾಗಿ ಬೆಸ್ಕಾಂ, ಚೆಸ್ಕ್ ಮೆಸ್ಕಾಂ, ಜೆಸ್ಕಾಂ, ಹೆಸ್ಕಾಂ ವ್ಯಾಪ್ತಿಯ ಜನರಿಗೆ ಸಮಸ್ಯೆಯಾಗಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಕರ್ನಾಟಕದಷ್ಟು ಸುಂದರ ಸ್ಥಳ ಮತ್ತು ಜನ ಬೇರೆಲ್ಲೂ ಇಲ್ಲ: ಮೋನಿಕ ಸತ್ಯ
ಕರ್ನಾಟಕದಷ್ಟು ಸುಂದರ ಸ್ಥಳ ಮತ್ತು ಜನ ಬೇರೆಲ್ಲೂ ಇಲ್ಲ: ಮೋನಿಕ ಸತ್ಯ
ಹಿಂದಿ ಬದಲು ಇಂಗ್ಲಿಷ್​​ನಲ್ಲೇ ಭಯೋತ್ಪಾದನೆ ವಿರುದ್ಧ ಮೋದಿ ಸಂದೇಶ ರವಾನೆ
ಹಿಂದಿ ಬದಲು ಇಂಗ್ಲಿಷ್​​ನಲ್ಲೇ ಭಯೋತ್ಪಾದನೆ ವಿರುದ್ಧ ಮೋದಿ ಸಂದೇಶ ರವಾನೆ