AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂದಿನ ವರ್ಷಗಳಲ್ಲಿ ಎತ್ತಿನಹೊಳೆ ಯೋಜನೆಯನ್ನು ಕಾರ್ಯಗತಗೊಳಿಸಲಾಗುವುದು: ಸಿದ್ದರಾಮಯ್ಯ

ನೆಲಮಂಗಲದಲ್ಲಿ ಬೀರೇಶ್ವರ ಸ್ವಾಮಿ ದೇವಸ್ಥಾನ ಅಭಿವೃದ್ಧಿ ಸೇವಾ ಸಮಿತಿ ವತಿಯಿಂದ ಶ್ರೀ ಬೀರೇಶ್ವರ ಸಮುದಾಯ ಭವನ ಮತ್ತು ಪ್ರಾರ್ಥನಾ ಮಂದಿರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು. ಅಲ್ಲದೆ, ನೆಲಮಂಗಲದವರೆಗೆ ಮೆಟ್ರೋ ವಿಸ್ತರಣೆ ಮಾಡುವ ಬಗ್ಗೆ ಸರ್ಕಾರ ಪರಿಶೀಲಿಸಲಿ ಎಂದು ತಿಳಿಸಿದರು.

ಮುಂದಿನ ವರ್ಷಗಳಲ್ಲಿ ಎತ್ತಿನಹೊಳೆ ಯೋಜನೆಯನ್ನು ಕಾರ್ಯಗತಗೊಳಿಸಲಾಗುವುದು: ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯImage Credit source: ANI/File
ಬಿ ಮೂರ್ತಿ, ನೆಲಮಂಗಲ
| Edited By: Rakesh Nayak Manchi|

Updated on: Dec 03, 2023 | 5:58 PM

Share

ನೆಲಮಂಗಲ, ಡಿ.3: ಬೆಂಗಳೂರು ಗ್ರಾಮಾಂತರ ಪ್ರದೇಶಗಳಿಗೆ ಕುಡಿಯುವ ನೀರಿನ ಬವಣೆ ನೀಗಿಸಲು ಮುಂದಿನ ವರ್ಷಗಳಲ್ಲಿ ಎತ್ತಿನಹೊಳೆ (Ettinahole) ಯೋಜನೆಯನ್ನು ಕಾರ್ಯಗತಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿದರು. ನೆಲಮಂಗಲದಲ್ಲಿ ಬೀರೇಶ್ವರ ಸ್ವಾಮಿ ದೇವಸ್ಥಾನ ಅಭಿವೃದ್ಧಿ ಸೇವಾ ಸಮಿತಿ ವತಿಯಿಂದ ಶ್ರೀ ಬೀರೇಶ್ವರ ಸಮುದಾಯ ಭವನ ಮತ್ತು ಪ್ರಾರ್ಥನಾ ಮಂದಿರ ಉದ್ಘಾಟಿಸಿ ಅವರು ಮಾತನಾಡಿದರು.

ನೆಲಮಂಗಲ ಪಟ್ಟಣಕ್ಕೆ ಕುಡಿಯುವ ನೀರಿನ ಬೇಡಿಕೆ ಇದೆ. ನೆಲಮಂಗಲ ಸುತ್ತಮುತ್ತಲ ಪ್ರದೇಶಗಳ ಕೆರೆಗಳನ್ನು ತುಂಬುವ ವೃಷಭಾವತಿ ಯೋಜನೆಯನ್ನು ಪೂರ್ಣಗೊಳಿಸಲಾಗುವುದು. ಈ ಯೋಜನೆಯಿಂದ ನೀರಿನ ಅಂತರ್ಜಲ ಮಟ್ಟ ಹೆಚ್ಚಲಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಮೆಟ್ರೋ ಸಂಪರ್ಕವನ್ನು ನೆಲಮಂಗಲದವರೆಗೂ ವಿಸ್ತರಿಸುವ ಯೋಜನೆ ಸರ್ಕಾರ ಪರಿಶೀಲಿಸಲಿದೆ. ನೆಲಮಂಗಲದ ಒಳಚರಂಡಿ ವ್ಯವಸ್ಥೆ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಅಭಿವೃದ್ಧಿಗೊಳಿಸಲಾಗುವುದು. ಹಣ ಬಿಡುಗಡೆ ಮಾಡಿ ನಾನೇ ನೆಲಮಂಗಲಕ್ಕೆ ಬಂದು ಗುದ್ದಲಿ ಪೂಜೆ ಮಾಡುತ್ತೇನೆ ಎಂದರು.

ಜಾತಿಯ ಎಲ್ಲೆಯ ಮೀರಿ ಸಮಾಜ ಬೆಳೆಯಬೇಕು

ಕುರುಬರು ಸಾಮಾನ್ಯವಾಗಿ ಶೈವ ಪಂಥದವರು. ಬೀರೇಶ್ವರ ಕುರುಬ ಸಮುದಾಯದ ಕುಲದೇವರು. ಇವರು ದೈವಭಕ್ತರು. ದೇವನೊಬ್ಬ ನಾಮ ಹಲವು. ನಾವು ಇತರರಿಗೆ ಒಳಿತು ಬಯಸಿದರೆ ಭಗವಂತನೂ ಒಳ್ಳೆಯದನ್ನೇ ಮಾಡುತ್ತಾನೆ. ಮನುಷ್ಯ ಮತ್ತೊಮ್ಮ ಮನುಷ್ಯನನ್ನು ದ್ವೇಷಿಸಬಾರದು. ಯಾವುದೇ ಜಾತಿ ಮತ ಧರ್ಮದ ಸೇರಿದ ಮನುಷ್ಯರನ್ನು ನಾವು ಗೌರವದಿಂದ ಕಾಣುವುದೇ, ದೇವರಿಗೆ ಅರ್ಪಿಸುವ ಗೌರವ ಎಂದು ಸಿದ್ದರಾಮಯ್ಯ ಹೇಳಿದರು.

ಇದನ್ನೂ ಓದಿ: Leelavathi: ನಟಿ ಲೀಲಾವತಿ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ

ಸಮಾಜದ ತಾರತಮ್ಯ ತೊಲಗಿ, ಎಲ್ಲರೂ ಮನುಷ್ಯರಾಗಿ ಬಾಳಬೇಕು ಎಂದು ಕನಕದಾಸರು ಬಯಸಿದ್ದರು. ಜಾತಿಯ ಎಲ್ಲೆಯ ಮೀರಿ ಸಮಾಜ ಬೆಳೆಯಬೇಕು. ಕನಕದಾಸರು ಒಂದು ಜಾತಿಗೆ ಸೀಮತವಾಗದೇ ವಿಶ್ವ ಮಾನವ ಎಂದು ಕರೆಸಿಕೊಂಡರು. ನಾವೆಲ್ಲರೂ ವಿಶ್ವಮಾನವರಾಗುವ ದಾರಿಯಲ್ಲಿ ನಡೆಯಬೇಕು. ಕುವೆಂಪುರವರು ಸರ್ವಜನಾಂಗದ ಶಾಂತಿಯ ತೋಟದಂತಹ ಸಮಾಜವನ್ನು ನಿರ್ಮಿಸಬೇಕು ಎಂದರು.

ಗ್ಯಾರಂಟಿಗಳಿಂದ ಜನರ ಆರ್ಥಿಕತೆ ಹೆಚ್ಚುತ್ತದೆ

ಮುಖ್ಯಮಂತ್ರಿಯಾಗಿ ಎಲ್ಲ ಧರ್ಮದ ಬಡವರಿಗೆ ಆರ್ಥಿಕ, ಸಾಮಾಜಿಕ ಶಕ್ತಿಯನ್ನು ತುಂಬುವುದು ನನ್ನ ಗುರಿಯಾಗಿದೆ. ಬಡವರಿಗೆ ಅಕ್ಕಿ, ಉಚಿತ ವಿದ್ಯುತ್, ಶಕ್ತಿ ಯೋಜನೆ, ಗೃಹಲಕ್ಷ್ಮಿ ಯೋಜನೆಗಳು ಯಾವುದೇ ಜಾತಿಧರ್ಮಕ್ಕೆ ಸೀಮಿತವಾಗಿಲ್ಲ. 1.14 ಕೋಟಿ ಮಹಿಳೆಯರು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಾಗಿದ್ದಾರೆ. ಗ್ಯಾರಂಟಿ ಯೋಜನೆಗಳಿಂದ ಜನರ ಕೈಗೆ ಬರುವ ದುಡ್ಡು, ಅವರ ಇತರೆ ಅವಶ್ಯಕತೆಗಳನ್ನು ಪೂರೈಸಿ, ಆರ್ಥಿಕತೆ ಹೆಚ್ಚುತ್ತದೆ ಎಂದರು.

ಕೇವಲ ಶ್ರೀಮಂತರಲ್ಲದೇ, ಬಡವರು ಊಟಮಾಡುವಂತಾಗಬೇಕು. ಕರ್ನಾಟಕ ಹಸಿವುಮುಕ್ತ ರಾಜ್ಯವಾಗಬೇಕು. 1.30 ಕೋಟಿ ಕುಟುಂಬಗಳಿಗೆ ಗ್ಯಾರಂಟಿ ಯೋಜನೆಗಳಿಂದ ಲಾಭವಾಗಿದೆ. ಸಮಾಜ ನಿಂತ ನೀರಾಗದೆ ಬದಲಾವಣೆಯಾಗಬೇಕು. ಸಮಾಜಕ್ಕೆ ಚಲನೆ ದೊರೆತಾಗ ಆರ್ಥಿಕತೆ ಚುರುಕಾಗುತ್ತದೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ