AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

10ನೇ ತರಗತಿ ಅರ್ಧವಾರ್ಷಿಕ ಪರೀಕ್ಷೆಗಳ ಮೌಲ್ಯಮಾಪನ; ಕರ್ನಾಟಕ ಸರ್ಕಾರದ ಮನವಿ ತಿರಸ್ಕರಿಸಿದ ಸರ್ವೋಚ್ಚ ನ್ಯಾಯಾಲಯ

Supreme court reject plea from Karnataka govt: ಹತ್ತನೇ ತರಗತಿಯ ಅರ್ಧವಾರ್ಷಿಕ ಪರೀಕ್ಷೆಯ ಮೌಲ್ಯಮಾಪನ ವಿಚಾರದಲ್ಲಿ ಅಕ್ಟೋಬರ್ 21ರಂದು ನೀಡಿದ್ದ ಆದೇಶವನ್ನು ಮಾರ್ಪಡಿಸಲು ಸುಪ್ರೀಂಕೋರ್ಟ್ ನಿರಾಕರಿಸಿದೆ. ಈ ಸಂಬಂಧ ಕರ್ನಾಟಕ ಸರ್ಕಾರದ ಅರ್ಜಿಯನ್ನು ವಿಚಾರಣೆಗೆ ಪರಿಗಣಿಸಲು ಸುಪ್ರೀಂ ನ್ಯಾಯಪೀಠ ನಿರಾಕರಿಸಿದೆ.

10ನೇ ತರಗತಿ ಅರ್ಧವಾರ್ಷಿಕ ಪರೀಕ್ಷೆಗಳ ಮೌಲ್ಯಮಾಪನ; ಕರ್ನಾಟಕ ಸರ್ಕಾರದ ಮನವಿ ತಿರಸ್ಕರಿಸಿದ ಸರ್ವೋಚ್ಚ ನ್ಯಾಯಾಲಯ
ಪರೀಕ್ಷೆ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Nov 27, 2024 | 5:04 PM

Share

ನವದೆಹಲಿ, ನವೆಂಬರ್ 27: ಹತ್ತನೇ ತರಗತಿಯ ಅರ್ಧವಾರ್ಷಿಕ ಪರೀಕ್ಷೆಯ ಮೌಲ್ಯಮಾಪನಕ್ಕೆ ಅವಕಾಶ ಪಡೆಯಲು ಕರ್ನಾಟಕ ಸರ್ಕಾರದ ಪ್ರಯತ್ನ ಮತ್ತೊಮ್ಮೆ ವಿಫಲವಾಗಿದೆ. ಈ ವಿಚಾರದಲ್ಲಿ ಅಕ್ಟೋಬರ್ 21ರಂದು ನೀಡಿದ್ದ ತನ್ನ ಆದೇಶವನ್ನು ಮಾರ್ಪಡಿಸುವಂತೆ ಕರ್ನಾಟಕ ಸರ್ಕಾರ ಮಾಡಿಕೊಂಡ ಮನವಿಯನ್ನು ಸರ್ವೋಚ್ಚ ನ್ಯಾಯಾಲಯ ನಿನ್ನೆ ಮಂಗಳವಾರ ತಿರಸ್ಕರಿಸಿದೆ. ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು ಸತೀಶ್ ಚಂದ್ರ ಶರ್ಮಾ ಅವರಿದ್ದ ಸುಪ್ರೀಂ ನ್ಯಾಯಪೀಠ ಈ ತೀರ್ಮಾನ ಮಾಡಿದೆ.

2024-25ರ ಶೈಕ್ಷಣಿಕ ವರ್ಷದ 10ನೇ ತರಗತಿಗೆ ಅರ್ಧವಾರ್ಷಿಕ ಪರೀಕ್ಷೆ ಈಗಾಗಲೇ ನಡೆಸಲಾಗಿದೆ. ಅದರ ಮೌಲ್ಯಾಂಕಗಳನ್ನು ಪ್ರಕಟಿಸಲು ಸುಪ್ರೀಂಕೋರ್ಟ್ ತಡೆಹಿಡಿದಿದೆ. ಈ ಮೌಲ್ಯಾಂಕಗಳಿಂದ ಹತ್ತನೇ ತರಗತಿಯ ಒಟ್ಟಾರೆ ಫಲಿತಾಂಶದ ಮೇಲೆ ಏನೂ ಪರಿಣಾಮ ಬೀರುವುದಿಲ್ಲ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದ್ದು, ಕರ್ನಾಟಕ ಸರ್ಕಾರದ ಅರ್ಜಿಯನ್ನು ಪರಿಗಣಿಸದೇ ಇರಲು ನಿರ್ಧರಿಸಿತು.

ಇದನ್ನೂ ಓದಿ: ಖಾಸಗಿ ವಿವಿಗಳ ಮಂಡಳಿಗಳಲ್ಲಿ ಸರ್ಕಾರಿ ಪ್ರತಿನಿಧಿ: ಕಾನೂನು ತಿದ್ದುಪಡಿಗೆ ರಾಜ್ಯ ಸರ್ಕಾರ ಮುಂದು

ರಾಜ್ಯ ಸರ್ಕಾರವು ಕಳೆದ ವರ್ಷದ ಅಕ್ಟೋಬ್​ನಲ್ಲಿ 5, 8 ಮತ್ತು 9ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆಗಳನ್ನು ನಡೆಸಲು ನಿರ್ಧರಿಸಿತ್ತು. ಹೈಕೋರ್ಟ್​ನ ಏಕಸದಸ್ಯ ನ್ಯಾಯಪೀಠವು 2024ರ ಮಾರ್ಚ್ 6ರಂದು ರಾಜ್ಯ ಸರ್ಕಾರದ ನಿರ್ಧಾರಕ್ಕೆ ತಡೆ ನೀಡಿತು. ಇದಾದ ಬಳಿಕ ಹೈಕೋರ್ಟ್ ವಿಭಾಗೀಯ ಪೀಠವೊಂದು ಏಕಸದಸ್ಯ ಪೀಠದ ತೀರ್ಪಿಗೆ ತಡೆ ನೀಡಿ, ಬೋರ್ಡ್ ಪರೀಕ್ಷೆಗಳನ್ನು ನಡೆಸಲು ಸರ್ಕಾರಕ್ಕೆ ಅನುಮತಿ ನೀಡಿ ಮಧ್ಯಂತರ ಆದೇಶ ಹೊರಡಿಸಿತು.

ಮಾನ್ಯತೆ ಪಡೆದ ಅನುದಾನರಹಿತ ಶಾಲೆಗಳು ರಾಜ್ಯ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆಹೋಗಿದ್ದವು. ಅಕ್ಟೋಬರ್ 21ರಂದು ಸುಪ್ರೀಂಕೋರ್ಟ್ ನ್ಯಾಯಪೀಠವು ಮುಂದಿನ ಆದೇಶ ಬರುವವರೆಗೂ 8, 9 ಮತ್ತು 10ನೇ ತರಗತಿ ಅರ್ಧವಾರ್ಷಿಕ ಪರೀಕ್ಷೆ ನಡೆಸದಂತೆ ಮತ್ತು ಫಲಿತಾಂಶ ಪ್ರಕಟಿಸದಂತೆ ರಾಜ್ಯ ಸರ್ಕಾರಕ್ಕೆ ನಿರ್ಬಂಧಿಸಿತು. ಈ ವಿಚಾರದಲ್ಲಿ ಸರ್ಕಾರವನ್ನೂ ಕೋರ್ಟ್ ತರಾಟೆಗೆ ತೆಗೆದುಕೊಂಡಿತ್ತು.

ಇದನ್ನೂ ಓದಿ: ಎಂಜಿ ರಸ್ತೆಯ ಎಚ್​ಎಸ್​ಬಿಸಿ ಬ್ರ್ಯಾಂಚ್​ಗೆ ಬಾಂಬ್ ಬೆದರಿಕೆಯ ಇಮೇಲ್

ಸದ್ಯ, ಅರ್ಧವಾರ್ಷಿಕ ಪರೀಕ್ಷೆಯ ಮೌಲ್ಯಮಾಪನ ಮಾಡುವ ಕರ್ನಾಟಕ ಸರ್ಕಾರದ ಅರ್ಜಿಯನ್ನು ಸದ್ಯಕ್ಕೆ ಪರಿಗಣಿಸಲು ಸುಪ್ರೀಂಕೋರ್ಟ್ ನಿರಾಕರಿಸಿದೆಯಾದರೂ ಜನವರಿಯಲ್ಲಿ ಇದನ್ನು ಪರಿಶೀಲಿಸಲಾಗುವುದು ಎಂದು ತಿಳಿಸಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?