AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಪ್ಪನ ಅಗ್ರಹಾರ ಜೈಲಿನಲ್ಲಿ‌ ಮತ್ತೆ ಮೊಬೈಲ್​ ಸೌಂಡ್: ಎಷ್ಟೇ ರೇಡ್ ಮಾಡಿದ್ರೂ ಅದೇ ರಾಗ ಅದೇ ಹಾಡು!

ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್ ಫೋನ್‌ಗಳ ಬಳಕೆ ಮತ್ತೆ ಹೆಚ್ಚಾಗಿದೆ. ಖೈದಿಗಳು ಹಣಕ್ಕಾಗಿ ಬೆದರಿಕೆ ಹಾಕುವುದು ಮತ್ತು ಡ್ರಗ್ಸ್ ವ್ಯಾಪಾರ ಮಾಡುವುದು ಸಾಮಾನ್ಯವಾಗಿದೆ. ಸೈಕೋ ವಿಶ್ವನಾಥ್ ಎಂಬ ರೌಡಿ ಜೈಲಿನಿಂದಲೇ ವ್ಯಾಪಾರಿಯೊಬ್ಬರಿಗೆ ಬೆದರಿಕೆ ಹಾಕಿದ್ದಾನೆ. ಇನ್ನೊಬ್ಬ ಖೈದಿ ಡ್ರಗ್ಸ್ ಪೆಡ್ಲಿಂಗ್‌ನಲ್ಲಿ ತೊಡಗಿದ್ದಾನೆ. ಜೈಲಿನಲ್ಲಿನ ಭದ್ರತಾ ವ್ಯವಸ್ಥೆಯಲ್ಲಿನ ಲೋಪದೋಷಗಳು ಇದಕ್ಕೆ ಕಾರಣ ಎಂದು ಅನುಮಾನಿಸಲಾಗಿದೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿ‌ ಮತ್ತೆ ಮೊಬೈಲ್​ ಸೌಂಡ್: ಎಷ್ಟೇ ರೇಡ್ ಮಾಡಿದ್ರೂ ಅದೇ ರಾಗ ಅದೇ ಹಾಡು!
ಪರಪ್ಪನ ಅಗ್ರಹಾರ ಜೈಲಿನಲ್ಲಿ‌ ಮತ್ತೆ ಮೊಬೈಲ್​ ಸೌಂಡ್: ಎಷ್ಟೇ ರೇಡ್ ಮಾಡಿದ್ರೂ ‌ ಅದೇ ರಾಗ ಅದೇ ಹಾಡು...!
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Dec 18, 2024 | 3:58 PM

ಬೆಂಗಳೂರು, ಡಿಸೆಂಬರ್​ 18: ಸೆಂಟ್ರಲ್ ಜೈಲ್ ಪರಪ್ಪನ ಅಗ್ರಹಾರದಲ್ಲಿ (Parappana Agrahara) ದರ್ಶನ್ ರಾಜಾತಿಥ್ಯ ಕೇಸ್​ ಬಳಿಕ ಜೈಲ್​ನಲ್ಲಿ ಸಾಕಷ್ಟು ಮೊಬೈಲ್​ ಪತ್ತೆ ಆಗಿದ್ದವು. ಸಿಸಿಬಿ ಅಧಿಕಾರಿಗಳು ರೇಡ್ ಮಾಡಿ, ಕಟ್ಟುನಿಟ್ಟಿನ ಕ್ರಮಕೈಗೊಂಡಿದ್ದರೂ ಮೊಬೈಲ್​ ಬಳಕೆ ನಿಯಂತ್ರಣಕ್ಕೆ ಬಂದಿರಲಿಲ್ಲ. ಇದೀಗ ಪರಪ್ಪನ ಅಗ್ರಹಾರದಲ್ಲಿ ಮತ್ತೆ ಮೊಬೈಲ್​​ ಬಳಕೆ ಮಾಡಲಾಗುತ್ತಿದ್ದು, ಆ ಮೂಲಕ ಆರೋಪಿಗಳು ಜೈಲಿನಿಂದಲೇ ಹಣಕ್ಕಾಗಿ ಧಮ್ಕಿ ಮತ್ತು ಡ್ರಗ್ ಡೀಲಿಂಗ್ ಮಾಡುತ್ತಿದ್ದಾರೆ.

ಸೆಂಟ್ರಲ್ ಜೈಲ್​ನಲ್ಲಿ ಇದೀಗ ಮತ್ತೆ ಮೊಬೈಲ್​​ ಬಳಕೆಯಿಂದಾಗಿ ರೌಡಿಗಳು ಮತ್ತು ಡ್ರಗ್ಸ್​​ ಡೀಲರ್​ಗಳ ಆಟಾಟೋಪ ಮುಂದುವರಿದಿದೆ. ಆರೋಪಿಗಳು, ಶಿಕ್ಷೆಗೆ ಒಳಪಟ್ಟ ಖೈದಿಗಳಿಂದ ಮೊಬೈಲ್ ಬಳಕೆ ನಿತ್ಯ ನಿರಂತರವಾಗಿದೆ.

ಇದನ್ನೂ ಓದಿ: ಜೈಲಿನಲ್ಲಿ ದರ್ಶನ್​ಗೆ ರಾಜಾತಿಥ್ಯ ಕೇಸ್: ಮೊಬೈಲ್ ರವಾನೆ ಮಾಡ್ತಿದ್ದ ಕಿಂಗ್​ ಪಿನ್​​​ ಲಾಕ್

ಹೊರಗಡೆಗಿಂತ ಪರಪ್ಪನ ಅಗ್ರಹಾರ ಜೈಲೇ ಕ್ರಿಮಿನಲ್​ಗಳಿಗೆ ಸೇಫ್ ಆಯ್ತಾ ಎಂಬ ಅನುಮಾನಗಳು ಶುರುವಾಗಿವೆ. ಜೈಲಿನ ಖೈದಿಗಳು ರಾಜರೋಷವಾಗಿ ಮೊಬೈಲ್ ಬಳಸುತ್ತಿದ್ದಾರೆ. ಇದಕ್ಕೆ ಸಾಲು ಸಾಲು ಸಾಕ್ಷಿಗಳು ಸಿಕ್ಕಿವೆ. ಜೈಲಿನಲ್ಲಿ ಇನ್ನೂ 250-300 ಮೊಬೈಲ್​ಗಳು ಇರುವ ಮಾಹಿತಿಯಿದೆ.

ಜೈಲಿನಲ್ಲಿ ಕೂತೆ ರೌಡಿಯಿಂದ ವ್ಯಾಪಾರಿಗೆ ಕೊಲೆ ಬೆದರಿಕೆ 

ಜೈಲಿನಲ್ಲೇ ಕೂತು ಸೈಕೋ ವಿಶ್ವನಾಥ್ ಎಂಬ ರೌಡಿಯಿಂದ ವ್ಯಾಪಾರಿಯೊಬ್ಬರಿಗೆ ಫೋನ್ ಮಾಡಿ ಹಣಕ್ಕಾಗಿ ಧಮ್ಕಿ ಹಾಕಲಾಗಿದೆ. ಪ್ರತಿ ವಾರ 40 ಸಾವಿರ ರೂ. ಹಣ ಹಫ್ತಾ ಕೊಡಬೇಕು ಇಲ್ಲ ಕೊಲೆ ಮಾಡುವುದಾಗಿ ಬೆದರಿಕೆ ನೀಡಲಾಗಿದೆ. ಈ ಸಂಬಂಧ ಸೈಕೋ ವಿಶ್ವನಾಥ್ ವಿರುದ್ಧ ಸಿಸಿಬಿಗೆ ವ್ಯಾಪಾರಿ ದೂರು ನೀಡಿದ್ದಾರೆ. ಸದ್ಯ ಬಾಡಿ ವಾರೆಂಟ್ ಮೇಲೆ ಸೈಕೋ ವಿಶ್ವನಾಥ್ ವಶಕ್ಕೆ ಪಡೆದು ಸಿಸಿಬಿ ಪೊಲೀಸರಿಂದ ವಿಚಾರಣೆ ಮಾಡಲಾಗಿದೆ.

ಇನ್ನು ಪರಪ್ಪನ ಜೈಲಿನಲ್ಲೇ ಕೂತು ಬೆಂಗಳೂರಿನಲ್ಲಿ ಡ್ರಗ್ಸ್ ಪೆಡ್ಲಿಂಗ್​​ ಮಾಡಲಾಗುತ್ತಿದೆ. ಡ್ರಗ್ಸ್ ಕೇಸ್‌ನಲ್ಲಿ ಜೈಲಿಗೆ ಹೋಗಿರುವ ಆರೋಪಿಯಿಂದಲೇ ಡ್ರಗ್ಸ್ ಡೀಲಿಂಗ್ ಮಾಡಲಾಗುತ್ತಿದೆ. ಇತ್ತೀಚೆಗೆ ಸಿಸಿಬಿ ಪೊಲೀಸರು ಡ್ರಗ್ಸ್​ ಅಡ್ಡೆ ಮೇಲೆ ದಾಳಿ‌ ಮಾಡಿದ್ದರು. ಇಬ್ಬರನ್ನ ಬಂಧಿಸಿ ವಿಚಾರಣೆ ಮಾಡಿದಾಗ ಮತ್ತೊಬ್ಬನ ಬಗ್ಗೆ ಮಾಹಿತಿ ನೀಡಿದ್ದರು. ಪರಪ್ಪನ ಅಗ್ರಹಾರ ಜೈಲಿನಲ್ಲಿ ಕುಳಿತ ಆ ಆರೋಪಿ ಡ್ರಗ್ಸ್​​ ಮಾರಾಟ ಮಾಡಿಸುತ್ತಿದ್ದ. ಆತನ ಸೂಚನೆಯಂತೆ ಡ್ರಗ್ಸ್ ಕಲೆಕ್ಟ್ ಮಾಡಿ ಪೋರ್ಟರ್ ಮೂಲಕ ಮಾರಾಟ ಮಾಡುತ್ತಿದ್ದರು. ಸದ್ಯ ಈತನನ್ನೂ ಬಾಡಿ ವಾರೆಂಟ್ ಮೇಲೆ ವಶಕ್ಕೆ ಪಡೆಯಲು ಸಿಸಿಬಿ ಸಿದ್ದತೆ ನಡೆಸಿದೆ.

ಗಾಂಜಾ ಡೀಲಿಂಗ್

ಜೈಲಿನಲ್ಲೇ ಕೂತು ಬಾಲಕೃಷ್ಣ ಎಂಬಾತನಿಂದ ನಗರದಲ್ಲಿ ಗಾಂಜಾ ಡೀಲಿಂಗ್ ಮಾಡಲಾಗಿದೆ. ಅಶೋಕ ನಗರ ಪೊಲೀಸರಿಂದ ನಾಲ್ವರು ಆರೋಪಿಗಳನ್ನ ಬಂಧಿಲಾಗಿತ್ತು. ಶ್ರೀಕಾಂತ್, ಮುನಿರಾಜು, ಚಂದ್ರಕಾಂತ್, ಬಾಲಕೃಷ್ಣ@ಜಿಗಣಿ ಬಾಲು ಬಂಧಿತರು. ಆರೋಪಿಗಳು ವಿಶಾಖಪಟ್ಟಣದಿಂದ‌ ಬೆಂಗಳೂರಿಗೆ ಗಾಂಜಾ ಸಾಗಿಸುತ್ತಿದ್ದರು.

ಇದನ್ನೂ ಓದಿ: ದರ್ಶನ್​ಗೆ ರಾಜಾತಿಥ್ಯ ನೀಡಿದ್ದ ಪರಪ್ಪನ ಅಗ್ರಹಾರದ ಮೇಲೆ ಸಿಸಿಬಿ ದಾಳಿ; ವಿಲ್ಸನ್ ಗಾರ್ಡನ್ ನಾಗನ ಫೋನ್ ಸೇರಿ 18 ಮೊಬೈಲ್ ಸೀಜ್

ಆರೋಪಿಗಳ ಪೈಕಿ ಜಿಗಣಿ ಬಾಲು ಕ್ರೈಂ ಕೇಸ್​ವೊಂದರಲ್ಲಿ ಜೈಲು ಸೇರಿದ್ದ. ಆದರೆ ಜೈಲಿನಲ್ಲಿ ಕೂತು ಗಾಂಜಾ ವ್ಯವಹಾರ ನಡೆಸುತ್ತಿದ್ದ. ಸದ್ಯ ಗಾಂಜಾ ಕೇಸ್​​ನಲ್ಲಿ ಬಾಡಿ ವಾರೆಂಟ್ ಮೇಲೆ ವಶಕ್ಕೆ ಪಡೆದು ವಿಚಾರಣೆ ಮಾಡಲಾಗುತ್ತಿದೆ.

ವರದಿ: ಪ್ರದೀಪ್ ಚಿಕ್ಕಾಟಿ, ಟಿವಿ9 ಬೆಂಗಳೂರು

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮದ್ವೆಯಾಗ್ತೀನಿ ಎಂದು ಕರೆದೊಯ್ದ..ಪ್ರೇಮಿಗಳ ಗೋವಾ ರಹಸ್ಯ ಬಿಚ್ಚಿಟ್ಟ ಆಯುಕ್ತ
ಮದ್ವೆಯಾಗ್ತೀನಿ ಎಂದು ಕರೆದೊಯ್ದ..ಪ್ರೇಮಿಗಳ ಗೋವಾ ರಹಸ್ಯ ಬಿಚ್ಚಿಟ್ಟ ಆಯುಕ್ತ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಇರಾನ್‌ನಿಂದ 110 ಭಾರತದ ವಿದ್ಯಾರ್ಥಿಗಳಿರುವ ವಿಮಾನ ಇಂದು ರಾತ್ರಿ ದೆಹಲಿಗೆ
ಇರಾನ್‌ನಿಂದ 110 ಭಾರತದ ವಿದ್ಯಾರ್ಥಿಗಳಿರುವ ವಿಮಾನ ಇಂದು ರಾತ್ರಿ ದೆಹಲಿಗೆ
ಮಿನಿಸ್ಟರ್ ಜಮೀರ್ ಅಹ್ಮದ್ ಖಾನ್ ಸಾಹಬ್​ ಕೋ ಗುಸ್ಸಾ ಕ್ಯೋಂ ಆತಾ ಹೈ?
ಮಿನಿಸ್ಟರ್ ಜಮೀರ್ ಅಹ್ಮದ್ ಖಾನ್ ಸಾಹಬ್​ ಕೋ ಗುಸ್ಸಾ ಕ್ಯೋಂ ಆತಾ ಹೈ?
ರಿಹ್ಯಾಬ್ ಸೆಂಟರ್​ಗಳ ಮೇಲೆ ಮಾನವ ಹಕ್ಕುಗಳ ಆಯೋಗ ದಾಳಿ
ರಿಹ್ಯಾಬ್ ಸೆಂಟರ್​ಗಳ ಮೇಲೆ ಮಾನವ ಹಕ್ಕುಗಳ ಆಯೋಗ ದಾಳಿ