AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪರಾಧಿ ಮೃತಪಟ್ಟರೂ ಆತನಿಗೆ ವಿಧಿಸಿದ್ದ ದಂಡ ವಸೂಲಿ ಮಾಡಬಹುದು: ಹೈಕೋರ್ಟ್ ಮಹತ್ವದ ಆದೇಶ

ದಂಡ ವಿಧಿಸಿದ್ದ ಪ್ರಕರಣವೊಂದರ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಅಪರಾಧಿ ಮೃತಪಟ್ಟರೂ ಆತನ ಆಸ್ತಿಯಿಂದ ದಂಡ ವಸೂಲಿ ಮಾಡಬಹುದು ಎಂದು ಆದೇಶ ಹೊರಡಿಸಿದೆ.

ಅಪರಾಧಿ ಮೃತಪಟ್ಟರೂ ಆತನಿಗೆ ವಿಧಿಸಿದ್ದ ದಂಡ ವಸೂಲಿ ಮಾಡಬಹುದು: ಹೈಕೋರ್ಟ್ ಮಹತ್ವದ ಆದೇಶ
ಕರ್ನಾಟಕ ಹೈಕೋರ್ಟ್
TV9 Web
| Updated By: ರಮೇಶ್ ಬಿ. ಜವಳಗೇರಾ|

Updated on: Jan 31, 2023 | 6:22 PM

Share

ಬೆಂಗಳೂರು/ಹಾಸನ: ಅಪರಾಧಿ ಮೃತಪಟ್ಟರೂ ಆತನಿಗೆ ಕೋರ್ಟ್ ವಿಧಿಸಿದ್ದ ದಂಡವನ್ನು ಆತನ ಆಸ್ತಿಯಿಂದ ಅಥವಾ ಆತನ ಆಸ್ತಿಯ ಉತ್ತರಾಧಿಕಾರಿಯಿಂದ ವಸೂಲಿ ಮಾಡಬಹುದೆಂದು ಕರ್ನಾಟಕ ಹೈಕೋರ್ಟ್ (Karnataka High Court) ಮಹತ್ವದ ಆದೇಶ ನೀಡಿದೆ. ಹಾಸನದ (Hassan) ವ್ಯಕ್ತಿಯೊಬ್ಬ ಅನಧಿಕೃತವಾಗಿ ವಿದ್ಯುತ್ ಸಂಪರ್ಕ ಪಡೆದ ಪ್ರಕರಣದಲ್ಲಿ ವ್ಯಕ್ತಿಯೋರ್ವನಿಗೆ ಸೆಷನ್ ಕೋರ್ಟ್ ದಂಡ ವಿಧಿಸಲಾಗಿತ್ತು. ಆದ್ರೆ, ಅದರನ್ನು ವಿರೋಧಿಸಿ ಹೈಕೋರ್ಟ್ ಮೇಲ್ಮನವಿ ಸಲ್ಲಿಸಿದ್ದರು. ಆದ್ರೆ, ದುರದೃಷ್ಟವಶಾತ್ ಆ ವ್ಯಕ್ತಿ ಸಾವನ್ನಪ್ಪಿದ್ದಾನೆ. ಇತ್ತ ಇಂದು (ಜನವರಿ 30) ಹೈಕೋರ್ಟ್, ಮೃತಪಟ್ಟರೂ ದಂಡ ಕಟ್ಟಬೇಕು ಎಂದು ಆದೇಶಿಸಿ ಮೇಲ್ಮನವಿ ಅರ್ಜಿಯನ್ನು ವಜಾಗೊಳಿಸಿದೆ.

ಇದನ್ನೂ ಓದಿ: ದುಡಿಯಲು ಸಮರ್ಥ ಪತಿ ಪತ್ನಿಯಿಂದ‌ ಜೀವನಾಂಶ ಕೇಳುವಂತಿಲ್ಲ, ಸೋಮಾರಿ ಪತಿಗೆ ಹೈಕೋರ್ಟ್ ತಪರಾಕಿ

ವಿದ್ಯುತ್ ಅನಧಿಕೃತ ಸಂಪರ್ಕ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನದ ವ್ಯಕ್ತಿಯೊಬ್ಬರಿಗೆ ಹಾಸನದ ಹೆಚ್ಚುವರಿ ಸೆಷನ್ಸ್ ಕೋರ್ಟ್ ಒಟ್ಟು 29,204 ರೂಪಾಯಿ ದಂಡ ವಿಧಿಸಿತ್ತು. 2003 ರ ಭಾರತೀಯ ವಿದ್ಯುತ್ ಕಾಯ್ದೆಯ ಸೆಕ್ಷನ್ 135, 138 ಅಡಿ ವಿಧಿಸಿದ್ದ ದಂಡ ಪ್ರಶ್ನಿಸಿ ಅಪರಾಧಿ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದ. ಮೇಲ್ಮನವಿ ವಿಚಾರಣೆ ವೇಳೆಯೇ 2019 ರಲ್ಲಿ ಅಪರಾಧಿ ಮೃತಪಟ್ಟಿದ್ದರು. ಅಪರಾಧಿ ಮೃತನಾದ‌ ಬಗ್ಗೆ ಹೈಕೋರ್ಟ್ ಗೆ ಮೃತ ಅಪರಾಧಿ ಪರ ವಕೀಲ ಗಿರೀಶ್ ಬಲದರೆ ಮಾಹಿತಿ ನೀಡಿ ಕೇಸ್ ಮುಕ್ತಾಯಗೊಳಿಸಲ ಮನವಿ ಮಾಡಿದ್ದರು.

ಆದರೆ ಸಿಆರ್ ಪಿಸಿ ಸೆ. 394 ರಡಿ ಮೇಲ್ಮನವಿ ವಿಚಾರಣೆ ವೇಳೆ ಅಪರಾಧಿ ಮೃತನಾದರೆ, ಮೃತನಾದ 30 ದಿನಗಳಲ್ಲಿ ಅವನ ಹತ್ತಿರದ ಸಂಬಂಧಿಗಳು ಅರ್ಜಿ ಸಲ್ಲಿಸಿ ಮೇಲ್ಮನವಿ ವಿಚಾರಣೆ ಮುಂದುವರಿಸಬಹುದು. ಆದರೆ ಯಾರೂ ಅರ್ಜಿ ಸಲ್ಲಿಸದಿರುವ ಹಿನ್ನೆಲೆಯಲ್ಲಿ ಹೈಕೋರ್ಟ್ ಮೇಲ್ಮನವಿ ವಜಾಗೊಳಿಸಿದೆ.

ಇದನ್ನೂ ಓದಿ: ಶಿಕ್ಷಕರಾಗಿ ಆಯ್ಕೆಯಾದವರಿಗೆ ಬಿಗ್ ಶಾಕ್: ಪ್ರಾಥಮಿಕ ಶಾಲಾ ಶಿಕ್ಷಕರ ತಾತ್ಕಾಲಿಕ ಆಯ್ಕೆ ಪಟ್ಟಿ ರದ್ದುಗೊಳಿಸಿದ ಹೈಕೋರ್ಟ್

ಇದೇ ವೇಳೆ ಮೃತ ಅಪರಾಧಿಯ ಆಸ್ತಿಯಿಂದ‌ ದಂಡ ವಸೂಲಿ ಮಾಡಲು ಸೂಚನೆ ನೀಡಿದೆ. ಅಪರಾಧಿ ಮೃತನಾದರೆ ಆತನ ಆಸ್ತಿಯಿಂದ ದಂಡ ವಸೂಲಿ ಮಾಡಬಹುದು ಅಥವಾ ಮೃತನ ಆಸ್ತಿಯ ಉತ್ತರಾಧಿಕಾರಿಯಿಂದಲೂ ದಂಡ ವಸೂಲಿ ಮಾಡಬಹುದು ಎಂದ ನ್ಯಾಯಮೂರ್ತಿ ಶಿವಶಂಕರ್ ಅಮರಣ್ಣವರ್ ರವರಿದ್ದ ಹೈಕೋರ್ಟ್ ಪೀಠ ಆದೇಶ ನೀಡಿದೆ.

ವರದಿ: ರಮೇಶ್ ಮಹದೇವ್ ಟಿವಿ9 ಬೆಂಗಳೂರು

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!