ಕನ್ನಡ ರಾಜ್ಯೋತ್ಸವ; ಪ್ರತಿಯೊಬ್ಬ ಕನ್ನಡಿಗ ರಾಜ್ಯದಲ್ಲಿ ಕನ್ನಡದಲ್ಲೇ ವ್ಯವಹರಿಸುವ ಪ್ರತಿಜ್ಞೆ ಮಾಡಬೇಕಿದೆ: ಸಿದ್ದರಾಮಯ್ಯ, ಮುಖ್ಯಮಂತ್ರಿ

ಅರುಣ್​ ಕುಮಾರ್​ ಬೆಳ್ಳಿ

Updated on: Nov 01, 2023 | 11:28 AM

ರಾಜ್ಯದ ಎಲ್ಲ ಕನ್ನಡಿಗರು ಕನ್ನಡ ನಾಡು ತಮ್ಮ ತಾಯ್ನಾಡು, ಕನ್ನಡ ಭಾಷೆ ತಮ್ಮ ಮಾತೃಭಾಷೆ, ಜಲ ತಮ್ಮದು ನೆಲ ತಮ್ಮದು ಅಂತ ಅಭಿಮಾನ ತಳೆಯಬೇಕಿದೆ. ಈ ನಾಡಿನ ಜನ ಕನ್ನಡಕ್ಕೆ ಹೊರತಾದ ಬೇರೆ ಭಾಷೆಗಳಲ್ಲಿ ವ್ಯವಹರಿಸುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬೆಂಗಳೂರು: ಕರ್ನಾಟಕದ 68ನೇ ರಾಜ್ಯೋತ್ಸವ ದಿನವಾಗಿರುವ (Kannada Rajyotsava) ಇಂದು ರಾಜ್ಯದ ಜನತೆಯನ್ನು ಉದ್ದೇಶಿಸಿ ಮಾತಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಪ್ರತಿಯೊಬ್ಬ ಕನ್ನಡಿಗ ರಾಜ್ಯದೊಳಗಡೆ ಕನ್ನಡದಲ್ಲೇ (Kannada language) ವ್ಯವಹರಿಸುವಂತೆ ಆಗ್ರಹಪೂರ್ವಕ ಮನವಿ ಮಾಡಿದರು. ಕಂಠೀರವ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನಡೆಸಿ ಮಾತಾಡಿದ ಮುಖ್ಯಮಂತ್ರಿಯವರು, ಪ್ರತಿಯೊಬ್ಬ ಕನ್ನಡಿಗ ಕನ್ನಡ ಭಾಷೆಯಲ್ಲೇ ವ್ಯವಹರಿಸುವ, ಕನ್ನಡ ಭಾಷೆ, ನೆಲ, ಜಲ ಮತ್ತು ಸಂಸ್ಕೃತಿಯನ್ನು ಎತ್ತಿಹಿಡಿಯುವ ಪ್ರತಿಜ್ಞೆ ಮಾಡುವ ಅನಿವಾರ್ಯತೆ ಎದುರಾಗಿದೆ ಎಂದು ಹೇಳಿದರು. ರಾಜ್ಯದ ಎಲ್ಲ ಕನ್ನಡಿಗರು ಕನ್ನಡ ನಾಡು ತಮ್ಮ ತಾಯ್ನಾಡು, ಕನ್ನಡ ಭಾಷೆ ತಮ್ಮ ಮಾತೃಭಾಷೆ, ಜಲ ತಮ್ಮದು ನೆಲ ತಮ್ಮದು ಅಂತ ಅಭಿಮಾನ ತಳೆಯಬೇಕಿದೆ. ಈ ನಾಡಿನ ಜನ ಕನ್ನಡಕ್ಕೆ ಹೊರತಾದ ಬೇರೆ ಭಾಷೆಗಳಲ್ಲಿ ವ್ಯವಹರಿಸುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.