AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾಹಿರಾತು ಫಲಕಗಳಿಂದ ಮುಕ್ತಿ ನೀಡಲು ಬೆಂಗಳೂರಲ್ಲಿ ಮೊಳೆ ಮುಕ್ತ ಮರ ಹಬ್ಬ

ಬೆಂಗಳೂರಿನ ರಸ್ತೆ ಬದಿ ಮರಗಳಿಗೆ ಮೊಳೆ ಹಾಗೂ ಸ್ಟಾಪಲ್ ಪಿನ್‍ ಹೊಡೆದು ಅನಧಿಕೃತವಾಗಿ ಜಾಹಿರಾತುಗಳನ್ನು  ಪ್ರದರ್ಶಿಸಲಾಗುತ್ತಿದೆ. ಇದರಿಂದ ಮರಗಳಿಗೆ ಹಾನಿಯಾಗುತ್ತಿರುವುದಲ್ಲದೆ, ನಗರದ ಸೌಂದರ್ಯಕ್ಕೆ ಧಕ್ಕೆಯಾಗುತ್ತಿದೆ.

ಜಾಹಿರಾತು ಫಲಕಗಳಿಂದ ಮುಕ್ತಿ ನೀಡಲು ಬೆಂಗಳೂರಲ್ಲಿ ಮೊಳೆ ಮುಕ್ತ ಮರ ಹಬ್ಬ
ರಾಜೇಶ್ ದುಗ್ಗುಮನೆ
|

Updated on: Dec 12, 2020 | 9:22 PM

Share

ಬೆಂಗಳೂರು: ಕರ್ನಾಟಕದ ರಾಜಧಾನಿ  ಬೆಂಗಳೂರನ್ನು ಗಾರ್ಡನ್​ ಸಿಟಿ ಎಂದು ಕರೆಯೋಕೆ ಕಾರಣ ಇಲ್ಲಿರುವ ಮರಗಳು. ಆದರೆ, ಇಲ್ಲಿನ ಮರಗಳಿಗೆ ಪೋಸ್ಟರ್​​ಗಳನ್ನು ಅಂಟಿಸಲು ನಿರಂತರವಾಗಿ ಮೊಳೆ ಬೀಳುತ್ತಿದೆ. ಇದನ್ನು ತಪ್ಪಿಸಲು ಈಗ ದೊಡ್ಡ ಮಟ್ಟದಲ್ಲಿ ಮೊಳೆ ಮುಕ್ತ ಮರ ಬೆಂಗಳೂರಿಗೆ ಕರೆ ನೀಡಲಾಗಿದೆ.

ಬೆಂಗಳೂರಿನ ರಸ್ತೆ ಬದಿ ಮರಗಳಿಗೆ ಮೊಳೆ ಹಾಗೂ ಸ್ಟಾಪಲ್ ಪಿನ್‍ ಹೊಡೆದು ಅನಧಿಕೃತವಾಗಿ ಜಾಹಿರಾತುಗಳನ್ನು  ಪ್ರದರ್ಶಿಸಲಾಗುತ್ತಿದೆ. ಇದರಿಂದ ಮರಗಳಿಗೆ ಹಾನಿಯಾಗುತ್ತಿರುವುದಲ್ಲದೆ, ನಗರದ ಸೌಂದರ್ಯಕ್ಕೆ ಧಕ್ಕೆಯಾಗುತ್ತಿದೆ. ಇದನ್ನು ತಡೆಯುವ ಕಾರ್ಯಕ್ರಮಕ್ಕೆ ಮಾಜಿ ಐಪಿಎಸ್​ ಅಧಿಕಾರಿ ಅಣ್ಣಾಮಲೈ, ನಟ ಕಿರಿಕ್ ಕೀರ್ತಿ ಹಾಗೂ ನಟ ಗಣೇಶ್ ರಾವ್ ಬೆಂಬಲ ನೀಡಿದ್ದಾರೆ.

ಭಾನುವಾರ ಬೆಳಗ್ಗೆ ನ್ಯಾಷನಲ್​ ಕಾಲೇಜು ಗ್ರೌಂಡ್​ನಲ್ಲಿ ಬೆಳಗ್ಗೆ 8 ಗಂಟೆಗೆ ಕಾರ್ಯಕ್ರಮ ನಡೆಯಲಿದ್ದು, ಕಿರಿಕ್​ ಕೀರ್ತಿ ಆಗಮಿಸಲಿದ್ದಾರೆ. 11 ಗಂಟೆಗೆ 100 ಅಡಿ ರಸ್ತೆಯಲ್ಲಿರುವ ಇಂದಿರಾ ನಗರ ಕ್ಲಬ್​ ಸಮೀಪ ಅಣ್ಣಾಮಲೈ ಬರಲಿದ್ದಾರೆ. ಯಶವಂತಪುರದ ಚೌಡೇಶ್ವರಿ ಬಸ್​ ಸ್ಟಾಪ್​ ಬಳಿ ಮಧ್ಯಾಹ್ನ 3.30ಕ್ಕೆ ಗಣೇಶ್​ ರಾವ್​ ಬರಲಿದ್ದು, ಮೊಳೆ ಮುಕ್ತ ಮರ ಬೆಂಗಳೂರು ಹಬ್ಬಕ್ಕೆ ಕೈ ಜೋಡಿಸಲಿದ್ದಾರೆ.

ಜಾಹಿರಾತು ಫಲಕಗಳ ಹಾವಳಿ: ಶತಾಯುಷಿ ಮರಗಳು ಹೇಳುತ್ತಿವೆ ಕಣ್ಣೀರ ಕತೆ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ