ಯೋಗೀಶ್​ ಗೌಡ ಹತ್ಯೆ ಪ್ರಕರಣ: ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿದರೂ ಸದ್ಯಕ್ಕೆ ಇಲ್ಲ ರಿಲೀಫ್

ಜಿಲ್ಲಾ ಪಂಚಾಯತ್​ ಸದಸ್ಯ ಯೋಗೀಶ್​ ಗೌಡ ಹತ್ಯೆ ಪ್ರಕರಣ: ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಷರತ್ತು ಬದ್ಧ ಜಾಮೀನು

ಯೋಗೀಶ್​ ಗೌಡ ಹತ್ಯೆ ಪ್ರಕರಣ: ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿದರೂ ಸದ್ಯಕ್ಕೆ ಇಲ್ಲ ರಿಲೀಫ್
ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಜಾಮೀನು
Follow us
| Updated By: ಸಾಧು ಶ್ರೀನಾಥ್​

Updated on:Aug 11, 2021 | 1:53 PM

ನವದೆಹಲಿ: ಜಿಲ್ಲಾ ಪಂಚಾಯತ್​ ಸದಸ್ಯ ಯೋಗೀಶ್​ ಗೌಡ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಸುಪ್ರೀಂಕೋರ್ಟ್ ಇಂದು ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಆದರೆ ಜಾಮೀನು ಅವಧಿಯಲ್ಲಿ ಧಾರವಾಡಕ್ಕೆ ತೆರಳದಂತೆ ವಿನಯ್​ ಕುಲಕರ್ಣಿಗೆ ಸುಪ್ರೀಂಕೋರ್ಟ್ ಷರತ್ತು ವಿಧಿಸಿದೆ.  ನವೆಂಬರ್  5ರಂದು ಸಿಬಿಐನಿಂದ ಬಂಧನಕ್ಕೊಳಗಾಗಿರುವ ವಿನಯ್ ಕುಲಕರ್ಣಿ, 9 ತಿಂಗಳಿನಿಂದ ಬೆಳಗಾವಿ ಜೈಲಿನಲ್ಲಿದ್ದಾರೆ.

ಪ್ರಕರಣ ಹೈಕೋರ್ಟ್ ಮುಂದೆ ವಿಚಾರಣೆಗೆ ಬಾಕಿ ಇದೆ ಎಂದು ಕರ್ನಾಟಕದ ಪರ ವಕೀಲ ನಟರಾಜ್ ಸುಪ್ರೀಂ ಕೋರ್ಟ್​​ ಗಮನ ಸೆಳೆದರು. ಹೀಗಾಗಿ ಹೈಕೋರ್ಟ್ ಎರಡು ತಿಂಗಳೊಳಗೆ ಪ್ರಕರಣದ ವಿಚಾರಣೆ ನಡೆಸಬೇಕು ಎಂದೂ ಸುಪ್ರೀಂ ಕೋರ್ಟ್ ಆದೇಶಿಸಿದೆ. ಈ ಮಧ್ಯೆ, ಧಾರವಾಡ ಜಿಲ್ಲಾ ವ್ಯಾಪ್ತಿ ಪ್ರವೇಶಿಸದಂತೆ  ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್ ಷರತ್ತು ವಿಧಿಸಿದೆ. ಸಾಕ್ಷಿಗಳಿಗೆ ಬೆದರಿಕೆ ಹಾಕಿದರೆ ವಿನಯ್ ಕುಲಕರ್ಣಿ ಜಾಮೀನು ರದ್ದುಪಡಿಸುವ ಎಚ್ಚರಿಕೆಯನ್ನು ಸುಪ್ರೀಂ ಕೋರ್ಟ್ ನೀಡಿದೆ.

ವಿನಯ್ ಕುಲಕರ್ಣಿ ಇನ್ನೂ ಬೆಳಗಾವಿ ಜೈಲಿನಲ್ಲಿಯೇ ದಿನ ದೂಡಬೇಕಿದೆ..

ಧಾರವಾಡ: ಮಾಜಿ ಸಚಿವ ವಿನಯ ಕುಲಕರ್ಣಿಗೆ ಸುಪ್ರೀಂ ಕೋರ್ಟ್​​ನಲ್ಲಿ ಜಾಮೀನು ಸಿಕ್ಕರೂ ಹೊರ ಬರಲಾಗದ ಸ್ಥಿತಿ ಎದುರಾಗಿದೆ. ವಿನಯ್​ ಕುಲಕರ್ಣಿ ಮೇಲೆ ಸಾಕ್ಷ್ಯ ನಾಶದ ಪ್ರಕರಣವು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ. ಇತ್ತೀಚಿಗಷ್ಟೇ ಕೋರ್ಟ್ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ಜಾಮೀನಿಗಾಗಿ ವಿನಯ್ ಹೈಕೋರ್ಟ್ ಮೊರೆ ಹೋಗಿದ್ದಾರೆ. ಹೈಕೋರ್ಟ್ ನಲ್ಲಿ ವಿಚಾರಣಾ ಹಂತದಲ್ಲಿರೋ ಪ್ರಕರಣವಾಗಿರುವ ಹಿನ್ನೆಲೆಯಲ್ಲಿ ವಿನಯ್‌ ಕುಲಕರ್ಣಿಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿದರೂ ಅದರಿಂದ ಸದ್ಯಕ್ಕೆ ರಿಲೀಫ್ ಇಲ್ಲವಾಗಿದ್ದು, ಇನ್ನೂ ಬೆಳಗಾವಿ ಜೈಲಿನಲ್ಲಿಯೇ ದಿನ ದೂಡಬೇಕಿದೆ.

ಕಳೆದ ತಿಂಗಳು ಧಾರವಾಡಕ್ಕೆ ಬಂದಿದ್ದ ವಿನಯ್ ಕುಲಕರ್ಣಿ: ಇತ್ತೀಚೆಗೆ  (ಜುಲೈ 27) ಧಾರವಾಡದ ಉಪ ನೋಂದಣಾಧಿಕಾರಿ ಕಚೇರಿಗೆ  ವಿನಯ್ ಕುಲಕರ್ಣಿ, ಬೆಳಗಾವಿ ಹಿಂಡಲಗಾ ಜೈಲಿನಿಂದ ಆಗಮಿಸಿದ್ದರು. ಪತ್ನಿ ಶಿವಲೀಲಾ ಅವರಿಗೆ ಜಿಪಿಎ (General Power Of Attorney) ನೀಡಿದ್ದರು. ಜಿಪಿಎ ಪ್ರಕ್ರಿಯೆಯ ಬಳಿಕ ತಮ್ಮ ಹಾಗೂ ಪತ್ನಿಯ ಹೆಸರಿನಲ್ಲಿ ಜಂಟಿ ಖಾತೆಯನ್ನು ತೆರೆದರು. ಹಣಕಾಸು ವ್ಯವಹಾರ ಸೇರಿದಂತೆ ತೆರಿಗೆ ಸಂಬಂಧಿತ ಪ್ರಕ್ರಿಯೆಗಳನ್ನು ನಿರ್ವಹಿಸಲು ಈ ಜಂಟಿ ಖಾತೆಯನ್ನು ತೆರೆಯಲಾಗಿದೆ.

ಯೋಗೀಶ್‌ಗೌಡ ಕೊಲೆ ಕೇಸ್‌ನಲ್ಲಿ ವಿನಯ್‌ಗೆ ಜೈಲು: ವಿನಯ್ ಕುಲಕರ್ಣಿ ನಿವಾಸಕ್ಕೆ ನಟ ದರ್ಶನ್ ಭೇಟಿ

(ex minister vinay kulkarni granted bail in supreme court)

Published On - 1:04 pm, Wed, 11 August 21

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ