Belagavi Session: ವೈದ್ಯರ ಕಡ್ಡಾಯ ಗ್ರಾಮೀಣ ಸೇವೆಗೆ ವಿನಾಯಿತಿ ನೀಡುವ ವಿಧೇಯಕ ಅಂಗೀಕಾರ

ಬೆಳಗಾವಿ ಚಳಿಗಾಲ ಅಧಿವೇಶನದಲ್ಲಿ ಸೋಮವಾರ ಕರ್ನಾಟಕ ವೈದ್ಯಕೀಯ ಕೋರ್ಸುಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳ ಕಡ್ಡಾಯ ಸೇವಾ (ತಿದ್ದುಪಡಿ) ಅಧಿನಿಯಮ, 2012 ವಿಧೇಯಕ ಅಂಗೀಕಾರಗೊಂಡಿದೆ.

Belagavi Session: ವೈದ್ಯರ ಕಡ್ಡಾಯ ಗ್ರಾಮೀಣ ಸೇವೆಗೆ ವಿನಾಯಿತಿ ನೀಡುವ ವಿಧೇಯಕ ಅಂಗೀಕಾರ
ಸಾಂದರ್ಭಿಕ ಚಿತ್ರ
Follow us
| Updated By: ವಿವೇಕ ಬಿರಾದಾರ

Updated on: Dec 11, 2023 | 2:43 PM

ಬೆಳಗಾವಿ, ಡಿಸೆಂಬರ್​​ 11: ಬೆಳಗಾವಿ ಅಧಿವೇಶನ (Belagavi Session) ಪ್ರಾರಂಭವಾಗಿ ಇಂದಿಗೆ (ಡಿ.11) ಒಂದು ವಾರ ಕಳೆದಿದೆ. ಸಾಲು ಪ್ರತಿಭಟನೆಗಳಿಂದ ಚಳಿಗಾಲದ ಅಧಿವೇಶನದ (Winter Session) ಬಿಸಿ ಏರಿದೆ. ಸದ್ದು-ಗದ್ದಲದ ನಡುವೆ ಅಧಿವೇಶನದಲ್ಲಿ ವಿವಿಧ ವಿಧೇಯಕಗಳು ಅಂಗೀಕಾರಗೊಂಡಿವೆ. ಅದರಲ್ಲಿ ಒಂದು ಕರ್ನಾಟಕ ವೈದ್ಯಕೀಯ ಕೋರ್ಸುಗಳನ್ನು (Karnataka Medical Course) ಪೂರ್ಣಗೊಳಿಸಿದ ಅಭ್ಯರ್ಥಿಗಳ ಕಡ್ಡಾಯ ಸೇವಾ (ತಿದ್ದುಪಡಿ) ಅಧಿನಿಯಮ, 2012 ವಿಧೇಯಕ ಅಂಗೀಕಾರಗೊಂಡಿದೆ.

ಈ ವಿಧೇಯಕದ ಮುಖಾಂತರ ಕಡ್ಡಾಯ ಸೇವಾ ತರಬೇತಿ ಅಧಿನಿಯಮ 3, 4 ಮತ್ತು 5ಕ್ಕೆ ತಿದ್ದುಪಡಿ ತರಲಾಗಿದೆ. ಇನ್ನುಮುಂದೆ ರಾಜ್ಯ ಸರ್ಕಾರವು ನಿಗದಿಪಡಿಸಿದಂತೆ ಅಸ್ತಿತ್ವದಲ್ಲಿರುವ ವೈದ್ಯಕೀಯ ಇಲಾಖೆಯಲ್ಲಿ ಖಾಲಿ ಹುದ್ದೆಗಳಿಗೆ ವೈದ್ಯರನ್ನು ಕೌನ್ಸಿಲಿಂಗ್‌ ಮೂಲಕ ನೇಮಕ ಮಾಡಿಕೊಳ್ಳುವುದು. ಕಡ್ಡಾಯವಾಗಿ ಸ್ಥಳ ನಿಯುಕ್ತಿಗೊಳಿಸುವುದನ್ನು ನಿರ್ಬಂಧಿಸಲು ಮತ್ತು ಸ್ಟೈಫಂಡ್‌ ಅನ್ನು ಸರ್ಕಾರ ನಿರ್ಧರಿಸಲಿದೆ. ಕೇಂದ್ರ ಅಥವಾ ರಾಜ್ಯ ಸರ್ಕಾರಿ ಸೇವೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಡ್ಡಾಯ ಗ್ರಾಮೀಣ ಸೇವೆಯಿಂದ ವಿನಾಯಿತಿ ನೀಡಲಾಗಿದೆ. ಈ ವಿಧೇಯಕ 2023ರ ನವಂಬರ್ 8 ರಿಂದ ಜಾರಿಗೆ ಬರುವಂತೆ ಸೂಚನೆ ನೀಡಲಾಗಿದೆ.

ವಿಧೇಯಕದಲ್ಲಿ ಏನಿದೆ?

ಈ ಅಧಿನಿಯಮವನ್ನು ಕರ್ನಾಟಕ ವೈದ್ಯಕೀಯ ಕೋರ್ಸುಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳ ಕಡ್ಡಾಯ ಸೇವಾ (ತಿದ್ದುಪಡಿ) ಅಧಿನಿಯಮ, 2023 ಎಂದು ಕರೆಯಬೇಕು. ಒಂದು ವರ್ಷದ ಕಡ್ಡಾಯ ಗ್ರಾಮೀಣ ಸೇವೆಗೆ” ಎಂಬ ಪದಗಳ ಮೊದಲು ‘ರಾಜ್ಯ ಸರ್ಕಾರವು ನಿಗದಿಪಡಿಸಿರುವ ಅಸ್ತಿತ್ವದಲ್ಲಿರುವ ಖಾಲಿಹುದ್ದೆಗಳಲ್ಲಿ ಎಂಬ ಪದಗಳನ್ನು ಸೇರಿಸಬೇಕು. ಅಭ್ಯರ್ಥಿಗಳು ಕೇಂದ್ರ ಅಥವಾ ರಾಜ್ಯ ಸರ್ಕಾರದ ನಿಯತ ಸೇವೆಗಾಗಿ ಆಯ್ಕೆಯಾದರೆ, ಅಂಥ ಅಭ್ಯರ್ಥಿಗಳಿ ಕಡ್ಡಾಯ ಗ್ರಾಮೀಣ ಸೇವೆಯಿಂದ ವಿನಾಯಿತಿ ನೀಡಲಾಗಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳಲ್ಲಿ ಸಾಮಾನ್ಯ ಕರ್ತವ್ಯ ನಿರತ ವೈದ್ಯರ ಒಟ್ಟು ಕನಿಷ್ಠ ಸಂಬಳಕ್ಕಿಂತ ನೂರು ರೂಪಾಯಿಗಳಷ್ಟು ಕಡಿಮೆಗೆ ಸಮನಾಗಿರುವ ಎಂಬ ಪದಗಳಿಗೆ ಬದಲಾಗಿ ರಾಜ್ಯ ಸರ್ಕಾರವು ನಿಗದಿಪಡಿಸಿದಂತೆ ಎಂಬ ಪದಗಳನ್ನು ಬಳಸಬೇಕು. ಕಡ್ಡಾಯ ಗ್ರಾಮೀಣ ಸೇವೆಗೆ ಒಳಪಡದಿರುವಂಥ ಎಂಬ ಪದಗಳ ಬದಲಾಗಿ, ಕೆಲಸ ಮಾಡಲು ನಿರಾಕರಿಸುವ ಅಥವಾ ರಾಜ್ಯ ಸರ್ಕಾರವು ನಿಗದಿಪಡಿಸುವಬಹದಾದಂಥ ಷರತ್ತುಗಳನ್ನು ಪಾಲಿಸದಿರುವ ಎಂಬ ಪದಗಳನ್ನು ಸೇರಿಸಬೇಕು.

ಇದನ್ನೂ ಓದಿ: ಬೆಳಗಾವಿ ಅಧಿವೇಶನ 2023: ಸರ್ಕಾರಿ ಹುದ್ದೆಗಳ ನೇಮಕಾತಿ ಅಕ್ರಮ ತಡೆಗಟ್ಟಲು ಸಾರ್ವಜನಿಕ ಪರೀಕ್ಷೆ ವಿಧೇಯಕ ಮಂಡನೆ

ಒಂದು ವರ್ಷದ ಕಡ್ಡಾಯ ಸೇವೆಗೆ ಎಂಬ ಪದಗಳಿಗೆ ಮೊದಲು ರಾಜ್ಯ ಸರ್ಕಾರವು ನಿಗದಿಪಡಿಸಲಾದಂತೆ ಅಸ್ತಿತ್ವದಲ್ಲಿರುವ ಖಾಲಿಹುದ್ದೆಗಳಲ್ಲಿ ಎಂಬ ಪದಗಳನ್ನು ಸೇರಿಸಬೇಕು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವಿಶೇಷತಜ್ಞರ ಒಟ್ಟು ಕನಿಷ್ಠ ಸಂಬಳಕ್ಕಿಂತ ನೂರು ರೂಪಾಯಿಗಳನ್ನು ಕಡಿಮೆಗೆ ಸಮನಾಗಿರುವ ನಿಯಮಿಸಬಹುದಾದ ಎಂಬ ಪದಗಳಿಗೆ ಬದಲಾಗಿ ರಾಜ್ಯ ಸರ್ಕಾರವು ನಿಗದಿಪಡಿಸಿದಂತೆ ಎಂಬ ಪದಗಳನ್ನು ಬಳಸಬೇಕು. ಸ್ನಾತಕೋತ್ತರ ಪದವಿಯ ನಂತರ ಅಭ್ಯರ್ಥಿಗಳು ಕೇಂದ್ರ ಅಥವಾ ರಾಜ್ಯ ಸರ್ಕಾರದ ನಿಯತ ಸೇವೆಗಾಗಿ ಆಯ್ಕೆಯಾದರೆ ಅಂಥ ಅಭ್ಯರ್ಥಿಗಳಿಗೆ ಕಡ್ಡಾಯ ಗ್ರಾಮೀಣ ಸೇವೆಯಿಂದ ವಿನಾಯಿತಿಸಲಾಗಿದೆ.

ಒಂದು ವರ್ಷದ ಕಡ್ಡಾಯ ಸೇವೆಗೆ ಎಂಬ ಪದಗಳಿಗೆ ಮೊದಲು ರಾಜ್ಯ ಸರ್ಕಾರವು ನಿಗದಿಪಡಿಸಿದಂತೆ ಅಸ್ತಿತ್ವದಲ್ಲಿರುವ ಖಾಲಿಹುದ್ದೆಗಳಲ್ಲಿ ಎಂಬ ಪದಗಳನ್ನು ಸೇರಿಸಬೇಕು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹಿರಿಯ ವಿಶೇಷತಜ್ಞರ ಒಟ್ಟು ಕನಿಷ್ಠ ಸಂಬಳಕ್ಕಿಂತ ನೂರು ರೂಪಾಯಿಗಳನ್ನು ಕಡಿಮೆಗೆ ಸಮನಾಗಿರುವ ನಿಯಮಿಸಬಹುದಾದ ಎಂಬ ಪದಗಳಿಗೆ ಬದಲಾಗಿ ರಾಜ್ಯ ಸರ್ಕಾರವು ನಿಗದಿಪಡಿಸಿದಂತೆ ಎಂಬ ಪದಗಳನ್ನು ಬಳಸಬೇಕು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು