Sign In

By signing in or creating an account, you agree with Associated Broadcasting Company's Terms & Conditions and Privacy Policy.

Belagavi Session: ವೈದ್ಯರ ಕಡ್ಡಾಯ ಗ್ರಾಮೀಣ ಸೇವೆಗೆ ವಿನಾಯಿತಿ ನೀಡುವ ವಿಧೇಯಕ ಅಂಗೀಕಾರ

ಬೆಳಗಾವಿ ಚಳಿಗಾಲ ಅಧಿವೇಶನದಲ್ಲಿ ಸೋಮವಾರ ಕರ್ನಾಟಕ ವೈದ್ಯಕೀಯ ಕೋರ್ಸುಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳ ಕಡ್ಡಾಯ ಸೇವಾ (ತಿದ್ದುಪಡಿ) ಅಧಿನಿಯಮ, 2012 ವಿಧೇಯಕ ಅಂಗೀಕಾರಗೊಂಡಿದೆ.

Belagavi Session: ವೈದ್ಯರ ಕಡ್ಡಾಯ ಗ್ರಾಮೀಣ ಸೇವೆಗೆ ವಿನಾಯಿತಿ ನೀಡುವ ವಿಧೇಯಕ ಅಂಗೀಕಾರ
ಸಾಂದರ್ಭಿಕ ಚಿತ್ರ
Follow us
ಕಿರಣ್​ ಹನಿಯಡ್ಕ
| Updated By: ವಿವೇಕ ಬಿರಾದಾರ

Updated on: Dec 11, 2023 | 2:43 PM

ಬೆಳಗಾವಿ, ಡಿಸೆಂಬರ್​​ 11: ಬೆಳಗಾವಿ ಅಧಿವೇಶನ (Belagavi Session) ಪ್ರಾರಂಭವಾಗಿ ಇಂದಿಗೆ (ಡಿ.11) ಒಂದು ವಾರ ಕಳೆದಿದೆ. ಸಾಲು ಪ್ರತಿಭಟನೆಗಳಿಂದ ಚಳಿಗಾಲದ ಅಧಿವೇಶನದ (Winter Session) ಬಿಸಿ ಏರಿದೆ. ಸದ್ದು-ಗದ್ದಲದ ನಡುವೆ ಅಧಿವೇಶನದಲ್ಲಿ ವಿವಿಧ ವಿಧೇಯಕಗಳು ಅಂಗೀಕಾರಗೊಂಡಿವೆ. ಅದರಲ್ಲಿ ಒಂದು ಕರ್ನಾಟಕ ವೈದ್ಯಕೀಯ ಕೋರ್ಸುಗಳನ್ನು (Karnataka Medical Course) ಪೂರ್ಣಗೊಳಿಸಿದ ಅಭ್ಯರ್ಥಿಗಳ ಕಡ್ಡಾಯ ಸೇವಾ (ತಿದ್ದುಪಡಿ) ಅಧಿನಿಯಮ, 2012 ವಿಧೇಯಕ ಅಂಗೀಕಾರಗೊಂಡಿದೆ.

ಈ ವಿಧೇಯಕದ ಮುಖಾಂತರ ಕಡ್ಡಾಯ ಸೇವಾ ತರಬೇತಿ ಅಧಿನಿಯಮ 3, 4 ಮತ್ತು 5ಕ್ಕೆ ತಿದ್ದುಪಡಿ ತರಲಾಗಿದೆ. ಇನ್ನುಮುಂದೆ ರಾಜ್ಯ ಸರ್ಕಾರವು ನಿಗದಿಪಡಿಸಿದಂತೆ ಅಸ್ತಿತ್ವದಲ್ಲಿರುವ ವೈದ್ಯಕೀಯ ಇಲಾಖೆಯಲ್ಲಿ ಖಾಲಿ ಹುದ್ದೆಗಳಿಗೆ ವೈದ್ಯರನ್ನು ಕೌನ್ಸಿಲಿಂಗ್‌ ಮೂಲಕ ನೇಮಕ ಮಾಡಿಕೊಳ್ಳುವುದು. ಕಡ್ಡಾಯವಾಗಿ ಸ್ಥಳ ನಿಯುಕ್ತಿಗೊಳಿಸುವುದನ್ನು ನಿರ್ಬಂಧಿಸಲು ಮತ್ತು ಸ್ಟೈಫಂಡ್‌ ಅನ್ನು ಸರ್ಕಾರ ನಿರ್ಧರಿಸಲಿದೆ. ಕೇಂದ್ರ ಅಥವಾ ರಾಜ್ಯ ಸರ್ಕಾರಿ ಸೇವೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಡ್ಡಾಯ ಗ್ರಾಮೀಣ ಸೇವೆಯಿಂದ ವಿನಾಯಿತಿ ನೀಡಲಾಗಿದೆ. ಈ ವಿಧೇಯಕ 2023ರ ನವಂಬರ್ 8 ರಿಂದ ಜಾರಿಗೆ ಬರುವಂತೆ ಸೂಚನೆ ನೀಡಲಾಗಿದೆ.

ವಿಧೇಯಕದಲ್ಲಿ ಏನಿದೆ?

ಈ ಅಧಿನಿಯಮವನ್ನು ಕರ್ನಾಟಕ ವೈದ್ಯಕೀಯ ಕೋರ್ಸುಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳ ಕಡ್ಡಾಯ ಸೇವಾ (ತಿದ್ದುಪಡಿ) ಅಧಿನಿಯಮ, 2023 ಎಂದು ಕರೆಯಬೇಕು. ಒಂದು ವರ್ಷದ ಕಡ್ಡಾಯ ಗ್ರಾಮೀಣ ಸೇವೆಗೆ” ಎಂಬ ಪದಗಳ ಮೊದಲು ‘ರಾಜ್ಯ ಸರ್ಕಾರವು ನಿಗದಿಪಡಿಸಿರುವ ಅಸ್ತಿತ್ವದಲ್ಲಿರುವ ಖಾಲಿಹುದ್ದೆಗಳಲ್ಲಿ ಎಂಬ ಪದಗಳನ್ನು ಸೇರಿಸಬೇಕು. ಅಭ್ಯರ್ಥಿಗಳು ಕೇಂದ್ರ ಅಥವಾ ರಾಜ್ಯ ಸರ್ಕಾರದ ನಿಯತ ಸೇವೆಗಾಗಿ ಆಯ್ಕೆಯಾದರೆ, ಅಂಥ ಅಭ್ಯರ್ಥಿಗಳಿ ಕಡ್ಡಾಯ ಗ್ರಾಮೀಣ ಸೇವೆಯಿಂದ ವಿನಾಯಿತಿ ನೀಡಲಾಗಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳಲ್ಲಿ ಸಾಮಾನ್ಯ ಕರ್ತವ್ಯ ನಿರತ ವೈದ್ಯರ ಒಟ್ಟು ಕನಿಷ್ಠ ಸಂಬಳಕ್ಕಿಂತ ನೂರು ರೂಪಾಯಿಗಳಷ್ಟು ಕಡಿಮೆಗೆ ಸಮನಾಗಿರುವ ಎಂಬ ಪದಗಳಿಗೆ ಬದಲಾಗಿ ರಾಜ್ಯ ಸರ್ಕಾರವು ನಿಗದಿಪಡಿಸಿದಂತೆ ಎಂಬ ಪದಗಳನ್ನು ಬಳಸಬೇಕು. ಕಡ್ಡಾಯ ಗ್ರಾಮೀಣ ಸೇವೆಗೆ ಒಳಪಡದಿರುವಂಥ ಎಂಬ ಪದಗಳ ಬದಲಾಗಿ, ಕೆಲಸ ಮಾಡಲು ನಿರಾಕರಿಸುವ ಅಥವಾ ರಾಜ್ಯ ಸರ್ಕಾರವು ನಿಗದಿಪಡಿಸುವಬಹದಾದಂಥ ಷರತ್ತುಗಳನ್ನು ಪಾಲಿಸದಿರುವ ಎಂಬ ಪದಗಳನ್ನು ಸೇರಿಸಬೇಕು.

ಇದನ್ನೂ ಓದಿ: ಬೆಳಗಾವಿ ಅಧಿವೇಶನ 2023: ಸರ್ಕಾರಿ ಹುದ್ದೆಗಳ ನೇಮಕಾತಿ ಅಕ್ರಮ ತಡೆಗಟ್ಟಲು ಸಾರ್ವಜನಿಕ ಪರೀಕ್ಷೆ ವಿಧೇಯಕ ಮಂಡನೆ

ಒಂದು ವರ್ಷದ ಕಡ್ಡಾಯ ಸೇವೆಗೆ ಎಂಬ ಪದಗಳಿಗೆ ಮೊದಲು ರಾಜ್ಯ ಸರ್ಕಾರವು ನಿಗದಿಪಡಿಸಲಾದಂತೆ ಅಸ್ತಿತ್ವದಲ್ಲಿರುವ ಖಾಲಿಹುದ್ದೆಗಳಲ್ಲಿ ಎಂಬ ಪದಗಳನ್ನು ಸೇರಿಸಬೇಕು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವಿಶೇಷತಜ್ಞರ ಒಟ್ಟು ಕನಿಷ್ಠ ಸಂಬಳಕ್ಕಿಂತ ನೂರು ರೂಪಾಯಿಗಳನ್ನು ಕಡಿಮೆಗೆ ಸಮನಾಗಿರುವ ನಿಯಮಿಸಬಹುದಾದ ಎಂಬ ಪದಗಳಿಗೆ ಬದಲಾಗಿ ರಾಜ್ಯ ಸರ್ಕಾರವು ನಿಗದಿಪಡಿಸಿದಂತೆ ಎಂಬ ಪದಗಳನ್ನು ಬಳಸಬೇಕು. ಸ್ನಾತಕೋತ್ತರ ಪದವಿಯ ನಂತರ ಅಭ್ಯರ್ಥಿಗಳು ಕೇಂದ್ರ ಅಥವಾ ರಾಜ್ಯ ಸರ್ಕಾರದ ನಿಯತ ಸೇವೆಗಾಗಿ ಆಯ್ಕೆಯಾದರೆ ಅಂಥ ಅಭ್ಯರ್ಥಿಗಳಿಗೆ ಕಡ್ಡಾಯ ಗ್ರಾಮೀಣ ಸೇವೆಯಿಂದ ವಿನಾಯಿತಿಸಲಾಗಿದೆ.

ಒಂದು ವರ್ಷದ ಕಡ್ಡಾಯ ಸೇವೆಗೆ ಎಂಬ ಪದಗಳಿಗೆ ಮೊದಲು ರಾಜ್ಯ ಸರ್ಕಾರವು ನಿಗದಿಪಡಿಸಿದಂತೆ ಅಸ್ತಿತ್ವದಲ್ಲಿರುವ ಖಾಲಿಹುದ್ದೆಗಳಲ್ಲಿ ಎಂಬ ಪದಗಳನ್ನು ಸೇರಿಸಬೇಕು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹಿರಿಯ ವಿಶೇಷತಜ್ಞರ ಒಟ್ಟು ಕನಿಷ್ಠ ಸಂಬಳಕ್ಕಿಂತ ನೂರು ರೂಪಾಯಿಗಳನ್ನು ಕಡಿಮೆಗೆ ಸಮನಾಗಿರುವ ನಿಯಮಿಸಬಹುದಾದ ಎಂಬ ಪದಗಳಿಗೆ ಬದಲಾಗಿ ರಾಜ್ಯ ಸರ್ಕಾರವು ನಿಗದಿಪಡಿಸಿದಂತೆ ಎಂಬ ಪದಗಳನ್ನು ಬಳಸಬೇಕು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ