AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಮಾರ್ಗದ ವಿಶೇಷ ಎಕ್ಸ್​ಪ್ರೆಸ್​​ ರೈಲು ಸೇವೆಗಳ ವಿಸ್ತರಣೆ: ಇಲ್ಲಿದೆ ವೇಳಾಪಟ್ಟಿ

ನೈಋತ್ಯ ರೈಲ್ವೆ ಪ್ರಯಾಣಿಕರ ಹೆಚ್ಚಳವನ್ನು ಪರಿಗಣಿಸಿ, ಬೆಂಗಳೂರಿನ ಎಸ್‌ಎಂವಿಟಿ ಟರ್ಮಿನಲ್‌ನಿಂದ ಬೀದರ್, ನಾರಂಗಿ ಮತ್ತು ಮಾಲ್ಡಾ ಟೌನ್‌ಗೆ ವಿಶೇಷ ರೈಲು ಸೇವೆಗಳನ್ನು ವಿಸ್ತರಿಸಿದೆ. ಬೀದರ್ ರೈಲು ಸೇವೆಯನ್ನು ಆಗಸ್ಟ್ 31 ರವರೆಗೆ, ನಾರಂಗಿ ರೈಲು ಜುಲೈ 19 ರವರೆಗೆ ಮತ್ತು ಮಾಲ್ಡಾ ರೈಲು ಜುಲೈ 16 ರವರೆಗೆ ವಿಸ್ತರಿಸಲಾಗಿದೆ.

ಈ ಮಾರ್ಗದ ವಿಶೇಷ ಎಕ್ಸ್​ಪ್ರೆಸ್​​ ರೈಲು ಸೇವೆಗಳ ವಿಸ್ತರಣೆ: ಇಲ್ಲಿದೆ ವೇಳಾಪಟ್ಟಿ
South Western Railway
ಗಂಗಾಧರ​ ಬ. ಸಾಬೋಜಿ
|

Updated on: Jul 04, 2025 | 7:55 AM

Share

ಬೆಂಗಳೂರು, ಜುಲೈ 04: ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಭಾಯಿಸಲು ನೈಋತ್ಯ ರೈಲ್ವೆ (South Western Railway) ಕೆಲ ವಿಶೇಷ ಎಕ್ಸ್‌ಪ್ರೆಸ್‌ ರೈಲು ಸೇವೆಯನ್ನು ವಿಸ್ತರಣೆ ಮಾಡಿದೆ. ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಮತ್ತು ಬೀದರ್, ನಾರಂಗಿ ಹಾಗೂ ಮಾಲ್ಡಾ ಟೌನ್ ನಡುವೆ ಈ ಹಿಂದೆ ಚಲಿಸುತ್ತಿದ್ದ ವಿಶೇಷ ರೈಲು ಸೇವೆಗಳನ್ನು (special train services) ಈಗಿರುವ ಸಮಯ, ನಿಲುಗಡೆಗಳು ಮತ್ತು ಬೋಗಿಗಳ ಸಂಯೋಜನೆಯೊಂದಿಗೆ ಮುಂದುವರಿಸಲು ನಿರ್ಧರಿಸಿದೆ.

ಎಸ್‌ಎಂವಿಟಿ ಬೆಂಗಳೂರು ಟು ಬೀದರ್ ಟು ಎಸ್‌ಎಂವಿಟಿ ಬೆಂಗಳೂರು ಎಕ್ಸ್‌ ಪ್ರೆಸ್‌ ವಿಶೇಷ

  • ರೈಲು ಸಂಖ್ಯೆ 06539 ಎಸ್‌ಎಂವಿಟಿ ಬೆಂಗಳೂರು ಟು ಬೀದರ್ ಎಕ್ಸ್‌ಪ್ರೆಸ್ ವಿಶೇಷ ರೈಲು ಶುಕ್ರವಾರ ಮತ್ತು ಭಾನುವಾರಗಳಂದು ಮುಂದುವರಿಯಲಿದೆ. ಈ ಹಿಂದೆ ಜೂನ್​ 29 ರವರೆಗೆ ಕಾರ್ಯನಿರ್ವಹಿಸಲು ತಿಳಿಸಲಾಗಿತ್ತು. ಈಗ ಈ ಸೇವೆಯನ್ನು ಜುಲೈ 04 ರಿಂದ ಆಗಸ್ಟ್​ 31ರ ವರೆಗೆ ವಿಸ್ತರಿಸಲಾಗಿದೆ.

ನೈಋತ್ಯ ರೈಲ್ವೆ ಟ್ವೀಟ್​

  • ರೈಲು ಸಂಖ್ಯೆ 06540 ಬೀದರ್  ಟು ಎಸ್‌ಎಂವಿಟಿ ಬೆಂಗಳೂರು ಎಕ್ಸ್‌ಪ್ರೆಸ್‌ ವಿಶೇಷ ರೈಲು ಶನಿವಾರ ಮತ್ತು ಸೋಮವಾರಗಳಂದು ಮುಂದುವರಿಯಲಿದೆ. ಈ ಹಿಂದೆ ಜೂನ್ 30 ರವರೆಗೆ ಕಾರ್ಯನಿರ್ವಹಿಸಲು ತಿಳಿಸಲಾಗಿತ್ತು. ಇದೀಗ ಈ ಸೇವೆಯನ್ನು ಜುಲೈ 05ರಿಂದ ಸೆಪ್ಟೆಂಬರ್​ 01 ರವರೆಗೆ ವಿಸ್ತರಿಸಲಾಗಿದೆ.
  • ವಿಸ್ತರಿಸಿದ ಅವಧಿಯಲ್ಲಿ ಈ ರೈಲುಗಳು ಪ್ರತಿ ದಿಕ್ಕಿನಲ್ಲಿ 18 ಟ್ರಿಪ್ ಸಂಚರಿಸಲಿವೆ.

ಎಸ್‌ಎಂವಿಟಿ ಬೆಂಗಳೂರು ಟು ನಾರಂಗಿ ಟು ಎಸ್‌ಎಂವಿಟಿ ಬೆಂಗಳೂರು ಎಕ್ಸ್‌ಪ್ರೆಸ್‌ ವಿಶೇಷ

  • ರೈಲು ಸಂಖ್ಯೆ 06559 ಎಸ್‌ಎಂವಿಟಿ ಬೆಂಗಳೂರು ನಾರಂಗಿ ಎಕ್ಸ್‌ಪ್ರೆಸ್ ವಿಶೇಷ ರೈಲು ಮಂಗಳವಾರಗಳಂದು ಸಂಚಾರ ಮುಂದುವರಿಯಲಿದೆ. ಈ ಹಿಂದೆ ಜೂನ್​ 10 ರವರೆಗೆ ಸಂಚಾರ ನಡೆಸುವುದಾಗಿ ತಿಳಿಸಲಾಗಿತ್ತು, ಆದರೆ ಇದೀಗ ಜುಲೈ 08 ಮತ್ತು 15 ರಂದು ಸಂಚರಿಸಲಿದೆ.
  • ರೈಲು ಸಂಖ್ಯೆ 06560 ನಾರಂಗಿ ಟು ಎಸ್‌ಎಂವಿಟಿ ಬೆಂಗಳೂರು ಎಕ್ಸ್‌ಪ್ರೆಸ್ ವಿಶೇಷ ರೈಲು ಶನಿವಾರದಂದು ಸಂಚಾರ ಮುಂದುವರಿಸಲಿದೆ. ಈ ಹಿಂದೆ ಜೂನ್​ 14 ರವರೆಗೆ ತಿಳಿಸಲಾಗಿತ್ತು. ಆದರೆ ಈಗ ಜುಲೈ 12 ಮತ್ತು 19 ರಂದು ಸಂಚಾರ ಮುಂದುವರಿಸಲಿದೆ.
  • ರೈಲು ಸಂಖ್ಯೆ 06559/06560 ವಿಸ್ತರಿಸಿದ ಅವಧಿಯಲ್ಲಿ ಪ್ರತಿ ದಿಕ್ಕಿನಲ್ಲಿ 2 ಟ್ರಿಪ್ ಸಂಚರಿಸಲಿದೆ.

ಎಸ್‌ಎಂವಿಟಿ ಬೆಂಗಳೂರು ಟು ಮಾಲ್ಡಾ ಟೌನ್ ಟು ಎಸ್‌ಎಂವಿಟಿ ಬೆಂಗಳೂರು ಎಕ್ಸ್‌ಪ್ರೆಸ್‌ ವಿಶೇಷ

  • ರೈಲು ಸಂಖ್ಯೆ 06565 ಎಸ್‌ಎಂವಿಟಿ ಬೆಂಗಳೂರು ಟು ಮಾಲ್ಯಾ ಟೌನ್ ಎಕ್ಸ್‌ಪ್ರೆಸ್ ವಿಶೇಷ ರೈಲು ಈ ಹಿಂದೆ ಜೂನ್​ 15 ರವರೆಗೆ ಸಂಚರಿಸಲಿದೆ ಎಂದು ತಿಳಿಸಲಾಗಿತ್ತು. ಇದೀಗ ಭಾನುವಾರ (13.07.2025) ರಂದು ಸಂಚರಿಸಲಿದೆ.
  • ರೈಲು ಸಂಖ್ಯೆ 06566 ಮಾಲ್ಡಾ ಟೌನ್ ಟು ಎಸ್‌ಎಂವಿಟಿ ಬೆಂಗಳೂರು ಎಕ್ಸ್‌ಪ್ರೆಸ್‌ ವಿಶೇಷ ರೈಲು ಈ ಹಿಂದೆ ಜೂನ್ 18 ರವರೆಗೆ ತಿಳಿಸಲಾಗಿತ್ತು. ಈಗ ಬುಧವಾರ (16.07.2025) ರಂದು ಸಂಚರಿಸಲಿದೆ.
  • ರೈಲು ಸಂಖ್ಯೆ 06565/06566 ವಿಸ್ತರಿಸಿದ ಅವಧಿಯಲ್ಲಿ ಪ್ರತಿ ದಿಕ್ಕಿನಲ್ಲಿ 1 ಟ್ರಿಪ್ ಸಂಚರಿಸಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
‘ಟಾಕ್ಸಿಕ್’ ಸಿನಿಮಾದ ಸ್ವಾಗತಕ್ಕೆ ಸಿಂಗಾರಗೊಂಡ ಗಾಂಧಿನಗರ; ವಿಡಿಯೋ ನೋಡಿ..
‘ಟಾಕ್ಸಿಕ್’ ಸಿನಿಮಾದ ಸ್ವಾಗತಕ್ಕೆ ಸಿಂಗಾರಗೊಂಡ ಗಾಂಧಿನಗರ; ವಿಡಿಯೋ ನೋಡಿ..
ಬೆಂಗಳೂರಿನ ಅವೆನ್ಯೂ ರಸ್ತೆಯಲ್ಲಿ ಫುಟ್‌ಪಾತ್ ತೆರವು ಅಭಿಯಾನ
ಬೆಂಗಳೂರಿನ ಅವೆನ್ಯೂ ರಸ್ತೆಯಲ್ಲಿ ಫುಟ್‌ಪಾತ್ ತೆರವು ಅಭಿಯಾನ
ಒಳ್ಳೆ ಪತಿಯಾಗುವುದು ಹೇಗೆ? ಚಿಕ್ಕಣ್ಣನಿಗೆ ಪಾಠ ಹೇಳಿದ್ದಾರಂತೆ ಯಶ್
ಒಳ್ಳೆ ಪತಿಯಾಗುವುದು ಹೇಗೆ? ಚಿಕ್ಕಣ್ಣನಿಗೆ ಪಾಠ ಹೇಳಿದ್ದಾರಂತೆ ಯಶ್
‘ಮದುವೆಗೆ ದರ್ಶನ್ ಅವರನ್ನು ಕರೆಯೋಕೆ ಆಗಲ್ಲ’: ಕಾರಣ ತಿಳಿಸಿದ ಚಿಕ್ಕಣ್ಣ
‘ಮದುವೆಗೆ ದರ್ಶನ್ ಅವರನ್ನು ಕರೆಯೋಕೆ ಆಗಲ್ಲ’: ಕಾರಣ ತಿಳಿಸಿದ ಚಿಕ್ಕಣ್ಣ
ಕರ್ನಾಟಕದಲ್ಲಿ ಕೆಜಿ ಈರುಳ್ಳಿ ದರ ಶೀಘ್ರವೇ 100 ರೂಪಾಯಿ?
ಕರ್ನಾಟಕದಲ್ಲಿ ಕೆಜಿ ಈರುಳ್ಳಿ ದರ ಶೀಘ್ರವೇ 100 ರೂಪಾಯಿ?
IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ಕೇಸ್​ಗೆ ಟ್ವಿಸ್ಟ್
IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ಕೇಸ್​ಗೆ ಟ್ವಿಸ್ಟ್
ಬಾಗಲಕೋಟೆ ಶ್ರೀ ಬನಶಂಕರಿ ದೇವಾಲಯದ ಮಹತ್ವ ಮತ್ತು ಐತಿಹಾಸಿಕ ಹಿನ್ನೆಲೆ
ಬಾಗಲಕೋಟೆ ಶ್ರೀ ಬನಶಂಕರಿ ದೇವಾಲಯದ ಮಹತ್ವ ಮತ್ತು ಐತಿಹಾಸಿಕ ಹಿನ್ನೆಲೆ
ಗುಡ್ ನ್ಯೂಸ್: ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆಗೆ ಡೇಟ್ ಫಿಕ್ಸ್​​
ಗುಡ್ ನ್ಯೂಸ್: ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆಗೆ ಡೇಟ್ ಫಿಕ್ಸ್​​
ಗದಗದ ಕೆಂಚಲಾಪೂರದಲ್ಲಿ ಸದ್ದಿಲ್ಲದೆ ಸರ್ಕಾರಿ ಕನ್ನಡ ಶಾಲೆಗೆ ಬೀಗ?
ಗದಗದ ಕೆಂಚಲಾಪೂರದಲ್ಲಿ ಸದ್ದಿಲ್ಲದೆ ಸರ್ಕಾರಿ ಕನ್ನಡ ಶಾಲೆಗೆ ಬೀಗ?
ಪ್ರಶ್ನೆಪತ್ರಿಕೆ ಸೋರಿಕೆ, ನೇಮಕಾತಿ ವಿಳಂಬಕ್ಕೆ ವಿದ್ಯಾರ್ಥಿಗಳ ರಣಕಹಳೆ
ಪ್ರಶ್ನೆಪತ್ರಿಕೆ ಸೋರಿಕೆ, ನೇಮಕಾತಿ ವಿಳಂಬಕ್ಕೆ ವಿದ್ಯಾರ್ಥಿಗಳ ರಣಕಹಳೆ