AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಮಾರ್ಗದ ವಿಶೇಷ ಎಕ್ಸ್​ಪ್ರೆಸ್​​ ರೈಲು ಸೇವೆಗಳ ವಿಸ್ತರಣೆ: ಇಲ್ಲಿದೆ ವೇಳಾಪಟ್ಟಿ

ನೈಋತ್ಯ ರೈಲ್ವೆ ಪ್ರಯಾಣಿಕರ ಹೆಚ್ಚಳವನ್ನು ಪರಿಗಣಿಸಿ, ಬೆಂಗಳೂರಿನ ಎಸ್‌ಎಂವಿಟಿ ಟರ್ಮಿನಲ್‌ನಿಂದ ಬೀದರ್, ನಾರಂಗಿ ಮತ್ತು ಮಾಲ್ಡಾ ಟೌನ್‌ಗೆ ವಿಶೇಷ ರೈಲು ಸೇವೆಗಳನ್ನು ವಿಸ್ತರಿಸಿದೆ. ಬೀದರ್ ರೈಲು ಸೇವೆಯನ್ನು ಆಗಸ್ಟ್ 31 ರವರೆಗೆ, ನಾರಂಗಿ ರೈಲು ಜುಲೈ 19 ರವರೆಗೆ ಮತ್ತು ಮಾಲ್ಡಾ ರೈಲು ಜುಲೈ 16 ರವರೆಗೆ ವಿಸ್ತರಿಸಲಾಗಿದೆ.

ಈ ಮಾರ್ಗದ ವಿಶೇಷ ಎಕ್ಸ್​ಪ್ರೆಸ್​​ ರೈಲು ಸೇವೆಗಳ ವಿಸ್ತರಣೆ: ಇಲ್ಲಿದೆ ವೇಳಾಪಟ್ಟಿ
South Western Railway
ಗಂಗಾಧರ​ ಬ. ಸಾಬೋಜಿ
|

Updated on: Jul 04, 2025 | 7:55 AM

Share

ಬೆಂಗಳೂರು, ಜುಲೈ 04: ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಭಾಯಿಸಲು ನೈಋತ್ಯ ರೈಲ್ವೆ (South Western Railway) ಕೆಲ ವಿಶೇಷ ಎಕ್ಸ್‌ಪ್ರೆಸ್‌ ರೈಲು ಸೇವೆಯನ್ನು ವಿಸ್ತರಣೆ ಮಾಡಿದೆ. ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಮತ್ತು ಬೀದರ್, ನಾರಂಗಿ ಹಾಗೂ ಮಾಲ್ಡಾ ಟೌನ್ ನಡುವೆ ಈ ಹಿಂದೆ ಚಲಿಸುತ್ತಿದ್ದ ವಿಶೇಷ ರೈಲು ಸೇವೆಗಳನ್ನು (special train services) ಈಗಿರುವ ಸಮಯ, ನಿಲುಗಡೆಗಳು ಮತ್ತು ಬೋಗಿಗಳ ಸಂಯೋಜನೆಯೊಂದಿಗೆ ಮುಂದುವರಿಸಲು ನಿರ್ಧರಿಸಿದೆ.

ಎಸ್‌ಎಂವಿಟಿ ಬೆಂಗಳೂರು ಟು ಬೀದರ್ ಟು ಎಸ್‌ಎಂವಿಟಿ ಬೆಂಗಳೂರು ಎಕ್ಸ್‌ ಪ್ರೆಸ್‌ ವಿಶೇಷ

  • ರೈಲು ಸಂಖ್ಯೆ 06539 ಎಸ್‌ಎಂವಿಟಿ ಬೆಂಗಳೂರು ಟು ಬೀದರ್ ಎಕ್ಸ್‌ಪ್ರೆಸ್ ವಿಶೇಷ ರೈಲು ಶುಕ್ರವಾರ ಮತ್ತು ಭಾನುವಾರಗಳಂದು ಮುಂದುವರಿಯಲಿದೆ. ಈ ಹಿಂದೆ ಜೂನ್​ 29 ರವರೆಗೆ ಕಾರ್ಯನಿರ್ವಹಿಸಲು ತಿಳಿಸಲಾಗಿತ್ತು. ಈಗ ಈ ಸೇವೆಯನ್ನು ಜುಲೈ 04 ರಿಂದ ಆಗಸ್ಟ್​ 31ರ ವರೆಗೆ ವಿಸ್ತರಿಸಲಾಗಿದೆ.

ನೈಋತ್ಯ ರೈಲ್ವೆ ಟ್ವೀಟ್​

  • ರೈಲು ಸಂಖ್ಯೆ 06540 ಬೀದರ್  ಟು ಎಸ್‌ಎಂವಿಟಿ ಬೆಂಗಳೂರು ಎಕ್ಸ್‌ಪ್ರೆಸ್‌ ವಿಶೇಷ ರೈಲು ಶನಿವಾರ ಮತ್ತು ಸೋಮವಾರಗಳಂದು ಮುಂದುವರಿಯಲಿದೆ. ಈ ಹಿಂದೆ ಜೂನ್ 30 ರವರೆಗೆ ಕಾರ್ಯನಿರ್ವಹಿಸಲು ತಿಳಿಸಲಾಗಿತ್ತು. ಇದೀಗ ಈ ಸೇವೆಯನ್ನು ಜುಲೈ 05ರಿಂದ ಸೆಪ್ಟೆಂಬರ್​ 01 ರವರೆಗೆ ವಿಸ್ತರಿಸಲಾಗಿದೆ.
  • ವಿಸ್ತರಿಸಿದ ಅವಧಿಯಲ್ಲಿ ಈ ರೈಲುಗಳು ಪ್ರತಿ ದಿಕ್ಕಿನಲ್ಲಿ 18 ಟ್ರಿಪ್ ಸಂಚರಿಸಲಿವೆ.

ಎಸ್‌ಎಂವಿಟಿ ಬೆಂಗಳೂರು ಟು ನಾರಂಗಿ ಟು ಎಸ್‌ಎಂವಿಟಿ ಬೆಂಗಳೂರು ಎಕ್ಸ್‌ಪ್ರೆಸ್‌ ವಿಶೇಷ

  • ರೈಲು ಸಂಖ್ಯೆ 06559 ಎಸ್‌ಎಂವಿಟಿ ಬೆಂಗಳೂರು ನಾರಂಗಿ ಎಕ್ಸ್‌ಪ್ರೆಸ್ ವಿಶೇಷ ರೈಲು ಮಂಗಳವಾರಗಳಂದು ಸಂಚಾರ ಮುಂದುವರಿಯಲಿದೆ. ಈ ಹಿಂದೆ ಜೂನ್​ 10 ರವರೆಗೆ ಸಂಚಾರ ನಡೆಸುವುದಾಗಿ ತಿಳಿಸಲಾಗಿತ್ತು, ಆದರೆ ಇದೀಗ ಜುಲೈ 08 ಮತ್ತು 15 ರಂದು ಸಂಚರಿಸಲಿದೆ.
  • ರೈಲು ಸಂಖ್ಯೆ 06560 ನಾರಂಗಿ ಟು ಎಸ್‌ಎಂವಿಟಿ ಬೆಂಗಳೂರು ಎಕ್ಸ್‌ಪ್ರೆಸ್ ವಿಶೇಷ ರೈಲು ಶನಿವಾರದಂದು ಸಂಚಾರ ಮುಂದುವರಿಸಲಿದೆ. ಈ ಹಿಂದೆ ಜೂನ್​ 14 ರವರೆಗೆ ತಿಳಿಸಲಾಗಿತ್ತು. ಆದರೆ ಈಗ ಜುಲೈ 12 ಮತ್ತು 19 ರಂದು ಸಂಚಾರ ಮುಂದುವರಿಸಲಿದೆ.
  • ರೈಲು ಸಂಖ್ಯೆ 06559/06560 ವಿಸ್ತರಿಸಿದ ಅವಧಿಯಲ್ಲಿ ಪ್ರತಿ ದಿಕ್ಕಿನಲ್ಲಿ 2 ಟ್ರಿಪ್ ಸಂಚರಿಸಲಿದೆ.

ಎಸ್‌ಎಂವಿಟಿ ಬೆಂಗಳೂರು ಟು ಮಾಲ್ಡಾ ಟೌನ್ ಟು ಎಸ್‌ಎಂವಿಟಿ ಬೆಂಗಳೂರು ಎಕ್ಸ್‌ಪ್ರೆಸ್‌ ವಿಶೇಷ

  • ರೈಲು ಸಂಖ್ಯೆ 06565 ಎಸ್‌ಎಂವಿಟಿ ಬೆಂಗಳೂರು ಟು ಮಾಲ್ಯಾ ಟೌನ್ ಎಕ್ಸ್‌ಪ್ರೆಸ್ ವಿಶೇಷ ರೈಲು ಈ ಹಿಂದೆ ಜೂನ್​ 15 ರವರೆಗೆ ಸಂಚರಿಸಲಿದೆ ಎಂದು ತಿಳಿಸಲಾಗಿತ್ತು. ಇದೀಗ ಭಾನುವಾರ (13.07.2025) ರಂದು ಸಂಚರಿಸಲಿದೆ.
  • ರೈಲು ಸಂಖ್ಯೆ 06566 ಮಾಲ್ಡಾ ಟೌನ್ ಟು ಎಸ್‌ಎಂವಿಟಿ ಬೆಂಗಳೂರು ಎಕ್ಸ್‌ಪ್ರೆಸ್‌ ವಿಶೇಷ ರೈಲು ಈ ಹಿಂದೆ ಜೂನ್ 18 ರವರೆಗೆ ತಿಳಿಸಲಾಗಿತ್ತು. ಈಗ ಬುಧವಾರ (16.07.2025) ರಂದು ಸಂಚರಿಸಲಿದೆ.
  • ರೈಲು ಸಂಖ್ಯೆ 06565/06566 ವಿಸ್ತರಿಸಿದ ಅವಧಿಯಲ್ಲಿ ಪ್ರತಿ ದಿಕ್ಕಿನಲ್ಲಿ 1 ಟ್ರಿಪ್ ಸಂಚರಿಸಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ