AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಸಭೆಯಲ್ಲಿ ತಜ್ಞರು ಕೊಟ್ಟ ಸಲಹೆಗಳು.. ಸೀಲ್​ಡೌನ್​, ನೈಟ್​ ಕರ್ಫ್ಯೂ ಯಾವುದೂ ಬೇಡ; ಮಕ್ಕಳು ಶಾಲೆಗಳಿಗೆ ಬರುವುದು ಬೇಡ

No lockdown in karnataka: ವಿಧಾನಸೌಧದಲ್ಲಿ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ನಡೆದಿರುವ ಸಭೆಯಲ್ಲಿ ತಾಂತ್ರಿಕ ಸಲಹಾ ಸಮಿತಿಯಿಂದಲೂ ಸಲಹೆಗಳು ಕೇಳಿಬಂದಿದ್ದು, ಸೀಲ್​ಡೌನ್​ ಮತ್ತು ನೈಟ್​ ಕರ್ಫ್ಯೂ ಯಾವುದೂ ಬೇಡ ಎಂಬ ಸಲಹೆ ಮೂಡಿಬಂದಿದೆ ಎಂದು ತಿಳಿದುಬಂದಿದೆ.

ಸಿಎಂ ಸಭೆಯಲ್ಲಿ ತಜ್ಞರು ಕೊಟ್ಟ ಸಲಹೆಗಳು..  ಸೀಲ್​ಡೌನ್​, ನೈಟ್​ ಕರ್ಫ್ಯೂ ಯಾವುದೂ ಬೇಡ; ಮಕ್ಕಳು ಶಾಲೆಗಳಿಗೆ ಬರುವುದು ಬೇಡ
ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ
Follow us
ಸಾಧು ಶ್ರೀನಾಥ್​
|

Updated on:Mar 15, 2021 | 6:27 PM

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಹಾವಳಿ ಮತ್ತೆ ಹೆಚ್ಚಾಗುವ ಲಕ್ಷಣಗಳಿವೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ಅವರು ಉನ್ನತ ಮಟ್ಟದ ಅಧಿಕಾರಿಗಳು, ತಜ್ಞರ ಸಭೆಗಳನ್ನು ನಡೆಸಿದ್ದು, ಕೊರೊನಾಗೆ ಕಡಿವಾಣ ಹಾಕಲು ತಕ್ಷಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಮಾಲೋಚನೆ ನಡೆಸುತ್ತಿದ್ದಾರೆ. ಇನ್ನೇನು ಕೆಲವೇ ಕ್ಷಣಗಳಲ್ಲಿ ಸ್ವತಃ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸರ್ಕಾರದ ಮಾರ್ಗಸೂಚಿಗಳನ್ನು ಪ್ರಕಟಿಸುವ ಸಾಧ್ಯತೆಯಿದೆ.

ಈ ಸಲಹೆಗಳ ಪೈಕಿ ಮುಖ್ಯವಾಗಿ 6 ರಿಂದ 9 ನೇ ತರಗತಿಯವರಿಗೆ ಆನ್ ಲೈನ್ ಕ್ಲಾಸ್ ಮಾತ್ರ ಮಾಡಿ, ತರಗತಿಗಳನ್ನು ರದ್ದುಗೊಳಿಸಿ ಎಂದು ತಜ್ಞರ ತಂಡದಿಂದ ಸಲಹೆ ಕೇಳಿಬಂದಿದೆ. ಆದರೆ ಬಹುತೇಕ ಕಡೆ ಈಗ 9 ನೇ ತರಗತಿಗೆ ಪರೀಕ್ಷಾ ಸಮಯ. ಹಾಗಾಗಿ ತಜ್ಞರ ಸಲಹೆ ಅಂಗೀಕಾರವಾದರೆ 9 ನೇ ತರಗತಿ ಪರೀಕ್ಷೆಗಳು ರದ್ದಾಗುವ ಸಾಧ್ಯತೆಯಿರುತ್ತದೆ. ಜೊತೆಗೆ, ಈ ಬಾರಿ 1 ರಿಂದ ನೇ ತರಗತಿಯವರಿಗೆ ಪರೀಕ್ಷೆಗಳೆ ಇಲ್ಲದೆ ತೇರ್ಗಡೆಗೊಳ್ಳುವ ಸಾಧ್ಯತೆಯಿರುತ್ತದೆ.

ವಿಧಾನಸೌಧದಲ್ಲಿ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ನಡೆದಿರುವ ಸಭೆಯಲ್ಲಿ ತಾಂತ್ರಿಕ ಸಲಹಾ ಸಮಿತಿಯಿಂದಲೂ ಸಲಹೆಗಳು ಕೇಳಿಬಂದಿದ್ದು, ಸೀಲ್​ಡೌನ್​ ಮತ್ತು ನೈಟ್​ ಕರ್ಫ್ಯೂ ಯಾವುದೂ ಬೇಡ ಎಂಬ ಸಲಹೆ ಮೂಡಿಬಂದಿದೆ ಎಂದು ತಿಳಿದುಬಂದಿದೆ.

ಸದ್ಯಕ್ಕೆ ತಜ್ಞರಿಂದ ರಾಜ್ಯ ಸರ್ಕಾರಕ್ಕೆ ಒಂದಷ್ಟು ಸಲಹೆಗಳು ಬಂದಿದ್ದು, ಅವು ಹೀಗಿವೆ: 1) 1 – 6 ನೇ ತರಗತಿ ವಿದ್ಯಾರ್ಥಿಗಳಿಗೆ ಕ್ಲಾಸ್ ಆರಂಭ ಬೇಡ 2) 6 ರಿಂದ 9 ನೇ ತರಗತಿಯವರಿಗೆ ಆನ್ ಲೈನ್ ಕ್ಲಾಸ್ ಮಾತ್ರ ಮಾಡಿ ತರಗತಿ ರದ್ದುಗೊಳಿಸಿ 3) ಅಪಾರ್ಟ್ ಮೆಂಟ್ ಗಳಲ್ಲೂ ವ್ಯಾಕ್ಸಿನೇಷನ್ ಗೆ ವ್ಯವಸ್ಥೆ ಮಾಡಬೇಕು 4) 60 ವರ್ಷದ ಒಳಗಿನವರಿಗೂ ವ್ಯಾಕ್ಸಿನೇಷನ್ ಗೆ ಸಲಹೆ 5) ಮಾಸ್ಕ್ ಕಡ್ಡಾಯಗೊಳಿಸಿ, ಜಾಗೃತಿ ಮೂಡಿಸುವುದು 6) ಅಂತಾರಾಜ್ಯ ಪ್ರಯಾಣಿಕರಿಗೆ ಟೆಸ್ಟ್ ರಿಪೋರ್ಟ್ ಕಡ್ಡಾಯ

Published On - 6:21 pm, Mon, 15 March 21

ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಹೋರಿಗೆ ಕೇಕ್ ತಿನ್ನಿಸಿ ತಾನೂ ತಿಂದ ಮಾಜಿ ಸಚಿವ ರೇಣುಕಾಚಾರ್ಯ
ಹೋರಿಗೆ ಕೇಕ್ ತಿನ್ನಿಸಿ ತಾನೂ ತಿಂದ ಮಾಜಿ ಸಚಿವ ರೇಣುಕಾಚಾರ್ಯ
ಚಾರ್ಮಾಡಿ ಘಾಟಿ ಡೇಂಜರ್ ಡೇಂಜರ್ ಮತ್ತಷ್ಟು ಕುಸಿಯುವ ಆತಂಕ
ಚಾರ್ಮಾಡಿ ಘಾಟಿ ಡೇಂಜರ್ ಡೇಂಜರ್ ಮತ್ತಷ್ಟು ಕುಸಿಯುವ ಆತಂಕ
ಯಾದಗಿರಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ; ವಾಹನ ಸಂಚಾರ, ಜನಜೀವನ ಅಸ್ತವ್ಯಸ್ತ
ಯಾದಗಿರಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ; ವಾಹನ ಸಂಚಾರ, ಜನಜೀವನ ಅಸ್ತವ್ಯಸ್ತ
ಸಚಿವರ ಬೇಜವಾಬ್ದಾರಿತನಕ್ಕೆ ಅಸಮಾಧಾನ ಹೊರಹಾಕಿದ ಸಿದ್ದರಾಮಯ್ಯ
ಸಚಿವರ ಬೇಜವಾಬ್ದಾರಿತನಕ್ಕೆ ಅಸಮಾಧಾನ ಹೊರಹಾಕಿದ ಸಿದ್ದರಾಮಯ್ಯ
ಪರಿಸರ ಮಾಲಿನ್ಯ ಹೆಚ್ಚುತ್ತಿರುವ ಬೆಂಗಳೂರಿಗೆ ಬೇಕು ಎಲೆಕ್ಟ್ರಿಕ್ ಬಸ್​ಗಳು
ಪರಿಸರ ಮಾಲಿನ್ಯ ಹೆಚ್ಚುತ್ತಿರುವ ಬೆಂಗಳೂರಿಗೆ ಬೇಕು ಎಲೆಕ್ಟ್ರಿಕ್ ಬಸ್​ಗಳು
ಕರಾವಳಿ ಪ್ರಾಂತ್ಯದ ಗಲಭೆಗಳಿಗೆ ಸಾಮಾಜಿಕ ಜಾಲತಾಣ ದೂರಿದ ಗುಂಡೂರಾವ್
ಕರಾವಳಿ ಪ್ರಾಂತ್ಯದ ಗಲಭೆಗಳಿಗೆ ಸಾಮಾಜಿಕ ಜಾಲತಾಣ ದೂರಿದ ಗುಂಡೂರಾವ್
ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಮೇಲೆ ಕುಳಿತು ವ್ಯಕ್ತಿಯ ಹುಚ್ಚಾಟ
ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಮೇಲೆ ಕುಳಿತು ವ್ಯಕ್ತಿಯ ಹುಚ್ಚಾಟ
‘ಸುಧಾರಾಣಿ ಕಣ್ಣಲ್ಲೇ ನಟಿಸ್ತಾರೆ’; ಬಾಯ್ತುಂಬ ಹೊಗಳಿದ ರವಿಚಂದ್ರನ್
‘ಸುಧಾರಾಣಿ ಕಣ್ಣಲ್ಲೇ ನಟಿಸ್ತಾರೆ’; ಬಾಯ್ತುಂಬ ಹೊಗಳಿದ ರವಿಚಂದ್ರನ್