AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೆಡಿಎಸ್ ಪಕ್ಷದಿಂದ ಉಚ್ಚಾಟನೆ: ವರಿಷ್ಠರ ಕ್ರಮ ಪ್ರಶ್ನಿಸಿದ್ದ ಸಿಎಂ ಇಬ್ರಾಹಿಂ ದಾವೆ ವಜಾ

ಜೆಡಿಎಸ್ ಪಕ್ಷದಿಂದ ಉಚ್ಚಾಟನೆ ಕ್ರಮ ಪ್ರಶ್ನಿಸಿದ್ದ ಸಿ.ಎಂ.ಇಬ್ರಾಹಿಂ ದಾವೆಯನ್ನು ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ವಜಾ ಮಾಡಲಾಗಿದೆ. ಹೆಚ್.ಡಿ.ದೇವೇಗೌಡ ಮತ್ತು ಹೆಚ್​​ಡಿ ಕುಮಾರಸ್ವಾಮಿ ಪ್ರತಿವಾದಿಯಾಗಿ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್​ಗೆ ಇಬ್ರಾಹಿಂ ಅರ್ಜಿ ಸಲ್ಲಿಸಿದ್ದರು. ದಾವೆ ಊರ್ಜಿತವಲ್ಲವೆಂದು ಹೆಚ್​ಡಿ ಕುಮಾರಸ್ವಾಮಿ ಪರ ವಕೀಲ ನಿಶಾಂತ್ ವಾದಿಸಿದ್ದಾರೆ.

ಜೆಡಿಎಸ್ ಪಕ್ಷದಿಂದ ಉಚ್ಚಾಟನೆ: ವರಿಷ್ಠರ ಕ್ರಮ ಪ್ರಶ್ನಿಸಿದ್ದ ಸಿಎಂ ಇಬ್ರಾಹಿಂ ದಾವೆ ವಜಾ
ಸಿ.ಎಂ.ಇಬ್ರಾಹಿಂ
Ramesha M
| Edited By: |

Updated on: Mar 22, 2024 | 9:36 PM

Share

ಬೆಂಗಳೂರು, ಮಾರ್ಚ್​ 22: ಜೆಡಿಎಸ್ ಪಕ್ಷದಿಂದ ಉಚ್ಚಾಟನೆ ಕ್ರಮ ಪ್ರಶ್ನಿಸಿದ್ದ ಸಿ.ಎಂ.ಇಬ್ರಾಹಿಂ (C.M Ibrahim) ದಾವೆಯನ್ನು ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ವಜಾ ಮಾಡಲಾಗಿದೆ. ಹೆಚ್.ಡಿ.ದೇವೇಗೌಡ ಮತ್ತು ಹೆಚ್​​ಡಿ ಕುಮಾರಸ್ವಾಮಿ ಪ್ರತಿವಾದಿಯಾಗಿ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್​ಗೆ ಇಬ್ರಾಹಿಂ ಅರ್ಜಿ ಸಲ್ಲಿಸಿದ್ದರು. ಪದಾಧಿಕಾರಿಗಳ ಉಚ್ಚಾಟನೆ, ಹಂಗಾಮಿ ಅಧ್ಯಕ್ಷರ ನೇಮಕ ಪ್ರಶ್ನಿಸಿದ್ದರು. ಈ ವೇಳೆ ದಾವೆ ಊರ್ಜಿತವಲ್ಲವೆಂದು ಹೆಚ್​ಡಿ ಕುಮಾರಸ್ವಾಮಿ ಪರ ವಕೀಲ ನಿಶಾಂತ್ ವಾದಿಸಿದ್ದಾರೆ.

ಉಚ್ಛಾಟಿನೆ ಬಳಿಕ ಸಿಎಂ ಇಬ್ರಾಹಿಂ ಅವರು ಕೋರ್ಟ್‌ ಮೆಟ್ಟಿಲೇರಿದ್ದರು. ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದಿಂದ ತಮ್ಮನ್ನು ಉಚ್ಚಾಟನೆ ಮಾಡಿದ ವರಿಷ್ಠರ ಕ್ರಮ ಪ್ರಶ್ನಿಸಿ ಇಬ್ರಾಹಿಂ ಅವರು ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಜೆಡಿಎಸ್ ವರಿಷ್ಠ ಹೆಚ್​ಡಿ ದೇವೇಗೌಡ, ಹೆಚ್.ಡಿ ಕುಮಾರಸ್ವಾಮಿ ಅವರನ್ನು ಪ್ರತಿವಾದಿಯಾಗಿಸಿದ್ದರು.

ಇದನ್ನೂ ಓದಿ: ಜೆಡಿಎಸ್​ನಿಂದ ಸಿ.ಎಂ.ಇಬ್ರಾಹಿಂ ಅಧಿಕೃತವಾಗಿ ಉಚ್ಚಾಟನೆ, ರಾಷ್ಟ್ರೀಯ ಉಪಾಧ್ಯಕ್ಷರಿಗೂ ಗೇಟ್​ಪಾಸ್

ಜೆಡಿಎಸ್ ವರಿಷ್ಠರು ಯಾವುದೇ ಮುನ್ಸೂಚನೆ ನೀಡದೇ ತಮ್ಮನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಉಚ್ಛಾಟನೆ ಮಾಡಿ ಆದೇಶ ಹೊರಡಿಸಿದ್ದನ್ನು ಪ್ರಶ್ನಿಸಿ ಸಿಟಿ ಸಿವಿಲ್ ಕೋರ್ಟ್​ನಲ್ಲಿ ಮೊಕದ್ದಮೆ ದಾಖಲಿಸಿದ್ದರು. ತಮ್ಮನ್ನು ಕಾನೂನು ಬಾಹಿರವಾಗಿ ಉಚ್ಚಾಟನೆ ಮಾಡಲಾಗಿದೆ ಎಂದು ಆರೋಪಿಸಿದ್ದರು. ವಕೀಲ ಶತಬೀಷ್ ಹಾಗೂ ಶಿವಣ್ಣ ಮೂಲಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆ ಮಾಡಿದ್ದು, ಈ ಅರ್ಜಿ ಕೋರ್ಟ್​ನಲ್ಲಿ ವಿಚಾರಣೆ ಮಾಡಲಾಗಿದೆ.

ನಮ್ಮದೇ ಒರಿಜಿನಲ್ ಜೆಡಿಎಸ್, ಬಿಜೆಪಿಗೆ ಬೆಂಬಲ ಇಲ್ಲ ಎಂದು ಸ್ವಪಪಕ್ಷದ ವರಿಷ್ಠರ ವಿರುದ್ಧವೇ ಗುಡುಗಿದ್ದ  ಸಿ.ಎಂ ಇಬ್ರಾಹಿಂ ಅವರನ್ನು ಅಕ್ಟೋಬರ್ 19ರಂದು ಪಕ್ಷದಿಂದ ಉಚ್ಚಾಟನೆ ಮಾಡಲಾಗಿತ್ತು. ಇಬ್ರಾಹಿಂ ಮಾತಿಗೆ ದೇವೇಗೌಡ ಹಾಗೂ ಹೆಚ್.ಡಿ.ಕುಮಾರಸ್ವಾಮಿ ಸೇರಿದಂತೆ ಇತರೆ ಜೆಡಿಎಸ್ ನಾಯಕರು ಸಿಡಿಮಿಡಿಗೊಂಡಿದ್ದರು.

ಇದನ್ನೂ ಓದಿ: ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದಿಂದ ಸಿ.ಎಂ. ಇಬ್ರಾಹಿಂ ವಜಾ: ಹೆಚ್​ಡಿ ದೇವೇಗೌಡ ಪತ್ರ ವೈರಲ್

ಅಲ್ಲದೇ ಕೆಲ ಜೆಡಿಎಸ್ ನಾಯಕರು ಇಬ್ರಾಹಿಂ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡುವಂತೆ ಪಟ್ಟು ಹಿಡಿದಿದ್ದರು. ಅದರಂತೆ ಅಂತಿಮವಾಗಿ ಇಬ್ರಾಹಿಂ ಅವರನ್ನು ಜೆಡಿಎಸ್ ಪಕ್ಷದಿಂದ ಉಚ್ಛಾಟನೆ ಮಾಡಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Ramesha M
Ramesha M
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು