ಜೆಡಿಎಸ್ ಪಕ್ಷದಿಂದ ಉಚ್ಚಾಟನೆ: ವರಿಷ್ಠರ ಕ್ರಮ ಪ್ರಶ್ನಿಸಿದ್ದ ಸಿಎಂ ಇಬ್ರಾಹಿಂ ದಾವೆ ವಜಾ

ಜೆಡಿಎಸ್ ಪಕ್ಷದಿಂದ ಉಚ್ಚಾಟನೆ ಕ್ರಮ ಪ್ರಶ್ನಿಸಿದ್ದ ಸಿ.ಎಂ.ಇಬ್ರಾಹಿಂ ದಾವೆಯನ್ನು ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ವಜಾ ಮಾಡಲಾಗಿದೆ. ಹೆಚ್.ಡಿ.ದೇವೇಗೌಡ ಮತ್ತು ಹೆಚ್​​ಡಿ ಕುಮಾರಸ್ವಾಮಿ ಪ್ರತಿವಾದಿಯಾಗಿ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್​ಗೆ ಇಬ್ರಾಹಿಂ ಅರ್ಜಿ ಸಲ್ಲಿಸಿದ್ದರು. ದಾವೆ ಊರ್ಜಿತವಲ್ಲವೆಂದು ಹೆಚ್​ಡಿ ಕುಮಾರಸ್ವಾಮಿ ಪರ ವಕೀಲ ನಿಶಾಂತ್ ವಾದಿಸಿದ್ದಾರೆ.

ಜೆಡಿಎಸ್ ಪಕ್ಷದಿಂದ ಉಚ್ಚಾಟನೆ: ವರಿಷ್ಠರ ಕ್ರಮ ಪ್ರಶ್ನಿಸಿದ್ದ ಸಿಎಂ ಇಬ್ರಾಹಿಂ ದಾವೆ ವಜಾ
ಸಿ.ಎಂ.ಇಬ್ರಾಹಿಂ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Mar 22, 2024 | 9:36 PM

ಬೆಂಗಳೂರು, ಮಾರ್ಚ್​ 22: ಜೆಡಿಎಸ್ ಪಕ್ಷದಿಂದ ಉಚ್ಚಾಟನೆ ಕ್ರಮ ಪ್ರಶ್ನಿಸಿದ್ದ ಸಿ.ಎಂ.ಇಬ್ರಾಹಿಂ (C.M Ibrahim) ದಾವೆಯನ್ನು ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ವಜಾ ಮಾಡಲಾಗಿದೆ. ಹೆಚ್.ಡಿ.ದೇವೇಗೌಡ ಮತ್ತು ಹೆಚ್​​ಡಿ ಕುಮಾರಸ್ವಾಮಿ ಪ್ರತಿವಾದಿಯಾಗಿ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್​ಗೆ ಇಬ್ರಾಹಿಂ ಅರ್ಜಿ ಸಲ್ಲಿಸಿದ್ದರು. ಪದಾಧಿಕಾರಿಗಳ ಉಚ್ಚಾಟನೆ, ಹಂಗಾಮಿ ಅಧ್ಯಕ್ಷರ ನೇಮಕ ಪ್ರಶ್ನಿಸಿದ್ದರು. ಈ ವೇಳೆ ದಾವೆ ಊರ್ಜಿತವಲ್ಲವೆಂದು ಹೆಚ್​ಡಿ ಕುಮಾರಸ್ವಾಮಿ ಪರ ವಕೀಲ ನಿಶಾಂತ್ ವಾದಿಸಿದ್ದಾರೆ.

ಉಚ್ಛಾಟಿನೆ ಬಳಿಕ ಸಿಎಂ ಇಬ್ರಾಹಿಂ ಅವರು ಕೋರ್ಟ್‌ ಮೆಟ್ಟಿಲೇರಿದ್ದರು. ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದಿಂದ ತಮ್ಮನ್ನು ಉಚ್ಚಾಟನೆ ಮಾಡಿದ ವರಿಷ್ಠರ ಕ್ರಮ ಪ್ರಶ್ನಿಸಿ ಇಬ್ರಾಹಿಂ ಅವರು ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಜೆಡಿಎಸ್ ವರಿಷ್ಠ ಹೆಚ್​ಡಿ ದೇವೇಗೌಡ, ಹೆಚ್.ಡಿ ಕುಮಾರಸ್ವಾಮಿ ಅವರನ್ನು ಪ್ರತಿವಾದಿಯಾಗಿಸಿದ್ದರು.

ಇದನ್ನೂ ಓದಿ: ಜೆಡಿಎಸ್​ನಿಂದ ಸಿ.ಎಂ.ಇಬ್ರಾಹಿಂ ಅಧಿಕೃತವಾಗಿ ಉಚ್ಚಾಟನೆ, ರಾಷ್ಟ್ರೀಯ ಉಪಾಧ್ಯಕ್ಷರಿಗೂ ಗೇಟ್​ಪಾಸ್

ಜೆಡಿಎಸ್ ವರಿಷ್ಠರು ಯಾವುದೇ ಮುನ್ಸೂಚನೆ ನೀಡದೇ ತಮ್ಮನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಉಚ್ಛಾಟನೆ ಮಾಡಿ ಆದೇಶ ಹೊರಡಿಸಿದ್ದನ್ನು ಪ್ರಶ್ನಿಸಿ ಸಿಟಿ ಸಿವಿಲ್ ಕೋರ್ಟ್​ನಲ್ಲಿ ಮೊಕದ್ದಮೆ ದಾಖಲಿಸಿದ್ದರು. ತಮ್ಮನ್ನು ಕಾನೂನು ಬಾಹಿರವಾಗಿ ಉಚ್ಚಾಟನೆ ಮಾಡಲಾಗಿದೆ ಎಂದು ಆರೋಪಿಸಿದ್ದರು. ವಕೀಲ ಶತಬೀಷ್ ಹಾಗೂ ಶಿವಣ್ಣ ಮೂಲಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆ ಮಾಡಿದ್ದು, ಈ ಅರ್ಜಿ ಕೋರ್ಟ್​ನಲ್ಲಿ ವಿಚಾರಣೆ ಮಾಡಲಾಗಿದೆ.

ನಮ್ಮದೇ ಒರಿಜಿನಲ್ ಜೆಡಿಎಸ್, ಬಿಜೆಪಿಗೆ ಬೆಂಬಲ ಇಲ್ಲ ಎಂದು ಸ್ವಪಪಕ್ಷದ ವರಿಷ್ಠರ ವಿರುದ್ಧವೇ ಗುಡುಗಿದ್ದ  ಸಿ.ಎಂ ಇಬ್ರಾಹಿಂ ಅವರನ್ನು ಅಕ್ಟೋಬರ್ 19ರಂದು ಪಕ್ಷದಿಂದ ಉಚ್ಚಾಟನೆ ಮಾಡಲಾಗಿತ್ತು. ಇಬ್ರಾಹಿಂ ಮಾತಿಗೆ ದೇವೇಗೌಡ ಹಾಗೂ ಹೆಚ್.ಡಿ.ಕುಮಾರಸ್ವಾಮಿ ಸೇರಿದಂತೆ ಇತರೆ ಜೆಡಿಎಸ್ ನಾಯಕರು ಸಿಡಿಮಿಡಿಗೊಂಡಿದ್ದರು.

ಇದನ್ನೂ ಓದಿ: ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದಿಂದ ಸಿ.ಎಂ. ಇಬ್ರಾಹಿಂ ವಜಾ: ಹೆಚ್​ಡಿ ದೇವೇಗೌಡ ಪತ್ರ ವೈರಲ್

ಅಲ್ಲದೇ ಕೆಲ ಜೆಡಿಎಸ್ ನಾಯಕರು ಇಬ್ರಾಹಿಂ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡುವಂತೆ ಪಟ್ಟು ಹಿಡಿದಿದ್ದರು. ಅದರಂತೆ ಅಂತಿಮವಾಗಿ ಇಬ್ರಾಹಿಂ ಅವರನ್ನು ಜೆಡಿಎಸ್ ಪಕ್ಷದಿಂದ ಉಚ್ಛಾಟನೆ ಮಾಡಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ತಾಜಾ ಸುದ್ದಿ
‘ಪ್ಯಾನ್ ಇಂಡಿಯಾ ಅಂದ್ರೆ ಹೀರೋಗಳ ಶೋಕಿ; ದಾಡಿ ಬೆಳೆಯತ್ತೆ ಅಷ್ಟೇ’: ಹಂಸಲೇಖ
‘ಪ್ಯಾನ್ ಇಂಡಿಯಾ ಅಂದ್ರೆ ಹೀರೋಗಳ ಶೋಕಿ; ದಾಡಿ ಬೆಳೆಯತ್ತೆ ಅಷ್ಟೇ’: ಹಂಸಲೇಖ
ಜೈಲಿನಲ್ಲಿರುವ ದರ್ಶನ್​ ನೋಡಲು ಅತ್ತಿಗೆ ಜೊತೆ ಬಂದ ದಿನಕರ್ ತೂಗುದೀಪ
ಜೈಲಿನಲ್ಲಿರುವ ದರ್ಶನ್​ ನೋಡಲು ಅತ್ತಿಗೆ ಜೊತೆ ಬಂದ ದಿನಕರ್ ತೂಗುದೀಪ
ಅವಸರ ಯಾಕೆ?ನಾಳೆ ಚರ್ಚೆ ಮುಂದುವರಿಸುವ ಎಂದು ಸಿಎಂ, ಡಿಸಿಎಂಗೆ ಹೇಳಿದ ವಿಪಕ್ಷ
ಅವಸರ ಯಾಕೆ?ನಾಳೆ ಚರ್ಚೆ ಮುಂದುವರಿಸುವ ಎಂದು ಸಿಎಂ, ಡಿಸಿಎಂಗೆ ಹೇಳಿದ ವಿಪಕ್ಷ
‘ದರ್ಶನ್ ನೋಡಬೇಕು’: ಚಿತ್ರದುರ್ಗದಿಂದ ಬಂದು ಜೈಲಿನ ಹೊರಗೆ ಕಾದ ಫ್ಯಾನ್ಸ್
‘ದರ್ಶನ್ ನೋಡಬೇಕು’: ಚಿತ್ರದುರ್ಗದಿಂದ ಬಂದು ಜೈಲಿನ ಹೊರಗೆ ಕಾದ ಫ್ಯಾನ್ಸ್
ಡಿಕೆ ಶಿವಕುಮಾರ್ ವಿರುದ್ಧ ಹೆಚ್ ಡಿ ಕುಮಾರಸ್ವಾಮಿ ಇನ್ನೊಂದು ಗಂಭೀರ ಆರೋಪ
ಡಿಕೆ ಶಿವಕುಮಾರ್ ವಿರುದ್ಧ ಹೆಚ್ ಡಿ ಕುಮಾರಸ್ವಾಮಿ ಇನ್ನೊಂದು ಗಂಭೀರ ಆರೋಪ
 ಸಿಬಿಐ ತನಿಖೆ ನಡೆಸಿ ಎಂದ ಯತ್ನಾಳ್​; ಸೀರಿಯಸ್​ನೆಸ್ಸೇ ಇಲ್ವಲ್ರೀ ಎಂದ ಸಿಎಂ
 ಸಿಬಿಐ ತನಿಖೆ ನಡೆಸಿ ಎಂದ ಯತ್ನಾಳ್​; ಸೀರಿಯಸ್​ನೆಸ್ಸೇ ಇಲ್ವಲ್ರೀ ಎಂದ ಸಿಎಂ
ಚರ್ಚೆ ಬೇಕೆಂದ ಎಂದ ವಿಪಕ್ಷ ಸದಸ್ಯರಿಗೆ ಯಾವುದೇ ಚರ್ಚೆಗೆ ಸಿದ್ಧ ಎಂದ ಸಿಎಂ
ಚರ್ಚೆ ಬೇಕೆಂದ ಎಂದ ವಿಪಕ್ಷ ಸದಸ್ಯರಿಗೆ ಯಾವುದೇ ಚರ್ಚೆಗೆ ಸಿದ್ಧ ಎಂದ ಸಿಎಂ
ಮೋಹರಂ: ನಿಗಿ ನಿಗಿ ಕೆಂಡದ ಮೇಲೆ ಕಂಬಳಿ ಹಾಕಿ ಕುಳಿತ ಯುವಕ
ಮೋಹರಂ: ನಿಗಿ ನಿಗಿ ಕೆಂಡದ ಮೇಲೆ ಕಂಬಳಿ ಹಾಕಿ ಕುಳಿತ ಯುವಕ
ದ್ರಾವಿಡ್ ವಿಷಯ ಪ್ರಸ್ತಾಪಿಸಿದ ಸುರೇಶ್ ಕುಮಾರ್​​ಗೆ ಸ್ಪೀಕರ್ ಮೆಚ್ಚುಗೆ
ದ್ರಾವಿಡ್ ವಿಷಯ ಪ್ರಸ್ತಾಪಿಸಿದ ಸುರೇಶ್ ಕುಮಾರ್​​ಗೆ ಸ್ಪೀಕರ್ ಮೆಚ್ಚುಗೆ
ವಿಧಾನಪರಿಷತ್​ ಮುಂಗಾರು ಅಧಿವೇಶನದ ನೇರ ಪ್ರಸಾರ
ವಿಧಾನಪರಿಷತ್​ ಮುಂಗಾರು ಅಧಿವೇಶನದ ನೇರ ಪ್ರಸಾರ