Fact Check: ಹಿಂದೂಗಳ ಜತೆ ವ್ಯಾಪಾರ ಬಹಿಷ್ಕರಿಸಿ ಎಂದರೇ ಬೆಂಗಳೂರಿನ ಮುಸ್ಲಿಮರು? ವಾಸ್ತವ ಇಲ್ಲಿದೆ ನೋಡಿ

ಹಿಂದೂಗಳ ವ್ಯವಹಾರವನ್ನು ಬಹಿಷ್ಕರಿಸಿ ಎಂದು ಬೆಂಗಳೂರಿನ ಮುಸ್ಲಿಮರು ಕರೆ ನೀಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಡಿರುವ ವಿಡಿಯೋದ ಅಸಲಿಯತ್ತನ್ನು ಕರ್ನಾಟಕ ಪೊಲೀಸರು ಬಯಲಿಗೆಳೆದಿದ್ದಾರೆ.

Fact Check: ಹಿಂದೂಗಳ ಜತೆ ವ್ಯಾಪಾರ ಬಹಿಷ್ಕರಿಸಿ ಎಂದರೇ ಬೆಂಗಳೂರಿನ ಮುಸ್ಲಿಮರು? ವಾಸ್ತವ ಇಲ್ಲಿದೆ ನೋಡಿ
ವೈರಲ್ ವಿಡಿಯೋದಿಂದ ತೆಗೆದ ಸ್ಕ್ರೀನ್​ಶಾಟ್
Prajwal D'Souza Edited By:

Updated on: Jul 01, 2023 | 12:25 PM

ಬೆಂಗಳೂರು: ಹಿಂದೂಗಳ ವ್ಯವಹಾರವನ್ನು ಬಹಿಷ್ಕರಿಸಿ ಎಂದು ಬೆಂಗಳೂರಿನ (Bengaluru) ಮುಸ್ಲಿಮರು ಕರೆ ನೀಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ (Social Media) ಹರಡಿರುವ ವಿಡಿಯೋದ ಅಸಲಿಯತ್ತನ್ನು ಕರ್ನಾಟಕ ಪೊಲೀಸರು (Karnataka Police) ಬಯಲಿಗೆಳೆದಿದ್ದಾರೆ. ಇದು ರಾಜಸ್ಥಾನದ ಹಳೆಯ ವೀಡಿಯೊ ಎಂದು ಪೊಲೀಸರು ತಿಳಿಸಿದ್ದಾರೆ. ಈ ವೀಡಿಯೊ ಕ್ಲಿಪ್ ಅನ್ನು ಟ್ವಿಟರ್ ಮತ್ತು ಫೇಸ್‌ಬುಕ್‌ನಲ್ಲಿ ಅನೇಕ ಜನರು ತಪ್ಪಾದ ಮಾಹಿತಿಯೊಂದಿಗೆ ಹಂಚಿಕೊಂಡಿದ್ದಾರೆ.

ಕೆಲವು ಟ್ವೀಟ್‌ಗಳು ಇಲ್ಲಿವೆ:


ಕೆಲವರು ಈಗ ತಮ್ಮ ಪೋಸ್ಟ್‌ಗಳನ್ನು ಅಳಿಸಿದರೆ, ಇನ್ನೂ ಹಲವರು ಸುಳ್ಳು ಪ್ರತಿಪಾದನೆಯನ್ನು ಮುಂದುವರೆಸಿದ್ದಾರೆ.

ವಾಸ್ತವಾಂಶವೇನು?

ಕರ್ನಾಟಕ ರಾಜ್ಯ ಪೊಲೀಸರ ಸತ್ಯ ಪರಿಶೀಲನಾ ತಂಡದ ಪ್ರಕಾರ, ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ.

ಪ್ರಸ್ತುತ ಹರಿದಾಡುತ್ತಿರುವ ವೈರಲ್ ವೀಡಿಯೊ 2019 ರಲ್ಲಿ ರಾಜಸ್ಥಾನದ ಬಾರ್ಮರ್‌ನಲ್ಲಿ ನಡೆದಿರುವುದಕ್ಕೆ ಸಂಬಂಧಿಸಿದ್ದು. ಈ ಘಟನೆ ಬೆಂಗಳೂರಿಗೆ ಅಥವಾ ಕರ್ನಾಟಕಕ್ಕೆ ಸಂಬಂಧಿಸಿದ್ದಲ್ಲ. ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳಲ್ಲಿ ಪರಿಶೀಲಿಸದ, ಅನುಮಾನಾಸ್ಪದ ಅಥವಾ ತಪ್ಪುದಾರಿಗೆಳೆಯುವ ಮಾಹಿತಿಯನ್ನು ಹಂಚಿಕೊಳ್ಳದಂತೆ ಅಥವಾ ಪ್ರಸಾರ ಮಾಡದಂತೆ ಸಾರ್ವಜನಿಕರಿಗೆ ಸೂಚಿಸಲಾಗಿದೆ ಎಂದು ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕರ್ನಾಟಕ ಪೊಲೀಸರು ಬಾರ್ಮರ್‌ನಲ್ಲಿ ಪೊಲೀಸರು ವಿಡಿಯೋ ಸಹಿತ ನೀಡಿರುವ ಮಾಹಿತಿಯನ್ನೂ ಹಂಚಿಕೊಂಡಿದ್ದಾರೆ. ಇದೇ ವೀಡಿಯೋ ಈ ವರ್ಷದ ಮಾರ್ಚ್‌ನಲ್ಲಿಯೂ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿತ್ತು.


ಆ ಟ್ವೀಟ್‌ಗೆ ಪ್ರತಿಕ್ರಿಯಿಸಿದ್ದ ಬಾರ್ಮರ್ ಪೊಲೀಸರು, ವೀಡಿಯೋ 2019 ರ ಭೋಜಾರಿಯಾ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿದೆ ಎಂದು ಬರೆದಿದ್ದರು.

ಇದನ್ನೂ ಓದಿ: ಫೇಕ್ ನ್ಯೂಸ್‌ ಮೂಲ ಪತ್ತೆ ಮಾಡಲು ಸಿಎಂ ಖಡಕ್ ಸೂಚನೆ: ಸಾಮಾಜಿಕ ಜಾಲತಾಣ ಬಳಕೆದಾರರೇ ಎಚ್ಚರ ಎಚ್ಚರ

28-6-2019 ರಂದು, ಪೊಲೀಸ್ ಠಾಣೆ ರಾಮ್ಸಾರ್‌ನ ಗಗಾರಿಯಾ ಗ್ರಾಮದ ಪೆಟ್ರೋಲ್ ಪಂಪ್‌ನ ಮುಂದೆ ಖಾಸಗಿ ಬಸ್‌ನಲ್ಲಿ ಅಪಘಾತದಿಂದಾಗಿ ಒಬ್ಬರು ಸಾವನ್ನಪ್ಪಿದ್ದರು ಮತ್ತು ಮೂವರು ಗಾಯಗೊಂಡಿದ್ದರು. ಈ ಘಟನೆಯನ್ನು ವಿರೋಧಿಸಿ, ಮೃತರ ಸಂಬಂಧಿಕರು ಅವರ ಮನೆಯಲ್ಲಿ ಅಂತ್ಯಕ್ರಿಯೆಯ ಸಮಯದಲ್ಲಿ ಪ್ರತಿಭಟನೆಯ ಸಮಯದಲ್ಲಿ ಬೇಡಿಕೆಗಳನ್ನು ಸಲ್ಲಿಸಿದರು. ಅದೇ ಸಮಯದಲ್ಲಿ, ಅಂತಹ ಭಾಷಣವನ್ನು ಸತ್ತವರ ಸಂಬಂಧಿಕರು ಸಹ ಮಾಡಿದ್ದರು. ಆ ವೇಳೆ ನಿಯಮಾನುಸಾರ ಕ್ರಮ ಕೈಗೊಳ್ಳಲಾಗಿತ್ತು ಎಂದು ಬಾರ್ಮರ್ ಪೊಲೀಸರು ಟ್ವೀಟ್ ಮಾಡಿದ್ದಾರೆ.

ಕರ್ನಾಟಕದಲ್ಲಿ ಹಲವಾರು ಬಲಪಂಥೀಯ ಸಂಘಟನೆಗಳು ದೇವಾಲಯಗಳ ಆವರಣದಲ್ಲಿ ಮುಸ್ಲಿಂ ವ್ಯಾಪಾರಿಗಳನ್ನು ಬಹಿಷ್ಕರಿಸಲು ಕರೆ ನೀಡಿದ ಮತ್ತು ಅವರಿಂದ ವಸ್ತುಗಳನ್ನು ಖರೀದಿಸದಂತೆ ಜನರನ್ನು ಒತ್ತಾಯಿಸಿದ ಘಟನೆಗಳು ಕೆಲವು ತಿಂಗಳುಗಳ ಹಿಂದೆ ವರದಿಯಾಗಿದ್ದವು.

ಮತ್ತಷ್ಟು ಫ್ಯಾಕ್ಟ್ ಚೆಕ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Prajwal D'Souza

Prajwal is a reporter who covers the politics and current affairs of Karnataka. He is a co-host of Deccan Vahini, a live blogger and has expertise in writing explainers and long-form articles. Contact: prajwal.dsouza@tv9.com

Follow Us