AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಕಲಿ-ಕಲಬೆರಕೆ ಪನೀರ್‌ ಮಾರಾಟ ಹೆಚ್ಚಳ: ಸೂಕ್ತ ಕ್ರಮಕ್ಕೆ ಸಚಿವ ಜೆಪಿ ನಡ್ಡಾಗೆ ಪ್ರಲ್ಹಾದ ಜೋಶಿ ಪತ್ರ

ಇತ್ತೀಚೆಗೆ ಆರೋಗ್ಯ ಇಲಾಖೆ ಪರಿಶೀಲನೆ ಮಾಡಿದ್ದ ಪನ್ನೀರ್​ನಲ್ಲಿ ಬ್ಯಾಕ್ಟೀರಿಯಾ ಅಂಶಗಳು ದೃಢಪಟ್ಟಿತ್ತು. ಆ ಮೂಲಕ ಪನ್ನೀರ್​​​​​ ಪ್ರಿಯರಿಗೆ ಆಹಾರ ಇಲಾಖೆ ಶಾಕ್​ ನೀಡಿತ್ತು. ಇದೀಗ ರಾಷ್ಟ್ರೀಯ ಗ್ರಾಹಕ ಸಹಾಯವಾಣಿಗೆ ನಕಲಿ ಮತ್ತು ಕಲಬೆರಕೆ ಪನೀರ್ ಬಗ್ಗೆ ನಿರಂತರ ದೂರುಗಳು ಬರುತ್ತಿವೆ. ಈ ಬೆನ್ನಲ್ಲೇ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆರೋಗ್ಯ ಸಚಿವರಿಗೆ ಪತ್ರ ಬರೆದು ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ.

ನಕಲಿ-ಕಲಬೆರಕೆ ಪನೀರ್‌ ಮಾರಾಟ ಹೆಚ್ಚಳ: ಸೂಕ್ತ ಕ್ರಮಕ್ಕೆ ಸಚಿವ ಜೆಪಿ ನಡ್ಡಾಗೆ ಪ್ರಲ್ಹಾದ ಜೋಶಿ ಪತ್ರ
ಪ್ರಲ್ಹಾದ ಜೋಶಿ, ಜೆಪಿ ನಡ್ಡಾ
Follow us
ಗಂಗಾಧರ​ ಬ. ಸಾಬೋಜಿ
|

Updated on:Apr 05, 2025 | 7:46 AM

ಬೆಂಗಳೂರು, ಏಪ್ರಿಲ್​ 05: ದೇಶಾದ್ಯಂತ ಮಾರುಕಟ್ಟೆಯಲ್ಲಿ ನಕಲಿ ಮತ್ತು ಕಲಬೆರಕೆ ಪನೀರ್‌ (Paneer) ಮಾರಾಟವಾಗುತ್ತಿದೆ. ನಕಲಿ ಮತ್ತು ಕಲಬೆರಕೆ ಪನೀರ್ ಮಾರಾಟ ಮತ್ತು ಬಳಕೆ ಹೆಚ್ಚುತ್ತಿರುವ ಬಗ್ಗೆ ರಾಷ್ಟ್ರೀಯ ಗ್ರಾಹಕ ಸಹಾಯವಾಣಿಗೆ(NCH) ವ್ಯಾಪಕ ದೂರುಗಳು ಬರುತ್ತಿವೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳು ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ (Pralhad Joshi) ಅವರು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಜೆ.ಪಿ.ನಡ್ಡಾಗೆ ಪತ್ರ ಬರೆದಿದ್ದು, ಕ್ರಮಕ್ಕೆ ಒತ್ತಾಯಿಸಿದ್ದಾರೆ.

ಕ್ರಮಕ್ಕೆ ಒತ್ತಾಯಿಸಿ ಆರೋಗ್ಯ ಸಚಿವರಿಗೆ ಪತ್ರ

ದೇಶದ ಮಾರುಕಟ್ಟೆಗಳಲ್ಲಿ ನಕಲಿ ಮತ್ತು ಕಲಬೆರಕೆ ಪನೀರ್ ಮಾರಾಟದ ಬಗ್ಗೆ ಕಳೆದ ಕೆಲವು ದಿನಗಳಿಂದ ರಾಷ್ಟ್ರೀಯ ಗ್ರಾಹಕ ಸಹಾಯವಾಣಿ (NCH)ಗೆ ಅನೇಕ ದೂರುಗಳು ಬಂದಿವೆ. ಹೀಗಾಗಿ ಇದರ ವಿರುದ್ಧ ತ್ವರಿತ ಕ್ರಮಕೈಗೊಳ್ಳಿ ಎಂದು ಸಚಿವ ಪ್ರಲ್ಹಾದ ಜೋಶಿ ಕೇಂದ್ರ ಆರೋಗ್ಯ ಸಚಿವರಿಗೆ ಪತ್ರದ ಮೂಲಕ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಪನ್ನೀರ್ ಪ್ರಿಯರಿಗೆ ಶಾಕಿಂಗ್ ಸುದ್ದಿ: ಆಹಾರ ಇಲಾಖೆ ಪರೀಕ್ಷೆ ವೇಳೆ ಬ್ಯಾಕ್ಟೀರಿಯಾ ಅಂಶ ಪತ್ತೆ

ಇದನ್ನೂ ಓದಿ
Image
ಅಂಗಡಿಯಿಂದ ಪನೀರ್​ ಖರೀದಿಸುವಾಗ ಗಮನಿಸಬೇಕಾದ ಅಂಶಗಳಿವು
Image
ಇಡ್ಲಿ ಬಳಿಕ ಬಟಾಣಿಯಲ್ಲೂ ಆರೋಗ್ಯಕ್ಕೆ ಹಾನಿಕಾರಕ ಅಂಶ ಪತ್ತೆ: ಆರೋಗ್ಯ ಇಲಾಖೆ
Image
ಬೆಂಗಳೂರಿಗರಿಗೆ ಶಾಕಿಂಗ್ ಸುದ್ದಿ: ಇಡ್ಲಿ ತಿಂದರೂ ಬರಬಹುದು ಕ್ಯಾನ್ಸರ್‌!
Image
ಆಹಾರದಲ್ಲಿ ಕೃತಕ ಬಣ್ಣ ಬಳಸುವುದರಿಂದ ಏನೆಲ್ಲಾ ಆರೋಗ್ಯ ಸಮಸ್ಯೆ?

ಫಾಸ್ಟ್ ಫುಡ್ ಕೇಂದ್ರಗಳು, ರೆಸ್ಟೋರೆಂಟ್‌ಗಳು ಇತರೆಡೆ ನಕಲಿ ಮತ್ತು ಕಲಬೆರಕೆ ಪನೀರ್ ಮಾರಾಟ ಮಾಡಲಾಗುತ್ತಿದೆ. ವಿಶೇಷವಾಗಿ ಪನೀರ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥವಾಗಿದ್ದರಿಂದ ಇದನ್ನು ಗಮನಿಸಿರುವ ಅನೇಕ ಸಾರ್ವಜನಿಕರು ಗ್ರಾಹಕ ಸಹಾಯವಾಣಿ ಮೂಲಕ ವ್ಯಾಪಕವಾಗಿ ದೂರು ಸಲ್ಲಿಸಿ ಗಮನ ಸೆಳೆದಿದ್ದಾರೆ. ಕಲಬೆರಕೆ ಪನೀರ್‌ ಸೇವನೆಯಿಂದ ಜನರ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ ಎಂದು ಗ್ರಾಹಕರು ನೀಡಿದ ದೂರಿನಲ್ಲಿ ತೀವ್ರ ಕಳವಳ ಸಹ ವ್ಯಕ್ತಪಡಿಸಿದ್ದಾರೆ. ಅಲ್ಲದೇ, ಆಹಾರ ಗುಣಮಟ್ಟ ಮತ್ತು ಸುರಕ್ಷತೆಗಾಗಿ ಕ್ರಮಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಜನರ ದುಗುಡವನ್ನು ತಮ್ಮ ಗಮನಕ್ಕೆ ತರಬಯಸಿದ್ದೇನೆ ಎಂದು ಸಚಿವ ಜೋಶಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಗ್ರಾಹಕರು ರಾಷ್ಟ್ರೀಯ ಗ್ರಾಹಕ ಸಹಾಯವಾಣಿ ಪೋರ್ಟಲ್‌ನಲ್ಲಿ ಹಲವು ದೂರುಗಳನ್ನು ದಾಖಲಿಸಿದ್ದಾರೆ. ಇದು ದೇಶಾದ್ಯಂತ ನಕಲಿ ಮತ್ತು ಕಲಬೆರಕೆ ಪನೀರ್ ಮಾರಾಟ ಮತ್ತು ಬಳಕೆ ಹೆಚ್ಚುತ್ತಿರುವ ಪ್ರವೃತ್ತಿಯನ್ನು ಎತ್ತಿ ತೋರಿಸುತ್ತದೆ. ಅಂತಹ ನಕಲಿ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಸೇವನೆಯು ಜನರ ತೀವ್ರ ಮತ್ತು ದೀರ್ಘ ಕಾಲದ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಹಾಗಾಗಿ ಇದರ ವಿರುದ್ಧ ಕ್ರಮಕೈಗೊಳ್ಳಿ ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: Health Tips: ಅಂಗಡಿಯಿಂದ ಪನೀರ್​ ಖರೀದಿಸುವಾಗ ಗಮನಿಸಬೇಕಾದ ಅಂಶಗಳಿವು

ಪನೀರ್‌ ಉತ್ಪಾದನಾ ಸಂಸ್ಥೆಗಳು ಆಹಾರ ಸುರಕ್ಷತೆ ಮತ್ತು ಮಾನದಂಡಗಳ ಕಾಯ್ದೆ 2006ರ ಪ್ರಕಾರ ಆಹಾರ ಸುರಕ್ಷತಾ ಮಾನದಂಡಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಅಗತ್ಯ ಕ್ರಮಕೈಗೊಳ್ಳುವಂತೆ ಕೇಂದ್ರ ಆರೋಗ್ಯ ಸಚಿವರಿಗೆ ಪ್ರಲ್ಹಾದ ಜೋಶಿ ಮನವಿ ಮಾಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:43 am, Sat, 5 April 25

ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಭೂಕುಸಿತ; ಹಲವು ರಸ್ತೆಗಳು ಬಂದ್
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಭೂಕುಸಿತ; ಹಲವು ರಸ್ತೆಗಳು ಬಂದ್
ಅಣ್ಣಾವ್ರ ಸಿನಿಮಾದ ಹಾಡು ಹಾಡಿದ ಬಾಲಿವುಡ್ ಸ್ಟಾರ್ ನಟ: ವಿಡಿಯೋ ನೋಡಿ
ಅಣ್ಣಾವ್ರ ಸಿನಿಮಾದ ಹಾಡು ಹಾಡಿದ ಬಾಲಿವುಡ್ ಸ್ಟಾರ್ ನಟ: ವಿಡಿಯೋ ನೋಡಿ
ಮಂದ್ಸೌರ್ ಹೆದ್ದಾರಿಯಲ್ಲಿ ಕಾರನ್ನು 100 ಮೀಟರ್ ದೂರ ಎಳೆದೊಯ್ದ ಟ್ರಕ್
ಮಂದ್ಸೌರ್ ಹೆದ್ದಾರಿಯಲ್ಲಿ ಕಾರನ್ನು 100 ಮೀಟರ್ ದೂರ ಎಳೆದೊಯ್ದ ಟ್ರಕ್
ಮಕ್ಕಳ ಮಾನಸಿಕ, ದೈಹಿಕ ಆರೋಗ್ಯಕ್ಕೆ ಈ ಯೋಗಗಳು ಒಳ್ಳೆಯದು
ಮಕ್ಕಳ ಮಾನಸಿಕ, ದೈಹಿಕ ಆರೋಗ್ಯಕ್ಕೆ ಈ ಯೋಗಗಳು ಒಳ್ಳೆಯದು
ಬಿಜೆಪಿ ಭಿನ್ನರ ಸಭೆಯಲ್ಲಿ ಪ್ರತ್ಯಕ್ಷ: ಕೊನೆಗೂ ಸ್ಪಷ್ಟನೆ ಕೊಟ್ಟ ಸೋಮಣ್ಣ!
ಬಿಜೆಪಿ ಭಿನ್ನರ ಸಭೆಯಲ್ಲಿ ಪ್ರತ್ಯಕ್ಷ: ಕೊನೆಗೂ ಸ್ಪಷ್ಟನೆ ಕೊಟ್ಟ ಸೋಮಣ್ಣ!
ಸಿದ್ದೇಶ್ವರ ಬಂಡಾಯ ಬಿಜೆಪಿ ನಾಯಕರ ಗುಂಪಿನಲ್ಲಿ ಗುರುತಿಸಿಕೊಂಡಿದ್ದಾರೆ!
ಸಿದ್ದೇಶ್ವರ ಬಂಡಾಯ ಬಿಜೆಪಿ ನಾಯಕರ ಗುಂಪಿನಲ್ಲಿ ಗುರುತಿಸಿಕೊಂಡಿದ್ದಾರೆ!
ರಸ್ತೆ ಬದಿ ನಿಂತಿದ್ದ ಆಟೋಗೆ ಅಪ್ಪಳಿಸಿದ ಲಾರಿ ಚಕ್ರಗಳು: ಭಯಾನಕ ದೃಶ್ಯ ಸೆರೆ
ರಸ್ತೆ ಬದಿ ನಿಂತಿದ್ದ ಆಟೋಗೆ ಅಪ್ಪಳಿಸಿದ ಲಾರಿ ಚಕ್ರಗಳು: ಭಯಾನಕ ದೃಶ್ಯ ಸೆರೆ
ವಸತಿ ಯೋಜನೆ ಮೀಸಲಾತಿ, ಸದನದಲ್ಲಿ ಪ್ರಶ್ನೆ ಕೇಳಲಿ, ಉತ್ತರಿಸುವೆ: ಶಿವಕುಮಾರ್
ವಸತಿ ಯೋಜನೆ ಮೀಸಲಾತಿ, ಸದನದಲ್ಲಿ ಪ್ರಶ್ನೆ ಕೇಳಲಿ, ಉತ್ತರಿಸುವೆ: ಶಿವಕುಮಾರ್
ದೆಹಲಿ ಮೆಟ್ರೋದೊಳಗೆ ಬಂದಿತ್ತೇ ಹಾವು?
ದೆಹಲಿ ಮೆಟ್ರೋದೊಳಗೆ ಬಂದಿತ್ತೇ ಹಾವು?
ಜಂಗಲ್​​ರಾಜ್​ಗೆ ಬಿಹಾರ ಜನತೆ ಅಂತ್ಯ ಹಾಡಿದ್ದಾರೆ: ಮೋದಿ
ಜಂಗಲ್​​ರಾಜ್​ಗೆ ಬಿಹಾರ ಜನತೆ ಅಂತ್ಯ ಹಾಡಿದ್ದಾರೆ: ಮೋದಿ