AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸೋಂಕಿನ ನಡುವೆ ನಕಲಿ ವೈದ್ಯರ ಹಾವಳಿ; ಸಾರ್ವಜನಿಕರೇ ಎಚ್ಚರ

Fake doctors: ಎಸ್​ಎಸ್​ಎಲ್​ಸಿ ಅನುತ್ತೀರ್ಣನಾಗಿದ್ದರೂ ವೈದ್ಯನೆಂದು ಬೋರ್ಡ್​ ಹಾಕಿ ಚಿಕಿತ್ಸೆ ನೀಡುತ್ತಿದ್ದ ವೈದ್ಯ ಮಹಾಶಯ ದಾಳಿಯ ವೇಳೆ ಸಿಕ್ಕಿಬಿದ್ದಿದ್ದಾನೆ.

ಕೊರೊನಾ ಸೋಂಕಿನ ನಡುವೆ ನಕಲಿ ವೈದ್ಯರ ಹಾವಳಿ; ಸಾರ್ವಜನಿಕರೇ ಎಚ್ಚರ
ನಕಲಿ ಆಸ್ಪತ್ರೆ
guruganesh bhat
|

Updated on:May 06, 2021 | 4:35 PM

Share

ಕಾರವಾರ: ಕೊರೊನಾ ಸೋಂಕಿನಿಂದ ದೇಶಕ್ಕೆ ದೇಶವೇ ನಲುಗುತ್ತಿದ್ದರೆ ಚಿಕಿತ್ಸೆ, ಔಷಧ ಚಿಕಿತ್ಸೆ ಹೆಸರಲ್ಲಿ ಮೋಸ ಮಾಡುವವರು ಹುಟ್ಟಿಕೊಂಡಿರುವುದು ಬಯಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನಲ್ಲಿ ಕೊರೊನಾ ಸೋಂಕಿಗೆ ಚಿಕಿತ್ಸೆ ನೀಡುತ್ತಿದ್ದ 50 ನಕಲಿ ಕ್ಲಿನಿಕ್​ಗಳ ಮೇಲೆ ತಾಲೂಕು ಆರೋಗ್ಯಾಧಿಕಾರಿ ಡಾ.ನಿತಿನ್ ಅಧಿಕಾರಿಗಳ ತಂಡದೊಂದಿಗೆ ದಾಳಿ ನಡೆಸಿದ್ದಾರೆ.

ಎಸ್​ಎಸ್​ಎಲ್​ಸಿ ಅನುತ್ತೀರ್ಣನಾಗಿದ್ದರೂ ವೈದ್ಯರೆಂದು ಬೋರ್ಡ್​ ಹಾಕಿ ಚಿಕಿತ್ಸೆ ನೀಡುತ್ತಿದ್ದ ವೈದ್ಯ ಮಹಾಶಯರು ದಾಳಿಯ ವೇಳೆ ಸಿಕ್ಕಿಬಿದ್ದಿದ್ದಾರೆ. ದಾಳಿಯ ವೇಳೆ ನಕಲಿ ವೈದ್ಯರು ಬಳಸುತ್ತಿದ್ದ ಔಷಧ, ಸಿರಿಂಜ್​, ಪರಿಕರಗಳನ್ನು ಜಪ್ತಿಗೊಳಿಸಲಾಗಿದೆ. ದಾಳಿಯ ವೇಳೆ ಸಿಕ್ಕಿಬಿದ್ದ ನಕಲಿ ವೈದ್ಯರ ವಿರುದ್ಧ ಕರ್ನಾಟಕ ಸ್ಟೇಟ್ ಪ್ರೈವೇಟ್ ಮೆಡಿಕಲ್ ಎಸ್ಟಾಬ್ಲಿಷ್ಮೆಂಟ್ ಕಾಯ್ದೆ ಉಲ್ಲಂಘನೆ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ.

ಯಾವುದೇ ಅನುಮತಿ ಹಾಗೂ ವಿದ್ಯಾರ್ಹತೆ ಇಲ್ಲದೇ ಇರುವ ನಕಲಿ ವೈದ್ಯರು ಕೊರೊನಾ ,ಏಡ್ಸ್ ಮುಂತಾದ ರೋಗಗಳಿಗೆ ಚಿಕಿತ್ಸೆ ನೀಡುವುದಾಗಿ ಹೇಳಿಕೊಳ್ಳುತ್ತಿದ್ದರು ಎನ್ನಲಾಗಿದೆ. ಈ ರೀತಿಯ 50 ಕ್ಲಿನಿಕ್​ಗಳ ಮೇಲೆ ನಡೆಸಿದ ದಾಳಿಯಲ್ಲಿ ವಿವಿಧ ಔಷಧ, ಸಿರೆಂಜ್, ಭ್ರೂಣಪತ್ತೆ ಯಂತ್ರವನ್ನು ವಶಕ್ಕೆ ಪಡೆಯಲಾಗಿದೆ. 50 ಜನರಲ್ಲಿ ಹಲವರು ಎಸ್.ಎಸ್.ಎಲ್.ಸಿ ಸಹ ಪಾಸಾಗದವರಿದ್ದು ಉಳಿದಂತೆ ಅಲೋಪತಿ, ಅಧ್ಯಯನ ಮಾಡಿ  ಯಾವುದೇ ನೊಂದಣಿ ಮಾಡಿಕೊಳ್ಳದೇ ನಿಯಮ ಉಲ್ಲಂಘಿಸಿ ಅಲೋಪಥಿ ಮೆಡಿಸಿನ್ ನೀಡುತ್ತಿದ್ದರು. ಇದಲ್ಲದೇ ಹಲವು ನಕಲಿ ವೈದ್ಯರು ಮೊಬೈಲ್ ಕ್ಲಿನಿಕ್ ಸಹ ಮಾಡಿಕೊಂಡಿದ್ದು, ಕೊರೊನಾ ಸೋಂಕಿತರಿಗೆ ಮನೆಗೆ ತೆರಳಿ ಚಿಕಿತ್ಸೆ ನೀಡುವ ಜೊತೆ ದುಪ್ಪಟ್ಟು ಹಣ ಗಳಿಸುತ್ತಿದ್ದರು ಎಂದು ಹೇಳಲಾಗಿದೆ.  ಸೋಂಕಿತರ ಮಾಹಿತಿಯನ್ನು  ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸಹ ತಿಳಿಸುತ್ತಿರಲಿಲ್ಲ. ಈ ಹಿನ್ನಲೆಯಲ್ಲಿ ಹಲವರಿಂದ ದೂರು ಬಂದ ಹಿನ್ನಲೆಯಲ್ಲಿ ದಾಳಿ ನಡೆಸಿ 50 ನಕಲಿ ವೈದ್ಯರಿಗೆ ತಾಲೂಕಾ ವೈದ್ಯಾಧಿಕಾರಿ ನೋಟಿಸ್ ನೀಡಿದ್ದಾರೆ.

ಇದನ್ನೂ ಓದಿ: ಮೈಸೂರಿನಲ್ಲಿ ಹೆಚ್ಚಾದ ಕೊರೊನಾ ಸೋಂಕಿತರು; ಎರಡನೇ ಅಲೆಯಲ್ಲಿ ಸೋಂಕಿತರ ಹೆಚ್ಚಳಕ್ಕೆ ಪ್ರಮುಖ ಕಾರಣಗಳು ಇಲ್ಲಿವೆ

ಮಕ್ಕಳಿಗೆ ಅಪಾಯ ಎಂಬ ಆತಂಕವಿರುವ ಕೊವಿಡ್ 3ನೇ ಅಲೆಯನ್ನು ಹೇಗೆ ನಿಭಾಯಿಸ್ತೀರಿ? ಭಾರತ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಪ್ರಶ್ನೆ

(Fake doctors are treating for fever like Covid 19 in Ankola Uttara Kannada)

Published On - 4:19 pm, Thu, 6 May 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!