AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಹೆಸರಲ್ಲಿ ಫೇಕ್​ ಫೇಸ್​ಬುಕ್ ಅಕೌಂಟ್: ಹಣಕ್ಕೆ ಬೇಡಿಕೆ

ಬಿಜೆಪಿ ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರ ಹೆಸರಿನಲ್ಲಿ ನಕಲಿ ಫೇಸ್​ಬುಕ್ ಖಾತೆ ರಚಿಸಿರುವ ಕೆಲ ದುಷ್ಕರ್ಮಿಗಳು ಹಣ ನೀಡುವಂತೆ ಹಲವರಿಗೆ ಫೇಸ್​ಬುಕ್ ಮೆಸೆಂಜರ್ ಮೂಲಕವೇ ಸಂದೇಶ ಕಳಿಸುತ್ತಿದ್ದಾರೆ.

ಬಿಜೆಪಿ ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಹೆಸರಲ್ಲಿ ಫೇಕ್​ ಫೇಸ್​ಬುಕ್ ಅಕೌಂಟ್: ಹಣಕ್ಕೆ ಬೇಡಿಕೆ
ಬಿ. ಎಲ್ ಸಂತೋಷ್
ಪೃಥ್ವಿಶಂಕರ
|

Updated on:Nov 30, 2020 | 11:55 AM

Share

ಬಾಗಲಕೋಟೆ: ಬಿಜೆಪಿ ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರ ಹೆಸರಿನಲ್ಲಿ ನಕಲಿ ಫೇಸ್​ಬುಕ್ ಖಾತೆ ರಚಿಸಿರುವ ಕೆಲ ದುಷ್ಕರ್ಮಿಗಳು ಹಣ ನೀಡುವಂತೆ ಹಲವರಿಗೆ ಫೇಸ್​ಬುಕ್ ಮೆಸೆಂಜರ್ ಮೂಲಕವೇ ಸಂದೇಶ ಕಳಿಸುತ್ತಿದ್ದಾರೆ.

Santhosh ಹೆಸರಿನಲ್ಲಿರುವ ಫೇಸ್​ಬುಕ್ ಖಾತೆಯ ಡಿಸ್​ಪ್ಲೇ ಇಮೇಜ್​ನಲ್ಲಿ ಬಿ.ಎಲ್.ಸಂತೋಷ್ ಅವರ ಜನಪ್ರಿಯ ಚಿತ್ರವನ್ನೇ ಬಳಕೆ ಮಾಡಲಾಗಿದೆ. ಮೇಲ್ನೋಟಕ್ಕೆ ಇದು ಬಿ.ಎಲ್.ಸಂತೋಷ್ ಅವರದ್ದೇ ಫೇಸ್​ಬುಕ್ ಖಾತೆ ಇರಬಹುದು, ಅವರೇ ಹಣ ಕೇಳುತ್ತಿರಬಹುದು ಎಂಬ ಭಾವ ಬರುವಂತೆ ಬಿಂಬಿಸಲಾಗಿದೆ. ಬಿ.ಎಲ್.ಸಂತೋಷ್ ಅವರ ಅಧಿಕೃತ ಖಾತೆಯಲ್ಲಿರುವ ಫ್ರೆಂಡ್ಸ್​ಲಿಸ್ಟ್​ ಗಮನಿಸಿಯೇ ಹಣ ಬೇಕೆನ್ನುವ ಸಂದೇಶ ರವಾನಿಸಲಾಗುತ್ತಿದೆ.

ಸಂತೋಷ್ ಹಣ ಕೇಳಿರುವ ಖದೀಮರು, ಅರ್ಜೆಂಟ್ ಇದೆ ಹದಿನೈದು ಸಾವಿರ ಹಣ ಕಳಿಸಿ. ಎರಡು ತಾಸಿನಲ್ಲಿ ನಿಮಗೆ ಮರಳಿ ಹಾಕುತ್ತೇನೆ ಎಂದು ಮೆಸೆಂಜರ್​ನಲ್ಲಿ‌ ಮೆಸೇಜ್ ಮಾಡಿದ್ದಾರೆ. ಪೋನ್ ಪೇ ಇದೆಯೇ? ಗೂಗಲ್ ಪೇ ಇದೆಯೇ? ಬೇಗ ಹಣ ಕಳಿಸಿ ಎಂದೆಲ್ಲಾ ಮೆಸೇಜ್ ಮಾಡಿದ್ದಾರೆ.

ಕೆರೊಡಿ ಹೆಸರಿನಲ್ಲಿಯೂ ನಕಲಿ ಅಕೌಂಟ್

ಬಾಗಲಕೋಟೆಯ ಖ್ಯಾತ ವೈದ್ಯ ಸೋಮಶೇಖರ ಕೆರೂಡಿ ಅವರ ಹೆಸರಲ್ಲಿಯೂ ಇದೇ ರೀತಿ ನಕಲಿ ಫೇಸ್​ಬುಕ್ ಖಾತೆ ತೆರೆದು ಹಣಕ್ಕಾಗಿ ಗಾಳಹಾಕಲಾಗಿದೆ.

ಈ ವಿಷಯ ತಿಳಿಸಿರುವ ಮುಖಂಡ ಅಭಯ್ ಮನಗೂಳಿ, ಹಣ ಕಳಿಸುವ ಮೊದಲು ಎಚ್ಚರ ವಹಿಸಬೇಕು ಎಂದು ಹೇಳಿದ್ದಾರೆ. ಇದು ಆನ್​ಲೈನ್​ ಮೋಸದ ಮತ್ತೊಂದು ರೂಪ ಇರಬಹುದು ಎಂದು ಶಂಕಿಸಿದ್ದಾರೆ.

ಇದನ್ನೂ ಓದಿ: ಬಯಲಿಗೆ ಬಿತ್ತು ಇಬ್ಬರು ಅಧಿಕಾರಿಗಳ ಮುಸುಕಿನ ಗುದ್ದಾಟ, ನೊಂದ ಅಧಿಕಾರಿ ಫೇಸ್​ಬುಕ್​ನಲ್ಲಿ ಬರೆದುಕೊಂಡಿದ್ದೇನು?

Published On - 11:46 am, Mon, 30 November 20

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ