AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಹೆಸರಲ್ಲಿ ಫೇಕ್​ ಫೇಸ್​ಬುಕ್ ಅಕೌಂಟ್: ಹಣಕ್ಕೆ ಬೇಡಿಕೆ

ಬಿಜೆಪಿ ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರ ಹೆಸರಿನಲ್ಲಿ ನಕಲಿ ಫೇಸ್​ಬುಕ್ ಖಾತೆ ರಚಿಸಿರುವ ಕೆಲ ದುಷ್ಕರ್ಮಿಗಳು ಹಣ ನೀಡುವಂತೆ ಹಲವರಿಗೆ ಫೇಸ್​ಬುಕ್ ಮೆಸೆಂಜರ್ ಮೂಲಕವೇ ಸಂದೇಶ ಕಳಿಸುತ್ತಿದ್ದಾರೆ.

ಬಿಜೆಪಿ ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಹೆಸರಲ್ಲಿ ಫೇಕ್​ ಫೇಸ್​ಬುಕ್ ಅಕೌಂಟ್: ಹಣಕ್ಕೆ ಬೇಡಿಕೆ
ಬಿ. ಎಲ್ ಸಂತೋಷ್
ಪೃಥ್ವಿಶಂಕರ
|

Updated on:Nov 30, 2020 | 11:55 AM

Share

ಬಾಗಲಕೋಟೆ: ಬಿಜೆಪಿ ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರ ಹೆಸರಿನಲ್ಲಿ ನಕಲಿ ಫೇಸ್​ಬುಕ್ ಖಾತೆ ರಚಿಸಿರುವ ಕೆಲ ದುಷ್ಕರ್ಮಿಗಳು ಹಣ ನೀಡುವಂತೆ ಹಲವರಿಗೆ ಫೇಸ್​ಬುಕ್ ಮೆಸೆಂಜರ್ ಮೂಲಕವೇ ಸಂದೇಶ ಕಳಿಸುತ್ತಿದ್ದಾರೆ.

Santhosh ಹೆಸರಿನಲ್ಲಿರುವ ಫೇಸ್​ಬುಕ್ ಖಾತೆಯ ಡಿಸ್​ಪ್ಲೇ ಇಮೇಜ್​ನಲ್ಲಿ ಬಿ.ಎಲ್.ಸಂತೋಷ್ ಅವರ ಜನಪ್ರಿಯ ಚಿತ್ರವನ್ನೇ ಬಳಕೆ ಮಾಡಲಾಗಿದೆ. ಮೇಲ್ನೋಟಕ್ಕೆ ಇದು ಬಿ.ಎಲ್.ಸಂತೋಷ್ ಅವರದ್ದೇ ಫೇಸ್​ಬುಕ್ ಖಾತೆ ಇರಬಹುದು, ಅವರೇ ಹಣ ಕೇಳುತ್ತಿರಬಹುದು ಎಂಬ ಭಾವ ಬರುವಂತೆ ಬಿಂಬಿಸಲಾಗಿದೆ. ಬಿ.ಎಲ್.ಸಂತೋಷ್ ಅವರ ಅಧಿಕೃತ ಖಾತೆಯಲ್ಲಿರುವ ಫ್ರೆಂಡ್ಸ್​ಲಿಸ್ಟ್​ ಗಮನಿಸಿಯೇ ಹಣ ಬೇಕೆನ್ನುವ ಸಂದೇಶ ರವಾನಿಸಲಾಗುತ್ತಿದೆ.

ಸಂತೋಷ್ ಹಣ ಕೇಳಿರುವ ಖದೀಮರು, ಅರ್ಜೆಂಟ್ ಇದೆ ಹದಿನೈದು ಸಾವಿರ ಹಣ ಕಳಿಸಿ. ಎರಡು ತಾಸಿನಲ್ಲಿ ನಿಮಗೆ ಮರಳಿ ಹಾಕುತ್ತೇನೆ ಎಂದು ಮೆಸೆಂಜರ್​ನಲ್ಲಿ‌ ಮೆಸೇಜ್ ಮಾಡಿದ್ದಾರೆ. ಪೋನ್ ಪೇ ಇದೆಯೇ? ಗೂಗಲ್ ಪೇ ಇದೆಯೇ? ಬೇಗ ಹಣ ಕಳಿಸಿ ಎಂದೆಲ್ಲಾ ಮೆಸೇಜ್ ಮಾಡಿದ್ದಾರೆ.

ಕೆರೊಡಿ ಹೆಸರಿನಲ್ಲಿಯೂ ನಕಲಿ ಅಕೌಂಟ್

ಬಾಗಲಕೋಟೆಯ ಖ್ಯಾತ ವೈದ್ಯ ಸೋಮಶೇಖರ ಕೆರೂಡಿ ಅವರ ಹೆಸರಲ್ಲಿಯೂ ಇದೇ ರೀತಿ ನಕಲಿ ಫೇಸ್​ಬುಕ್ ಖಾತೆ ತೆರೆದು ಹಣಕ್ಕಾಗಿ ಗಾಳಹಾಕಲಾಗಿದೆ.

ಈ ವಿಷಯ ತಿಳಿಸಿರುವ ಮುಖಂಡ ಅಭಯ್ ಮನಗೂಳಿ, ಹಣ ಕಳಿಸುವ ಮೊದಲು ಎಚ್ಚರ ವಹಿಸಬೇಕು ಎಂದು ಹೇಳಿದ್ದಾರೆ. ಇದು ಆನ್​ಲೈನ್​ ಮೋಸದ ಮತ್ತೊಂದು ರೂಪ ಇರಬಹುದು ಎಂದು ಶಂಕಿಸಿದ್ದಾರೆ.

ಇದನ್ನೂ ಓದಿ: ಬಯಲಿಗೆ ಬಿತ್ತು ಇಬ್ಬರು ಅಧಿಕಾರಿಗಳ ಮುಸುಕಿನ ಗುದ್ದಾಟ, ನೊಂದ ಅಧಿಕಾರಿ ಫೇಸ್​ಬುಕ್​ನಲ್ಲಿ ಬರೆದುಕೊಂಡಿದ್ದೇನು?

Published On - 11:46 am, Mon, 30 November 20

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು