AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಹೆಸರಲ್ಲಿ ಫೇಕ್​ ಫೇಸ್​ಬುಕ್ ಅಕೌಂಟ್: ಹಣಕ್ಕೆ ಬೇಡಿಕೆ

ಬಿಜೆಪಿ ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರ ಹೆಸರಿನಲ್ಲಿ ನಕಲಿ ಫೇಸ್​ಬುಕ್ ಖಾತೆ ರಚಿಸಿರುವ ಕೆಲ ದುಷ್ಕರ್ಮಿಗಳು ಹಣ ನೀಡುವಂತೆ ಹಲವರಿಗೆ ಫೇಸ್​ಬುಕ್ ಮೆಸೆಂಜರ್ ಮೂಲಕವೇ ಸಂದೇಶ ಕಳಿಸುತ್ತಿದ್ದಾರೆ.

ಬಿಜೆಪಿ ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಹೆಸರಲ್ಲಿ ಫೇಕ್​ ಫೇಸ್​ಬುಕ್ ಅಕೌಂಟ್: ಹಣಕ್ಕೆ ಬೇಡಿಕೆ
ಬಿ. ಎಲ್ ಸಂತೋಷ್
ಪೃಥ್ವಿಶಂಕರ
|

Updated on:Nov 30, 2020 | 11:55 AM

Share

ಬಾಗಲಕೋಟೆ: ಬಿಜೆಪಿ ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರ ಹೆಸರಿನಲ್ಲಿ ನಕಲಿ ಫೇಸ್​ಬುಕ್ ಖಾತೆ ರಚಿಸಿರುವ ಕೆಲ ದುಷ್ಕರ್ಮಿಗಳು ಹಣ ನೀಡುವಂತೆ ಹಲವರಿಗೆ ಫೇಸ್​ಬುಕ್ ಮೆಸೆಂಜರ್ ಮೂಲಕವೇ ಸಂದೇಶ ಕಳಿಸುತ್ತಿದ್ದಾರೆ.

Santhosh ಹೆಸರಿನಲ್ಲಿರುವ ಫೇಸ್​ಬುಕ್ ಖಾತೆಯ ಡಿಸ್​ಪ್ಲೇ ಇಮೇಜ್​ನಲ್ಲಿ ಬಿ.ಎಲ್.ಸಂತೋಷ್ ಅವರ ಜನಪ್ರಿಯ ಚಿತ್ರವನ್ನೇ ಬಳಕೆ ಮಾಡಲಾಗಿದೆ. ಮೇಲ್ನೋಟಕ್ಕೆ ಇದು ಬಿ.ಎಲ್.ಸಂತೋಷ್ ಅವರದ್ದೇ ಫೇಸ್​ಬುಕ್ ಖಾತೆ ಇರಬಹುದು, ಅವರೇ ಹಣ ಕೇಳುತ್ತಿರಬಹುದು ಎಂಬ ಭಾವ ಬರುವಂತೆ ಬಿಂಬಿಸಲಾಗಿದೆ. ಬಿ.ಎಲ್.ಸಂತೋಷ್ ಅವರ ಅಧಿಕೃತ ಖಾತೆಯಲ್ಲಿರುವ ಫ್ರೆಂಡ್ಸ್​ಲಿಸ್ಟ್​ ಗಮನಿಸಿಯೇ ಹಣ ಬೇಕೆನ್ನುವ ಸಂದೇಶ ರವಾನಿಸಲಾಗುತ್ತಿದೆ.

ಸಂತೋಷ್ ಹಣ ಕೇಳಿರುವ ಖದೀಮರು, ಅರ್ಜೆಂಟ್ ಇದೆ ಹದಿನೈದು ಸಾವಿರ ಹಣ ಕಳಿಸಿ. ಎರಡು ತಾಸಿನಲ್ಲಿ ನಿಮಗೆ ಮರಳಿ ಹಾಕುತ್ತೇನೆ ಎಂದು ಮೆಸೆಂಜರ್​ನಲ್ಲಿ‌ ಮೆಸೇಜ್ ಮಾಡಿದ್ದಾರೆ. ಪೋನ್ ಪೇ ಇದೆಯೇ? ಗೂಗಲ್ ಪೇ ಇದೆಯೇ? ಬೇಗ ಹಣ ಕಳಿಸಿ ಎಂದೆಲ್ಲಾ ಮೆಸೇಜ್ ಮಾಡಿದ್ದಾರೆ.

ಕೆರೊಡಿ ಹೆಸರಿನಲ್ಲಿಯೂ ನಕಲಿ ಅಕೌಂಟ್

ಬಾಗಲಕೋಟೆಯ ಖ್ಯಾತ ವೈದ್ಯ ಸೋಮಶೇಖರ ಕೆರೂಡಿ ಅವರ ಹೆಸರಲ್ಲಿಯೂ ಇದೇ ರೀತಿ ನಕಲಿ ಫೇಸ್​ಬುಕ್ ಖಾತೆ ತೆರೆದು ಹಣಕ್ಕಾಗಿ ಗಾಳಹಾಕಲಾಗಿದೆ.

ಈ ವಿಷಯ ತಿಳಿಸಿರುವ ಮುಖಂಡ ಅಭಯ್ ಮನಗೂಳಿ, ಹಣ ಕಳಿಸುವ ಮೊದಲು ಎಚ್ಚರ ವಹಿಸಬೇಕು ಎಂದು ಹೇಳಿದ್ದಾರೆ. ಇದು ಆನ್​ಲೈನ್​ ಮೋಸದ ಮತ್ತೊಂದು ರೂಪ ಇರಬಹುದು ಎಂದು ಶಂಕಿಸಿದ್ದಾರೆ.

ಇದನ್ನೂ ಓದಿ: ಬಯಲಿಗೆ ಬಿತ್ತು ಇಬ್ಬರು ಅಧಿಕಾರಿಗಳ ಮುಸುಕಿನ ಗುದ್ದಾಟ, ನೊಂದ ಅಧಿಕಾರಿ ಫೇಸ್​ಬುಕ್​ನಲ್ಲಿ ಬರೆದುಕೊಂಡಿದ್ದೇನು?

Published On - 11:46 am, Mon, 30 November 20

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ