AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Facebook Fraud | ಸಚಿವ ಸುರೇಶ್​ ಕುಮಾರ್ ಹೆಸರಿನಲ್ಲಿ ನಕಲಿ ಫೇಸ್​ಬುಕ್ ಖಾತೆ; ನಕಲಿ ಖಾತೆದಾರರಿಂದ ಹಣಕ್ಕೆ ಬೇಡಿಕೆ

S Suresh kumar: ನಕಲಿ ಖಾತೆಗಳನ್ನು ತೆರೆದು ಸಾಮಾನ್ಯವಾಗಿ ವಂಚಕರು ದುಡ್ಡನ್ನು ಬೇಡಿಕೆ ಇಡುತ್ತಾರೆ. ಅದರಂತೆ ಸಚಿವ ಸುರೇಶ್ ಕುಮಾರ್ ಹೆಸರಲ್ಲಿ ನಕಲಿ ಖಾತೆ ತೆರೆದ ಖಾತೆದಾರರು ಇದೇ ರೀತಿಯ ಬೇಡಿಕೆಯನ್ನು ಇಟ್ಟಿರುವುದು ತಿಳಿದುಬಂದಿದೆ.

Facebook Fraud | ಸಚಿವ ಸುರೇಶ್​ ಕುಮಾರ್ ಹೆಸರಿನಲ್ಲಿ ನಕಲಿ ಫೇಸ್​ಬುಕ್ ಖಾತೆ; ನಕಲಿ ಖಾತೆದಾರರಿಂದ ಹಣಕ್ಕೆ ಬೇಡಿಕೆ
ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್
sandhya thejappa
| Updated By: ಸಾಧು ಶ್ರೀನಾಥ್​|

Updated on:Feb 20, 2021 | 11:54 AM

Share

ಬೆಂಗಳೂರು: ಸಾರ್ವಜನಿಕರ ಹೆಸರಲ್ಲಿ ಫೇಸ್​ಬುಕ್​​ ನಕಲಿ ಖಾತೆಗಳನ್ನು ತೆರೆದಿರುವುದು ಕೇಳಿದ್ದೇವೆ. ಅದಾದಮೇಲೆ ಹಿರಿಯ ಪೊಲೀಸ್ ಅಧಿಕಾರಿಗಳಿಗೇ ಚಳ್ಳೆಹಣ್ಣು ತಿನ್ನಿಸುವಂತೆ ಕೆಲ ಅಧಿಕಾರಿಗಳ ಹೆಸರಿನಲ್ಲಿಯೂ ಫೇಸ್​ಬುಕ್​​ ನಕಲಿ ಖಾತೆಗಳನ್ನು ತೆರೆದು ಒಂದಷ್ಟು ದುಡ್ಡು ಮಾಡಿಕೊಂಡಿದ್ದಾರೆ ಖದೀಮರು! ಇದೀಗ ಇನ್ನೂ ಒಂದು ಹೆಜ್ಜೆ ಮುಂದುವರೊದು ಸಚಿವರ ಹೆಸರಲ್ಲೂ ಫೇಸ್​ಬುಕ್​​ ನಕಲಿ ಖಾತೆಗಳು ತೆರೆಯುವ ಆಟ ಶುರುವಾಗಿದೆ. ಯಾವುದೇ ಆತಂಕ, ಭಯವಿಲ್ಲದೇ ಈ ರೀತಿಯ ಕೆಲಸಗಳು ನಡೆಯುತ್ತಿದ್ದು,  ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೆಸರಲ್ಲಿ ನಕಲಿ ಫೇಸ್​ಬುಕ್ ಖಾತೆಯನ್ನು ತೆರೆದಿದ್ದಾರೆ. ನಕಲಿ ಖಾತೆಗಳನ್ನು ತೆರೆದು ಸಾಮಾನ್ಯವಾಗಿ ವಂಚಕರು ದುಡ್ಡನ್ನು ಬೇಡಿಕೆ ಇಡುತ್ತಾರೆ. ಅದರಂತೆ ಸಚಿವ ಸುರೇಶ್ ಕುಮಾರ್ ಹೆಸರಲ್ಲಿ ನಕಲಿ ಖಾತೆ ತೆರೆದ ಖಾತೆದಾರರು ಇದೇ ರೀತಿಯ ಬೇಡಿಕೆಯನ್ನು ಇಟ್ಟಿರುವುದು ತಿಳಿದುಬಂದಿದೆ.

ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ ತೆರೆದು ವಂಚಕರು ಹಣ ಕೇಳಿರುವ ಮಾಹಿತಿ ತಿಳಿದುಬಂದಿದ್ದು, ಸಿಐಡಿ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುಮಾರು 5 ಸಾವಿರ ರೂ. ಹಣ ನೀಡುವಂತೆ ಕೇಳಿದ ನಕಲಿ ಖಾತೆದಾರರು ಗೂಗಲ್ ಪೇ ಮೂಲಕ ಹಣ ವರ್ಗಾವಣೆ ಮಾಡಲು ಮನವಿ ಮಾಡಿದರು. ಅಲ್ಲದೇ ನೀಡಿದ ಹಣವನ್ನು ಸಂಜೆಯೊಳಗೆ ವಾಪಸ್​ ಮಾಡುತ್ತೀನಿ ಎಂದು ಹೇಳಿದರು. ಸದ್ಯ ವಿಚಾರ ತಿಳಿದ ಸಚಿವರ ಆಪ್ತ ಕಾರ್ಯದರ್ಶಿ ಪಿ.ಎಂ. ಚಿದಂಬರ ಸಿಐಡಿ ಡಿಜಿಗೆ ದೂರು ನೀಡಿದ್ದಾರೆ.

ಸುರೇಶ್ ಕುಮಾರ್ S ಎಂಬ ಹೆಸರಲ್ಲಿ ನಕಲಿ ಖಾತೆ ತೆರೆದಿದ್ದು, ಖಾತೆದಾರರು ಹಲವು ಜನರಿಗೆ ಫ್ರೆಂಡ್ ರಿಕ್ವೆಸ್ಟ್ ಕಳುಹಿಸಿದ್ದಾರೆ. ರಿಕ್ವೆಸ್ಟ್ ಅಕ್ಸೆಪ್ಟ್​ ಮಾಡಿದವರೊಂದಿಗೆ ಮೊದಲು ಹೇಗಿದ್ದೀರಾ? ಎಂದು ಕುಶಲೋಪರಿ ವಿಚಾರಿಸಿ ತಾನು ತೀರಾ ಕಷ್ಟದಲ್ಲಿದ್ದೇನೆ. ತಕ್ಷಣ ಹಣ ನೀಡಿ ಎಂದು ಕೇಳಿಕೊಂಡಿದ್ದಾರೆ. ಅಲ್ಲದೇ ಹಣವನ್ನು ವರ್ಗಾಯಿಸಲು ಗೂಗಲ್ ಪೇ ಲಿಂಕ್ ಇರುವ ಮೊಬೈಲ್ ನಂಬರ್​ನ ಕಳುಹಿಸಿದ್ದಾರೆ. ಇದರ ಜೊತೆಗೆ ನೀಡಿದ ಹಣವನ್ನು ಸಂಜೆಯೊಳಗೆ ಹಿಂದಿರುಗಿಸುತ್ತೇನೆ ಎಂದು ಭರವಸೆಯನ್ನು ಕೊಟ್ಟಿದ್ದಾರೆ.

ಸಚಿವ ಸುರೇಶ್ ಕುಮಾರ್ ಹೆಸರಲ್ಲಿ ನಕಲಿ ಫೆಸ್​ಬುಕ್ ಖಾತೆ ಹಾಗೂ ಚಾಟ್​ನಲ್ಲಿ ಹಣ ಬೇಡಿಕೆಯಿಟ್ಟ ಖಾತೆದಾರರು.

ವೈಯಕ್ತಿಕ ಫೇಸ್​ಬುಕ್ ಖಾತೆಯ ಮಾದರಿಯಲ್ಲೇ ಕಿಡಿಗೇಡಿಗಳು ನಕಲಿ ಖಾತೆ ಸೃಷ್ಟಿಸಿರುವ ವಿಚಾರ ಸಚಿವ ಸುರೇಶ್ ಕುಮಾರ್​ಗೆ ಫೆಬ್ರವರಿ 11 ಕ್ಕೆ ತಿಳಿದುಬಂದಿದೆ. ಈ ರೀತಿಯ ನಕಲಿ ಖಾತೆಯನ್ನು ತೆರೆದಿರುವವರನ್ನು ಪತ್ತೆಹಚ್ಚಿ, ನಕಲಿ ಖಾತೆಯನ್ನು ರದ್ಧುಪಡಿಸಬೇಕು. ಮಾತ್ರವಲ್ಲದೇ ನಕಲಿ ಖಾತೆಯನ್ನು ಸೃಷ್ಟಿಸಿದವರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಸಚಿವ ಎಸ್.ಸುರೇಶ್ ಕುಮಾರ್​ರವರ ಆಪ್ತ ಕಾರ್ಯದರ್ಶಿ ಪಿ.ಎಂ.ಚಿದಂಬರ ಸೈಬರ್ ಕ್ರೈಂಗೆ ದೂರನ್ನು ಸಲ್ಲಿಸಿದ್ದಾರೆ.

ಸೈಬರ್ ಕ್ರೈಂಗೆ ದೂರನ್ನು ಸಲ್ಲಿಸಿದ ಎಸ್.ಸುರೇಶ್ ಕುಮಾರ್​ರವರ ಆಪ್ತ ಕಾರ್ಯದರ್ಶಿ ಪಿ.ಎಂ.ಚಿದಂಬರ

ಇದನ್ನೂ ಓದಿ: ಹುಡುಗಿ ಹೆಸರಿನ ಫೇಸ್‌ಬುಕ್ ಮಾಯೆ: 3 ವರ್ಷದಲ್ಲಿ ₹15 ಲಕ್ಷ ಮೋಸ ಹೋದ ಗ್ರಾಮಸ್ಥ!

ಇದನ್ನೂ ಓದಿ:  ಪೊಲೀಸ್​ ಅಧಿಕಾರಿ ಆಯ್ತು, ಈಗ ಕ್ಷೇತ್ರ ಶಿಕ್ಷಣಾಧಿಕಾರಿ ಹೆಸರಲ್ಲಿ ಪಂಗನಾಮಕ್ಕೆ ಸ್ಕೆಚ್​, ಯಾವೂರಲ್ಲಿ?

ಇದನ್ನೂ ಓದಿ: ಡಾಲಿ ಧನಂಜಯ್​ ಹೆಸರಲ್ಲಿ ವಂಚನೆ; ಅಪರಿಚಿತರ ಪೋಸ್ಟ್​ ನಂಬಿ ಮೋಸ ಹೋಗ್ಬೇಡಿ ಎಂದ ನಟ

Published On - 11:53 am, Sat, 20 February 21

ಐಶ್ವರ್ಯ ರೈ ಹೇಗೆ ಸಹಿಸ್ಕೊಳ್ತಾಳೋ? ಟ್ರೋಲ್ ಆದ ಜಯಾ ಬಚ್ಚನ್
ಐಶ್ವರ್ಯ ರೈ ಹೇಗೆ ಸಹಿಸ್ಕೊಳ್ತಾಳೋ? ಟ್ರೋಲ್ ಆದ ಜಯಾ ಬಚ್ಚನ್
ನಾನು ದರ್ಶನ್ ಪರ, ಪ್ರಥಮ್​ದು ತುಸು ಹೆಚ್ಚಾಯ್ತು: ಧ್ರುವ ಸರ್ಜಾ
ನಾನು ದರ್ಶನ್ ಪರ, ಪ್ರಥಮ್​ದು ತುಸು ಹೆಚ್ಚಾಯ್ತು: ಧ್ರುವ ಸರ್ಜಾ
ನನಗೂ ಕಹಿ ಅನುಭವ ಆಗಿತ್ತು: ಅಭಿಮಾನಿಗಳ ಅತಿರೇಕದ ಬಗ್ಗೆ ಯೋಗಿ ಮಾತು
ನನಗೂ ಕಹಿ ಅನುಭವ ಆಗಿತ್ತು: ಅಭಿಮಾನಿಗಳ ಅತಿರೇಕದ ಬಗ್ಗೆ ಯೋಗಿ ಮಾತು
ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿ ಬಳಿ ಎಲ್ಲಾ ದಾಖಲೆಗಳಿವೆ: ಸಿದ್ದರಾಮಯ್ಯ
ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿ ಬಳಿ ಎಲ್ಲಾ ದಾಖಲೆಗಳಿವೆ: ಸಿದ್ದರಾಮಯ್ಯ
ದೊಡ್ಡಬಳ್ಳಾಪುರ: ಕಾರು ಚಾಲಕನ ಮೇಲೆ ಟೋಲ್​ ಸಿಬ್ಬಂದಿ ಮಾರಣಾಂತಿಕ ಹಲ್ಲೆ
ದೊಡ್ಡಬಳ್ಳಾಪುರ: ಕಾರು ಚಾಲಕನ ಮೇಲೆ ಟೋಲ್​ ಸಿಬ್ಬಂದಿ ಮಾರಣಾಂತಿಕ ಹಲ್ಲೆ
W,W,W,W,W,W: ಇಂಗ್ಲೆಂಡ್​ನಲ್ಲಿ ಯುಜ್ವೇಂದ್ರ ಚಹಲ್ ಸ್ಪಿನ್ ಮೋಡಿ
W,W,W,W,W,W: ಇಂಗ್ಲೆಂಡ್​ನಲ್ಲಿ ಯುಜ್ವೇಂದ್ರ ಚಹಲ್ ಸ್ಪಿನ್ ಮೋಡಿ
ಆಗಸ್ಟ್ ಕೊನೆಯಲ್ಲಿ ಮತ್ತೆ ಟೋಯಿಂಗ್ ಶುರು: ಗೃಹ ಸಚಿವ ಪರಮೇಶ್ವರ್ ಘೋಷಣೆ
ಆಗಸ್ಟ್ ಕೊನೆಯಲ್ಲಿ ಮತ್ತೆ ಟೋಯಿಂಗ್ ಶುರು: ಗೃಹ ಸಚಿವ ಪರಮೇಶ್ವರ್ ಘೋಷಣೆ
‘ಅದೃಷ್ಟ ದೇವತೆ ಬಟ್ಟೆ ಬಿಚ್ಚಿಸುವವರು ದೇವರಿಗೆ ವಂದಿಸುತ್ತಾರೆ’; ಪ್ರಥಮ್
‘ಅದೃಷ್ಟ ದೇವತೆ ಬಟ್ಟೆ ಬಿಚ್ಚಿಸುವವರು ದೇವರಿಗೆ ವಂದಿಸುತ್ತಾರೆ’; ಪ್ರಥಮ್
ಜನರ ಸಮಸ್ಯೆ ಪರಿಹಾರಕ್ಕೆ ಆ್ಯಪ್​: ವಿನೂತನ ಪ್ರಯತ್ನಕ್ಕೆ ಕೈಹಾಕಿದ ಶಾಸಕ
ಜನರ ಸಮಸ್ಯೆ ಪರಿಹಾರಕ್ಕೆ ಆ್ಯಪ್​: ವಿನೂತನ ಪ್ರಯತ್ನಕ್ಕೆ ಕೈಹಾಕಿದ ಶಾಸಕ
ಭೀಮಾ ನದಿಯಲ್ಲಿ ಭಾರೀ ಪ್ರವಾಹ: 2 ದೇಗುಲಗಳು ಸಂಪೂರ್ಣ‌ ಮುಳುಗಡೆ
ಭೀಮಾ ನದಿಯಲ್ಲಿ ಭಾರೀ ಪ್ರವಾಹ: 2 ದೇಗುಲಗಳು ಸಂಪೂರ್ಣ‌ ಮುಳುಗಡೆ