AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿ ಜಿಲ್ಲಾಧಿಕಾರಿಗೂ ನಕಲಿ ಫೇಸ್ಬುಕ್ ಅಕೌಂಟ್ ಕಾಟ; ಹಣ ಪಾವತಿಸುವಂತೆ ಬೇಡಿಕೆ

ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಮಲಾಲಗದ್ದೆ ಹೆಸರಲ್ಲಿ ನಕಲಿ ಫೇಸ್ ಬುಕ್​ ಅಕೌಂಟ್ ಮಾಡಿ ಹಣ ಬೇಡಿಕೆ ಇಟ್ಟಿರುವ ಆರೋಪ ಕೇಳಿ ಬಂದಿದೆ.

ಉಡುಪಿ ಜಿಲ್ಲಾಧಿಕಾರಿಗೂ ನಕಲಿ ಫೇಸ್ಬುಕ್ ಅಕೌಂಟ್ ಕಾಟ; ಹಣ ಪಾವತಿಸುವಂತೆ ಬೇಡಿಕೆ
ಸಾಂದರ್ಭಿಕ ಚಿತ್ರ
shruti hegde
|

Updated on: Apr 11, 2021 | 5:15 PM

Share

ಉಡುಪಿ: ಜಿಲ್ಲಾಧಿಕಾರಿ ಜಿ.ಜಗದೀಶ್ ಮಲಾಲಗದ್ದೆ ಹೆಸರಲ್ಲಿ ನಕಲಿ ಫೇಸ್ ಬುಕ್​ ಅಕೌಂಟ್ ಮಾಡಿ ಹಣ ಬೇಡಿಕೆ ಇಟ್ಟಿರುವ ಆರೋಪ ಕೇಳಿ ಬಂದಿದೆ. ಜಿಲ್ಲಾಧಿಕಾರಿ ಅವರದೇ ನಕಲಿ ಅಕೌಂಟ್​ ಮಾಡಿ ಫೋನ್​ ಪೇ ಮೂಲಕ ಹಣ ಪಾವತಿಸಿ ಎಂಬ ಬೇಡಿಕೆ ಇಟ್ಟಿರುವ ಮಾಹಿತಿ ತಿಳಿದುಬಂದಿದೆ.

ಆರೋಪಿಗಳು ಸಂಬಂಧಿಕರ ಅಕೌಂಟಿಗೆ ಹಣ ವರ್ಗಾಯಿಸುವಂತೆ ಮೆಸೇಜ್ ಮಾಡಿದ್ದಾರೆ. ಅಧಿಕಾರಿಗಳನ್ನೇ ಟಾರ್ಗೆಟ್​ ಮಾಡಿ ಹಣ ವಸೂಲಿ ಮಾಡಲು ಮುಂದಾಗಿದ್ದಾರೆ. ಇತ್ತೀಚೆಗೆ ಕೆಲ ಪೊಲೀಸ್ ಅಧಿಕಾರಿಗಳ ಹೆಸರಿನಲ್ಲೂ ಹಣಕ್ಕೆ ಡಿಮ್ಯಾಂಡ್ ಮಾಡಿದ್ದರು. ದೂರು ನೀಡಿದ್ದೇನೆ ಯಾರೂ ಹಣ ಕೊಡಬೇಡಿ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಫೇಸ್ ಬುಕ್ ಮೂಲಕ ವಿನಂತಿಸಿಕೊಂಡಿದ್ದಾರೆ.

ಈ ಮೊದಲು ಸಚಿವ ಸುರೇಶ್​ ಕುಮಾರ್ ಹೆಸರಿನಲ್ಲಿ ನಕಲಿ ಫೇಸ್​ಬುಕ್ ಖಾತೆ ತೆರೆದಿದ್ದರು

ಸಾರ್ವಜನಿಕರ ಹೆಸರಲ್ಲಿ ಫೇಸ್​ಬುಕ್​​ ನಕಲಿ ಖಾತೆಗಳನ್ನು ತೆರೆದಿರುವುದು ಕೇಳಿದ್ದೇವೆ. ಅದಾದಮೇಲೆ ಹಿರಿಯ ಪೊಲೀಸ್ ಅಧಿಕಾರಿಗಳಿಗೇ ಚಳ್ಳೆಹಣ್ಣು ತಿನ್ನಿಸುವಂತೆ ಕೆಲ ಅಧಿಕಾರಿಗಳ ಹೆಸರಿನಲ್ಲಿಯೂ ಫೇಸ್​ಬುಕ್​​ ನಕಲಿ ಖಾತೆಗಳನ್ನು ತೆರೆದು ಒಂದಷ್ಟು ದುಡ್ಡು ಮಾಡಿಕೊಂಡಿದ್ದಾರೆ ಖದೀಮರು! ಸಚಿವರ ಹೆಸರಲ್ಲೂ ಫೇಸ್​ಬುಕ್​​ ನಕಲಿ ಖಾತೆಗಳು ತೆರೆಯುವ ಆಟ ಶುರುವಾಗಿತ್ತು. ಯಾವುದೇ ಆತಂಕ, ಭಯವಿಲ್ಲದೇ ಈ ರೀತಿಯ ಕೆಲಸಗಳು ನಡೆಯುತ್ತಿದ್ದು,  ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೆಸರಲ್ಲಿ ನಕಲಿ ಫೇಸ್​ಬುಕ್ ಖಾತೆಯನ್ನು ತೆರೆದಿದ್ದರು. ನಕಲಿ ಖಾತೆಗಳನ್ನು ತೆರೆದು ಸಾಮಾನ್ಯವಾಗಿ ವಂಚಕರು ದುಡ್ಡನ್ನು ಬೇಡಿಕೆ ಇಡುತ್ತಾರೆ. ಅದರಂತೆ ಸಚಿವ ಸುರೇಶ್ ಕುಮಾರ್ ಹೆಸರಲ್ಲಿ ನಕಲಿ ಖಾತೆ ತೆರೆದ ಖಾತೆದಾರರು ಇದೇ ರೀತಿಯ ಬೇಡಿಕೆಯನ್ನು ಇಟ್ಟಿರುವುದು ಈ ಹಿಂದೆ ತಿಳಿದುಬಂದಿತ್ತು.

ಇದನ್ನೂ ಓದಿ: ಮೈಸೂರು: ಫೇಸ್‌ಬುಕ್​ನಲ್ಲಿ ನಕಲಿ ಪ್ರೊಫೈಲ್ ಸೃಷ್ಟಿಸಿ ಲಕ್ಷಾಂತರ ರೂ ವಂಚಿಸಿದ್ದ ಮೇಟಗಳ್ಳಿ ಯುವತಿ ಸೆರೆ

Facebook Fraud | ಸಚಿವ ಸುರೇಶ್​ ಕುಮಾರ್ ಹೆಸರಿನಲ್ಲಿ ನಕಲಿ ಫೇಸ್​ಬುಕ್ ಖಾತೆ; ನಕಲಿ ಖಾತೆದಾರರಿಂದ ಹಣಕ್ಕೆ ಬೇಡಿಕೆ

Follow Us
shruti hegde
shruti hegde
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ