ಕೊಪ್ಪಳದಲ್ಲಿ ಸಿಕ್ಕಿಬಿದ್ದ ನಕಲಿ ಫುಡ್ ಆಫೀಸರ್: ವ್ಯಾಪರಸ್ಥರನ್ನು ಬೆದರಿಸಿ ಹಣ ವಸೂಲಿ ಮಾಡುತ್ತಿದ್ದ ಆಸಾಮಿ ಅರೆಸ್ಟ್

ಫುಡ್ ಸೇಫ್ಟಿ ಆಫೀಸರ್ ಎಂದು ಹೇಳಿಕೊಂಡು ವಂಚಿಸುತ್ತಿದ್ದ ನಕಲಿ ಫುಡ್ ಸೇಫ್ಟಿ ಆಫೀಸರ್​ ನನ್ನು ಪೊಲೀಸರು ಬಂಧಿಸಿರುವಂತಹ ಘಟನೆ ಕೊಪ್ಪಳದಲ್ಲಿ ನಡೆದಿದೆ. ವ್ಯಾಪರಸ್ಥರಿಗೆ ಬೆದರಿಸಿ ಹಣ ವಸೂಲಿ ಮಾಡುತ್ತಿದ್ದ ಆತನನ್ನು ಕೊಪ್ಪಳ ನಗರ ಠಾಣೆಯ ಪೊಲೀಸರು ಬಂಧಿಸಿದ್ದು, ವಿಚಾರಣೆ ಮಾಡುತ್ತಿದ್ದಾರೆ. ಆತನಿಗೆ ಕಠಿಣ ಶಿಕ್ಷೆಯಾಗುವಂತೆ ಜನರು ಆಗ್ರಹಿಸಿದ್ದಾರೆ.

ಕೊಪ್ಪಳದಲ್ಲಿ ಸಿಕ್ಕಿಬಿದ್ದ ನಕಲಿ ಫುಡ್ ಆಫೀಸರ್: ವ್ಯಾಪರಸ್ಥರನ್ನು ಬೆದರಿಸಿ ಹಣ ವಸೂಲಿ ಮಾಡುತ್ತಿದ್ದ ಆಸಾಮಿ ಅರೆಸ್ಟ್
ಕೊಪ್ಪಳದಲ್ಲಿ ಸಿಕ್ಕಿಬಿದ್ದ ನಕಲಿ ಫುಡ್ ಆಫೀಸರ್: ವ್ಯಾಪರಸ್ಥರನ್ನು ಬೆದರಿಸಿ ಹಣ ವಸೂಲಿ ಮಾಡುತ್ತಿದ್ದ ಆಸಾಮಿ ಅರೆಸ್ಟ್
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Sep 14, 2024 | 4:26 PM

ಕೊಪ್ಪಳ, ಸೆಪ್ಟೆಂಬರ್​ 14: ಇತ್ತೀಚೆಗೆ ಅನೇಕ ಕಲಬೆರಕ ವಸ್ತುಗಳು, ಆಹಾರ ಪದಾರ್ಥಗಳನ್ನು ಹೆಚ್ಚಿನ ವ್ಯಾಪರಸ್ಥರು ಮಾರಾಟ ಮಾಡುತ್ತಿದ್ದಾರೆ. ಹೀಗಾಗಿ ಅನೇಕ ಕಡೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಅಧಿಕಾರಿಗಳು ಅನೇಕ ಅಂಗಡಿಗಳು, ಬೇಕರಿ, ಹೋಟೆಲ್​ಗಳಿಗೆ ಪ್ರತಿನಿತ್ಯ ಭೇಟಿ ನೀಡಿ ಪರಿಶೀಲನೆ ನಡೆಸೋದು, ಗುಣಮಟ್ಟವನ್ನು ಪರೀಕ್ಷಿಸುವ ಕೆಲಸ ಮಾಡುತ್ತಿದ್ದಾರೆ. ಕಾನೂನು ಪಾಲನೇ ಮಾಡದೇ ಇರೋರಿಗೆ ದಂಡ ಹಾಕುತ್ತಿದ್ದಾರೆ. ಆದರೆ ಇದನ್ನೇ ದುರುಪಯೋಗ ಮಾಡಿಕೊಂಡು ವ್ಯಕ್ತಿಯೋರ್ವ, ತಾನು ಫುಡ್ ಸೇಫ್ಟಿ ಆಫೀಸರ್ (Fake food officer) ಅಲ್ಲದೇ ಇದ್ದರು ಕೂಡ, ರಾಜ್ಯದ ಅನೇಕ ಕಡೆ ತಾನು ಫುಡ್ ಸೇಫ್ಟಿ ಆಫೀಸರ್ ಅಂತ ಹೇಳಿಕೊಂಡು ಅಡ್ಡಾಡಿ ಇದೀಗ ಕೊಪ್ಪಳದಲ್ಲಿ ಸಿಕ್ಕಿ ಬಿದ್ದಿದ್ದಾನೆ.

ಪೊಲೀಸ್​ ಬಲೆಗೆ ಬಿದ್ದ ನಕಲಿ ಫುಡ್ ಸೇಫ್ಟಿ ಆಫೀಸರ್

ಆ ನಕಲಿ ಫುಡ್ ಸೇಫ್ಟಿ ಆಫೀಸರ್​ ಹೆಸರು ವಿಜಯಕುಮಾರ್. ಮೂಲತಃ ಆಂದ್ರಪ್ರದೇಶ ಅದೋನಿಯನವಾಗಿರೋ ವಿಜಯಕುಮಾರ್ ರಾಯಚೂರು ಜಿಲ್ಲೆಯಲ್ಲಿ ವಾಸವಾಗಿದ್ದ. ಕಳೆದ ಕೆಲ ದಿನಗಳಿಂದ ಕೊಪ್ಪಳ ನಗರ ಮತ್ತು ಗ್ರಾಮೀಣ ಭಾಗದಲ್ಲಿ ಅನೇಕ ವ್ಯಾಪರಸ್ಥರಿಗೆ ತೊಂದರೆ ಕೊಟ್ಟಿದ್ದ. ಆದರೆ ಇಂದು ಕೊಪ್ಪಳ ನಗರದ ಕುಷ್ಟಗಿ ರಸ್ತೆಯಲ್ಲಿರುವ ಕಿರಾಣಿ ಅಂಗಡಿಗೆ ಬಂದಿದ್ದ ಈತ ತಗ್ಲಾಕ್ಕಿಕೊಂಡಿದ್ದಾನೆ.

ಇದನ್ನೂ ಓದಿ: ಕೊಪ್ಪಳದಲ್ಲಿ ಹೆಡ್​ ಕಾನ್ಸ್​ಟೇಬಲ್​ನಿಂದಲೇ ಗೌಪ್ಯ ಮಾಹಿತಿ ಸೋರಿಕೆ: ಹಣ ಕೊಟ್ಟರೇ ಸಿಗುತ್ತೆ ಮೊಬೈಲ್ ನಂಬರ್​, ಟವರ್ ಲೋಕೇಶನ್

ಹೌದು ಖನ್ನಾರಾಮ್ ಪಟೇಲ್ ಅನ್ನೋರ ಅಂಗಡಿಗೆ ಬಂದಿದ್ದ. ತಾನು ಹುಬ್ಬಳ್ಳಿಯಿಂದ ಬಂದಿದ್ದೇನೆ. ಫುಡ್ ಸೇಫ್ಟಿ ಆಫೀಸರ್ ಇದ್ದೇನೆ. ನಿಮ್ಮಲ್ಲಿರುವ ಆಹಾರ ಪದಾರ್ಥಗಳನ್ನು ತೋರಿಸಿ ಅಂತ ಹೇಳಿದ್ದ. ಆದರೆ ಆತನ ಬಗ್ಗೆ ಅನುಮಾನಗೊಂಡಿದ್ದ ವ್ಯಾಪಾರಿ, ಕೊಪ್ಪಳ ಜಿಲ್ಲೆಯ ಫುಡ್ ಸೇಫ್ಟಿ ಆಫೀಸರ್​ಗೆ ಕರೆ ಮಾಡಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಸಿದ್ದ ಕೊಪ್ಪಳ ಜಿಲ್ಲಾ ಫುಡ್ ಸೇಫ್ಟಿ ಆಫೀಸರ್ ಕೃಷ್ಣಾ ರಾಠೋಡ್, ಐನಾತಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ನಕಲಿ ಫುಡ್ ಸೇಫ್ಟಿ ಆಫೀಸರ್ ವಿಜಯಕುಮಾರ್​ನನ್ನು ಕೊಪ್ಪಳ ನಗರ ಠಾಣೆಯ ಪೊಲೀಸರು ಹಿಡಿದುಕೊಂಡು ಹೋಗಿ, ಕಂಬಿ ಹಿಂದೆ ಹಾಕಿದ್ದಾರೆ. ಇನ್ನು ವಿಜಯಕುಮಾರ್​ಗೆ ಇದೆಲ್ಲಾ ಹೊಸದಲ್ಲವಂತೆ. ಈ ಹಿಂದೆ ಯಾದಗಿರ ಜಿಲ್ಲೆಯಲ್ಲಿ ಕೂಡ ಇದೇ ರೀತಿ ಅನೇಕರಿಗೆ ಹೆದರಿಸಿ ಹಣ ವಸೂಲಿ ಮಾಡಲು ಹೋದಾಗ ಸಿಕ್ಕಿ ಬಿದ್ದಿದ್ದನಂತೆ. ಇದೀಗ ಮತ್ತೆ ಕೊಪ್ಪಳ ನಗರದಲ್ಲಿ ಸಿಕ್ಕಿ ಬಿದ್ದಿದ್ದಾನೆ. ಪ್ರತಿನಿತ್ಯ ಒಂದಲ್ಲಾ ಒಂದು ಕಡೆ ಹೋಗುತ್ತಿದ್ದ ವಿಜಯಕುಮಾರ್, ತಾನು ಬೆಂಗಳೂರು, ಹುಬ್ಬಳಿಯಿಂದ ಬಂದಿದ್ದೇನೆ. ಫುಡ್ ಸೇಫ್ಟಿ ಆಫೀಸರ್ ಅಂತ ಹೇಳಿ ವ್ಯಾಪರಸ್ಥರಿಗೆ ತೊಂದರೆ ಕೊಡುತ್ತಿದ್ದ.

ಇಂದು ಸಿಕ್ಕಿಬಿದ್ದ ನಂತರ, ಅಮಾಯಕನಂತೆ ನಟಿಸುತ್ತಿರುವ ವಿಜಯಕುಮಾರ್, ತಾನು ಸೋಷಿಯಲ್ ವರ್ಕರ್ ಇದ್ದೇನೆ. ಎನ್​ಜಿಓ ನಡೆಸುತ್ತಿದ್ದೇನೆ. ಈ ಹಿನ್ನೆಲೆಯಲ್ಲಿ ಪರಿಶೀಲನೆಗೆ ಬಂದಿದ್ದೇನೆ ಅಂತ ಮತ್ತೊಂದು ಹೊಸ ಡ್ರಾಮಾ ಆರಂಭ ಮಾಡಿದ್ದ. ಆದರೆ ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಲಾಗಿದೆ.

ಇದನ್ನೂ ಓದಿ: ಕೊಪ್ಪಳ: ಡ್ಯೂಟಿ ವೇಳೆ ಹಾಲು ಕದ್ದ ಹೆಡ್ ಕಾನ್ಸಟೇಬಲ್, ವಿಡಿಯೋ ವೈರಲ್

ಸದ್ಯ ಕೊಪ್ಪಳ ನಗರ ಠಾಣೆಯ ಪೊಲೀಸರು ವಿಜಯಕುಮಾರ್ ನನ್ನು ಬಂಧಿಸಿದ್ದಾರೆ. ಆದರೆ ಈತ ವಂಚಿಸೋದನ್ನೇ ಕಾಯಕ ಮಾಡಿಕೊಂಡಿದ್ದಾನೆ. ಹೀಗಾಗಿ ಆತನನ್ನು ಕಂಬಿ ಹಿಂದೆ ಕಳುಹಿಸಿ, ಆತನಿಗೆ ಕಠಿಣ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
CM Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
CM Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
VIDEO: ಎಲ್ಲಾ ಮಸಾಲೆಗೆ ವಿರಾಟ್ ಕೊಹ್ಲಿ-ಗೌತಮ್ ಗಂಭೀರ್ ಬ್ರೇಕ್..!
VIDEO: ಎಲ್ಲಾ ಮಸಾಲೆಗೆ ವಿರಾಟ್ ಕೊಹ್ಲಿ-ಗೌತಮ್ ಗಂಭೀರ್ ಬ್ರೇಕ್..!
ಜನ್ಮದಿನದಂದು ಹೇಗಿತ್ತು ನೋಡಿ ಉಪೇಂದ್ರ ಮನೆ ಮುಂದೆ ಫ್ಯಾನ್ಸ್​ ಸಂಭ್ರಮ
ಜನ್ಮದಿನದಂದು ಹೇಗಿತ್ತು ನೋಡಿ ಉಪೇಂದ್ರ ಮನೆ ಮುಂದೆ ಫ್ಯಾನ್ಸ್​ ಸಂಭ್ರಮ
CPL 2024: ಕಾರ್ನ್​ವಾಲ್ ಕಮಾಲ್: ರಾಯಲ್ಸ್​ಗೆ ಭರ್ಜರಿ ತಂದುಕೊಟ್ಟ ರಹ್​ಕೀಮ್
CPL 2024: ಕಾರ್ನ್​ವಾಲ್ ಕಮಾಲ್: ರಾಯಲ್ಸ್​ಗೆ ಭರ್ಜರಿ ತಂದುಕೊಟ್ಟ ರಹ್​ಕೀಮ್
‘ಬೇಸರ ಆಗೇ ಆಗುತ್ತದೆ’; ದರ್ಶನ್ ಕೇಸ್ ಬಗ್ಗೆ ಉಪೇಂದ್ರ ಮಾತು  
‘ಬೇಸರ ಆಗೇ ಆಗುತ್ತದೆ’; ದರ್ಶನ್ ಕೇಸ್ ಬಗ್ಗೆ ಉಪೇಂದ್ರ ಮಾತು